Skip to main content

ಆದ್ಯಾತ್ಮದ ನ೦ಟಿರುವ ವಾದಿರಾಜ ತೀಥ೯ರಿಗೆ ಶ್ರೀ ಕೃಷ್ಣ ದಯಪಾಲಿಸಿದ ಮಟ್ಟು ಗುಳ್ಳದ ಬೀಜಗಳು.

# ಉಡುಪಿಯ ಮಟ್ಟು ಗುಳ್ಳದ ಮೂಲ ಬಲ್ಲಿರಾ#
   ಉಡುಪಿ ಗುಳ್ಳ ಎಂದರೆ ದಂಡನೆಯ ಬದನೆಕಾಯಿ ಅಂತ ಎಲ್ಲರಿಗೂ ಗೊತ್ತು ಆದರೆ ಇಲ್ಲಿನ ಮಟ್ಟು ಗುಳ್ಳಕ್ಕೆ ಬೇರೆಯದೇ ಇತಿಹಾಸ, ಆಧ್ಯಾತ್ಮದ ನಂಟು, ರುಚಿ ಇದೆ.
  ಹಾಗಾಗಿಯೆ ಇದಕ್ಕೆ ಜಿಯೋಗ್ರಾಫಿಕಲ್ ಇಂಡಿಕೇಶನ್ ಟ್ಯಾಗ್ ಇದೆ.
  ಉಡುಪಿಯಲ್ಲಿ ಉಡುಪಿ ಗುಳ್ಳ ಅಂತ ಬಕೂ೯ರ್, ಕುಂದಾಪುರದಲ್ಲಿ ಬೆಳೆದ ಗುಳ್ಳಗಳ ಮಾರಾಟ ಜಾಸ್ತಿ ಆದರೆ ಮಟ್ಟು ಗುಳ್ಳ ಮಾತ್ರ ಎಲ್ಲಾ ಕಡೆ ಸಿಗುವುದಿಲ್ಲ.
   ಉಡುಪಿಯಿ೦ದ ಮ೦ಗಳೂರು ರಾಷ್ಟ ಹೆದ್ದಾರಿಯಲ್ಲಿ ಕಟಪಾಡಿಯಿ೦ದ ಬಲಕ್ಕೆ ತಿರುಗಿದರೆ ಮಟ್ಟು ಎಂಬ ಹಳ್ಳಿ ಇದೆ ಇಲ್ಲಿ ಉದ್ಯಾವರ ನದಿ ಮತ್ತು ಸ್ವಣ೯ ನದಿ ಹರಿಯುವ ಪ್ರದೇಶದ ಮದ್ಯದ ಸುಮಾರು 500 ಎಕರೆ ಮರಳು ಮಿಶ್ರ ಮಣ್ಣಿನ ಭೂಮಿ ಈ ಗುಳ್ಳ ಬೆಳೆಯುವ ಪ್ರದೇಶ.
   ಪ್ರತಿ ಹೆಕ್ಟರ್ ಗೆ ಅಂದಾಜು 40 ಟನ್ ಇಳುವರಿ ಬರುವ ಈ ಬೆಳೆ ಸೆಪ್ಟೆಂಬರ್/ಅಕ್ಟೋಬರ್ ನಲ್ಲಿ ಕೊಯ್ಲಗಿ ಬರುತ್ತೆ, ರಾಸಾಯನಿಕ ಬಳಸದೆ ಹೆಚ್ಚು ಮೀನು ಗೊಬ್ಬರದಲ್ಲಿ ಇದನ್ನ ಬೆಳೆಸುತ್ತಾರೆ, ಯಾವುದೇ ವಿಷದ ಕ್ರಿಮಿನಾಶಕ ಬಳಸುವುದಿಲ್ಲ ಹಾಗಾಗಿ ಈ ಮಟ್ಟು ಗುಳ್ಳ ಸಾವಯವ ತರಕಾರಿ ಮತ್ತು ಇದರ ರುಚಿ ಅತ್ಯಂತ ವಿಭಿನ್ನ .
   ಈಗ ಇದನ್ನ ಬೆಳೆಸುವವರ ಸಂಖ್ಯೆ ಕಡಿಮೆ ಆಗಿದೆ, 2011ರಲ್ಲಿ ಇದರ ಪ್ರಾದೇಶಿಕ ವಿಭಿನ್ನತೆ, ಹಿನ್ನೆಲೆಗೆ ಜಿಯಾಗ್ರಾಫಿಕಲ್ ಇಂಡಿಕೇಶನ್ ಟ್ಯಾಗ್ ಹೊಂದಿದ್ದು ಕನಾ೯ಟಕದ ಈ ತರಕಾರಿಗೆ ಹೆಮ್ಮೆಯ ಕಿರೀಟವಾಗಿದೆ.
