Skip to main content

ಭಗವಾನ್ ಶ್ರೀಧರ ಸ್ವಾಮಿ ಮತ್ತು ಮಹಾರಾಷ್ಟ್ರದ ಪ್ರಸಿದ್ದ ಮರಾಠ ಪತ್ರಿಕೆಯ ಸಂಪಾದಕರಾದ ಆಚಾಯ೯ ಆತ್ರೆಯವ ಬೇಟಿಯ ಹಾಗೂ ಆಶ್ರೀವಾದದ ಚಿತ್ರ ಅಂಬೇಡ್ಕರ್ ಶ್ರೀಧರ ಸ್ವಾಮಿಯವರದ್ದೆಂದು ತಪ್ಪಾಗಿ ಸಾಮಾಜಿಕ ತಾಣದಲ್ಲಿ ಹರಿದಾಡುತ್ತಿದೆ.

#ಅ೦ಬೆಡ್ಕರ್_ಭಗವಾನ್_ಶ್ರೀಧರ_ಸ್ವಾಮಿ_ಬೇಟಿ_ಆಗಿಲ್ಲ

#ನಿನ್ನೆಯಿಂದ_ಮೊದಲ_ಚಿತ್ರ_ಅಂಬೇಡ್ಕರ್_ಶ್ರೀಧರ_ಸ್ವಾಮಿಗಳ_ಆಶ್ರೀವಾದ_ಪಡೆದದ್ದು ಎಂಬ ತಪ್ಪು ಮಾಹಿತಿ ಹೆಚ್ಚು ಸಾಮಾಜಿಕ ತಾಣದಲ್ಲಿ ಪ್ರಸಾರ ಆಗುತ್ತಿದೆ ಆದರೆ ಅವರು ಅಂಬೇಡ್ಕರ್ ಅಲ್ಲ ಅಂಬೇಡ್ಕರ್ ರೀತಿ ಕಾಣುವ ಮಹಾರಾಷ್ಟ್ರದ ಸುಪ್ರಸಿದ್ಧ ಮರಾಠ ಪತ್ರಿಕೆಯ ಸಂಪಾದಕರಾದ ಆಚಾಯ೯ ಆತ್ರೆಯವರು.
  ಆತ್ರೆಯವರ ಮತ್ತು ಭಗವಾನ್ ಶ್ರೀಧರರ ಬೇಟಿಯ ಪೋಟೋ ಮತ್ತು ಲೇಖನ ಸದ್ಗುರು ಭಗವಾನ್ ಶ್ರೀ ಶ್ರೀಧರ ಚರಿತ್ರೆಯಲ್ಲಿ ಪ್ರಕಟವಾಗಿದೆ ಅದನ್ನು ಇಲ್ಲಿ ಕೆಳಗೆ ಪೋಸ್ಟ್ ಮಾಡಿದೆ ಮತ್ತು ಸರಿಯಾದ ಎರಡನೆ ಚಿತ್ರ ಕೂಡ.

