Skip to main content

ಸಾಗರ ಮತ್ತು ಹೊಸನಗರ ಎರೆಡೂ ತಾಲ್ಲೂಕಿನಲ್ಲಿ ಮಾಹಿತಿ ಹಕ್ಕು ಮತ್ತು ಲೋಕಾಯುಕ್ತ ಜನ ಜಾಗೃತಿಗಾಗಿ 2012ರಲ್ಲಿ ನಡೆಸಿದ ಎತ್ತಿನ ಗಾಡಿ ಯಾತ್ರೆ.

#ಸಾಗರ_ಮತ್ತು_ಹೊಸನಗರ_ತಾಲ್ಲೂಕಿನಾದ್ಯಂತ_2012ರಲ್ಲಿ_ನಡೆದ_ಗ್ರಾಮಗಳ_ಅಭಿವೃದ್ಧಿಗಾಗಿ_ಜನಜಾಗೃತಿಯ
#ಎತ್ತಿನ_ಗಾಡಿ_ಯಾತ್ರೆ.
ಸಾಗರ ತಾಲ್ಲೂಕಿನಾದ್ಯಂತ 13 ದಿನಗಳ ಪಾದಯಾತ್ರೆ (ಹಂದಿಗೋಡು ನಿಗೂಡ ಕಾಯಿಲೆ ಪರಿಹಾರ, ತುಮುರಿ ಸೇತುವೆ, ಜೋಗ್ ಜಲಪಾತ ಅಭಿವೃದ್ದಿ ಮತ್ತು ಶಿವಮೊಗ್ಗದಿಂದ ತಾಳಗುಪ್ಪ ವರೆಗೆ ಬ್ರಾಡ್ ಗೇಜ್ ರೈಲಿಗಾಗಿ) ನಡೆಸಿ ಹತ್ತು ವರ್ಷ ಆಗುವಾಗ ಇನ್ನೊಮ್ಮೆ ಸಾಗರ ಮತ್ತು ಹೊಸನಗರ ತಾಲ್ಲೂಕಿನಾದ್ಯಂತ ಎತ್ತಿನಗಾಡಿ ಯಾತ್ರೆ ನಡೆಸಿದ್ದು ಒಂದು ಅದ್ಬುತ ಅನುಭವ ನನ್ನದು.

  ಕಾಗೋಡು ಹೋರಾಟದ ನೇತಾರರಾದ ಹೆಚ್.ಗಣಪತಿಯಪ್ಪರ ಆದೇಶದಂತೆ ಈ ಎತ್ತಿನಗಾಡಿ ಯಾತ್ರೆ ಆದರೂ ಅವರಿಗೆ ವಯೋ ಸಹಜ ಅನಾರೋಗ್ಯದಿಂದ ಭಾಗವಹಿಸಲು ಸಾಧ್ಯವಾಗಲಿಲ್ಲ.
  ಆದರೆ ಅವರ ಒಂದು ಕಂಡೀಷನ್ ಪಾಲಿಸಲೇ ಬೇಕಾಗಿತ್ತು ಅದೇನೆಂದರೆ ನಮ್ಮ ಗಾಡಿ ಯಾತ್ರೆಯಲ್ಲಿ ಯಾರೂ ಗಾದಿ  ಇತ್ಯಾದಿ ಸುಖಾಸಿನ ಹಾಕುವಂತಿಲ್ಲ ಕೇವಲ ಚಾಪೆ ಅಥವ ಕಂಬಳಿ ಹಾಸಿ ಕುಳಿತುಕೊಳ್ಳಲು ಮಾತ್ರ ಅನುಮತಿ.
