Skip to main content

ಬೆಸ್ತರ ರಾಣಿ ಚಂಪಕಾ ಎಂಬ ನನ್ನ ಕಾದಂಬರಿ ರಂಗೋಲಿ ಪ್ರವೀಣೆ ಚಂಪಕ ಮತ್ತು ಕೆಳದಿ ರಾಜ ವೆಂಕಟಪ್ಪ ನಾಯಕರ ದುರಂತ ಪ್ರೇಮ ಕಥೆ ಈ ಕಾದಂಬರಿಯಲ್ಲಿನ ಒಂದು ಅದ್ಯಾಯ ರಂಗೋಲಿ ಬಗ್ಗೆ

#ರOಗೋಲಿ ಏನಿದರ ಮಹತ್ವ?#
 ನಾನು ಬರೆದಿರುವ ಬೆಸ್ತರ ರಾಣಿ ಚಂಪಕಾ ಪುಸ್ತಕದಲ್ಲಿ ಚಂಪಕಾ ರಂಗೋಲಿ ಪ್ರವೀಣೆ, ರಾಜ ವೆಂಕಟಪ್ಪ ನಾಯಕರು ಅವಳು ಬಿಡಿಸುವ ರಂಗೋಲಿ ನೋಡಿಯೇ ಅವಳ ಮೇಲೆ ವ್ಯಾಮೋಹಗೊ೦ಡು ವಿವಾಹ ಆಗುತ್ತಾರೆ.
  ಈ ಕಾದಂಬರಿಯಲ್ಲಿ ರಂಗೋಲಿಯ ಬಗ್ಗೆ ಒಂದು ಅಧ್ಯಾಯದಲ್ಲಿ .....
  "ಚಂಪಕಾಳ ರಂಗೋಲಿಯಲ್ಲಿ ಅದೆಂತಹ ಆಕಷ೯ಣೆ ಇದೆ"
 ರಂಗೋಲಿಯ ಬಗ್ಗೆ ಆಸ್ಥಾನದ ಪಂಡಿತರ ಹತ್ತಿರ ಒಮ್ಮೆ ಚಚಿ೯ಸಿದಾಗ ಅವರು ಹೇಳಿದ್ದು ಅರುಣೋದಯದಲ್ಲಿ ಲಲನೆಯರು ತಮ್ಮ ಮನೆಯಂಗಳದಲ್ಲಿ ವಿವಿದ ರೀತಿಯ ರಂಗೋಲಿಯನ್ನ ರಚಿಸುವುದು ಭಾರತೀಯ ಸಂಸ್ಕೃತಿಯ ಒಂದು ಪ್ರಾಚೀನ ಸಂಪ್ರದಾಯವಾಗಿದೆ.ರಂಗೋಲಿಯು ಶಿಲ್ಪ ಕಲೆಗೂ ಆದಾರವಾಗಿತ್ತೆ೦ದು ತಿಳಿದು ಬಂದಿದೆ, ದೇವಾಲಯಗಳಲ್ಲಿ ದಾಮಿ೯ಕ ವಿಧಿ ವಿಧಾನಗಳಲ್ಲಿ ರಂಗೋಲಿ ಬಿಡಿಸುತ್ತಾರೆ.ಇದರಲ್ಲಿ ನಾನಾ ರೀತಿಯ ಕೋನಗಳು, ಆಕೃತಿಗಳು, ಆಯತಗಳು, ಮಂಡಲಗಳು ಇದೆ. ಸಮೂಹ ಚುಕ್ಕಿಗಳನ್ನ ಹಾಕಿ ಅದಕ್ಕೆ ರೇಖೆಗಳನ್ನ ಕೂಡಿಸಿ ಪ್ರಮಾಣಬದ್ಧವಾದ ರಂಗೋಲಿ ಹಾಕಿದರೆ ಮಾತ್ರ ರಂಗೋಲಿ ಸುಂದರವಾಗುತ್ತದೆ. ರಂಗೋಲಿಯಲ್ಲಿ ಆಧಿಕೃತ ಅಳತೆಗಳಿದೆ, ಈ ಕಲೆಯ ಪ್ರಾಚೀನತೆ ನಿಖರವಾಗಿ ತಿಳಿದಿಲ್ಲ, ವಿನ್ಯಾಸಗಳಂತೂ ಲೆಖ್ಖಕ್ಕೆ ಸಿಗುವುದಿಲ್ಲ.