  ಇದಕ್ಕೆ 400 ವಷ೯ದ ಇತಿಹಾಸವಿದೆ, ಇಲ್ಲಿ ಬೆಳೆದ ಮೊದಲ ಬೆಳೆ ಉಡುಪಿ ಕೃಷ್ಣ ದೇವರಿಗೆ ಸಮಪ೯ಣೆ ಮಾಡುವ ಪರಂಪರೆ ಇದಕ್ಕೆ ಕಾರಣವಾದ ಕಥೆ ಕೂಡ ಇದೆ.
   ಉಡುಪಿ ಅಷ್ಟಮಠದ ವಾದಿರಾಜ ಸ್ವಾಮಿಗಳು ಪ್ರತಿ ದಿನ   ದೇವರಿಗೆ ಹಯಗ್ರೀವ ನೈವೇದ್ಯ ಮಾಡುತ್ತಿದ್ದರಂತೆ ಇವರನ್ನ ನೋಡಿ ಸಹಿಸದ ದೇವಾಲಯದ ಪುರೋಹಿತರು ಒಂದು ವದಂತಿ ಹರಡಿದ್ದರಂತೆ ಅತ್ಯಂತ ರುಚಿಯಾದ ಹಯಗ್ರೀವ ವಾದಿರಾಜರೇ ನೈವೇದ್ಯದ ಹೆಸರಲ್ಲಿ ಬಾಗಿಲು ಹಾಕಿ ತಿನ್ನುತ್ತಾರೆ ಅಂತ.
  ಆದರೆ ಪ್ರತಿ ದಿನ ವಾದಿರಾಜರು ಹಯಗ್ರೀವ ನೈವೇದ್ಯ ಮಾಡಿದಾಗ ದೇವರೇ ಸ್ವೀಕರಿಸಿ ಖಾಲಿ ತಟ್ಟೆ ಇರುತ್ತಿತ್ತಂತೆ ಆದರೆ ಇದನ್ನ ತಪ್ಪಾಗಿ ಅಥ್ತೈ೯ಯಿಸಿದ ಮತ್ತು ಸಹಿಸದ ಪುರೋಹಿತ ವಗ೯ ಹಯಗ್ರೀವದಲ್ಲಿ ವಿಷ ಬೆರೆಸಿದ್ದರಂತೆ, ಇದನ್ನ ತಿಳಿಯದೆ ವಾದಿರಾಜರು ನೈವೇದ್ಯ ಮಾಡಿದ್ದರು ಇದನ್ನ ಸೇವಿಸಿದ ಕೃಷ್ಣ ದಿನದಿಂದ ದಿನಕ್ಕೆ ನೀಲಿ ಆಗಲು ಪ್ರಾರಂಭಿಸಿದನಂತೆ ನಂತರ ಇದಕ್ಕೆ ಕಾರಣ ತಿಳಿದ ವಾದಿರಾಜರು ಶ್ರೀ ಕೃಷ್ಣನಿಂದ ಪರಿಹಾರವಾಗಿ ಈ ವಿಶಿಷ್ಟ ಗುಳ್ಳದ ಬೀಜ ಪಡೆದು ಈ ಮಟ್ಟು ಎಂಬ ಹಳ್ಳಿಯ ಜನಕ್ಕೆ ನೀಡಿ ಬೆಳೆ ಬೆಳೆಸಿ ನಂತರ ಇದನ್ನ ಕೃಷ್ಣನಿಗೆ ಸಮಪ೯ಣೆ ಮಾಡಿದಾಗ ನೀಲಿ ಬಣ್ಣದ ವಿಷ ಹೋಯಿತು ಎಂದು ಇದಕ್ಕೆ ಆಧ್ಯಾತ್ಮದ ಸ್ಥಳ ಪುರಾಣ ಹೇಳುತ್ತಾರೆ.
 ಉಡುಪಿ ಅಷ್ಟ ಮಠದಲ್ಲಿ ಈಗಲೂ ಒಳ ಜಗಳ ಇದೆ ಅದೇ ರೀತಿ ಕನಕನ ಕಿಂಡಿ, ಮಟ್ಟುಗುಳ್ಳಗಳ ಪವಾಡದ ಕಥೆಗಳು ಕೂಡ.
  ಮೊನ್ನೆ ಉಡುಪಿಯಲ್ಲಿ ಸಿಕ್ಕಿದ ಮಟ್ಟುಗುಳ್ಳ ತ೦ದು ತಿಂದದ್ದಲ್ಲದೆ ಗೆಳೆಯರಿಗೆಲ್ಲ ಕೊಟ್ಟಿದ್ದೆ ಅವರೆಲ್ಲ ಇದರ ರುಚಿಗೆ ಮನ ಸೋತಿದ್ದಾರೆ ಹಾಗೆ ಅವರು ಪ್ರಶ್ನೆ ಹಾಕುತ್ತಾರೆ ಸೇಬು ಹಣ್ಣಿಗೆ ಹಾಕಿದOಗೆ ಇದಕ್ಕೂ ಸೀಲ್ ಹಾಕಿದ್ದು ಏಕೆ? ಅಂತ. ( ಇದು ಜಿಯೋಗ್ರಾಫಿಕಲ್ ಇಂಡಿಕೇಷನ್ ಟ್ಯಾಗ್) .