   ಅದರಂತೆ ನಮ್ಮ ಎತ್ತಿನ ಗಾಡಿ ಯಾತ್ರೆ ಆರು ದಿನಗಳಲ್ಲಿ ಸುಮಾರು 320 ಕಿ.ಮಿ. ಸಾಗರ ತಾಲ್ಲೂಕಿನ ಆಚಾಪುರ ಗ್ರಾ.ಪಂ.ನ ಮುರುಘಾ ಮಠದಿಂದ ಪ್ರಾರಂಭ ಆಗಿ ಯಡೇಹಳ್ಳಿ, ಆನಂದಪುರ೦, ಗೌತಮಪುರ, ತ್ಯಾಗತಿ೯ ಮತ್ತು ಹಿರೇಬಿಲಗುಂಜಿ ಗ್ರಾಮ ಪಂಚಾಯತ್ ಹಾದು ವೀರಾಪುರ ಮಠದಲ್ಲಿ ತಂಗುವುದು.
 ಎರಡನೇ ದಿನ ಅಡ್ಡೇರಿ ಮಾರ್ಗವಾಗಿ ಕಾಸ್ಪಾಡಿ, ಉಳ್ಳೂರು, ಸಾಗರ, ಯಡಜಿಗಳೆ ಮನೆ ಮೂಲಕ ವರದಳ್ಳಿ ಶ್ರೀಧರಾಶ್ರಮದಲ್ಲಿ ತಂಗುವುದು.
  ಮೂರನೇ ದಿನ ಆವಿನಳ್ಳಿ ಮಾಗ೯ವಾಗಿ ಸಿಗಂದೂರು ದೇವಾಲಯದಲ್ಲಿ ತಂಗುವುದು.
   ನಾಲ್ಕನೇ ದಿನ ತುಮರಿ, ಬ್ಯಾಕೋಡು ಮಾರ್ಗವಾಗಿ ನಿಟ್ಟೂರು ಮೂಲಕ ವಳಗೆರೆ ರಾಮಕೃಷ್ಣಾಶ್ರಮದ ಶಾಲೆಯಲ್ಲಿ ತಂಗುವುದಾಗಿತ್ತು ಆದರೆ ನಿಟ್ಟೂರಿನಿಂದ ವಳಗೆರೆ ರಸ್ತೆ ಎತ್ತಿನ ಗಾಡಿ ಯಾತ್ರೆಯಲ್ಲಿ ಸಾಗಲು ತುಂಬಾ ಕಷ್ಟಸಾಧ್ಯವಾದ್ದರಿಂದ ನಿಟ್ಟೂರು ಸಕಾ೯ರಿ ಶಾಲಾ ಅವರಣದಲ್ಲಿ ತಂಗಿದ್ದೆವು.
  ಐದನೇ ದಿನ ಬಿದನೂರು ನಗರ, ಕಾರಣಗಿರಿ ಮಾರ್ಗವಾಗಿ ರಾಮಚಂದ್ರಪುರ ಮಠದಲ್ಲಿ ವಾಸ್ತವ್ಯ.
 ಆರನೇ ದಿನ ಹೊಸನಗರ, ಕೊಡೂರು ಮಾರ್ಗವಾಗಿ ರಿಪ್ಪನ್ ಪೇಟೆ ವೃತ್ತದಲ್ಲಿ ಸಮಾರೋಪ ಸಮಾರಂಭದೊಂದಿಗೆ ಈ ಯಾತ್ರೆ ಮುಕ್ತಾಯಗೊಳಿಸಲಾಯಿತು.
  ಈ ಎತ್ತಿನಗಾಡಿ ಯಾತ್ರೆಯಲ್ಲಿ ಭಾಗವಹಿಸಿದ ಗೆಳೆಯರು, ಸಹಕಾರ ನೀಡಿ ಸಹಕರಿಸಿದ ಸಮಾನ ಮನಸ್ಕರು, ಪ್ರತಿ ತಂಗುವ ಪ್ರದೇಶದಲ್ಲಿ ನಮಗೆಲ್ಲ ನೀರು, ನೆಲ, ಊಟ ಮತ್ತು ಎತ್ತುಗಳಿಗೆ ಹುಲ್ಲು ಇತ್ಯಾದಿ ವ್ಯವಸ್ಥೆಗೊಳಿಸಿದವರು, ಸಭೆ ನಡೆಸಲು ಸಹಾಯ ಮಾಡಿದವರು ಹೀಗೇ ನೂರಾರು ಜನರ ಶ್ರಮ ಈ ಯಾತ್ರೆಗೆ ದೊರೆತಿದ್ದರಿಂದ ಈ ವಿಶಿಷ್ಟ ಎತ್ತಿನ ಗಾಡಿ ಯಾತ್ರೆ ಯಶಸ್ವಿ ಆಯಿತು.