  ರಂಗೋಲಿಯು ದೇವರನ್ನ ಒಲಿಸಿಕೊಳ್ಳುವ ಒಂದು ಆರಾದನಾ ಸಂಪ್ರದಾಯವೂ ಆಗಿದೆ, ಬಣ್ಣ ಬಣ್ಣದ ಹಿಟ್ಟುಗಳಿ೦ದ, ಕಲ್ಲಿನ ಪುಡಿಗಳಿಂದ ರಂಗೋಲಿಯನ್ನ ರಂಗು ರOಗಾಗಿಸುವ ಕಲೆ ಹೆಣ್ಣು ಮಕ್ಕಳು ಕಲಿತಿದ್ದಾರೆ, ಇದಕ್ಕೆ ಗೋದಿ, ಜವೆಗೋದಿ, ಅಕ್ಕಿ ಹಿಟ್ಟು, ಕುಂಕುಮ, ಅರಿಶಿಣ ಪುಡಿ, ಶಿಲಾ ಚುಣಾ೯ ಮತ್ತು ನವರತ್ನಪುಡಿಯನ್ನ ತುಂಬಿಸುವುದು ಒಂದು ಕಲೆ. ಹೋಮ ಹವನದಲ್ಲಿ ಮದುವೆಯ ಹಸೆಮಣೆಯಲ್ಲಿ ದೇವರ ಮಂಟಪಗಳಲ್ಲಿ ಪುರೋಹಿತರು ರಂಗೋಲಿ ಬಿಡಿಸುತ್ತಾರೆ, ತಾಂತ್ರಿಕ ಪೂಜೆಯಲ್ಲಿ ಮಂಡಲಗಳನ್ನು ರಂಗೋಲಿಯಲ್ಲೇ ಬಿಡಿಸಲೇ ಬೇಕು. ಎಲ್ಲರೂ ರಂಗೋಲಿಯಲ್ಲಿ ಪರಿಣಿತರಾಗಲು ಸಾಧ್ಯವಿಲ್ಲ. ರಂಗೋಲಿ ಬಿಡಿಸುವುದರಲ್ಲಿ ತಾಳ್ಮೆ ಇರಬೇಕು, ದೂರಾಲೋಚನೆ ಇರಬೇಕು, ಕಲ್ಪನೆ ಇರಬೇಕು, ಚುರುಕುತನ ಇರಬೇಕು ಹಾಗಿದ್ದರೆ ಮಾತ್ರ ಜನಾಕಷ೯ಕ ರಂಗೋಲಿ ರಚಿಸಲು ಸಾಧ್ಯ.ಹುಟ್ಟಿನಿಂದಲೇ ಈ ಚಾಕಚಕ್ಯತೆಯನ್ನ ಕೆಲವರು ತನ್ನ ಹಿಂದಿನ ಜನ್ಮದ ಫಲವಾಗಿ ಪಡೆದಿರುತ್ತಾರೆ.
  ನಿದಿ೯ಷ್ಟವಾದ ಆಳತೆಯ ಸ್ಪಷ್ಟವಾದ ಗೆರೆಗಳು ಹೊಂದಿರುವ ರಂಗೋಲಿಗೆ ಸೂಕ್ತ ಬಣ್ಣ ತುಂಬುವುದು ಕಲಾಕಾರಿಕೆ, ತಂತ್ರ ವಿದ್ಯೆಯಲ್ಲಿ ಇಂತಹ ರಂಗೋಲಿಗಳು ಸಾಧಕರ ಮನೋಸ್ಥಿಮಿತ ಉ೦ಟು ಮಾಡುತ್ತದೆ, ಅವರನ್ನ ಸಮಾದಿ ಸ್ಥಿತಿಗೂ ಒಯ್ಯುತ್ತದೆ, ತಂತ್ರ ವಿದ್ಯೆಯಿಂದ ಸಾದನೆ ಮಾಡಬೇಕಾದರೆ ಮಂಡಲಗಳು, ರಂಗೋಲಿಗಳು ಬಹುಮುಖ್ಯ.
  ಸುOದರವಾದ ಸಮಯೋಚಿತವಾದ ರಂಗೋಲಿಯಿಂದ ದೇವರು ಒಲಿಯಲೇ ಬೇಕು ಹಾಗಾಗಿ ರಂಗೋಲಿ ಎಂದರೆ ಅದು ಸಣ್ಣ ಚಿತ್ರವಲ್ಲ ಎಂತಹದೊ ಒಂದು ರೇಖೆಯಲ್ಲ ಯಾವುದೋ ಒಂದು ಪುಡಿಯಲ್ಲ ಇದಕ್ಕೆ ಪ್ರಾಚಿನತೆ ಸ್ಪಶ೯ವಿದೆ, ದೈವ ಶಕ್ತಿಯ ಬಲವಿದೆ, ತಂತ್ರ ವಿದ್ಯೆಯ ಒಲವಿದೆ, ಸಂಸ್ಕೃತಿಯ ಹಿನ್ನೆಲೆಯಿದೆ, ದಾಮಿ೯ಕ ಭಾವನೆಯ ಸೆಳಕಿದೆ, ಸೌ೦ದಯ೯ದ ತಳುಕಿದೆ ಎಂಬ ಅಭಿಪ್ರಾಯ ವ್ಯಕ್ತವಾಯಿತು.
  ಹಾಗಾಗಿ ಸುಂದರವಾದ ರಂಗೋಲಿ ಬಿಡಿಸುವ ಚಂಪಕಾಳ ಮೇಲೆ ರಾಜರ ವ್ಯಾಮೋಹವೂ ಇಮ್ಮಡಿಯಾಯಿತು, ಚಂಪಕಾ ನನ್ನವಳಾಗಿರಬೇಕು ಎಂಬ ಭಾವನೆ ರಾಜರಲ್ಲಿ ಉ೦ಟಾಯಿತು.
 ಹಾಗಾಗಿ ಚಂಪಕಾಳ ಬೇಟಿ ಮಾಡುವ ಗುರು ಪೂಣಿ೯ಮೆ ಎ೦ಬ ಪವಿತ್ರ ದಿನಕ್ಕಾಗಿ ರಾಜರು ಚಡಪಡಿಸಲು ಶುರು ಮಾಡಿದರು.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...