Skip to main content

ಭಾಗ - 2 , ಆನಂದಪುರಂ ಪುರಾಭಿವೃದ್ದಿಗೆ ತನು-ಮನ-ಧನ ನೀಡಿದ ಅಯ್ಯಂಗಾರ್ ಕುಟುಂಬದ ನೆನಪು, ರಾಮಕೃಷ್ಣ ಅಯ್ಯಂಗಾರ್ ತಮ್ಮ ಪುತ್ರ ಜಗನ್ನಾಥ ಅಯ್ಯ೦ಗಾರ್ ಸ್ಮರಣಾಥ೯ ನಿಮಿ೯ಸಿದ್ದ ಪಶು ವೈದ್ಯ ಶಾಲೆ

#ಭಾಗ_2.

#ಆನಂದಪುರದಲ್ಲಿ_ಅಯ್ಯಂಗಾರ್_ಕುಟುಂಬದ_ದಾನದಿಂದ_ನಿರ್ಮಿಸಿದ್ದ_ಜಗನಾಥ_ಪಶುವೈದ್ಯ_ಶಾಲೆ_ಆನಂದಪುರಂ

#ಈಗಿನ_ಬೋಡ್೯ನಲ್ಲಿ_ದಾನಿಗಳ_ಹೆಸರು_ಬಿಟ್ಟಿರುವುದು_ವಿಷಾದನೀಯ

     ಬೋಜರಾಜ್ ಅಯ್ಯಂಗಾರರ ಅಜ್ಜ ಕಂಟ್ರಾಕ್ಟರಾಗಿದ್ದ ಶ್ರೀನಿವಾಸ ಅಯ್ಯಂಗಾರರು ರಾಮಕೃಷ್ಣ ಅಯ್ಯಂಗಾರರ ಅಣ್ಣರನ್ನು ಹಾಸನ ಜಿಲ್ಲೆಯ ಗೊರೂರಿನಿಂದ ಆನಂದಪುರಕ್ಕೆ ಕರೆ ತರುತ್ತಾರೆ ಆಗ ಬ್ರಿಟೀಶ್ ಆಡಳಿತ, ಆನಂದಪುರಂ ತಾಲ್ಲೂಕ್ ಕೇಂದ್ರವಾಗಿರುತ್ತದೆ ಅಲ್ಲಿ ತಾಲ್ಲೂಕ್ ಕಛೇರಿಯಲ್ಲಿ ಕೆಲಸಕ್ಕೆ ಸೇರುತ್ತಾರೆ ನಂತರ ತಮ್ಮ ಸಹೋದರ ಲಕ್ಷ್ಮೀಪತಿ ಅಯ್ಯಂಗಾರರನ್ನು ಇಲ್ಲಿಗೆ ಕರೆ ತರುತ್ತಾರೆ.
   ಲಕ್ಷೀಪತಿ ಅಯ್ಯಂಗಾರರು ಪಶು ಸಂಗೋಪನೆ ಮಾಡಿಕೊಂಡು ಜೀವನ ಮಾಡುತ್ತಾರೆ ಅವರ ಪುತ್ರ ರಾಮಕೃಷ್ಣ ಅಯ್ಯಂಂಗಾರ್ ಇವರ ಪತ್ನಿ ಕನಕಮ್ಮಾಳ್ ಇವರಿಗೆ ನಾಲ್ಕು ಪುತ್ರರು ದೊಡ್ಡವರು ಜಗನ್ನಾಥ ಅಯ್ಯಂಗಾರ್, ಎರಡನೆ ವೆಂಕಟಚಲಾಯ್ಯಂಗಾರ್, ಮೂರನೆಯ ಬದರಿನಾರಾಯಣ ಅಯ್ಯಂಗಾರ್ ಮತ್ತು ನಾಲ್ಕನೆಯ ಅನಂತರಾಮ ಅಯ್ಯಂಗಾರ್.
   ರಾಮಕೃಷ್ಣ ಅಯ್ಯಂಗಾರ್ ಪತ್ನಿ ಕನಕಮ್ಮಾಳರು ಮೃತರಾದಾಗ ಇನ್ನೊಂದು ವಿವಾಹ ಆಗುತ್ತಾರೆ ಆ ಪತ್ನಿಯಿ೦ದ ಎರೆಡು ಗಂಡು ಮತ್ತು ಒಂದು ಪುತ್ರಿ ಹುಟ್ಟುತ್ತಾರೆ ಅವರ ಹೆಸರು ಶ್ರೀನಿವಾಸ ಅಯ್ಯಂಗಾರ್, ರಾಧಾಕೃಷ್ಣ ಆಯ್ಯಂಗಾರ್, ಮತ್ತು ವನಜಾಕ್ಷಿ.
  ರಾಮಕೃಷ್ಣ ಅಯ್ಯಂಗಾರ್ ಮೊದಲ ಪುತ್ರ ಅಕಾಲಿಕವಾಗಿ ಮೃತರಾದ್ದರಿಂದ ಅವರ ಸ್ಮರಣಾಥ೯ವಾಗಿ ಆನಂದಪುರದಲ್ಲಿ ಪಶು ಆಸ್ಪತ್ರೆಯನ್ನು ಸ್ವಂತ ಜಾಗದಲ್ಲಿ ನಿರ್ಮಿಸಿ ಅದಕ್ಕೆ ಜಗನ್ನಾಥ ಪಶು ವೈದ್ಯ ಶಾಲೆ ಎಂದು ನಾಮಕರಣ ಮಾಡುತ್ತಾರೆ.
   ನಿನ್ನೆ ಗೆಳೆಯ ಆನಂದಪುರಂ ಪತ್ರಕರ್ತ ಬಿ.ಡಿ.ರವಿ ನನ್ನ ವಿನಂತಿ ಮೇರೆಗೆ ನನಗೆ ಬೇಕಾದ ಎಲ್ಲಾ ಪೋಟೋ ಕಳಿಸಿದ್ದಾರೆ ಅವರಿಗೆ ಕೃತಜ್ಞತೆಗಳು.
   ಅವರು ಕಳಿಸಿದ ಆನಂದಪುರದ ಪಶು ವೈದ್ಯ ಚಿಕಿತ್ಸಾಲಯದ ಫೋಟೋದಲ್ಲಿ ಜಗನ್ನಾಥರ ಹೆಸರೇ ಕೈ ಬಿಟ್ಟಿದ್ದಾರೆ!?.
  ದಾನಿಗಳಾದ ರಾಮ ಕೃಷ್ಣ ಅಯ್ಯಂಗಾರರು ತಮ್ಮ ಪುತ್ರ ಜಗನ್ನಾಥರ ಸ್ಮರಣಾಥ೯ ನಿಮಿ೯ಸಿ  ಅರ್ಪಿಸಿದ ಈ ಪಶು ವೈದ್ಯ ಆಸ್ಪತ್ರೆಗೆ ಅವರು ಮಾಡಿದ  ನಾಮಕರಣ ಈಗಿನ ತಲೆಮಾರು ಮರೆತಿದ್ದು ವಿಪಯಾ೯ಸ.
(ಮುಂದಿನ ಭಾಗ - 3 ನಾಳೆ)

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...