  ಎತ್ತುಗಳಿಗೆ ಮಾಗ೯ ಮದ್ಯದಲ್ಲಿ ಕಾಲಿನ ಹಲ್ಲೆ ಸರಿಪಡಿಸಲು ಕೇಶವಪುರದ ಹಲ್ಲೆ ಕಟ್ಟುವ ಸಾಹೇಬರ ತಂಡ, ಎತ್ತುಗಳಿಗೆ ಹಿಂಡಿ ಹುಲ್ಲು ಸರಬರಾಜು ಮಾಡುವ , ಯಾತ್ರೆಯ ನಮಗೆಲ್ಲ ಊಟ ಉಪಚಾರ ವ್ಯವಸ್ಥೆ ಮಾಡುವ ಮತ್ತು ಸಭೆ ಸಮಾರಂಭ ವ್ಯವಸ್ಥೆ ಮಾಡುವ ಪ್ರತ್ಯೇಕ ಗೆಳೆಯರ ತಂಡಗಳು ವ್ಯವಸ್ಥಿತವಾಗಿ ಕಾಯ೯ನಿವ೯ಹಿಸಿದ್ದು ಕೂಡ ಸ್ಮರಿಸಲೇ ಬೇಕು.
   ಎತ್ತಿನ ಗಾಡಿಯನ್ನೇ ನೋಡದ (ಈಗ ಎತ್ತಿನಗಾಡಿ ಮಲೆನಾಡಿನಿಂದ ಕಣ್ಮರೆ ಆಗಿದೆ.) ಹೊಸ ಜನಾಂಗದ ಮಕ್ಕಳು, ಬಹಳ ವರ್ಷದ ಹಿಂದೆ ಎತ್ತಿನಗಾಡಿ ನೋಡಿದ ವಯಸ್ಕರೆಲ್ಲ ರಸ್ತೆ ಮಾರ್ಗದಲ್ಲಿ ಸಾಗುವ ನಮ್ಮ ಎತ್ತಿನಗಾಡಿ ಯಾತ್ರೆ ನೋಡಲು ಗುಂಪಾಗಿ ಸೇರುತ್ತಿದ್ದರು.
   ನಿಮ್ಮ ಗ್ರಾಮ ಅಭಿವೃದ್ದಿಗಾಗಿ ಮಾಹಿತಿ ಹಕ್ಕು ಯೋಜನೆ ಬಳಸಿಕೊಳ್ಳುವ ಬಗ್ಗೆ, ಅವ್ಯವಹಾರಗಳನ್ನು ಲೋಕಾಯುಕ್ತ ಮೂಲಕ ತನಿಖೆಗೊಳಪಡಿಸುವ ಮಾಹಿತಿಯನ್ನ ಜನರಿಗೆ ಕರಪತ್ರ ಮತ್ತು ಸಭೆಗಳ ಮೂಲಕ ಜನ ಜಾಗೃತಿ ಮಾಡುವ ಈ ಕಾಯ೯ಕ್ರಮಕ್ಕೆ ಪಕ್ಷಾತೀತವಾಗಿ ಮುಖಂಡರು ಬೆಂಬಲ ನೀಡಿದ್ದರು.
  ಆರು ದಿನ ಸತತವಾಗಿ ಎತ್ತಿನಗಾಡಿಯಲ್ಲಿ ಕಂಬಳಿ ಮೇಲೆ ಕುಳಿತು ಎರೆಡು ತಾಲ್ಲೂಕ್ ಯಾತ್ರೆ ಮೂಲಕ ಜನ ಜಾಗೃತಿ ಕಾಯ೯ಕ್ರಮ ಮಾಡಿದ ನೆನಪು ಈ ವರೆಗೆ ಬರೆಯಲು ಮರೆತು ಬಿಟ್ಟಿದ್ದೆ.
