Skip to main content

ಆನಂದಪುರದ ಚಿರಪರಿಚಿತ ಪೇಪರ್ ಕೇಶವ ಭಟ್ಟರ ತಪ್ಪದ ನಿತ್ಯ ಕಾಯಕ

#ಆನಂದಪುರದ_ಪೇಪರ್_ಕೇಶವ_ಭಟ್ಟರು

     1981ರಲ್ಲಿ ಆನಂದಪುರದಿಂದ ಸಾಗರಕ್ಕೆ ಸಂಜಯ್ ಮೆಮೋರಿಯಲ್ ಡಿಪ್ಲೋಮ ಕಾಲೇಜಿಗೆ ಪ್ರತಿ ದಿನ ಬೆಳಿಗ್ಗೆ 5.45ಕ್ಕೆ ಶಿವಮೊಗ್ಗದಿಂದ ಬರುತ್ತಿದ್ದ ಕುಮುಟಾಕ್ಕೆ ಹೋಗುವ ಗಜಾನನ ಬಸ್ಸಿನಲ್ಲಿ (ನಾರಾಯಣಪ್ಪ ಎಂಬ ಸೂಪರ್ ಪಾಸ್ಟ್ ಡ್ರೈವರ್ ) ಹೋಗುತ್ತಿದ್ದೆ ಆಗ ಇನ್ನೂ ಶಾಲೆಗೆ ಸೇರದ ಪುಟ್ಟ ಬಾಲಕ ನಿದ್ದೆ ಕಣ್ಣಿನಲ್ಲೇ ಆನಂದಪುರ ಬಸ್ ಸ್ಟಾಂಡ್ ನಲ್ಲಿ ಪೇಪರ್ ಪೇಪರ್ ಅಂತ ಕೂಗುತ್ತಾ ನಿತ್ಯ ಪತ್ರಿಕೆ ಮಾರುವುದು ನೋಡಿ ಕರಳು ಹಿಚುಕಿದಂತೆ ಸಂಕಟ ಆಗುತ್ತಿತ್ತು.
       ಆಗಿನಿಂದ ಅಂದರೆ ಸುಮಾರು 40 ವರ್ಷದ ಮೇಲೂ ಕೇಶವ ಭಟ್ಟರು ಇವತ್ತೂ ಆನಂದಪುರರನಲ್ಲಿ ಮನೆ ಮನೆಗೆ ಸೂಯೋ೯ದಯದ ಮುಂಚೆ ತಪ್ಪದೇ ಪತ್ರಿಕೆ ತಲುಪಿಸುವ ಪೇಪರ್ ಏಜೆಂಟ್ ಮತ್ತು #ವಿಜಯವಾಣಿ ಪತ್ರಿಕೆಯ ಆನಂದಪುರದ ಪತ್ರಿಕಾ ವರದಿಗಾರ ಕೂಡ ಹೌದು.
     ತಂದೆ ಸಣ್ಣ ವಯಸ್ಸಲ್ಲೇ ತೀರಿ ಹೋಗಿದ್ದು,ತಾಯಿಗೆ ಸಿಗಬೇಕಾದ ಆಸ್ತಿ ಸಿಗದೇ ಹೋದದ್ದು, ಯಾವ ಜಾತಿ ಆದರೇನು ಬಡತನ ಬಂದರೆ ಎಲ್ಲರೂ ದೂರ ಮಾಡುವಂತೆ ಇವರನ್ನೂ ಎಲ್ಲರೂ ದೂರ ಮಾಡಿದರು,ಇವರ ಹವ್ಯಕ ಜಾತಿ ಬಾಂದವರ್ಯಾರು ಈ ಕುಟುಂಬಕ್ಕೆ ಸಹಾಯ ಮಾಡಲಿಲ್ಲ.