 THIS IS RARE AND SPECIAL VERITY OF GREEN BRINJAL HAVING GEOGROPHICAL INDICATION TAG CALLED AS MATTU GULLA ONLY CULTIVATING IN SMALL VILLAGE OF UDUPI KARNATAKA STATE.
   SEEDS GIVEN BY LORD KRISHNA WHEN HE POISENED IN HAYAGRIVA AND CURED BY THIS VEG NOW ALSO THESE FARMERS OFFER FIRST CROP TO LORD KRISHNA OF UDUPI.

Comments

Popular posts from this blog

Blog number 1782. ಅರಳಸುರಳಿಯ ರಾಘವೇಂದ್ರ ಕೇಕೋಡರ ಕುಟುಂಬದ ತಪ್ಪು ನಿರ್ದಾರದ ದುರಂತ.

#ತೀರ್ಥಹಳ್ಳಿಯ_ಅರಳಸುರಳಿಯ_ಒಂದೇ_ಕುಟುಂಬದ_ನಾಲ್ವರು_ಮೃತರಾದ_ರಹಸ್ಯವೇನು? #ಈ_ಬಗ್ಗೆ_ಆ_ಊರಿನ_ಸಮೀಪದ_ಈ_ಕುಟುಂಬದ_ಪರಿಚಯ_ಇರುವವರಿಗೆ_ವಿಚಾರಿಸಿದ್ದೆ. #ಅವರು_ಈ_ಘಟನೆ_ಬಗ್ಗೆ_ಸವಿಸ್ತಾರವಾಗಿ_ಲಿಖಿತ_ಲೇಖನ_ಬರೆದಿದ್ದಾರೆ. #ಅವರ_ವಿನಂತಿ_ಅವರ_ಹೆಸರು_ಬಹಿರಂಗಗೊಳಿಸ_ಬಾರದು. #ಆದ್ದರಿಂದ_ಈ_ಲೇಖನ_ಪೋಸ್ಟ್_ಮಾಡಬಾರದೆಂದಿದ್ದೆ_ಆದರೆ_ಇದು_ಮಲೆನಾಡಿಗರ_ಮನೆ_ಮನೆಯ_ಕಥೆ #ಆದ್ದರಿಂದ_ಇಲ್ಲಿ_ಪೋಸ್ಟ್_ಮಾಡಿದೆ.    ಇಲ್ಲಿ ತಪ್ಪು ಯಾರದ್ದೂ ಇಲ್ಲ... ಪಶ್ಚಾತ್ತಾಪದ ಪ್ರಾಯಶ್ಚಿತ ಕೇಳಲು ಅವರಾರು ಇಲ್ಲ .....