Skip to main content

2011 ರ ನನ್ನ ಎತ್ತಿನಗಾಡಿ ಯಾತ್ರೆ, ಸಾಗರ ಮತ್ತು ಹೊಸನಗರ ತಾಲ್ಲೂಕಿನಾದ್ಯಂತ ಏಳು ದಿನಗಳ ಕಾಲ ಸುಮಾರು 360 ಕಿ.ಮಿ ಜನ ಜಾಗೃತಿಗಾಗಿ ನಡೆಯಿತು

#ಹತ್ತು_ವರ್ಷ_ಹಿಂದಿನ_ನೆನಪು

#2011ರ_ನನ್ನ_ಎತ್ತಿನ_ಗಾಡಿ_ಯಾತ್ರೆಯಲ್ಲಿ_ಶರಾವತಿ_ನದಿ_ದಾಟಿಸುವ_ತುಮರಿಯ_ಲಾಂಚ್_ನವರು #ಎತ್ತಿನ_ಗಾಡಿ_ಸಾಗಿಸಲು_ನಿರಾಕರಿಸಿದ್ದರು!?

    2011ರಲ್ಲಿ ನಾನು ಮತ್ತು ನನ್ನ ಗೆಳೆಯರು ಸೇರಿ ಮಾಹಿತಿ ಹಕ್ಕು ಮತ್ತು ಲೋಕಾಯುಕ್ತದ ಜನ ಜಾಗೃತಿಗಾಗಿ ಸಾಗರ ಮತ್ತು ಹೊಸನಗರ ತಾಲ್ಲೂಕಿನಾದ್ಯ೦ತ ಸುಮಾರು ಏಳು ದಿನ ಎತ್ತಿನ ಗಾಡಿಯಲ್ಲಿ ಜಾತ ನಡೆಸಿದ್ದೆವು.          ಬೆಳೆಗ್ಗೆಯಿಂದ ರಾತ್ರಿ ತನಕ ಅನೇಕ ಸಭೆಗಳು ನಡೆಸಿದೆವು.
   ಸ್ಥಳಿಯ ಪ್ರಗತಿ ಪರ ಚಿಂತನೆಯವರು, ಸಂಘಟನೆಗಳು ನಮಗೆ ಬೆಂಬಲಿಸಿ ಸಹಕರಿಸಿದರು, ಮಾಹಿತಿ ಹಕ್ಕಿನಲ್ಲಿ ಅಜಿ೯ಸಲ್ಲಿಸಿ ಮಾಹಿತಿ ಪಡೆಯುವುದು, ದಾಖಲೆ ಸಮೇತ ಅವ್ಯವಹಾರಗಳನ್ನ ಲೋಕಾಯುಕ್ತಕ್ಕೆ ಹೇಗೆ ದೂರು ನೀಡುವುದು ಇತ್ಯಾದಿ ಮಾಹಿತಿ ನೀಡುತ್ತಾ ಹೋಗಿದ್ದು ಒಂದು ವಿಶಿಷ್ಟ ಅನುಭವ.
    ರಾಜಕೀಯ ಗುರುಗಳಾದ ಕಾಗೋಡು ಹೋರಾಟದ ನೇತಾರ ಗಣಪತಿಯಪ್ಪನವರು ಎತ್ತಿನ ಗಾಡಿಯಲ್ಲಿ ಗಾದಿ ಹಾಸಿ ಕುಳಿತುಕೊಳ್ಳಬಾರದು ಕೇವಲ ಕಂಬಳಿ ಹಾಸಿ ಕುಳಿತು ಈ ಯಾತ್ರೆ ಮುಗಿಸಲು ತಾಕೀತು ಮಾಡಿದ್ದರು ಅದರಂತೆ ಮಾಡಿದೆ, ಹೊಸನಗರದಲ್ಲಿ ನನ್ನ ಗಾಡಿ ಏರಿದ ಮಾಜಿ ಜಿ.ಪಂ.ಸದಸ್ಯ ಗೆಳೆಯ ಬಿ.ಪಿ. ರಾಮಚಂದ್ರ ಕುಳಿತು ಕೊಳ್ಳಲಾಗದೆ ಇಳಿದರು, ನೀವು ಹ್ಯಾಗೆ 8 ದಿನದಿಂದ ಗಾಡಿಲಿ ಕುಳಿತೇ ಇದ್ದಿರಾ ಅಂತ ಆಶ್ಚಯ೯ ಪಟ್ಟರು ಹಾಗಂತ ನನಗೆ ಸಲೀಸಾಗಿತ್ತು ಪ್ರಯಾಣ.