  ಕೇಶವ ಬೆಳಿಗ್ಗೆ ಪೇಪರ್ ಹಾಕುವುದು, ಬಸ್ಸುಗಳಲ್ಲಿ ಪೇಪರ್, ಸೋಡಾ,ಬಾಳೆಹಣ್ಣು, ಕಡಲೆಕಾಯಿ ಮಾರುತ್ತಾ ಶಾಲೆಗೆ ಹೋಗಿ ವಿದ್ಯಾಬ್ಯಾಸವೂ ಮಾಡುತ್ತಾ ಪೀಯುಸಿ ತೇಗ೯ಡೆ ಆಗಿ ಪದವಿ ಕಾಲೇಜ್ ಗೆ ಸೇರಿ ಅದ೯ಕ್ಕೆ ಬಿಟ್ಟು ಖಾಸಾಗಿ ಬಸ್ ಏಜೆಂಟ್ ಆಗಿ ಇಡೀ ಕುಟುಂಬ ಸಲುಹಿದ ಶ್ರಮಜೀವಿ ಇವರು.
  ಪ್ರತಿ ವರ್ಷ ತಪ್ಪದೆ ಶಬರಿಮಲೆಗೆ ಅಯ್ಯಪ್ಪ ವೃತಾದಾರಿ ಆಗಿ ಹೋಗಿ ಬರುತ್ತಾರೆ ಆಗ ನಾನು ಇವರು ಹಾಕುವ ಪತ್ರಿಕೆಯ ಬಿಲ್ ಬಾಬ್ತು ವಾಷಿ೯ಕ 5000 ಕೊಡುತ್ತೇನೆ ಇದು ಸುಮಾರು 15 ವರ್ಷದಿಂದ ನಡೆದು ಕೊಂಡು ಬಂದಿದೆ.
 ಪ್ರತಿ ದಿನ ಬೆಳಿಗ್ಗೆ 3 ಗಂಟೆಗೆ ಎದ್ದು ತಣ್ಣೀರು ಸ್ನಾನ ಮಾಡಿ ದೇವರ ಪೂಜೆ ಮಾಡಿ ಪತ್ರಿಕೆ ಹಂಚಲು ಹೋಗುವ ಕೇಶವ ಭಟ್ಟರ ತಪ್ಪದ ಕಾಯಕ ಮೆಚ್ಚುವಂತದ್ದೇ.
  ಶೃಂಗೇಶ್ ಸಂಪಾದಕತ್ವದ #ಜನಹೋರಾಟ ಕೂಡ ಇವರು ಹಾಕುತ್ತಾರೆ ಒಮ್ಮೆ ಸಂಪಾದಕರಾದ ಶೃಂಗೇಶ್ ಹೇಳುತ್ತಿದ್ದರು ಪತ್ರಿಕೆಯ ಹಣ ಪ್ರತಿ ತಿಂಗಳೂ ನಿದಿ೯ಷ್ಟ ದಿನ ತಪ್ಪದೇ ತಲುಪಿಸುವ ಪತ್ರಿಕಾ ಏಜೆಂಟ್ ಇವರೊಬ್ಬರೆ ಅಂತ.
  ಪ್ರತಿಯೊಂದು ಊರಲ್ಲೂ ಇಂತವರು ಇರುತ್ತಾರೆ, ನಮ್ಮ ಮದ್ಯೆ ಇದ್ದರೂ ನಾವು ಅವರನ್ನ ಸರಿಯಾಗಿ ಗಮನಿಸಿರುವುದಿಲ್ಲ ಇವತ್ತು ಬೆಳಿಗ್ಗೆ ಮನೆ ಅಂಗಳದಲ್ಲಿ ವಾಕಿಂಗ್ ಮಾಡುವಾಗ ಕೇಶವ ಭಟ್ಟರು ಸಿಕ್ಕಿದಾಗ ಇದೆಲ್ಲ ನೆನಪಾಗಿ ಬ್ಲಾಗ್ ನಲ್ಲಿ ಬರೆದೆ.
  ಶ್ರಮ ಜೀವಿ ಕೇಶವ ಭಟ್ರ ಸೆಲ್ ನಂಬರ್ 7848910878.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...