  ಈ ಯಾತ್ರೆಯ ಪೋಟೋಗಳು ಹುಡುಕಬೇಕು ಇನ್ನೂ ಸಿಕ್ಕಿಲ್ಲ.
  ಈ ಯಾತ್ರೆಯ ನಂತರ ಗ್ರಾಮಗಳಲ್ಲಿ ಮಾಹಿತಿ ಹಕ್ಕು ಮೂಲಕ ದಾಖಲೆ ಪಡೆಯುವ, ಅವ್ಯವಹಾರಗಳ ದೂರು ಲೋಕಾಯುಕ್ತಕ್ಕೆ ಸಲ್ಲಿಸುವ ಪ್ರಕ್ರಿಯೆ ಹೆಚ್ಚು ಆಯಿತು ಮತ್ತು ಇದನ್ನು ತಡೆಯಲು ಸ್ಥಳಿಯ ಗುತ್ತಿಗೆದಾರರು, ಜನಪ್ರತಿನಿದಿಗಳು ದೂರು ನೀಡಿದವರ ಮೇಲೆ ಹಲ್ಲೆ ಮಾಡುವುದು ಹೆಚ್ಚಾದ್ದರಿಂದ ನನಗೂ ಭ್ರಮನಿರಸನ ಪ್ರಾರಂಭ ಆಯಿತು ಅದು ಜನಪರ ಹೋರಾಟ, ಸಭೆ ಸಮಾರಂಭಗಳಿಂದ ದೂರವಾಗಿ ರಾಜಕೀಯವಾಗಿ ನಿವೃತ್ತನಾಗಲು ಕಾರಣವೂ ಆಯಿತು.

Comments

Popular posts from this blog

Blog number 1782. ಅರಳಸುರಳಿಯ ರಾಘವೇಂದ್ರ ಕೇಕೋಡರ ಕುಟುಂಬದ ತಪ್ಪು ನಿರ್ದಾರದ ದುರಂತ.

#ತೀರ್ಥಹಳ್ಳಿಯ_ಅರಳಸುರಳಿಯ_ಒಂದೇ_ಕುಟುಂಬದ_ನಾಲ್ವರು_ಮೃತರಾದ_ರಹಸ್ಯವೇನು? #ಈ_ಬಗ್ಗೆ_ಆ_ಊರಿನ_ಸಮೀಪದ_ಈ_ಕುಟುಂಬದ_ಪರಿಚಯ_ಇರುವವರಿಗೆ_ವಿಚಾರಿಸಿದ್ದೆ. #ಅವರು_ಈ_ಘಟನೆ_ಬಗ್ಗೆ_ಸವಿಸ್ತಾರವಾಗಿ_ಲಿಖಿತ_ಲೇಖನ_ಬರೆದಿದ್ದಾರೆ. #ಅವರ_ವಿನಂತಿ_ಅವರ_ಹೆಸರು_ಬಹಿರಂಗಗೊಳಿಸ_ಬಾರದು. #ಆದ್ದರಿಂದ_ಈ_ಲೇಖನ_ಪೋಸ್ಟ್_ಮಾಡಬಾರದೆಂದಿದ್ದೆ_ಆದರೆ_ಇದು_ಮಲೆನಾಡಿಗರ_ಮನೆ_ಮನೆಯ_ಕಥೆ #ಆದ್ದರಿಂದ_ಇಲ್ಲಿ_ಪೋಸ್ಟ್_ಮಾಡಿದೆ.    ಇಲ್ಲಿ ತಪ್ಪು ಯಾರದ್ದೂ ಇಲ್ಲ... ಪಶ್ಚಾತ್ತಾಪದ ಪ್ರಾಯಶ್ಚಿತ ಕೇಳಲು ಅವರಾರು ಇಲ್ಲ .....ಆದರೆ ಈ ರೀತಿ ಜೀವ ತ್ಯಾಗ ಮಾಡುವ ಆತುರದ ಕೆಟ್ಟ ನಿರ್ದಾರ ಮಾತ್ರ ಸರಿ ಅಲ್ಲ.     