Skip to main content

ಕೋವಿ ಶೀಲ್ಡ್ ಮೊದಲ ವ್ಯಾಕ್ಸಿನ್ ಡೋಸ್ ಪಡೆದ ದಿನ (7- ಏಪ್ರಿಲ್ -2021 ಬುಧವಾರ)

#ಕೋವಿಶೀಲ್ಡ_ವ್ಯಾಕ್ಸಿನ್_ಮೊದಲ_ಡೋಸ್_ಈದಿನ_ಪಡೆದೆ.
#ಆರೋಗ್ಯ_ಸಿಬ್ಬಂದಿವಗ೯ದವರಿಗೆ_ವಿಶೇಷವಾಗಿ_ಜ್ಯೂನಿಯರ್_ಹೆಲ್ತ್_ಇನ್ಸ್ಪೆಕ್ಟರ್_ಈಶ್ವರಯ್ಯರಿಗೆ_ದನ್ಯವಾದಗಳು.

#ಆನ೦ದಪುರಂನ_ಕನಕಮ್ಮಾಳ್_ಸಕಾ೯ರಿ_ಆಸ್ಪತ್ರೆ_ಅತ್ಯುತ್ತಮವಾಗಿ_ನಿವ೯ಹಿಸುವ_ಸಿಬ್ಬಂದಿ_ವಗ೯

  ಕಳೆದ ವರ್ಷ ಈ ಸಮಯದಲ್ಲಿ ಇಡೀ ವಿಶ್ವವವೇ ಚಿಕಿತ್ಸೆ ಇಲ್ಲದ ಹೊಸ ಸೊಂಕು ಕೋವಿಡ್ -19 ನಿಂದ ತತ್ತರಿಸಲು ಪ್ರಾರಂಬಿಸಿತ್ತು ಆಗ ಕೇಳಿ ಬಂದಿದ್ದು ಇದಕ್ಕೆ ರೋಗ ನಿರೋದಕ ಲಸಿಕೆ ಚುಚ್ಚುಮದ್ದು ಒಂದೇ ಪರಿಹಾರ ಆದರೆ ಅದನ್ನು ಕಂಡು ಹಿಡಿದು ಜನರ ಮೇಲೆ ಪ್ರಯೋಗ ಮಾಡಿ ಪಲಿತಾಂಶ ನೋಡಿದ ಮೇಲೆ ಸಾವ೯ಜನಿಕರಿಗೆ ನೀಡಬಹುದು ಇದಕ್ಕೆ ಒಂದರಿಂದ ಎರೆಡು ವರ್ಷ ಆದರೂ ಬೇಕು ಎನ್ನುವ ತಜ್ಞರ ಮಾತು ಮತ್ತು ಅಲ್ಲಿಯವರೆಗೆ ಮಾಸ್ಕ ದರಿಸುವ, ಸೋಪಿನಿಂದ ಕೈ ತೊಳೆದುಕೊಳ್ಳುವ ಹಾಗೂ ಜನ ಸಂದಣಿಯಿಂದ ದೂರವಿರಬೇಕೆಂದ ಮುಂಜಾಗೃತೆ ಮೀರಿಯೂ ಅನೇಕರನ್ನ ಕಳೆದುಕೊಂಡ ಘಟನೆಯೂ ನಡೆಯಿತು.
  ಈಗ ಮೊದಲ ಹಂತದ 60 ವರ್ಷ ಮೇಲ್ಪಟ್ಟವರ ಲಸಿಕೆ ನಂತರದ 45 ವರ್ಷ ಮೇಲ್ಪಟ್ಟವರಿಗೆ ಕೂಡ ಲಸಿಕೆ ಸಕಾ೯ರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ನೀಡುವ ಕಾಯ೯ಕ್ರಮ ಯಶಸ್ವಿಯಾಗಿ ನಡೆಯುತ್ತಿದೆ.
  ಇದರ ನಡುವೆ ಲಸಿಕೆ ಬಗ್ಗೆ ಸುಳ್ಳು ಸುದ್ದಿಯೂ ಪ್ರಾರಂಭ ಆಗಿದೆ, ಲಸಿಕೆ ತೆಗೆದುಕೊಂಡರೆ ಮದ್ಯಪಾನ ಮಾಡುವಂತಿಲ್ಲ ಎಂಬುದು ಅನೇಕ ಪಾನಪ್ರಿಯರು ನಿರಾಶೆಯಿಂದ ಲಸಿಕೆಯಿ೦ದ ದೂರ ಉಳಿಯಲು ಒಂದು ಕಾರಣ ಆಗಿದೆ.
  #ಆದರೆ_ಮದ್ಯಪಾನಕ್ಕೂ_ಲಸಿಕೆಗೂ_ಯಾವುದೇ_ಸಂಬಂದವಿಲ್ಲ_ಎಲ್ಲರೂ_ಕೊರಾನ_ಲಸಿಕೆ_ತೆಗೆದುಕೊಳ್ಳಬಹುದು
#ಎನ್ನುವ_ಪ್ರಚಾರ_ಸಕಾ೯ರ_ಮಾಡಬೇಕಿತ್ತು.
 
