Skip to main content

ಭಗವಾನ್ ಶ್ರೀಧರ ಸ್ವಾಮಿ ಮತ್ತು ಮಹಾರಾಷ್ಟ್ರದ ಪ್ರಸಿದ್ದ ಮರಾಠ ಪತ್ರಿಕೆಯ ಸಂಪಾದಕರಾದ ಆಚಾಯ೯ ಆತ್ರೆಯವ ಬೇಟಿಯ ಹಾಗೂ ಆಶ್ರೀವಾದದ ಚಿತ್ರ ಅಂಬೇಡ್ಕರ್ ಶ್ರೀಧರ ಸ್ವಾಮಿಯವರದ್ದೆಂದು ತಪ್ಪಾಗಿ ಸಾಮಾಜಿಕ ತಾಣದಲ್ಲಿ ಹರಿದಾಡುತ್ತಿದೆ.

#ಅ೦ಬೆಡ್ಕರ್_ಭಗವಾನ್_ಶ್ರೀಧರ_ಸ್ವಾಮಿ_ಬೇಟಿ_ಆಗಿಲ್ಲ

#ನಿನ್ನೆಯಿಂದ_ಮೊದಲ_ಚಿತ್ರ_ಅಂಬೇಡ್ಕರ್_ಶ್ರೀಧರ_ಸ್ವಾಮಿಗಳ_ಆಶ್ರೀವಾದ_ಪಡೆದದ್ದು ಎಂಬ ತಪ್ಪು ಮಾಹಿತಿ ಹೆಚ್ಚು ಸಾಮಾಜಿಕ ತಾಣದಲ್ಲಿ ಪ್ರಸಾರ ಆಗುತ್ತಿದೆ ಆದರೆ ಅವರು ಅಂಬೇಡ್ಕರ್ ಅಲ್ಲ ಅಂಬೇಡ್ಕರ್ ರೀತಿ ಕಾಣುವ ಮಹಾರಾಷ್ಟ್ರದ ಸುಪ್ರಸಿದ್ಧ ಮರಾಠ ಪತ್ರಿಕೆಯ ಸಂಪಾದಕರಾದ ಆಚಾಯ೯ ಆತ್ರೆಯವರು.
  ಆತ್ರೆಯವರ ಮತ್ತು ಭಗವಾನ್ ಶ್ರೀಧರರ ಬೇಟಿಯ ಪೋಟೋ ಮತ್ತು ಲೇಖನ ಸದ್ಗುರು ಭಗವಾನ್ ಶ್ರೀ ಶ್ರೀಧರ ಚರಿತ್ರೆಯಲ್ಲಿ ಪ್ರಕಟವಾಗಿದೆ ಅದನ್ನು ಇಲ್ಲಿ ಕೆಳಗೆ ಪೋಸ್ಟ್ ಮಾಡಿದೆ ಮತ್ತು ಸರಿಯಾದ ಎರಡನೆ ಚಿತ್ರ ಕೂಡ.

ಭಗವಾನರು ಮುಂಬೈಗೆ ಬಂದಿಳಿದ ಕೂಡಲೇ ಅನೇಕ ಭಕ್ತಾದಿಗಳು ಆದರದ ಸ್ವಾಗತ ಕೋರಿದರು. ಅಲ್ಲಿ ಮಾಮಾ ಕಾಣೆಯವರ ಮನೆಯಲ್ಲಿ ಭಗವಾನರ ಮುಕ್ಕಾಂ ಅಯಿತು. ಕೊಂಕಣ ದೇಶದಲ್ಲಿ ಆಗ ಬಿರುಗಾಳಿಯಿಂದ ಪೀಡಿತರಾದ ಜನರ ಸಹಾಯಕ್ಕಾಗಿ ಏರ್ಪಡಿಸಿದ್ದ ನಾಟಕವನ್ನು ಭಗವಾನರು ವೀಕ್ಷಿಸಿ, ಅದರ ಪಾತ್ರಧಾರಿಗಳಿಗೆ ಬಹುಮಾನವನ್ನು ನೀಡಿದರು. ಭಗವಾನರು ಅಲ್ಲಿನ ಸಂಕಷ್ಟ ಪೀಡಿತ ಜನರಿಗೆ ನೂರು ರೂಪಾಯಿಗಳ ದಾನ ನೀಡಿದರು. ಪ್ರವಚನವನ್ನು ನೀಡುತ್ತಾ ಮನುಷ್ಯನ ಮನಸ್ಸಿನ ಮೇಲೆ ಪರಿಣಾಮವಾಗುವಂತಹ ನಾಟಕ ಸಿನೆಮಾಗಳನ್ನು ಮಾಡಬೇಕೆಂದು ಸಲಹೆ ನೀಡಿದರು. ಅಂದಿನ ಸಮಾರಂಭವನ್ನು ಮಹಾರಾಷ್ಟ್ರದಲ್ಲಿಯ ಸುಪ್ರಸಿದ್ಧ ಮರಾಠ ಪತ್ರಿಕೆಯ ಸಂಪಾದಕರಾದ ಆಚಾರ್ಯ ಅತ್ರೆಯವರು ಏರ್ಪಡಿಸಿದ್ದರು. ಭಗವಾನರ ಅಮೃತ ಹಸ್ತದಿಂದ ಬಹುಮಾನ ಪ್ರಸಾದವನ್ನು ದೊರಕಿಸಿಕೊಡಬೇಕೆಂದು ಅತ್ರೆಯವರೇ ಭಗವಾನರಲ್ಲಿ ಪ್ರಾರ್ಥಿಸಿಕೊಂಡು ಭಗವಾನರನ್ನು ಬರಮಾಡಿಕೊಂಡಿದ್ದರು. ಈ ಅತ್ರೆಯವರು ತಮ್ಮ ಪತ್ರಿಕೆಯಲ್ಲಿ ಭಾರತದ ಅನೇಕ ಸಾಧು ಸಂತರು ರಾಜಕಾರಣಿಗಳು ಮುಂತಾದವರ ಲೋಪದೋಷಗಳನ್ನು ಎತ್ತಿಹಿಡಿದು ನಿರ್ಭಿಡೆಯಿಂದ ಟೀಕೆ ಮಾಡಿ ಪತ್ರಿಕೆಯಲ್ಲಿ ಮುದ್ರಿಸುತ್ತಿದ್ದರು. ಇವರ ಟೀಕೆಗೆ ಒಳಗಾಗದವರು ಯಾರೂ ಉಳಿಯಲಿಲ್ಲವೆಂದರೂ ಒಪ್ಪುವಂತಿತ್ತು. ಅಂತಹ ಅತ್ರೆಯವರು ಭಗವಾನರ ದರ್ಶನ ಮಾಡಿದಾಗ ಮಾತ್ರ ಭಗವಾನರ ಜೀವನದಲ್ಲಿ ಒಂದೇ ಒಂದು ಲೋಪದೋಷವು ಇವರಿಗೆ ಸಿಗದೆ ನತಮಸ್ತಕರಾದರು. ಮಾತ್ರವಲ್ಲ ಕೆಲವು ದಿನಗಳ ಮೇಲೆ ತಮ್ಮ ಪತ್ರಿಕೆಯಲ್ಲಿ ಭಗವಾನರ ಛಾಯಾಚಿತ್ರವನ್ನು ಮುದ್ರಿಸಿ ‘ಸಮರ್ಥರ ಪುನರಾವತಾರ’ ಎಂಬ ಶೀರ್ಷಿಕೆಯನ್ನಿತ್ತು ಭಗವಾನರ ಬಗ್ಗೆ ಒಂದು ಲೇಖನವನ್ನು ಬರೆದು ಶ್ರೀ ಭಗವಾನರೆಂದರೆ ಸಾಕ್ಷಾತ್ ಭಗವಂತನೇ ಸರಿ ಎಂದು ಪ್ರತಿಪಾದಿಸಿದ್ದರು. ಮಹಾರಾಷ್ಟ್ರದಲ್ಲಿ ಎಲ್ಲರಿಗೂ ಇದೊಂದು ಆಶ್ಚರ್ಯದ ಘಟನೆಯಾಗಿ ಪರಿಣಮಿಸಿತ್ತು.

ಆಧಾರ :- ಸದ್ಗುರು ಭಗವಾನ್ ಶ್ರೀ ಶ್ರೀಧರ ಚರಿತ್ರೆ

https://m.facebook.com/story.php?story_fbid=3869242403165213&id=100002384735954

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...