ಇವರ ಅಣ್ಣ ಆರ್.ಎಸ್.ಎಸ್. ಪ್ರಚಾರಕರಾಗಿ ದೆಹಲಿಯಲ್ಲಿ ಏಳು ವಷ೯ ಮೋದಿ ಜೊತೆ ಒಂದೇ ಕೋಣೆ ಹಂಚಿಕೊಂಡವರು, ಇನ್ನೊಬ್ಬ ಸಹೋದರ ಮೂಳೆ ತಜ್ಞರಾಗಿ ಶಿವಮೊಗ್ಗದಲ್ಲಿ ಆಸ್ಪತ್ರೆ ಮಾಡಿಕೊಂಡಿದ್ದಾರೆ.   #ದೀರ್ಘವಾದರೂ_ಪೂರ್ಣ_ಲೇಖನ_ಓದಿ   #ಹೀಗೊಂದು_ಸುಕುಟುಂಬ_ಆತ್ಮಾಘಾತ_ಮತ್ತು_ತದನಂತರದ_ಸಹಾಗಮನ.... ಮೂಡಣದಲ್ಲಿ ರವಿ ಮೂಡಲು ಅಣಿ ಯಾಗುತ್ತಿಧ್ದ .. ಹಾದಿಗಣಪತಿ ದೇವರು ಗರ್ಭಗುಡಿಯ ನಂದಾದೀಪದ ಮಂದ ಬೆಳಕಿನಲ್ಲಿ ತನ್ನ ಗುಡಿಯ ಎದುರಿನ ತಗ್ಗಿನಲ್ಲಿದ್ದ  ರಾಘವೇಂದ್ರ ಕೇಕೋಡರ ಮನೆಯನ್ನು ಎವೆಯಕ್ಕದೇ ನೋಡುತ್ತಲಿದ್ದ... ಊರ ಎಲ್ಲಾ ಮನೆಯಂತೆ ಆ ಮನೆಯಲ್ಲೂ ಆ ಬೆಳಗಿನಲ್ಲಿ ಮನೆಯೊಡತಿ ನಾಗರತ್ನಕ್ಕ ಆ ಸಮಯದಲ್ಲಿ ದೇವರಿಗೆ ದೀಪ ಹಚ್ಚಿ ಹೊಸ್ತಿಲು ಪೂಜೆ ಮಾಡ

Blog number 1037. ರಾಜಕುಮಾರಿ ಶಾಂತವ್ವ ಮತ್ತು ದಲಿತ ಯುವಕ ಸಿದ್ದೇಶ್ವರರ ಅಮರ ಪ್ರೇಮದ ಸ್ಮಾರಕ, ಅನ್ಯ ಜಾತಿ ವಿವಾಹವಾದ್ದರಿಂದ ರಾಜಕುಮಾರಿಗೆ ಸೂಳೆ ಪಟ್ಟ ನೀಡಿದ ಸಮಾಜ. ಸಮಾಜದ ಒಳಿತಿಗಾಗಿ ಶಾಂತವ್ವ ಕಟ್ಟಿಸಿದ ಬೃಹತ್ ಕೆರೆಗೆ ಜನ ಕರೆದದ್ದು ಸೂಳೆ ಕಟ್ಟಿಸಿದ ಕೆರೆ ಅದೇ ಸೂಳೆಕೆರೆ / ಶಾಂತಿ ಸಾಗರ