ಆದರೆ ಈ ರೀತಿ ಜೀವ ತ್ಯಾಗ ಮಾಡುವ ಆತುರದ ಕೆಟ್ಟ ನಿರ್ದಾರ ಮಾತ್ರ ಸರಿ ಅಲ್ಲ.     ಇವರ ಅಣ್ಣ ಆರ್.ಎಸ್.ಎಸ್. ಪ್ರಚಾರಕರಾಗಿ ದೆಹಲಿಯಲ್ಲಿ ಏಳು ವಷ೯ ಮೋದಿ ಜೊತೆ ಒಂದೇ ಕೋಣೆ ಹಂಚಿಕೊಂಡವರು, ಇನ್ನೊಬ್ಬ ಸಹೋದರ ಮೂಳೆ ತಜ್ಞರಾಗಿ ಶಿವಮೊಗ್ಗದಲ್ಲಿ ಆಸ್ಪತ್ರೆ ಮಾಡಿಕೊಂಡಿದ್ದಾರೆ.   #ದೀರ್ಘವಾದರೂ_ಪೂರ್ಣ_ಲೇಖನ_ಓದಿ   #ಹೀಗೊಂದು_ಸುಕುಟುಂಬ_ಆತ್ಮಾಘಾತ_ಮತ್ತು_ತದನಂತರದ_ಸಹಾಗಮನ.... ಮೂಡಣದಲ್ಲಿ ರವಿ ಮೂಡಲು ಅಣಿ ಯಾಗುತ್ತಿಧ್ದ .. ಹಾದಿಗಣಪತಿ ದೇವರು ಗರ್ಭಗುಡಿಯ ನಂದಾದೀಪದ ಮಂದ ಬೆಳಕಿನಲ್ಲಿ ತನ್ನ ಗುಡಿಯ ಎದುರಿನ ತಗ್ಗಿನಲ್ಲಿದ್ದ  ರಾಘವೇಂದ್ರ ಕೇಕೋಡರ ಮನೆಯನ್ನು ಎವೆಯಕ್ಕದೇ ನೋಡುತ್ತಲಿದ್ದ... ಊರ ಎಲ್ಲಾ ಮನೆಯಂತೆ ಆ ಮನೆಯಲ್ಲೂ ಆ ಬೆಳಗಿನಲ್ಲಿ ಮನೆಯೊಡತಿ ನಾಗರತ್ನಕ್ಕ ಆ ಸಮಯದಲ್ಲಿ ದೇವರಿಗೆ ದೀಪ ಹಚ್ಚಿ ಹೊಸ್ತಿಲು ಪೂಜೆ ಮಾಡ

Blog number 1037. ರಾಜಕುಮಾರಿ ಶಾಂತವ್ವ ಮತ್ತು ದಲಿತ ಯುವಕ ಸಿದ್ದೇಶ್ವರರ ಅಮರ ಪ್ರೇಮದ ಸ್ಮಾರಕ, ಅನ್ಯ ಜಾತಿ ವಿವಾಹವಾದ್ದರಿಂದ ರಾಜಕುಮಾರಿಗೆ ಸೂಳೆ ಪಟ್ಟ ನೀಡಿದ ಸಮಾಜ. ಸಮಾಜದ ಒಳಿತಿಗಾಗಿ ಶಾಂತವ್ವ ಕಟ್ಟಿಸಿದ ಬೃಹತ್ ಕೆರೆಗೆ ಜನ ಕರೆದದ್ದು ಸೂಳೆ ಕಟ್ಟಿಸಿದ ಕೆರೆ ಅದೇ ಸೂಳೆಕೆರೆ / ಶಾಂತಿ ಸಾಗರ