ಭಗವಾನರು ಮುಂಬೈಗೆ ಬಂದಿಳಿದ ಕೂಡಲೇ ಅನೇಕ ಭಕ್ತಾದಿಗಳು ಆದರದ ಸ್ವಾಗತ ಕೋರಿದರು. ಅಲ್ಲಿ ಮಾಮಾ ಕಾಣೆಯವರ ಮನೆಯಲ್ಲಿ ಭಗವಾನರ ಮುಕ್ಕಾಂ ಅಯಿತು. ಕೊಂಕಣ ದೇಶದಲ್ಲಿ ಆಗ ಬಿರುಗಾಳಿಯಿಂದ ಪೀಡಿತರಾದ ಜನರ ಸಹಾಯಕ್ಕಾಗಿ ಏರ್ಪಡಿಸಿದ್ದ ನಾಟಕವನ್ನು ಭಗವಾನರು ವೀಕ್ಷಿಸಿ, ಅದರ ಪಾತ್ರಧಾರಿಗಳಿಗೆ ಬಹುಮಾನವನ್ನು ನೀಡಿದರು. ಭಗವಾನರು ಅಲ್ಲಿನ ಸಂಕಷ್ಟ ಪೀಡಿತ ಜನರಿಗೆ ನೂರು ರೂಪಾಯಿಗಳ ದಾನ ನೀಡಿದರು. ಪ್ರವಚನವನ್ನು ನೀಡುತ್ತಾ ಮನುಷ್ಯನ ಮನಸ್ಸಿನ ಮೇಲೆ ಪರಿಣಾಮವಾಗುವಂತಹ ನಾಟಕ ಸಿನೆಮಾಗಳನ್ನು ಮಾಡಬೇಕೆಂದು ಸಲಹೆ ನೀಡಿದರು. ಅಂದಿನ ಸಮಾರಂಭವನ್ನು ಮಹಾರಾಷ್ಟ್ರದಲ್ಲಿಯ ಸುಪ್ರಸಿದ್ಧ ಮರಾಠ ಪತ್ರಿಕೆಯ ಸಂಪಾದಕರಾದ ಆಚಾರ್ಯ ಅತ್ರೆಯವರು ಏರ್ಪಡಿಸಿದ್ದರು. ಭಗವಾನರ ಅಮೃತ ಹಸ್ತದಿಂದ ಬಹುಮಾನ ಪ್ರಸಾದವನ್ನು ದೊರಕಿಸಿಕೊಡಬೇಕೆಂದು ಅತ್ರೆಯವರೇ ಭಗವಾನರಲ್ಲಿ ಪ್ರಾರ್ಥಿಸಿಕೊಂಡು ಭಗವಾನರನ್ನು ಬರಮಾಡಿಕೊಂಡಿದ್ದರು. ಈ ಅತ್ರೆಯವರು ತಮ್ಮ ಪತ್ರಿಕೆಯಲ್ಲಿ ಭಾರತದ ಅನೇಕ ಸಾಧು ಸಂತರು ರಾಜಕಾರಣಿಗಳು ಮುಂತಾದವರ ಲೋಪದೋಷಗಳನ್ನು ಎತ್ತಿಹಿಡಿದು ನಿರ್ಭಿಡೆಯಿಂದ ಟೀಕೆ ಮಾಡಿ ಪತ್ರಿಕೆಯಲ್ಲಿ ಮುದ್ರಿಸುತ್ತಿದ್ದರು. ಇವರ ಟೀಕೆಗೆ ಒಳಗಾಗದವರು ಯಾರೂ ಉಳಿಯಲಿಲ್ಲವೆಂದರೂ ಒಪ್ಪುವಂತಿತ್ತು. ಅಂತಹ ಅತ್ರೆಯವರು ಭಗವಾನರ ದರ್ಶನ ಮಾಡಿದಾಗ ಮಾತ್ರ ಭಗವಾನರ ಜೀವನದಲ್ಲಿ ಒಂದೇ ಒಂದು ಲೋಪದೋಷವು ಇವರಿಗೆ ಸಿಗದೆ ನತಮಸ್ತಕರಾದರು. ಮಾತ್ರವಲ್ಲ ಕೆಲವು ದಿನಗಳ ಮೇಲೆ ತಮ್ಮ ಪತ್ರಿಕೆಯಲ್ಲಿ ಭಗವಾನರ ಛಾಯಾಚಿತ್ರವನ್ನು ಮುದ್ರಿಸಿ ‘ಸಮರ್ಥರ ಪುನರಾವತಾರ’ ಎಂಬ ಶೀರ್ಷಿಕೆಯನ್ನಿತ್ತು ಭಗವಾನರ ಬಗ್ಗೆ ಒಂದು ಲೇಖನವನ್ನು ಬರೆದು ಶ್ರೀ ಭಗವಾನರೆಂದರೆ ಸಾಕ್ಷಾತ್ ಭಗವಂತನೇ ಸರಿ ಎಂದು ಪ್ರತಿಪಾದಿಸಿದ್ದರು. ಮಹಾರಾಷ್ಟ್ರದಲ್ಲಿ ಎಲ್ಲರಿಗೂ ಇದೊಂದು ಆಶ್ಚರ್ಯದ ಘಟನೆಯಾಗಿ ಪರಿಣಮಿಸಿತ್ತು.

ಆಧಾರ :- ಸದ್ಗುರು ಭಗವಾನ್ ಶ್ರೀ ಶ್ರೀಧರ ಚರಿತ್ರೆ

https://m.facebook.com/story.php?story_fbid=3869242403165213&id=100002384735954

Comments

Popular posts from this blog

Blog number 1782. ಅರಳಸುರಳಿಯ ರಾಘವೇಂದ್ರ ಕೇಕೋಡರ ಕುಟುಂಬದ ತಪ್ಪು ನಿರ್ದಾರದ ದುರಂತ.

