Skip to main content

ನಾನೂರು ವರ್ಷದ ಹಿಂದೆ ಉತ್ತರ ಭಾರತದ ರಾಜಸ್ಥಾನ, ಗುಜರಾತಿನಿಂದ ವಲಸೆ ಬಂದ ಹಕ್ಕಿಪಿಕ್ಕಿ ಜನಾಂಗದವರು ಈಗ 50 ವರ್ಷದಲ್ಲಿ ಬದಲಾಗಿ ಮುಖ್ಯವಾಹಿನಿಗೆ ಸೇರುತ್ತಿದ್ದಾರೆ.

#ಒಂದುಕಾಲದಲ್ಲಿ_ಹಕ್ಕಿ_ಪಿಕ್ಕಿಜನಾಂಗ_ಅಲೆಮಾರಿ_ಶಿಕಾರಿಗಳು_ಗಿಡಮೂಲಿಕ_ತಜ್ಞರು
#ಈಗ_ಬದಲಾದ_ಕಾಲಮಾನದಲ್ಲಿ_ಬದಲಾಗಿದ್ದಾರೆ_ವ್ಯಾಪಾರಿಗಳಾಗಿದ್ದಾರೆ
 ಇವತ್ತು ಬೆಳಿಗ್ಗೆ ಪ್ಲಾಸ್ಟಿಕ್ ಹೂವಿನ ಮಾಲೆ ಮಾರಾಟಕ್ಕೆ ಬಂದ ಶಿವಮೊಗ್ಗ ಚಿಕ್ಕಮಟ್ಟಿ ಹಳ್ಳಿಯ ಹಕ್ಕಿಪಿಕ್ಕಿ ಕ್ಯಾಂಪಿನ ಹಾಲಿ ಶಿವಮೊಗ್ಗದ ನಂಜಪ್ಪ ಹೆಲ್ತ್ ಕೇರ್ ಹಿಂಬಾಗದ ಅಂಬೇಡ್ಕರ್ ಕಾಲೋನಿ ವಾಸಿ ಬೋಣಿಗೆ ಮಾಡಲು ವಿನಂತಿಸಿದ, ಪ್ಲಾಸ್ಟಿಕ್ ನಲ್ಲಿ ಹೂವಿನ ಬಣ್ಣದಲ್ಲಿ ಹೂವು ಸುರಿದು ಮಾಡಿದಂತ ಈ ಮಾಲೆ ನಿಜಕ್ಕೂ ಆಕಷ೯ಕವಾಗಿದೆ ಅವನ ಇವತ್ತಿನ ವ್ಯಾಪಾರಕ್ಕೆ 300 ರೂಪಾಯಿ ಬೊಣಿಗೆ ಮಾಡಿದೆ ಅವನ ಜೊತೆಯ ಇವತ್ತಿನ ಚಿತ್ರ ಮತ್ತು ಈ ಜನಾಂಗದ 50 ವರ್ಷ ಹಿಂದಿನ ಇವರ ಜನ ಜೀವನದ ಚಿತ್ರದ ಜೊತೆ ಹಾಕಿದ್ದೇನೆ.
   1960 ರ ದಶಕದಲ್ಲಿ ಸೀಮಿತ ಜನ ಸಂಖ್ಯೆಯ ನಮ್ಮ ಹಳ್ಳಿ ಕಾಡಿನ ಅಂಚಿನಲ್ಲಿ ಇದ್ದ ಹಾಗಿತ್ತು ಆಗ ಪ್ರತಿ ವರ್ಷ ಸುಗ್ಗಿ ನ೦ತರ ಹಕ್ಕಿಪಿಕ್ಕಿ ಜನರ ದೊಡ್ಡ ಕ್ಯಾಂಪ್ ನಮ್ಮ ಊರಿನ ಈಗಿನ ಮಸೀದಿ ಜಾಗದಲ್ಲಿ ಇದ್ದ ದೊಡ್ಡ ಅತ್ತಿ ಮರದ ಬುಡದಲ್ಲಿ ಹಾಕುತ್ತಿದ್ದರು ಆಗೆಲ್ಲ ಇವರು ಶಿಕಾರಿ ಮಾಡುತ್ತಿದ್ದದ್ದು ಅವರ ನಿತ್ಯ ಆಹಾರಕ್ಕೆ ಮಾತ್ರ ಯಾಕೆಂದರೆ ಆಗ ಕಾಡು ಕೋಳಿ ಖರೀದಿ ಮಾಡುವವರು ಹಳ್ಳಿಗಳಲ್ಲಿ ಇರಲಿಲ್ಲ.