  ಇವತ್ತಿಂದ 28 ದಿನದ ನಂತರ ಅಥವ 35 ದಿನದ ಒಳಗೆ ಎರಡನೆ ಡೋಸು ಪಡೆಯಬೇಕು ಅದರ ನಂತರದ 15 ದಿನದಲ್ಲಿ ದೇಹ ಕೊರಾನಾ ರೋಗ ನಿರೋದಕ ಶಕ್ತಿ ಉಂಟಾಗಿಸಿಕೊಳ್ಳುತ್ತದೆ ಅಲ್ಲಿಯವರೆಗೆ ಜಾಗೃತರಾಗಿರಬೇಕು ಅದರ ನಂತರವೂ ಕೊವಿಡ್ ಸೊಂಕು ತಾಗುವುದಿಲ್ಲ ಅಂತ ಹೇಳಲಾಗುವುದಿಲ್ಲ ಆದರೆ ಸೊಂಕಿನ ತೀಕ್ಷಣತೆ ಪ್ರಾಣ ಹಾನಿ ಇರುವುದಿಲ್ಲ ಎಂಬುದು ತಜ್ಞರ ಸಂಶೋದನೆ.
  ಇವತ್ತು ಆನಂದಪುರಂನ ಆಸ್ಪತ್ರೆಯಲ್ಲಿ ಪೋಲಿಸ್ ಸಿಬ್ಬಂದಿ ವಗ೯ಕೂಡ ಎರಡನೇ ಡೋಸು ಪಡೆದರು.
   ಆನಂದಪುರದ ಇನಾಂದಾರರಾಗಿದ್ದ ರಾಮಕೃಷ್ಣ ಅಯ್ಯಂಗಾರರ ದಮ೯ಪತ್ನಿ ಶ್ರೀಮತಿ ಕನಕಮ್ಮಾಳ್ ಸ್ಮರಣಾಥ೯ (ವಿದ್ಯಾಮಂತ್ರಿ ಬದರಿನಾರಾಯಣ್ ಅಯ್ಯಂಗಾರರ ಮಾತೃಶ್ರೀ ) ಕಟ್ಟಿಸಿದ ಈ ಆಸ್ಪತ್ರೆಯನ್ನ ಸಿಬ್ಬಂದಿ ವಗ೯ ತುಂಬಾ ಸ್ವಚ್ಚವಾಗಿ ನಿವ೯ಹಿಸಿದ್ದಾರೆ.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

ಶರಾವತಿ ನದಿ ಉಗಮ ಸ್ಥಾನ ಅಂಬುತೀಥ೯.

