Skip to main content

ಮಹೀ೦ದ್ರಾ & ಮಹೀದ್ರಾ ಸಂಸ್ಥೆಯ ನವಜಾತ ಶಿಶುಗಳಿಗಾಗಿಯೇ ಇರುವ A to Z ಶಾಪ್ ಶಿವಮೊಗ್ಗದ ನೆಹರೂ ರಸ್ತೆಯಲ್ಲಿದೆ

#ಪಸ್ಟ್_ಕ್ರೈ_ಶಿವಮೊಗ್ಗದ_ನೆಹರೂ_ರಸ್ತೆಯ_ನವಜಾತ_ಶಿಶುಗಳಿಗಾಗಿ_ಶಾಪಿ೦ಗ್_ಮಾಲ್.

 ನಾನು ನಿನ್ನೆ ಶಿವಮೊಗ್ಗದಲ್ಲಿ ನನ್ನ ಅಣ್ಣನ ಮೊದಲ ಮೊಮ್ಮಗನಿಗಾಗಿ ತೊಟ್ಟಿಲು ಖರೀದಿಸಿದೆ, ನನ್ನ ಜೀವಮಾನದ ಎರಡನೇ ತೊಟ್ಟಿಲು ಇದು ಮೊದಲನೆಯದ್ದು 1985ರಲ್ಲಿ ನನ್ನ ಅಕ್ಕನ ಮಗಳಿಗಾಗಿ ವೆಲ್ಡಿಂಗ್ ಶಾಪ್ ಒ0ದರಲ್ಲಿ ತಯಾರಿಸಿ ತಂದ ಕಬ್ಬಿಣದ ಸ್ಟ್ಯಾಂಡಿಂಗ್ ತೊಟ್ಟಲದು.
  ನಿನ್ನೆ ಖರೀದಿ ಮಾಡಿದ್ದು ಮಹಿಂದ್ರಾ ಕಂಪನಿಯ Firstcry  ಎಂಬ ಶಿವಮೊಗ್ಗದ ಮಳಿಗೆಯಲ್ಲಿ, ಕಡಿಮೆ ಬಾರದ ಹಗುರಾದ ಆದರೆ ನವಜಾತ ಶಿಶುವಿನಷ್ಟೇ ಮೃದುವಾದ ಬಟ್ಟೆಗಳನ್ನ ಬಳಸಿರುವ, ಸೊಳ್ಳೆಗಳು ಪ್ರವೇಶ ಮಾಡದಂತ, ಬೇಕಾದರೆ ತೂಗುವ ಬೇಡವಾದರೆ ಸ್ಥಿರವಾಗಿ ನಿಲ್ಲುವಂತ, ರೂಮಿನಲ್ಲಿ ಎಲ್ಲಿಂದ ಎಲ್ಲಿಗೆ ಬೇಕಾದರೂ ಸುಲಭವಾಗಿ ದೂಡಿಕೊಂಡು ಒಯ್ಯುವಂತ ವೀಲುಗಳು ಇರುವ ತೊಟ್ಟಿಲು ಇದು.
   ಶಿವಮೊಗ್ಗದ ಈ ಸಂಸ್ಥೆಯ ಪ್ರಾಂಚೈಸಿದಾರರು #ಶಿವಮೊಗ್ಗದ_ಮಾಜಿ_ಶಾಸಕರಾದ_ಪ್ರಸನ್ನ_ಕುಮಾರ್ ಅವರು ಹೊಂದಿದ್ದಾರೆ, ಜಿಲ್ಲೆಯ ಜನತೆಗೆ ಅವಶ್ಯವಿರುವ ಈ ಉದ್ದಿಮೆ ಪ್ರಾರಂಬಿಸಿರುವ ಹಿರಿಮೆ ಅವರದ್ದು.
  ವೈಜ್ಞಾನಿಕವಾಗಿ ನಿರಂತರ ಸಂಶೋದನೆ ಮತ್ತು ಅಭಿವೃದ್ದಿ (R&D) ಮಾಡುತ್ತಾ ದೇಶದಾದ್ಯಂತ ನವಜಾತ ಶಿಶುಗಳಿಗೆ ಬೇಕಾದ ಎಲ್ಲಾ ರೀತಿಯ ಉಡುಪು, ಹಾಸಿಗೆ, ತೊಟ್ಟಲು, ಸೋಪು, ಪೌಡರ್, ಕ್ರೀಂ, ರೈಮ್ ಬುಕ್ಸ್, ಆಟಿಕೆಗಳ ಮಾರಾಟ ಕೇಂದ್ರಗಳ ಸರಪಳಿಯನ್ನೇ ಪ್ರಖ್ಯಾತ ವಾಹನಗಳ ತಯಾರಕ ಸಂಸ್ಥೆ ಮಹೀಂದ್ರಾ & ಮಹೀಂದ್ರಾ ಸಂಸ್ಥೆ ಪಾರಂಬಿಸಿದೆ (ಪ್ರವಾಸೋದ್ಯಮದಲ್ಲಿ ಕೂಡ ಮಹಿಂದ್ರಾ ರೆಸಾಟ್೯ ಪ್ರಖ್ಯಾತಿ ಪಡೆದಿದೆ).
  ಬ್ರಾಂಡೆಡ್ ಆಗಿರುವ ಮಳಿಗೆಗೆ ಮಕ್ಕಳ ಪೋಷಕರು ಮಾತ್ರ ಅಲ್ಲ ಗೆಳೆಯರು ಸಂಬಂದಿಗಳು ಮಗುವಿನ ತೊಟ್ಟಿಲು ಶಾಸ್ತ್ರಕ್ಕೆ, ಹುಟ್ಟುಹಬ್ಬಕ್ಕೆ ಉಡುಗೊರೆ ಖರೀದಿಸಲು ಇಲ್ಲಿಗೆ ಬರುತ್ತಾರೆ.
  ಶಿವಮೊಗ್ಗದ ನೆಹರೂ ರಸ್ತೆಯಲ್ಲಿನ ಬೇರಿಸ್ ಸಿಟಿ ಸೆಂಟರ್ ಮಾಲ್ ಸಮೀಪದಲ್ಲೇ #firstcry ನ ಎರಡು ಅಂತಸ್ಥಿನ ಮಾಲ್ ಇದೆ. 
  ಸದಾ ಜನ ಜಂಗುಳಿ ಇರುವ ಇದು ಸಣ್ಣ ಮಕ್ಕಳಿಗೆ ಬೇಕಾದ ಎಲ್ಲಾ ವಸ್ತುಗಳು ಸಿಗುವ one stop store ಇದು.
   ಪ್ರಖ್ಯಾತ ಚಲನ ಚಿತ್ರ ನಟ ಅಮಿತಾಬಚನ್ ಈ ಸಂಸ್ಥೆಯ ಉತ್ಪನ್ನಗಳ ಬ್ರಾಂಡ್ ಅಂಬಾಸಡರ್

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...