    ಇವರು ತಮ್ಮ ಸಾಕು ದನ (ಶಿಕಾರಿಗೆ ಬಳಸುತ್ತಾರೆ) ಗಳ ಮೇಲೆ ಇಡೀ ಸಂಸಾರ ಸಾಗಿಸುತ್ತಾ ಬರುತ್ತಿದ್ದರು ಅದರಲ್ಲಿ ಟೆಂಟ್ ,ಶಿಕಾರಿ ಸಾಧನಗಳು, ಅಡುಗೆ ಪರಿಕರ ಎಲ್ಲಾ ಇರುತ್ತಿತ್ತು.
  ಇವರು ಊರಿಗೆ ಪ್ರವೇಶ ಆದಾಗಿನಿಂದ ಅವರ ಬೆನ್ನು ಬೀಳುತ್ತಿದ್ದೆವು ಆಗ ಅವರ ಚಾಟಿ ಬಿಲ್ಲು, ಕವಣೆ, ಹಕ್ಕಿ ಹಿಡಿಯುವ ಕುಣಿಕೆ, ಬಲೆ ಇವೆಲ್ಲ ಬಾಲ್ಯದಲ್ಲಿ ನಮಗೆ ಅತ್ಯಾಕಷ೯ಣೆ.
  ಆಗೆಲ್ಲ ರಣ ಹದ್ದುಗಳಿದ್ದವು ಅದನ್ನು ಹಿಡಿಯಲು ಇವರು ಊರಿನ ಯಾರೂ ವಾರಸುದಾರರಿಲ್ಲದ ಬೀದಿ ನಾಯಿಯನ್ನ ಉಪಾಯ ಮಾಡಿ ಸಾಯಿಸಿ ದೂರದಲ್ಲಿ ಒಗೆದು ಬಿಡುತ್ತಿದ್ದರು ಒಂದೆರೆಡು ದಿನದಲ್ಲಿ ನೂರಾರು ರಣಹದ್ದುಗಳು ಅದನ್ನು ತಿನ್ನಲು ಬಂದಿಳಿಯುತ್ತಿದ್ದವು, ಅವು ನೋಡಲು ಬೀಕರ ರಣವೇ ಯಾಕೆಂದರೆ ಹತ್ತಾರು ಕೆಜಿ ತೂಗುವ ಅದರ ಕುತ್ತಿಗೆ ಬೋಳು, ಕೆಂಪು ಕುತ್ತಿಗೆ, ಕೆಂಪು ಕಣ್ಣು ಭಯ ಹುಟ್ಟಿಸುತ್ತಿತ್ತು ಅದರಲ್ಲಿ ಆಯ್ದ ರಣ ಹದ್ದು ತಲೆ ಹೊಡೆದು ಸಾಯಿಸಿ ಇವರ ಕ್ಯಾಂಪಿನಲ್ಲಿ ಒಂದೆರೆಡು ದಿನ ದೊಡ್ಡ ಹಬ್ಬ ಮಾಡುತ್ತಿದ್ದರು.