     ಎತ್ತಿನ ಗಾಡಿಯಲ್ಲಿ ಕುಳಿತು ಪ್ರಯಾಣ ಮಾಡುವ ಅನುಭವವೇ ಬೇರೆ, ಕಾರಲ್ಲಿ ಕುಳಿತು ಭರ್ ಅಂತ ಕ್ಷಣ ಮಾತ್ರದಲ್ಲಿ ಹೋಗುವವರು ಎತ್ತಿನ ಗಾಡಿಯಲ್ಲಿ ಕುಳಿತು ನಿಧಾನವಾಗಿ ಗಂಟೆಗೆ 4 ರಿಂದ 5 ಕಿ.ಮಿ. ಸಾಗುವಾಗ ಪ್ರಕೃತಿಯ ಚಿತ್ರಣ ಕಾರಿನಂತೆ ಸರ್ ಅಂತ ಸರಿಯದೆ ಅದನ್ನ ನೋಡುತ್ತಾ ಅನುಭವಿಸುತ್ತ ನೆನಪಿನಲ್ಲಿ ಚಿತ್ರಣದ ಅಚ್ಚು ಉಳಿಯುವಂತ ಎತ್ತಿನ ಗಾಡಿ ಅನುಭವಿಸಿದರೆ ಮಾತ್ರ ಗೊತ್ತಾಗುತ್ತದೆ.
    ಆನಂದಪುರಂನ ಮುರುಘಾ ರಾಜೇಂದ್ರ ಮಠದಲ್ಲಿ ಆಗಿನ ಸಾಗರ ನಗರಸಭಾ ಅಧ್ಯಕ್ಷ ಶ್ರಮಜೀವಿ ಕೃಷ್ಣ ಮೂತಿ೯ ಉದ್ಘಾಟಿಸಿ ಮಾಡಿದ ಭಾಷಣ ಇನ್ನು ನೆನಪಿದೆ, ಎತ್ತಿನ ಗಾಡಿ ಹೊಗೆ ಉಗುಳುವುದಿಲ್ಲ, ಟ್ರಾಕ್ಟರ್ ಸಗಣಿ ಹಾಕುವುದಿಲ್ಲ ಅಂತ ಪ್ರಾಸಬದ್ದ ಮಾತಾಡಿ ಶುಭ ಹಾರೈಸಿದ್ದರು.
   ಸುಮಾರು 360 ಕಿ.ಮಿ. ಸಂಚರಿಸಿದ ಜಾತ ಅ೦ತಿಮ ಸಮಾರೋಪ ರಿಪ್ಪನ್ ಪೇಟೆಯ ವೃತ್ತದಲ್ಲಿ ನಡೆಯಿತು.
  ಈ ಸಂದಭ೯ದಲ್ಲಿ ತುಮರಿಯಲ್ಲಿ ಶರಾವತಿ ನದಿ ದಾಟಲು ಲಾಂಚ್ ನವರು ಎತ್ತಿನ ಗಾಡಿಗೆ ನಿರಾಕರಿಸಿದರು, ಶರಾವತಿ ವಿಧ್ಯುತ್ ಯೋಜನೆಗಾಗಿ ಈ ಭಾಗ ಮುಳುಗಡೆ ಆಗಿದ್ದಕ್ಕಾಗಿ ಸಕಾ೯ರ ಈ ಲಾಂಚ್ ನೀಡಿದೆ, ಮೊದಲೆಲ್ಲ ರೈತರ ವಾಹನ ಎತ್ತಿನ ಗಾಡಿನೇ ಆಗಿತ್ತು ಹಾಗಾಗಿ ಎತ್ತಿನ ಗಾಡಿ ಇಲ್ಲಿ ದಾಟಾಡುತ್ತಿತ್ತು, ಈಗ ಕಾರು ವ್ಯಾನ್ ನ ಕಾಲ ಬಂದು ಇಲ್ಲಿನ ಲಾ೦ಚ್ ನ ನೂತನ ಸಿಬ್ಬ೦ದಿಗಳು ಹೀಗೆ ಹೇಳುತ್ತಾರೆ ಅಂತ ಸ್ಥಳಿಯರು ಬೆಂಬಲಿಸಿದರು.       
       ಆದರೆ ಲಾ೦ಚನ ಸಿಬ್ಬ೦ದಿ 20 ವಷ೯ದಿಂದ ಎತ್ತಿನ ಗಾಡಿ ಹಾಕಿಯೇ ಇಲ್ಲ ತಮ್ಮ ಬಂದರು ಮತ್ತು ಪೆರಿ ಇಲಾಖೆ ಮೇಲಾಧಿಕಾರಿ ಅನುಮತಿ ನೀಡದೇ ಸಾಧ್ಯವೇ ಇಲ್ಲ ಅಂದರು.
     ನಮ್ಮ ರಕ್ಷಣೆಯ ಹೊಣೆ ಹೊತ್ತ ಪೋಲಿಸ್ ಸಿಬ್ಬ೦ದಿಗಳು ತಮ್ಮ ಇಲಾಖಾ ಮುಖ್ಯಸ್ಥರಿಗೆ ತಿಳಿಸಿ ಅಲ್ಲಿಂದ ಜಿಲ್ಲಾ ಆಡಳಿತ ನಮ್ಮ ಎತ್ತಿನ ಗಾಡಿ ಜಾತ ನದಿ ದಾಟಿಸಲು ಅನುಮತಿ ಕೊಡಿಸಿದ್ದರಿ೦ದ ನಮ್ಮ ಎತ್ತು ಮತ್ತು ಗಾಡಿಗಳು ಲಾಂಚ್ ನಲ್ಲಿ ದಾಟಿದವು.
    ನದಿ ಆಚೆಯ ತುಮರಿ ಪ್ರದೇಶ ಗುಡ್ಡ  ಗಾಡು ಪ್ರದೇಶವಾದ್ದರಿಂದ ಆ ಬಾಗದಲ್ಲಿ ಎತ್ತಿನ ಗಾಡಿಯೇ ಇಲ್ಲ! ಹಾಗಾಗಿ ನಮ್ಮ ಎತ್ತಿನ ಗಾಡಿ ನೋಡಲು ರಸ್ತೆ ಬದಿಯಲ್ಲಿ ಜನ ಸೇರುತ್ತಿದ್ದರು, ಶಾಲಾ ಮಕ್ಕಳಂತೂ ಬಾರಿ ಕುತೂಹಲದಿಂದ ನೆರೆಯುತ್ತಿದ್ದರು.
    ಇವತ್ತು ಪೇಸ್ ಬುಕ್ ಈ ಪೋಸ್ಟ್ ನೆನಪಿಸಿ ಹಾಕಿದ್ದರಿಂದ ಇದೆಲ್ಲ ನೆನಪಾಯಿತು ಆ ದಿನದಲ್ಲಿ ಸೋಷಿಯಲ್ ಮೀಡಿಯ ಇಷ್ಟು ವಿಸ್ತಾರವಾಗಿರಲಿಲ್ಲ, ಅವತ್ತು ಪ್ರಜಾವಾಣಿ ಸ್ಥಳಿಯ ವರದಿಗಾರರಾಗಿದ್ದ ಜಿ.ಟಿ. ಸತ್ಯನಾರಾಯಣರಿಗೆ ಈ ಬಗ್ಗೆ ಸುದ್ದಿ ಮಾಡಲು ವಿನOತಿಸಿದ್ದೆ ಆದರೆ ಆ ದಿನ ಅವರು ಊರಲ್ಲಿ ಇರದಿದ್ದರಿಂದ ಪ್ರಜಾವಾಣಿಯಲ್ಲಿ ಸುದ್ದಿ ಆಗಲಿಲ್ಲ.

