Skip to main content

ಮದ್ಯ ವಯಸ್ಸಿನಲ್ಲಿ ತೂಕ ಇಳಿಸುವುದು ಸುಲಭವಲ್ಲ ನನ್ನ ಅನುಭವ

#ಶಿವರಾತ್ರಿಯಿಂದ_ಶಿವರಾತ್ರಿವರೆಗೆ
#ಇಪ್ಪತ್ತು_ಕೇಜಿ_ತೂಕ_ಇಳಿಸಿಕೊಂಡಿದ್ದು
#ಸ್ಥೂಲಕಾಯದವರಿಗೆ_ಸುಲಭ_ಉಪಾಯ

   ಕಳೆದ ವರ್ಷ ಫೆಬ್ರುವರಿ 23ಕ್ಕೆ ಇರಬೇಕು ಶಿವರಾತ್ರಿ ಅವತ್ತೇ ತೀಮಾ೯ನ ಮಾಡಿದ್ದೆ ಮುಂದಿನ ವರ್ಷದ ಶಿವರಾತ್ರಿ ತನಕ ರಾತ್ರಿ ಊಟ ಬಿಡುವುದಂತ.
   ನಮ್ಮ ತಂದೆ ಕೂಡ ರಾತ್ರಿ ಊಟ ಮಾಡುತ್ತಿರಲಿಲ್ಲ ಮಲಗುವಾಗ ಒಂದು ಲೋಟ ರಾಗಿ ಅಂಬಲಿ ಹಾಲು ಮಾತ್ರ ಅವರ ಪದ್ಧತಿ ಆಗಿತ್ತು.
  ಕಳೆದ ವರ್ಷ ಜನವರಿಯಲ್ಲಿ ಶಿವಮೊಗ್ಗದ ಡಾಕ್ಟರ್ ಪ್ರೀತಂ (ನಮ್ಮ ಕುಟುಂಬ ವೈದ್ಯರು) ತಪಾಸಣೆಗೆ ಹೋದಾಗ ನನ್ನ ತೂಕ 133 - 135 ರ ಆಸುಪಾಸಿನಲ್ಲಿತ್ತು, ಡಯಾಬಿಟೀಸ್ ಖಾಲಿ ಹೊಟ್ಟೆಯಲ್ಲಿ 240 ಊಟದ ನಂತರ 300 ರ ಸಮೀಪ ಇರುತ್ತಿತ್ತು, ಹೊಟ್ಟೆ ಗುಡಾಣ ಆಗಿತ್ತು ಅದರ ಮಧ್ಯೆ ಹೊಕ್ಕುಳ ಹತ್ತಿರ ಹನಿ೯ಯಾ ಬೇರೆ.
  ಹತ್ತಿಪ್ಪತ್ತು ಹೆಜ್ಜೆ ನಡೆಯಲು ಆಯಾಸ ಇದು ನನ್ನ ದೇಹದ ಒಳಗಿನ  ಬಯಾಲಾಜಿಕಲ್ ಕ್ಲಾಕ್ ಅಲಾರಂ ಮಾಡುತ್ತಿತ್ತು "ನಿನ್ನ ಆರೋಗ್ಯ ಹದಗೆಟ್ಟಿದೆ ಎಚ್ಚರ " ಅಂತ.
  1995 ರ ತನಕ ನನ್ನ 35 ವರ್ಷದ ತನಕ ನನಗೆ ತೂಕದ ಸಮಸ್ಯೆ ಇರಲಿಲ್ಲ ನಂತರವೇ ಪ್ರಾರಂಭ ಆದ ತೂಕದ ಏರುಗತಿ 2001ರಲ್ಲಿ 120 ದಾಟಿ ಅಲ್ಲೇ ನಿಂತಿದ್ದು 2020ಕ್ಕೆ ಪುನಃ ತನ್ನ ಏರುಗತಿ ಪ್ರಾರಂಬಿಸಿತ್ತು.
