Skip to main content

ಸನ್ಯಾಸ ದೀಕ್ಷೆ ಎಂಬ ಕಠಿಣ ಮಾಗ೯ ಚಾಚು ತಪ್ಪದೆ ಪಾಲಿಸುವವರು ಭಾರತದಲ್ಲಿ ಜೈನ ಮುನಿಗಳು ಮಾತ್ರ

# ಕಲಿಯುಗದಲ್ಲಿ ನಿಜ ಸಂನ್ಯಾಸಿಗಳು ಜೈನ ಮುನಿಗಳು ಮಾತ್ರ#
 ನನ್ನ ತಂದೆ ಕಾಲದಿಂದ ನಮ್ಮ ಸ್ಥಳ ಜೈನ ದಿಗಂಬರರಿಗೆ, ಮಾತಾಜಿಯವರಿಗೆ ಒಂದು ತ೦ಗುದಾಣ, ಈವರೆಗೆ 2006ರಿಂದ 20I9ರವರೆಗೆ ಎರಡು ಬಾರಿ ಶ್ರವಣಬೆಳಗೋಳದ ಗೊಮ್ಮಟೇಶ್ವರನಿಗೆ ಮಹಾಮಜ್ಜನ ನಡೆದಿದೆ (12 ವಷ೯ಕೊಮ್ಮೆ) ಇಲ್ಲಿವರೆಗೆ ನಮ್ಮಲ್ಲಿ ತಂಗಿದ ಜೈನ ಮುನಿ ಮತ್ತು ಮಾತೆಯರ ಸಂಖ್ಯೆ 1000ಕ್ಕೂ ಹೆಚ್ಚು.
  ಜೈನ ಮುನಿ ಮಹಾರಾಜರ ಮತ್ತು ಮಾತೆಯರ ಸೇವೆ ಮಾಡಲು ಜೈನ ಸಮಾಜದ ಅನೇಕರು ಕಾತುರರಾಗಿರುತ್ತಾರೆ ಆದರೆ ಅವರು ಬರುವುದಿಲ್ಲ.
 ಅದೇನೋ ಗೊತ್ತಿಲ್ಲ ನನ್ನ ತಂದೆ ತಾಯಿ ಹೆಸರಲ್ಲಿ ಕಟ್ಟಿದ ಕಲ್ಯಾಣ ಮಂಟಪ (ಶ್ರೀ ಕೃಷ್ಣ ಸರಸ ಕನ್ವೆಷನ್ ಹಾಲ್, ತಂದೆ ಕೃಷ್ಣಪ್ಪ ಮತ್ತು ತಾಯಿ ಸರಸಮ್ಮ)ದಲ್ಲಿ ಇವರುಗಳು ತಂಗುತ್ತಾರೆ ಮತ್ತು ನಮ್ಮನ್ನ ಆಶ್ರೀವದಿಸುತ್ತಾರೆ.
  ಹುOಚದ ಹಿಂದಿನ ಸ್ವಾಮಿಗಳು ಸೂಚಿಸಿದ ಹೆಸರು ನನ್ನ ಲಾಡ್ಜ್ ಗೆ ಇಟ್ಟಿದ್ದೇನೆ ಅದು ಹೊಂಬುಜ ರೆಸಿಡೆನ್ಸಿ ಅಂತ ಅದಕೊಂದು ಹಿನ್ನೆಲೆ ಇದೆ ಕೇಳಿ, ದೂರದ ಗುಜರಾತಿನ ವಜ್ರ ವ್ಯಾಪಾರಿ ನಿಮ೯ಲ್ ಕುಮಾರ್ ಒಮ್ಮೆ ಹುಂಚದ ಹಿಂದಿನ ಸ್ವಾಮಿಗಳ ಬೇಟಿಗೆ ಬಂದವರು ನನ್ನ ಜೊತೆಯಲ್ಲಿ ಕರೆದೊಯ್ದಿದ್ದರು.
 ಅಲ್ಲಿ ಸ್ವಾಮಿಗಳ ಬೇಟಿ ಆಯಿತು, ಹಿಂದಿನ ದಿನವಷ್ಟೆ ಅವರು ಅಮೇರಿಕಾ ದೇಶದ ಪ್ರವಚನ ಪ್ರವಾಸ ಮುಗಿಸಿ ಬಂದಿದ್ದರು, ನನ್ನ ಅವರ ಬೇಟಿ ಅದು ಮೊಟ್ಟ ಮೊದಲಿನದು, ನನ್ನ ಪರಿಚಯ ನಿಮ೯ಲ್ಕುಮಾರರು ಮಾಡಿದಾಗ ಅವರು ಕೇಳಿದ ಮೊದಲ ಪ್ರಶ್ನೆ ನಿಮ್ಮ ಕಲ್ಯಾಣ ಮಂಟಪದ ಮೇಲೆ ಏನು ಕಟ್ಟುತ್ತಿದೀರಿ? ಅಂತ, ಲಾಡ್ಜ್ ಅಂತ ಹೇಳಿದೆ, ನಂತರ ಗೊತ್ತಾಯಿತು ಅವರಿಗೆ ನಮ್ಮ ತಂದೆ ಕೃಷ್ಣಪ್ಪ ಪರಿಚಯ ಅಂತ.