Comments

Popular posts from this blog

Blog number 1782. ಅರಳಸುರಳಿಯ ರಾಘವೇಂದ್ರ ಕೇಕೋಡರ ಕುಟುಂಬದ ತಪ್ಪು ನಿರ್ದಾರದ ದುರಂತ.

#ತೀರ್ಥಹಳ್ಳಿಯ_ಅರಳಸುರಳಿಯ_ಒಂದೇ_ಕುಟುಂಬದ_ನಾಲ್ವರು_ಮೃತರಾದ_ರಹಸ್ಯವೇನು? #ಈ_ಬಗ್ಗೆ_ಆ_ಊರಿನ_ಸಮೀಪದ_ಈ_ಕುಟುಂಬದ_ಪರಿಚಯ_ಇರುವವರಿಗೆ_ವಿಚಾರಿಸಿದ್ದೆ. #ಅವರು_ಈ_ಘಟನೆ_ಬಗ್ಗೆ_ಸವಿಸ್ತಾರವಾಗಿ_ಲಿಖಿತ_ಲೇಖನ_ಬರೆದಿದ್ದಾರೆ. #ಅವರ_ವಿನಂತಿ_ಅವರ_ಹೆಸರು_ಬಹಿರಂಗಗೊಳಿಸ_ಬಾರದು. #ಆದ್ದರಿಂದ_ಈ_ಲೇಖನ_ಪೋಸ್ಟ್_ಮಾಡಬಾರದೆಂದಿದ್ದೆ_ಆದರೆ_ಇದು_ಮಲೆನಾಡಿಗರ_ಮನೆ_ಮನೆಯ_ಕಥೆ #ಆದ್ದರಿಂದ_ಇಲ್ಲಿ_ಪೋಸ್ಟ್_ಮಾಡಿದೆ.    ಇಲ್ಲಿ ತಪ್ಪು ಯಾರದ್ದೂ ಇಲ್ಲ... ಪಶ್ಚಾತ್ತಾಪದ ಪ್ರಾಯಶ್ಚಿತ ಕೇಳಲು ಅವರಾರು ಇಲ್ಲ .....ಆದರೆ ಈ ರೀತಿ ಜೀವ ತ್ಯಾಗ ಮಾಡುವ ಆತುರದ ಕೆಟ್ಟ ನಿರ್ದಾರ ಮಾತ್ರ ಸರಿ ಅಲ್ಲ.     ಇವರ ಅಣ್ಣ ಆರ್.ಎಸ್.ಎಸ್. ಪ್ರಚಾರಕರಾಗಿ ದೆಹಲಿಯಲ್ಲಿ ಏಳು ವಷ೯ ಮೋದಿ ಜೊತೆ ಒಂದೇ ಕೋಣೆ ಹಂಚಿಕೊಂಡವರು, ಇನ್ನೊಬ್ಬ ಸಹೋದರ ಮೂಳೆ ತಜ್ಞರಾಗಿ ಶಿವಮೊಗ್ಗದಲ್ಲಿ ಆಸ್ಪತ್ರೆ ಮಾಡಿಕೊಂಡಿದ್ದಾರೆ.   #ದೀರ್ಘವಾದರೂ_ಪೂರ್ಣ_ಲೇಖನ_ಓದಿ   #ಹೀಗೊಂದು_ಸುಕುಟುಂಬ_ಆತ್ಮಾಘಾತ_ಮತ್ತು_ತದನಂತರದ_ಸಹಾಗಮನ.... ಮೂಡಣದಲ್ಲಿ ರವಿ ಮೂಡಲು ಅಣಿ ಯಾಗುತ್ತಿಧ್ದ .. ಹಾದಿಗಣಪತಿ ದೇವರು ಗರ್ಭಗುಡಿಯ ನಂದಾದೀಪದ ಮಂದ ಬೆಳಕಿನಲ್ಲಿ ತನ್ನ ಗುಡಿಯ ಎದುರಿನ ತಗ್ಗಿನಲ್ಲಿದ್ದ  ರಾಘವೇಂದ್ರ ಕೇಕೋಡರ ಮನೆಯನ್ನು ಎವೆಯಕ್ಕದೇ ನೋಡುತ್ತಲಿದ್ದ... ಊರ ಎಲ್ಲಾ ಮನೆಯಂತೆ ಆ ಮನೆಯಲ್ಲೂ ಆ ಬೆಳಗಿನಲ್ಲಿ ಮನೆಯೊಡತಿ ನಾಗರತ್ನಕ್ಕ ಆ ಸಮಯದಲ್ಲಿ ದೇವರಿಗೆ ದೀಪ ಹಚ್ಚಿ ಹೊಸ್ತಿಲು ಪೂಜೆ ಮಾಡ

Blog number 1037. ರಾಜಕುಮಾರಿ ಶಾಂತವ್ವ ಮತ್ತು ದಲಿತ ಯುವಕ ಸಿದ್ದೇಶ್ವರರ ಅಮರ ಪ್ರೇಮದ ಸ್ಮಾರಕ, ಅನ್ಯ ಜಾತಿ ವಿವಾಹವಾದ್ದರಿಂದ ರಾಜಕುಮಾರಿಗೆ ಸೂಳೆ ಪಟ್ಟ ನೀಡಿದ ಸಮಾಜ. ಸಮಾಜದ ಒಳಿತಿಗಾಗಿ ಶಾಂತವ್ವ ಕಟ್ಟಿಸಿದ ಬೃಹತ್ ಕೆರೆಗೆ ಜನ ಕರೆದದ್ದು ಸೂಳೆ ಕಟ್ಟಿಸಿದ ಕೆರೆ ಅದೇ ಸೂಳೆಕೆರೆ / ಶಾಂತಿ ಸಾಗರ