  ಪ್ರತಿ 3 ತಿಂಗಳಿಗೆ ತೊಡುವ ಬಟ್ಟೆ ಅಳತೆ ಬದಲಾಗಿ ಹೊಸ ಬಟ್ಟೆ ಬೇಕಾಗಿತ್ತು, ಬೇರಿಯಾಟ್ರಿಕ್ ಸಜ೯ರಿ ಮಾಡಿಸಿಕೊಳ್ಳುವ ಮನಸ್ಸೂ ಮಾಡಿದ್ದೆ ನಮ್ಮಲ್ಲಿಗೆ ಬೇಟಿ ನೀಡಿದ್ದ, ಬೇರಿಯಾಟ್ರಿಕ್ ಸರ್ಜರಿ ಮಾಡಿಸಿಕೊಂಡಿದ್ದ ರವಿ ಬೆಳಗೆರೆ, ಚಿತ್ರ ನಟ ದೊಡ್ಡಣ್ಣ ತಮ್ಮ ಬೇರಿಯಾಟ್ರಿಕ್ ಸಜ೯ರಿ ಯಶಸ್ಸಾಗಿದೆ ಅನ್ನುತ್ತಿದ್ದರು ಬೇರೆ.
  ಎಲ್ಲಾ ರೀತಿಯ ಡಯಟ್, ಕ್ರಾಶ್ ಡಯಟ್ ಅಮೆರಿಕನ್ ಡಯಟ್ ಹೀಗೆ ಸಾಲು ಸಾಲು ತೂಕ ಇಳಿಸಿಕೊಳ್ಳುವ ಪ್ರಯತ್ನ ಸ್ವಲ್ಪವೂ ಫಲ ನೀಡಲೇ ಇಲ್ಲ.
  ರಾತ್ರಿ ಚಪಾತಿ ತಿನ್ನುವುದು, ಬೆಳಿಗ್ಗೆ ಬಿಸಿ ನೀರಲ್ಲಿ ಜೇನು ತುಪ್ಪ, ಸಿರಿ ಧಾನ್ಯ ಇಂತಹ ಎಲ್ಲಾ ಪ್ರಯತ್ನವೂ ನನ್ನ ದೇಹದ ತೂಕ ನಿಯಂತ್ರಿಸಲು ಸಾಧ್ಯವೇ ಆಗಲಿಲ್ಲ.
  2006 ರಿಂದ ತಪ್ಪದೇ ಸಿದ್ದ ಸಮಾದಿ ಯೋಗ ಸಂಸ್ಥೆಯ ಯೋಗಾಸನ, ಪ್ರಾಣಯಾಮ ಮತ್ತು ಧ್ಯಾನ ಇವತ್ತಿನ ದಿನದ ತನಕವೂ ತಪ್ಪಿಸಿಲ್ಲ ಆದರೆ ಅದು ತೂಕದ ಸುದ್ದಿಗೆ ಹೋಗಲಿಲ್ಲ.
  ಹನಿ೯ಯಾಗೆ ಶಸ್ತ್ರಚಿಕಿತ್ಸೆ ಅನಿವಾಯ೯ ಅನ್ನುವ ಸಂದರ್ಭದಲ್ಲೇ ಕಳೆದ ವರ್ಷದ ಶಿವರಾತ್ರಿ ದಿನ ತೆಗೆದುಕೊಂಡ ತೀಮಾ೯ನ ಒಂದು ವರ್ಷದಲ್ಲಿ ಸುಮಾರು 20 ಕೇಜಿ ತೂಕ ಇಳಿಸಿತು, ಹರ್ನಿಯಾ ನಾಪತ್ತೆ ಆಯಿತು, ಡಯಾಬಿಟಿಸ್ ಖಾಲಿ ಹೊಟ್ಟೆಯಲ್ಲಿ ನೂರರ ಒಳಗೆ ಊಟದ ನಂತರ 130 ದಾಟಲಿಲ್ಲ, ಪ್ರತಿದಿನ ಆಯಾಸ ಇಲ್ಲದೇ 2 ಗಂಟೆ ಸತತ ನಡೆಯುವ ಶಕ್ತಿಗಳೆಲ್ಲ ದೇಹ ಪಡೆದಿದೆ.
   ಊಟ ಯಾವುದೂ ಬಿಡಲಿಲ್ಲ, ಹಾಲು ತುಪ್ಪ ಬೆಣ್ಣೆ ಬೇಕಾದಷ್ಟು ತಿನ್ನುತ್ತೇನೆ ಇದೆಲ್ಲ ಏಕೆ ಹೇಳುತ್ತೇನೆಂದರೆ ಡಯಟ್ ತಜ್ಞರು ಇದನ್ನೆಲ್ಲ ಬಳಸಬಾರದೆಂದು ಹೇಳುತ್ತಾರೆ.