#ತೀರ್ಥಹಳ್ಳಿಯ_ಅರಳಸುರಳಿಯ_ಒಂದೇ_ಕುಟುಂಬದ_ನಾಲ್ವರು_ಮೃತರಾದ_ರಹಸ್ಯವೇನು? #ಈ_ಬಗ್ಗೆ_ಆ_ಊರಿನ_ಸಮೀಪದ_ಈ_ಕುಟುಂಬದ_ಪರಿಚಯ_ಇರುವವರಿಗೆ_ವಿಚಾರಿಸಿದ್ದೆ. #ಅವರು_ಈ_ಘಟನೆ_ಬಗ್ಗೆ_ಸವಿಸ್ತಾರವಾಗಿ_ಲಿಖಿತ_ಲೇಖನ_ಬರೆದಿದ್ದಾರೆ. #ಅವರ_ವಿನಂತಿ_ಅವರ_ಹೆಸರು_ಬಹಿರಂಗಗೊಳಿಸ_ಬಾರದು. #ಆದ್ದರಿಂದ_ಈ_ಲೇಖನ_ಪೋಸ್ಟ್_ಮಾಡಬಾರದೆಂದಿದ್ದೆ_ಆದರೆ_ಇದು_ಮಲೆನಾಡಿಗರ_ಮನೆ_ಮನೆಯ_ಕಥೆ #ಆದ್ದರಿಂದ_ಇಲ್ಲಿ_ಪೋಸ್ಟ್_ಮಾಡಿದೆ.    ಇಲ್ಲಿ ತಪ್ಪು ಯಾರದ್ದೂ ಇಲ್ಲ... ಪಶ್ಚಾತ್ತಾಪದ ಪ್ರಾಯಶ್ಚಿತ ಕೇಳಲು ಅವರಾರು ಇಲ್ಲ .....ಆದರೆ ಈ ರೀತಿ ಜೀವ ತ್ಯಾಗ ಮಾಡುವ ಆತುರದ ಕೆಟ್ಟ ನಿರ್ದಾರ ಮಾತ್ರ ಸರಿ ಅಲ್ಲ.     ಇವರ ಅಣ್ಣ ಆರ್.ಎಸ್.ಎಸ್. ಪ್ರಚಾರಕರಾಗಿ ದೆಹಲಿಯಲ್ಲಿ ಏಳು ವಷ೯ ಮೋದಿ ಜೊತೆ ಒಂದೇ ಕೋಣೆ ಹಂಚಿಕೊಂಡವರು, ಇನ್ನೊಬ್ಬ ಸಹೋದರ ಮೂಳೆ ತಜ್ಞರಾಗಿ ಶಿವಮೊಗ್ಗದಲ್ಲಿ ಆಸ್ಪತ್ರೆ ಮಾಡಿಕೊಂಡಿದ್ದಾರೆ.   #ದೀರ್ಘವಾದರೂ_ಪೂರ್ಣ_ಲೇಖನ_ಓದಿ   #ಹೀಗೊಂದು_ಸುಕುಟುಂಬ_ಆತ್ಮಾಘಾತ_ಮತ್ತು_ತದನಂತರದ_ಸಹಾಗಮನ.... ಮೂಡಣದಲ್ಲಿ ರವಿ ಮೂಡಲು ಅಣಿ ಯಾಗುತ್ತಿಧ್ದ .. ಹಾದಿಗಣಪತಿ ದೇವರು ಗರ್ಭಗುಡಿಯ ನಂದಾದೀಪದ ಮಂದ ಬೆಳಕಿನಲ್ಲಿ ತನ್ನ ಗುಡಿಯ ಎದುರಿನ ತಗ್ಗಿನಲ್ಲಿದ್ದ  ರಾಘವೇಂದ್ರ ಕೇಕೋಡರ ಮನೆಯನ್ನು ಎವೆಯಕ್ಕದೇ ನೋಡುತ್ತಲಿದ್ದ... ಊರ ಎಲ್ಲಾ ಮನೆಯಂತೆ ಆ ಮನೆಯಲ್ಲೂ ಆ ಬೆಳಗಿನಲ್ಲಿ ಮನೆಯೊಡತಿ ನಾಗರತ್ನಕ್ಕ ಆ ಸಮಯದಲ್ಲಿ ದೇವರಿಗೆ ದೀಪ ಹಚ್ಚಿ ಹೊಸ್ತಿಲು ಪೂಜೆ ಮಾಡ

Blog number 1037. ರಾಜಕುಮಾರಿ ಶಾಂತವ್ವ ಮತ್ತು ದಲಿತ ಯುವಕ ಸಿದ್ದೇಶ್ವರರ ಅಮರ ಪ್ರೇಮದ ಸ್ಮಾರಕ, ಅನ್ಯ ಜಾತಿ ವಿವಾಹವಾದ್ದರಿಂದ ರಾಜಕುಮಾರಿಗೆ ಸೂಳೆ ಪಟ್ಟ ನೀಡಿದ ಸಮಾಜ. ಸಮಾಜದ ಒಳಿತಿಗಾಗಿ ಶಾಂತವ್ವ ಕಟ್ಟಿಸಿದ ಬೃಹತ್ ಕೆರೆಗೆ ಜನ ಕರೆದದ್ದು ಸೂಳೆ ಕಟ್ಟಿಸಿದ ಕೆರೆ ಅದೇ ಸೂಳೆಕೆರೆ / ಶಾಂತಿ ಸಾಗರ