  ಮುಂದೆ ಲಾಡ್ಜ್ ಗೆ ಏನು ಹೆಸರಿಡುತ್ತೀರಿ ಅಂದಾಗ ಇನ್ನು ನಿದಾ೯ರ ಮಾಡಿಲ್ಲ ನೀವು ಸಲಹೆ ಕೊಡಿ ಅಂದಾಗ ಅವರು ಹೊಂಬುಜ ಅಂತ ಯಾಕೆ ಇಡಬಾರದೆಂದರು, ಹೊಂಬುಜದ ಅಥ೯ ಕೇಳಿದೆ, ಅವರೆಂದರು ಸಾವಿರ ವಷ೯ದ ಹಿಂದೆ ಈ ಎಲ್ಲಾ ಪ್ರದೇಶ ಆಳಿದ ರಾಜನ ಹೆಸರು, ಸಂಸ್ಕೃತ ದಲ್ಲಿ ಉದಯಿಸುತ್ತಿರುವ ಸೂಯ೯ನ ಸುವಣ೯ ಬುಜಗಳು ಅಂದರು.
  ನೀವು ಬ೦ದು ಉದ್ಘಾಟಿಸುವುದಾದರೆ ಆ ಹೆಸರೇ ಇಡುತ್ತೇನೆ ಅಂದೆ, ಅದಾದ ನಂತರ ಮೂರು ತಿಂಗಳಲ್ಲಿ ಸ್ವಾಮೀಜಿ ಇಹಲೋಕ ತ್ಯಜಿಸಿದರು, ಅವರು ಪ್ರವಚನಗಳಿಂದಲೇ ಭಕ್ತರಿ೦ದ ಸ್ಟೀಕರಿಸಿದ ಹಣ 600 ಕೋಟಿಗೂ ಹೆಚ್ಚು!
 ಈ ಘಟನೆ ನಡೆದ 2 ವಷ೯ದ ನಂತರ ನನ್ನ ಲಾಡ್ಜ್ ಪ್ರಾರಂಬಿಸ ಬೇಕಾದಾಗ ಹೆಸರಿಗಾಗಿ ಹುಡುಕಾಟ ಪ್ರಾರ೦ಬಿಸಿದಾಗ ನೆನಪಾಯಿತು, ಹಾಗಾಗಿ ಹೊಂಬುಜ ರೆಸಿಡೆನ್ಸಿ ಅಂತಲೇ ನಾಮಕರಣ ಮಾಡಿದೆ.
 ಮೊನ್ನೆ ಬಂದು ತಂಗಿದ ಜೈನ ಮಹಾಮುನಿಗಳು ಶ್ರೀ ಪ್ರಮುಖ ಸಾಗರರರು, ಶ್ರವಣಬೆಳಗೋಳ ಮತ್ತು ದಮ೯ಸ್ಥಳದ ಬಾಹುಬಲಿ ಮಹಾ ಮಸ್ತಾಬಿಷೇಕ ಮುಗಿಸಿ ಹೊಂಬುಜ ಕ್ಷೇತ್ರ ಸಂದಶಿ೯ಸಿ ಗೋವಾ ಸಾಗುವಾಗ ನಮ್ಮ ಕಲ್ಯಾಣ ಮಂದಿರದಲ್ಲಿ ತಂಗಿದ್ದರು.
 ಇವರು ಹಿಮಾಲಯ ತಪ್ಪಲಿನ ಬದರಿಯಲ್ಲಿ ಹಿಮಪಾತವಾಗುವಾಗ ದಿಗOಬರರಾಗಿ ಒಂದು ತಿಂಗಳು ತಂಗಿದ್ದು ಅಲ್ಲಿ  ಪ್ರವಚನ ನೀಡಿದ್ದ ನಂಬಲಾರದ ಸತ್ಯ.
 ಸಾದು ಸ೦ತರು ತಂಗುವ ಅವರನ್ನ ಸತ್ಕರಿಸುವ ಭಾಗ್ಯ ದೇವರೇ ನನ್ನ ಗುರು ಹಿರಿಯರ ಆಶ್ರೀವಾದದಿಂದ ಅನುಗ್ರಹಿಸಿದ್ದಾರೆ ಎಂದೇ ಬಾವಿಸಿದ್ದೇನೆ.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...