   ಹಕ್ಕಿಪಿಕ್ಕಿ, ಮೇಲ್ ಶಿಕಾರಿ, ಬಾಕ್ರಿ ಅಂತೆಲ್ಲ ಕರೆಯುವ ಇವರೆಲ್ಲ ಸುಮಾರು ನಾನೂರು ವಷ೯ದ ಹಿಂದೆ ರಾಜಸ್ಥಾನ, ಗುಜರಾತ್ ಮತ್ತು ಮಹಾರಾಷ್ಟ್ರದಿಂದ ಕನಾ೯ಟಕದ ಕಾಡಿಗೆ ವಲಸೆ ಬಂದವರು, ಬ್ರಿಟಿಷರ ಆಡಳಿತದಲ್ಲಿ ಅರಣ್ಯವಾಸಿಗಳಾಗಿ ವನ್ಯ ಪ್ರಾಣಿ ಶಿಕಾರಿ, ಗಿಡಮೂಲಿಕೆ ಸಂಗ್ರಹ ಮತ್ತು ಮಾರಾಟದಿಂದ ಜೀವನ ಮಾಡುತ್ತಾ ಅಲೆಮಾರಿ ಜೀವನ ಮಾಡುತ್ತಿದ್ದವರು ಸ್ವಾತಂತ್ರ ನ೦ತರ ವನ್ಯಜೀವಿ ಸಂರಕ್ಷಣ ಕಾಯ್ದೆಯಿಂದ ಅರಣ್ಯದಿಂದ ಹೊರ ಹಾಕಲ್ಪಟ್ಟ ಈ ಜನಾಂಗದವರು ಇಡೀ ದೇಶದಲ್ಲಿ ಸುಮಾರು 30 ಸಾವಿರ  ಜನಸಂಖ್ಯೆಯಲ್ಲಿದ್ದಾರೆ ಅದರಲ್ಲಿ ಅದ೯ ಭಾಗ ಕನಾ೯ಟಕ ರಾಜ್ಯದಲ್ಲಿದ್ದರೆ ಉಳಿದವರು ತಮಿಳುನಾಡು, ಆಂಧ್ರ, ಪುದುಚೆರಿ ಮತ್ತು ತೆಲಂಗಾಣದಲ್ಲಿ ಹಂಚಿ ಹೋಗಿದ್ದಾರೆ.
   ಇವರ ಭಾಷೆ ವಾಗ್ರಿಬೂಲಿ ಅಂತ ಅದಕ್ಕೆ ಲಿಪಿ ಇಲ್ಲ, ಸ್ಥಳಿಯ ಭಾಷೆ ಎಲ್ಲಾ ಇವರು ಮಾತಾಡುತ್ತಾರೆ,ಇವರಲ್ಲಿ ಹುಟ್ಟಿದ ಮಕ್ಕಳಿಗೆ ಇವರು ಇವರಿಗೆ ಬೇಕಾದ ಸ್ಥಳ ಮತ್ತು ವಸ್ತುಗಳ ಹೆಸರಿಡುವ ಕ್ರಮವೇ ವಿಶಿಷ್ಟ ಅವರ ಹೆಸರು ಬಸ್, ರೈಲು, ಕೋಟ್೯, ಪಿಸ್ಟೂಲ್ , ಡಾಕ್ಟರ್, ಪೋಲಿಸ್, ಲಾಯರ್, ಇಂಗ್ಲೀಷ್, ಜಪಾನ್ ಅಂತೆಲ್ಲ ಮೊದಲು ಇರುತ್ತಿತ್ತು.
  ಈಗ 50 ವರ್ಷದಲ್ಲಿ ಇವರ ಜೀವನಕ್ರಮ ಬದಲಾಗಿದೆ, ಶಿಕಾರಿ ಹೆಚ್ಚು ಕಡಿಮೆ ಇಲ್ಲ ಅನ್ನಬಹುದು, ಅಲೆಮಾರಿ ಜೀವನವೂ ಇಲ್ಲ, ಅದುನಿಕ ಜೀವನವನ್ನ ಪಡೆದು ಮುಖ್ಯವಾಹಿನಿಯಲ್ಲಿ ಸಾಗಿದ್ದಾರೆ, ಇವರ ವೇಷ ಭೂಷಣಗಳು ಉದ್ಯೋಗಗಳೂ ಬದಲಾಗಿದೆ ಅದನ್ನು ಈ ಪ್ಲಾಸ್ಟಿಕ್ ಹೂವಿನ ಮಾರಾಟದ ಹಕ್ಕಿಪಿಕ್ಕಿ ಯುವಕನ ಪೋಟೋದಲ್ಲಿ ನೋಡ ಬಹುದು.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...