# ಸೂಳೆಕೆರೆ (ಶಾಂತಿ ಸಾಗರ) ಅಂತರ್ ಜಾತಿ ಪ್ರೇಮ ವಿವಾಹದ ದುರOತ ಕಥೆ. #ಅಕ್ಟೋಬರ್ 2019 ರಲ್ಲಿ ತುಂಬಿ ತುಳುಕಿತ್ತು.  ಚಿತ್ರದುಗ೯, ದಾವಣಗೆರೆ ಬಳ್ಳಾರಿ ಮುಂತಾದ ಮಳೆ ಕಡಿಮೆ ಆಗುತ್ತಿದ್ದ ಜಿಲ್ಲೆಗಳಲ್ಲಿ ಅದೂ ಅಕ್ಟೋಬರ್ ತಿಂಗಳ 2019 ರಲ್ಲಿ  ಬಂದಿದ್ದ ಬಾರಿ ಮಳೆ ಎಲ್ಲಾ ಕೆರೆ, ಹೊಂಡಗಳು ತುಂಬಿ ತುಳುಕಿದೆ, ಸಾಮಾಜಿಕ ಜಾಲ ತಾಣದಲ್ಲಿ 40 ವಷ೯ದಲ್ಲಿ ಇಂತ ಮಳೆ ಬಂದಿಲ್ಲ ಅಂತ ಸುದ್ದಿ ಹರಿದಾಡುತ್ತಿತ್ತು ಮತ್ತು  ಸೂಳೆಕೆರೆ ತುಂಬಿ ಕೋಡಿ ಬಿದ್ದಿದೆ ಅಂತೆಲ್ಲ Post ನೋಡಿ ಬೆಂಗಳೂರಿಂದ ಬರುವಾಗ ಚಿತ್ರದುಗ೯ ಮಾಗ೯ವಾಗಿ ಚನ್ನಗಿರಿ ತಲುಪಿ ಸೂಳೆಕೆರೆ ನೋಡಲು ಹೋಗಿದ್ದೆ.  11ನೇ ಶತಮಾನದಲ್ಲಿ (1128ರಲ್ಲಿ)ಕೇವಲ 3 ವಷ೯ದಲ್ಲಿ ಈ ಕೆರೆ ನಿಮಾ೯ಣ ಮಾಡಿಸಿದ್ದು ಶಾಂತವ್ವ ಎಂಬ ರಾಜ ಕುಮಾರಿ ಅವಳು ಸ್ವಣ೯ವತಿ ಪಟ್ಟಣದ ದೊರೆ ವಿಕ್ರಮ ರಾಜನ ಮಗಳು, ಸಿದ್ದೇಶ್ವರ ಎಂಬ ಅನ್ಯ ಜಾತಿಯ ಯುವಕನೊ೦ದಿಗೆ ಗಾಂದವ೯ ವಿವಾಹ ಆಗುತ್ತಾಳೆ ಇದನ್ನ ಸಹಿಸದ ಮತ್ತು ಒಪ್ಪದ ಜನತೆ ಸೂಳೆ ಎಂದು ಮೂದಲಿಸುತ್ತಾರOತೆ ಈ ರೀತಿ ತನಗೆ ಬಂದ ಕಳಂಕ ಕಳೆಯಲು ಈ ಬೃಹತ್ ಕೆರೆ ತನ್ನ ಪತಿ ಸಿದ್ದೇಶ್ವರನ ಜೊತೆ ಸೇರಿ ನಿಮಿ೯ಸಿ ಕೆರೆಗೆ ಹಾರವಾದಳೆoಬ ಇತಿಹಾಸ ಇದೆ ಇದರಿಂದ ನೊಂದ ಪತಿ ಸಿದ್ಧೇಶ್ವರ ಕೂಡ ಎದುರಿನ ಗುಡ್ಡದಲ್ಲಿ ಜೀವ ತ್ಯಾಗ ಮಾಡುತ್ತಾನೆ ಈಗ ಅಲ್ಲಿ ಸಿದ್ದೇಶ್ವರ ದೇವಸ್ಥಾನವಿದೆ.   ಈ ಕೆರೆ ಈಗಲೂ ಸೂಳೆಕೆರೆ ಎಂದೆ ಹೆಸರಾಗಿದೆ ಈ

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್ಪಿಸಿಕೊಳ್ಳಬೇಕು ಅಂತ ಬಿದನೂರು ನಗರ ಸಮೀಪದ ದೇವಗಂಗೆ ಎಂಬ ಕೆಳದಿ