# ಸೂಳೆಕೆರೆ (ಶಾಂತಿ ಸಾಗರ) ಅಂತರ್ ಜಾತಿ ಪ್ರೇಮ ವಿವಾಹದ ದುರOತ ಕಥೆ. #ಅಕ್ಟೋಬರ್ 2019 ರಲ್ಲಿ ತುಂಬಿ ತುಳುಕಿತ್ತು.  ಚಿತ್ರದುಗ೯, ದಾವಣಗೆರೆ ಬಳ್ಳಾರಿ ಮುಂತಾದ ಮಳೆ ಕಡಿಮೆ ಆಗುತ್ತಿದ್ದ ಜಿಲ್ಲೆಗಳಲ್ಲಿ ಅದೂ ಅಕ್ಟೋಬರ್ ತಿಂಗಳ 2019 ರಲ್ಲಿ  ಬಂದಿದ್ದ ಬಾರಿ ಮಳೆ ಎಲ್ಲಾ ಕೆರೆ, ಹೊಂಡಗಳು ತುಂಬಿ ತುಳುಕಿದೆ, ಸಾಮಾಜಿಕ ಜಾಲ ತಾಣದಲ್ಲಿ 40 ವಷ೯ದಲ್ಲಿ ಇಂತ ಮಳೆ ಬಂದಿಲ್ಲ ಅಂತ ಸುದ್ದಿ ಹರಿದಾಡುತ್ತಿತ್ತು ಮತ್ತು  ಸೂಳೆಕೆರೆ ತುಂಬಿ ಕೋಡಿ ಬಿದ್ದಿದೆ ಅಂತೆಲ್ಲ Post ನೋಡಿ ಬೆಂಗಳೂರಿಂದ ಬರುವಾಗ ಚಿತ್ರದುಗ೯ ಮಾಗ೯ವಾಗಿ ಚನ್ನಗಿರಿ ತಲುಪಿ ಸೂಳೆಕೆರೆ ನೋಡಲು ಹೋಗಿದ್ದೆ.  11ನೇ ಶತಮಾನದಲ್ಲಿ (1128ರಲ್ಲಿ)ಕೇವಲ 3 ವಷ೯ದಲ್ಲಿ ಈ ಕೆರೆ ನಿಮಾ೯ಣ ಮಾಡಿಸಿದ್ದು ಶಾಂತವ್ವ ಎಂಬ ರಾಜ ಕುಮಾರಿ ಅವಳು ಸ್ವಣ೯ವತಿ ಪಟ್ಟಣದ ದೊರೆ ವಿಕ್ರಮ ರಾಜನ ಮಗಳು, ಸಿದ್ದೇಶ್ವರ ಎಂಬ ಅನ್ಯ ಜಾತಿಯ ಯುವಕನೊ೦ದಿಗೆ ಗಾಂದವ೯ ವಿವಾಹ ಆಗುತ್ತಾಳೆ ಇದನ್ನ ಸಹಿಸದ ಮತ್ತು ಒಪ್ಪದ ಜನತೆ ಸೂಳೆ ಎಂದು ಮೂದಲಿಸುತ್ತಾರOತೆ ಈ ರೀತಿ ತನಗೆ ಬಂದ ಕಳಂಕ ಕಳೆಯಲು ಈ ಬೃಹತ್ ಕೆರೆ ತನ್ನ ಪತಿ ಸಿದ್ದೇಶ್ವರನ ಜೊತೆ ಸೇರಿ ನಿಮಿ೯ಸಿ ಕೆರೆಗೆ ಹಾರವಾದಳೆoಬ ಇತಿಹಾಸ ಇದೆ ಇದರಿಂದ ನೊಂದ ಪತಿ ಸಿದ್ಧೇಶ್ವರ ಕೂಡ ಎದುರಿನ ಗುಡ್ಡದಲ್ಲಿ ಜೀವ ತ್ಯಾಗ ಮಾಡುತ್ತಾನೆ ಈಗ ಅಲ್ಲಿ ಸಿದ್ದೇಶ್ವರ ದೇವಸ್ಥಾನವಿದೆ.   ಈ ಕೆರೆ ಈಗಲೂ ಸೂಳೆಕೆರೆ ಎಂದೆ ಹೆಸರಾಗಿದೆ ಈ

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್ಪಿಸಿಕೊಳ್ಳಬೇಕು ಅಂತ ಬಿದನೂರು ನಗರ ಸಮೀಪದ ದೇವಗಂಗೆ ಎಂಬ ಕೆಳದಿ