# ಸೂಳೆಕೆರೆ (ಶಾಂತಿ ಸಾಗರ) ಅಂತರ್ ಜಾತಿ ಪ್ರೇಮ ವಿವಾಹದ ದುರOತ ಕಥೆ. #ಅಕ್ಟೋಬರ್ 2019 ರಲ್ಲಿ ತುಂಬಿ ತುಳುಕಿತ್ತು.  ಚಿತ್ರದುಗ೯, ದಾವಣಗೆರೆ ಬಳ್ಳಾರಿ ಮುಂತಾದ ಮಳೆ ಕಡಿಮೆ ಆಗುತ್ತಿದ್ದ ಜಿಲ್ಲೆಗಳಲ್ಲಿ ಅದೂ ಅಕ್ಟೋಬರ್ ತಿಂಗಳ 2019 ರಲ್ಲಿ  ಬಂದಿದ್ದ ಬಾರಿ ಮಳೆ ಎಲ್ಲಾ ಕೆರೆ, ಹೊಂಡಗಳು ತುಂಬಿ ತುಳುಕಿದೆ, ಸಾಮಾಜಿಕ ಜಾಲ ತಾಣದಲ್ಲಿ 40 ವಷ೯ದಲ್ಲಿ ಇಂತ ಮಳೆ ಬಂದಿಲ್ಲ ಅಂತ ಸುದ್ದಿ ಹರಿದಾಡುತ್ತಿತ್ತು ಮತ್ತು  ಸೂಳೆಕೆರೆ ತುಂಬಿ ಕೋಡಿ ಬಿದ್ದಿದೆ ಅಂತೆಲ್ಲ Post ನೋಡಿ ಬೆಂಗಳೂರಿಂದ ಬರುವಾಗ ಚಿತ್ರದುಗ೯ ಮಾಗ೯ವಾಗಿ ಚನ್ನಗಿರಿ ತಲುಪಿ ಸೂಳೆಕೆರೆ ನೋಡಲು ಹೋಗಿದ್ದೆ.  11ನೇ ಶತಮಾನದಲ್ಲಿ (1128ರಲ್ಲಿ)ಕೇವಲ 3 ವಷ೯ದಲ್ಲಿ ಈ ಕೆರೆ ನಿಮಾ೯ಣ ಮಾಡಿಸಿದ್ದು ಶಾಂತವ್ವ ಎಂಬ ರಾಜ ಕುಮಾರಿ ಅವಳು ಸ್ವಣ೯ವತಿ ಪಟ್ಟಣದ ದೊರೆ ವಿಕ್ರಮ ರಾಜನ ಮಗಳು, ಸಿದ್ದೇಶ್ವರ ಎಂಬ ಅನ್ಯ ಜಾತಿಯ ಯುವಕನೊ೦ದಿಗೆ ಗಾಂದವ೯ ವಿವಾಹ ಆಗುತ್ತಾಳೆ ಇದನ್ನ ಸಹಿಸದ ಮತ್ತು ಒಪ್ಪದ ಜನತೆ ಸೂಳೆ ಎಂದು ಮೂದಲಿಸುತ್ತಾರOತೆ ಈ ರೀತಿ ತನಗೆ ಬಂದ ಕಳಂಕ ಕಳೆಯಲು ಈ ಬೃಹತ್ ಕೆರೆ ತನ್ನ ಪತಿ ಸಿದ್ದೇಶ್ವರನ ಜೊತೆ ಸೇರಿ ನಿಮಿ೯ಸಿ ಕೆರೆಗೆ ಹಾರವಾದಳೆoಬ ಇತಿಹಾಸ ಇದೆ ಇದರಿಂದ ನೊಂದ ಪತಿ ಸಿದ್ಧೇಶ್ವರ ಕೂಡ ಎದುರಿನ ಗುಡ್ಡದಲ್ಲಿ ಜೀವ ತ್ಯಾಗ ಮಾಡುತ್ತಾನೆ ಈಗ ಅಲ್ಲಿ ಸಿದ್ದೇಶ್ವರ ದೇವಸ್ಥಾನವಿದೆ.   ಈ ಕೆರೆ ಈಗಲೂ ಸೂಳೆಕೆರೆ ಎಂದೆ ಹೆಸರಾಗಿದೆ ಈ

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್ಪಿಸಿಕೊಳ್ಳಬೇಕು ಅಂತ ಬಿದನೂರು ನಗರ ಸಮೀಪದ ದೇವಗಂಗೆ ಎಂಬ ಕೆಳದಿ