  ಸ್ವತಃ  ಪ್ರಯೋಗ ಮಾಡಿ ನೋಡದ ಎಲ್ಲಾ ಪುಸ್ತಕದ ಬದನೆಕಾಯಿಯಂತ ಪ್ರಕೃತಿಗೆ ವಿರುದ್ದವಾದ ಡಯಟ್ ಪಾಲನೆ ಕಷ್ಟಸಾಧ್ಯ, ಪ್ರಾರಂಭದಲ್ಲಿ ಇರುವ ಉತ್ಸಾಹ ನಂತರ ನಾಲಿಗೆ ಕೇಳದೆ ಉತ್ಸಾಹ ಕಳೆದುಕೊಂಡು ಬೋನಸ್ ತೂಕ ಪಡೆದವರ ನೂರಾರು ಕಥೆ ನನ್ನ ಸುತ್ತಲಿನವರದ್ದು.
   ಕಳೆದ ವರ್ಷದ ಪೋಟೋದಲ್ಲಿ ನೋಡಿ  ನನ್ನ ಮುಖ ಹಿತ್ತಾಳೆ ಚೆಂಬಿನಂತೆ ಅಗಲ ಆಗುತ್ತಿತ್ತು ಇವತ್ತು ಕೊಬ್ಬು ಕರಗಿ ಬದಲಾಗಿರುವುದು ನೋಡಬಹುದು.
   ಮುಂದಿನ ವರ್ಷದ ಶಿವರಾತ್ರಿಗೂ ನನ್ನ ಈ ಡಯಟ್ ಮುಂದುವರಿಸುವ ತೀಮಾ೯ನ ಮಾಡಿದ್ದೇನೆ ಇನ್ನೊಂದು 20 ಕೇಜಿ ತೂಕ ಇಳಿಯಬಹುದು ಎಂಬ ಆಶಾಭಾವನೆ ಕೂಡ ಇದೆ. 
  ನಮ್ಮಲ್ಲಿರುವುದ ಮರೆತು ಬೇರೆಲ್ಲೊ ಹುಡುಕುವ ನಮ್ಮ ಸಹಜ ಬುದ್ದಿ ಬದಲಾಯಿಸಿ ಕೊಂಡು ಪ್ರಕೃತಿಯ ಜೊತೆಗೆ ಮನೆಯಲ್ಲೇ ಯಾವುದೇ ಖಚಿ೯ಲ್ಲದೆ ಸ್ಥೂಲಕಾಯ ನಿವಾರಿಸಿಕೊಳ್ಳುವ ಸುಲಭ ಮಾರ್ಗಗಳಿದೆ ಆದರೆ ನಿಮ್ಮ ಪ್ರಯತ್ನಕ್ಕೆ ಕನಿಷ್ಟ ಒಂದು ವರ್ಷದ ಕಾಲಾವಕಾಶ ಇಟ್ಟುಕೊಳ್ಳಬೇಕು, ಎರಡೇ ದಿನದಲ್ಲಿ ತೂಕ ಪರೀಕ್ಷಿಸಿಕೊಂಡರೆ ಹತಾಷೆ ಗ್ಯಾರಂಟಿ.
  ನಾನು ಪ್ರಾರಂಭದ ಆರು ತಿಂಗಳು ತೂಕ ಪರೀಕ್ಷೆ ಮಾಡಲೇ ಇಲ್ಲ ಇವತ್ತಿನ ತೂಕ 110 kg.
  ಮುಂದಿನ ದಿನದಲ್ಲಿ ನಮ್ಮ ಆಯುವೇ೯ದ ಮತ್ತು ನ್ಯಾಚುರೋಪತಿ ಚಿಕಿತ್ಸಾಲಯದಲ್ಲಿ ಇಂತಹ ಮಾಗ೯ದಶ೯ನ ಸಿಗುವ ವ್ಯವಸ್ಥೆ ಕೂಡ ಆಗಲಿದೆ.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...