Skip to main content

ಶಿವಮೊಗ್ಗ ಜಿಲ್ಲಾ ಜೆಡಿಎಸ್ ಪಕ್ಷ ಸಂಘಟನೆ ಉತ್ತುಂಗಕ್ಕೆ ತಲುಪಿಸಿದ ಎಂ.ಶ್ರೀಕಾಂತ್ ಗೆ ವಿದಾನ ಪರಿಷತ್ ಗೆ ನಾಮಕರಣ ಮಾಡಬೇಕೆಂಬ ಒತ್ತಾಯ ಈಡೇರಲು ವಿಳಂಬಕ್ಕೆ ಕಾರಣ ಏನು?

#ಶಿವಮೊಗ್ಗ_ಜಿಲ್ಲೆಯಲ್ಲಿ_ಸ್ವಂತ_ಶ್ರಮದಿಂದ_ನಿರಂತರ_ರಾಜಕಾರಣ_ಮಾಡುತ್ತಿರುವ_ಶ್ರೀಕಾಂತ್

   ನಿನ್ನೆ ಸಿಗಂದೂರು ದೇವಾಲಯಕ್ಕೆ ಹೋಗಿ ಬರುವಾಗ ಶ್ರೀಕಾಂತ್ ನನ್ನ ಕಚೇರಿಗೆ ಬಂದಿದ್ದರು.
  ನಾನು ಇಷ್ಟ ಪಡುವ ರಾಜಕಾರಣಿಗಳಲ್ಲಿ ಶ್ರೀಕಾಂತ್ ಗೆ ಅಗ್ರಸ್ಥಾನ ಯಾಕೆಂದರೆ ಅವರಲ್ಲಿರುವ ತಾಳ್ಮೆ, ಇಡೀ ಶಿವಮೊಗ್ಗ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಕಟ್ಟಿ ಬೆಳೆಸಿದ ಶ್ರಮ ಇವರದ್ದು ಒ0ದು ಹಂತದಲ್ಲಿ ಮೂವರು ಶಾಸಕರು, ಜಿಲ್ಲಾ ಪಂಚಾಯತ್, ನಗರಸಭೆ ವಿವಿದ ತಾಲ್ಲೂಕ್ ಪಂಚಾಯತ್ಗಳಲ್ಲಿ ಅಧಿಕಾರ ಹೊಂದಿತ್ತು.
  ನಂತರ ಇವರನ್ನು ಬದಿಗೆ ಉದ್ದೇಶ ಪೂರ್ವಕವಾಗಿ ಬದಿಗೆ ಸರಿಸಿದರು ಇದಕ್ಕೂ ಇವರು ಬೇಸರಿಸದೆ ದೇವೇಗೌಡರ ಮತ್ತು ಕುಮಾರ ಸ್ವಾಮಿಗೆ ನಿಷ್ಟಾವಂತರಾಗಿ ಸುಮ್ಮನೆ ಉಳಿದರು.
  ಜೆಡಿಎಸ್ ಸಕಾ೯ರ ಇದ್ದಾಗ ಇವರನ್ನ ವಿದಾನ ಪರಿಷತ್ ಗೆ ನಾಮಕರಣ ಮಾಡಿದ್ದರೆ ಇವತ್ತು ಶಿವಮೊಗ್ಗ ಜಿಲ್ಲೆಯಲ್ಲಿ ಪಕ್ಷ ಸಂಘಟನೆಗೆ ತುಂಬಾ ಸಹಾಯ ಆಗುತ್ತಿತ್ತು ಆದರೆ ಕುಮಾರಸ್ವಾಮಿಯವರು ಈ ಬಗ್ಗೆ ಯೋಚಿಸದೇ ಇದ್ದದ್ದು ವಿಷಾದನೀಯ.
  2010ರಲ್ಲಿ ನಾನು ಮತ್ತು ಸಾಗರದ ಕೆ.ಎಲ್.ಮಂಜುನಾಥ್ ದೇವೇಗೌಡರು ಶಿವಮೊಗ್ಗದಲ್ಲಿ ಶ್ರೀಕಾಂತರ ಮನೇಲಿ ತಂಗಿದ್ದಾಗ ಶ್ರೀಕಾಂತರ ಸಂಘಟನಾ ಶಕ್ತಿ ಬಗ್ಗೆ ಮತ್ತು ಇವರನ್ನು ವಿದಾನ ಪರಿಷತ್ ಗೆ ನಾಮಕರಣ ಮಾಡಿದರೆ ಇನ್ನೂ ಹೆಚ್ಚಿನ ಶಕ್ತಿ ಜಿಲ್ಲೆಗೆ ಕೊಟ್ಟಂತಾಗುತ್ತದೆ ನಾವು ಮನವಿ ಮಾಡಿದ್ದೆವು ಆಗ ದೊಡ್ಡ ಗೌಡರು ಶ್ರೀಕಾಂತ್ ಗೆ ಖಂಡಿತಾ ಎಂ ಎಲ್ ಸಿ ಮಾಡುವುದಾಗಿ ಭರವಸೆ ನೀಡಿದ್ದು ಈ ವರೆಗೂ ಈಡೇರಲಿಲ್ಲ.
   ಈಗ ಭದ್ರಾವತಿ ಮಾಜಿ ಶಾಸಕರಾದ ಅಪ್ಪಾಜಿ ಗೌಡರು ಇಹಲೋಕ ತ್ಯಜಿಸಿದ್ದಾರೆ, ಸೊರಬದ ಮಾಜಿ ಶಾಸಕರಾದ ಮದು ಬಂಗಾರಪ್ಪ ಜೆಡಿಎಸ್ ತ್ಯಜಿಸಿದ್ದಾರೆ ಮುಂದೆ ಜಿಲ್ಲಾ ಪಂಚಾಯತ್ ಮತ್ತು ತಾಲ್ಲೂಕ್ ಪಂಚಾಯತ್ ಚುನಾವಣೆ ಇದೆ, ಜಿಲ್ಲಾ ಅಧ್ಯಕ್ಷರು ರಾಜಿನಾಮೆ ನೀಡಿದ್ದಾರೆ.
   ಈ ಸಂದಭ೯ದಲ್ಲಿ ಶ್ರೀಕಾಂತ್ ರ ನಡೆ ಏನು ಅಂತ ಕುತೂಹಲ ಇತ್ತು ಕೇಳಿದೆ ಅದಕ್ಕೆ ಅವರ ಉತ್ತರ "ಅರುಣ್ ಪ್ರಸಾದ್ ನಾನು ಜೆಡಿಎಸ್ ಬಿಟ್ಟು ಎಲ್ಲಿ ಹೋಗಲಿ" ಅಂದರು.
  ಮುಂದಿನ ದಿನದಲ್ಲಿ ಸಂಘಟನಾ ಚತುರರಾದ ಶ್ರೀಕಾಂತ್ ಗೆ ಉನ್ನತ ಸ್ಥಾನಮಾನ ಯಶಸ್ಸು ಸಿಗಲಿ ಎಂದು ಹಾರೈಸಿದೆ.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...