# ಸೂಳೆಕೆರೆ (ಶಾಂತಿ ಸಾಗರ) ಅಂತರ್ ಜಾತಿ ಪ್ರೇಮ ವಿವಾಹದ ದುರOತ ಕಥೆ. #ಅಕ್ಟೋಬರ್ 2019 ರಲ್ಲಿ ತುಂಬಿ ತುಳುಕಿತ್ತು.  ಚಿತ್ರದುಗ೯, ದಾವಣಗೆರೆ ಬಳ್ಳಾರಿ ಮುಂತಾದ ಮಳೆ ಕಡಿಮೆ ಆಗುತ್ತಿದ್ದ ಜಿಲ್ಲೆಗಳಲ್ಲಿ ಅದೂ ಅಕ್ಟೋಬರ್ ತಿಂಗಳ 2019 ರಲ್ಲಿ  ಬಂದಿದ್ದ ಬಾರಿ ಮಳೆ ಎಲ್ಲಾ ಕೆರೆ, ಹೊಂಡಗಳು ತುಂಬಿ ತುಳುಕಿದೆ, ಸಾಮಾಜಿಕ ಜಾಲ ತಾಣದಲ್ಲಿ 40 ವಷ೯ದಲ್ಲಿ ಇಂತ ಮಳೆ ಬಂದಿಲ್ಲ ಅಂತ ಸುದ್ದಿ ಹರಿದಾಡುತ್ತಿತ್ತು ಮತ್ತು  ಸೂಳೆಕೆರೆ ತುಂಬಿ ಕೋಡಿ ಬಿದ್ದಿದೆ ಅಂತೆಲ್ಲ Post ನೋಡಿ ಬೆಂಗಳೂರಿಂದ ಬರುವಾಗ ಚಿತ್ರದುಗ೯ ಮಾಗ೯ವಾಗಿ ಚನ್ನಗಿರಿ ತಲುಪಿ ಸೂಳೆಕೆರೆ ನೋಡಲು ಹೋಗಿದ್ದೆ.  11ನೇ ಶತಮಾನದಲ್ಲಿ (1128ರಲ್ಲಿ)ಕೇವಲ 3 ವಷ೯ದಲ್ಲಿ ಈ ಕೆರೆ ನಿಮಾ೯ಣ ಮಾಡಿಸಿದ್ದು ಶಾಂತವ್ವ ಎಂಬ ರಾಜ ಕುಮಾರಿ ಅವಳು ಸ್ವಣ೯ವತಿ ಪಟ್ಟಣದ ದೊರೆ ವಿಕ್ರಮ ರಾಜನ ಮಗಳು, ಸಿದ್ದೇಶ್ವರ ಎಂಬ ಅನ್ಯ ಜಾತಿಯ ಯುವಕನೊ೦ದಿಗೆ ಗಾಂದವ೯ ವಿವಾಹ ಆಗುತ್ತಾಳೆ ಇದನ್ನ ಸಹಿಸದ ಮತ್ತು ಒಪ್ಪದ ಜನತೆ ಸೂಳೆ ಎಂದು ಮೂದಲಿಸುತ್ತಾರOತೆ ಈ ರೀತಿ ತನಗೆ ಬಂದ ಕಳಂಕ ಕಳೆಯಲು ಈ ಬೃಹತ್ ಕೆರೆ ತನ್ನ ಪತಿ ಸಿದ್ದೇಶ್ವರನ ಜೊತೆ ಸೇರಿ ನಿಮಿ೯ಸಿ ಕೆರೆಗೆ ಹಾರವಾದಳೆoಬ ಇತಿಹಾಸ ಇದೆ ಇದರಿಂದ ನೊಂದ ಪತಿ ಸಿದ್ಧೇಶ್ವರ ಕೂಡ ಎದುರಿನ ಗುಡ್ಡದಲ್ಲಿ ಜೀವ ತ್ಯಾಗ ಮಾಡುತ್ತಾನೆ ಈಗ ಅಲ್ಲಿ ಸಿದ್ದೇಶ್ವರ ದೇವಸ್ಥಾನವಿದೆ.   ಈ ಕೆರೆ ಈಗಲೂ ಸೂಳೆಕೆರೆ ಎಂದೆ ಹೆಸರಾಗಿದೆ ಈ

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್ಪಿಸಿಕೊಳ್ಳಬೇಕು ಅಂತ ಬಿದನೂರು ನಗರ ಸಮೀಪದ ದೇವಗಂಗೆ ಎಂಬ ಕೆಳದಿ