Skip to main content

ಶಾಂತವೇರಿ ಗೋಪಾಲಗೌಡರನ್ನು ದ್ವಿತೀಯ ಮಹಾ ಚುನಾವಣೆ 1957 ರಲ್ಲಿ ಸೋಲಿಸಿದ ಸಾಗರ - ಹೊಸನಗರ- ತೀಥ೯ಳ್ಳಿ ವಿದಾನ ಸಭಾ ಕ್ಷೇತ್ರದ ಮತದಾರರು, ಇದೊಂದು ರಾಜಕೀಯ ದುರಂತದ ಇತಿಹಾಸ

#ದ್ವಿತೀಯ_ಮಹಾ_ಚುನಾವಣೆ_1957.
#ಶಾ೦ತವೇರಿ_ಗೋಪಾಲ_ಗೌಡರ_ಸೋಲು
#ಆನಂದಪುರದ_ಕಾಂಗ್ರೇಸ್_ಅಭ್ಯಥಿ೯_ಬದರಿನಾರಾಯಣ_ಅಯ್ಯಂಗಾರರ_ಗೆಲುವು.

1957 ರ ದ್ವಿತೀಯ ಮಹಾ ಚುನಾವಣೆಯಲ್ಲಿ ಪುನಃ ಸಾಗರ - ಹೊಸನಗರ- ತೀಥ೯ಹಳ್ಳಿ ಕ್ಷೇತ್ರದಿಂದ ಸೋಷಲಿಸ್ಟ್ ಪಾಟಿ೯ಯಿಂದ ಶಾಂತವೇರಿ ಗೋಪಾಲಗೌಡರು ವಿದಾನ ಸಭೆಗೆ ಸ್ಪರ್ದಿಸುತ್ತಾರೆ.
  ಪ್ರತಿಸ್ಪದಿ೯ಯಾಗಿ ಪುನಃ ಕಾಂಗ್ರೇಸ್ ನಿಂದ ಆನಂದಪುರದ ಎ.ಆರ್. ಬದರಿನಾರಾಯಣ ಅಯ್ಯಂಗಾರರು ಸ್ಪರ್ಧಿಸುತ್ತಾರೆ.
  ಭೂ ಮಾಲಿಕರುಗಳೆಲ್ಲ ಸಂಘಟಿತರಾಗಿರುತ್ತಾರೆ, ಚುನಾವಣೆಗೆ ಬೇಕಾದ ಸಂಪನ್ಮೂಲ ಸಂಗ್ರಹಿಸಿರುತ್ತಾರೆ ಈ ಮೂಲಕ ಒಗ್ಗಟ್ಟಿನಿಂದ ಗೇಣಿದಾರರಾದ ದೀವರ ಮತ ವಿಭಜನೆ ಮಾಡುತ್ತಾರೆ.
  ಇದಕ್ಕೆ ವಾಮ ಮಾರ್ಗವೂ ಬಳಸುತ್ತಾರೆ ಹೊಸನಗರ ತಾಲ್ಲೂಕಿನ ಕೊಡಸೆಯ ದೀವರ ನಾಯಕರ ಮನೆಯ ಮದಲೆ ಚೌಡಿ ಹಬ್ಬ ಇದಕ್ಕೆ ವೇದಿಕೆ ಆಗಿ ಬಳಸಿಕೊಳ್ಳುತ್ತಾರೆ 50 ರಿಂದ 70 ಕುರಿಗಳ ಬಾಡು ಊಟದ ಔತಣ ಕೂಟದಲ್ಲಿ ನೂರಾರು ದೀವರ ಮುಖಂಡರು ಮತ್ತು ಸಾವಿರಾರು ಜನರು ಧರ್ಮಸ್ಥಳದ ಮಂಜುನಾಥ ಸ್ವಾಮಿಯ ಮೇಲೆ ಪ್ರಮಾಣ ಮಾಡಿ ಬದರಿನಾರಾಯಣ ಅಯ್ಯಂಗಾರರಿಗೆ ಮತ ನೀಡುವ ಭರವಸೆ ನೀಡುತ್ತಾರೆ ಅದರಂತೆ ನಡೆಯುತ್ತಾರೆ ಇದು ಗೋಪಾಲಗೌಡರ ಸೋಲಿಗೆ ಕಾರಣ ಆಗುತ್ತದೆ.
  ಮುಂದೆ ಬದರಿನಾರಾಯಣ ಅಯ್ಯಂಗಾರರು ಅನೇಕ ಬಾರಿ ಶಾಸಕರಾಗುತ್ತಾರೆ, ಒಮ್ಮೆ ವಿದಾನ ಪರಿಷತ್ ಸದಸ್ಯರಾಗುತ್ತಾರೆ, ರಾಜ್ಯದ ವಿದ್ಯಾ ಮಂತ್ರಿಗಳಾಗುತ್ತಾರೆ, ಒಮ್ಮೆ ಸಂಸದರಾಗುತ್ತಾರೆ.
  ಹೀಗೆ ಗೇಣಿ ರೈತರ ಹೋರಾಟಕ್ಕೆ ಬೆಂಬಲಿಸಿ ಸಮಾಜವಾದಿ ಮುಖಂಡರಾದ ಲೋಹಿಯಾ, ಜೇಪಿ, ಜಾಜ್೯ ಪನಾ೯೦ಡೀಸ್ ಅದಿಯಾಗಿ ಅನೇಕ ನಾಯಕರನ್ನ ಕಾಗೋಡು ಚಳವಳಿಯಲ್ಲಿ ಭಾಗವಹಿಸುವಂತೆ ಮಾಡಿ ಚಳವಳಿ ನಿರಂತರವಾಗಿರಿಸಿ ನಂತರ ಜೈಲು ಸೇರಿ ಮೊದಲ ಮಹಾ ಚುನಾವಣೆಯಲ್ಲಿ ವಿದಾನ ಸಭಾ ಸದಸ್ಯರಾಗಿ ಆಯ್ಕೆ ಆಗಿ ರಾಜ್ಯದಲ್ಲಿ ಸಮಾಜವಾದಿ ಪಕ್ಷ ಸಂಘಟಿಸಿ ದಾರವಾಡ ಜಿಲ್ಲೆಯ ಹುಬ್ಬಳ್ಳಿ ಗ್ರಾಮದಲ್ಲಿ ಜಹಗಿರಿದಾರರ ರೈತ ಹೋರಾಟ, ಮುಖ್ಯಮಂತ್ರಿ ಕೆಂಗಲ್ ಹನುಮಂತಯ್ಯರ ಸಹೋದರ ನಂಜಪ್ಪನವರ ವಿರುದ್ಧ ನಡೆಸಿದ ಸಂಗ್ರಾಮ "ಮೊಟ್ಟೆ ದೊಡ್ಡಿ ಪ್ರಕರಣ " , ಮೈಸೂರು ಮಹಾರಾಜರ ದಸರಾ ಉತ್ಸವ ಬಗ್ಗೆ ನಡೆಸಿದ ಹೋರಾಟ ಹೀಗೆ ಶಾಸನ ಸಭೆಯ ಒಳಗೆ ಹೊರಗೆ ಅನ್ಯಾಯ ಶೋಷಣೆಯ ವಿರುದ್ಧ ಧ್ವನಿಯಾಗಿ ಘಜಿ೯ಸಿದ್ದ ಶಾಂತವೇರಿ ಗೋಪಾಲಗೌಡರನ್ನು ಮತದಾರ ಕೈ ಕೊಟ್ಟು ಸೋಲಿಸಿದ್ದು ಒಂದು ದುರಂತ ಇತಿಹಾಸ.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...