ಇಡೀ ರಾಜ್ಯಕ್ಕೆ ವಿದ್ಯುತ್ ನೀಡುವ ಶರಾವತಿ ನದಿಯ ಉಗಮ ಸ್ಥಾನ ಅಂಬುತೀಥ೯, ಆರಗ ಸಮೀಪದ ತೀಥ೯ಳ್ಳಿ ತಾಲ್ಲೂಕಿನಲ್ಲಿದೆ( ಶಿವಮೊಗ್ಗ ಜಿಲ್ಲೆ)    ಅಂಬು ತೀಥ೯ದಲ್ಲಿ ಶ್ರೀ ರಾಮ ವನವಾಸದಲ್ಲಿದ್ದಾಗ ಸೀತಾ ಮಾತೆಗೆ ಪೂಜೆಗೆ ನೀರು ಸಿಗದಿದ್ದಾಗ ರಾಮ ತನ್ನ ಅಂಬಿನಿಂದ (ಬಿಲ್ಲಿನ ಬಾಣದಿಂದ) ನೆಲ ಸೀಳಿ ನೀರು ತಂದರೆ೦ದು ರಾಮಾಯಣದಲ್ಲಿ ಉಲ್ಲೇಖವಿದೆ, ಹಾಗಾಗಿ ಈ ಸ್ಥಳಕ್ಕೆ ಅಂಬುತೀಥ೯ ಎಂಬ ಹೆಸರು ಬ೦ತು ಎಂಬುದು ಸ್ಥಳ ಪುರಾಣ.    ಇಲ್ಲಿ ಸಣ್ಣ ತೊರೆಯಾಗಿ ಹುಟ್ಟುವ ನದಿ ಬಾಣದಿಂದ ಹುಟ್ಟಿದ್ದರಿಂದ ಶರಾವತಿ ಎ೦ಬ ಹೆಸರು ಪಡೆದು ಪೂವ೯ಕ್ಕೆ ಹರಿದು ನಂತರ ಪಶ್ಚಿಮ ಮುಖವಾಗಿ ತಿರುಗಿ ಹೊಸನಗರ ತಾಲ್ಲೂಕನ್ನ ದಾಟಿ ಸಾಗರ ತಾಲ್ಲೂಕಿನ ಜೋಗದಲ್ಲಿ ಜಲಪಾತವಾಗಿ ದಟ್ಟ ಕಾನನದ ಕಣಿವೆ ಮುಖಾಂತರ ಹರಿದು ಹೊನ್ನಾವರದಲ್ಲಿ ಅರಬ್ಬಿ ಸಮುದ್ರ ಸೇರುತ್ತದೆ.   ಈ ನದಿಗೆ ಮೊದಲಿಗೆ ಹೀರೇ ಬಾಸ್ಕರ ಎಂಬಲ್ಲಿ ನಂತರ ಲಿಂಗನಮಕ್ಕಿಯಲ್ಲಿ ಆಣೆಕಟ್ಟು ಕಟ್ಟಿ ರಾಜ್ಯಕ್ಕೆ ಜಲ ವಿದ್ಯುತ್ ನೀಡುತ್ತಿರುವುದರಿಂದ ಲಕ್ಷಾಂತರ ಎಕರೆ ಕಾಡು, ಜಮೀನು ಅನೇಕ ಊರು ಮುಳುಗಡೆ ಆಯಿತು ಸಾವಿರಾರು ಕುಟುಂಬಗಳು ಸಂತ್ರಸ್ಥರಾದದ್ದು ಇತಿಹಾಸ.    ಈ ನದಿ ಜೋಗದಲ್ಲಿ ದುಮುಕುವ ಜಲಪಾತ ವಿಶ್ವದ ಸುಂದರ ಜಲಪಾತದಲ್ಲಿ ಒಂದಾಗಿದೆ.    ಹಾಗಾಗಿ ಶರಾವತಿ ನದಿಯ ಉಗಮ ಸ್ಥಾನಕ್ಕೆ ಮಹತ್ವವಿದೆ, ಒಮ್ಮೆಯಾದರೂ ಈ ನದಿ ಮೂಲ ಸಂದಶಿ೯ಸಬೇಕು ಆದರೆ ಇಲ್ಲಿ ಶರಾವತಿ ವ...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...