Skip to main content

ಭಾಗ - 17, ಬದರಿನಾರಾಯಣ ಅಯ್ಯಂಗಾರನ್ನು ಮಂತ್ರಿ ಮಾಡದ ಆಗಿನ ಮುಖ್ಯಮಂತ್ರಿ ನಿಜಲಿಂಗಪ್ಪನವರು, ಆನಂದಪುರಂನಲ್ಲಿ ದೇವರಾಜ ಅರಸರ ನೇತೃತ್ವದಲ್ಲಿ ನಡೆಯುತ್ತಿದ್ದ ಕಾಂಗ್ರೇಸ್ ಬಿನ್ನ ಮತೀಯ ಸಭೆಗಳು.

#ಭಾಗ_17.

#ಶಿವಮೊಗ್ಗ_ಜಿಲ್ಲೆಯ_ಆಕಾಲದ_ಪ್ರಭಾವಿ_ನಾಯಕರನ್ನು_ಮಂತ್ರಿ_ಮಾಡದ_ಲಾಭಿ

#ಅವಕಾಶ_ನೀಡದ_ನಿಜಲಿಂಗಪ್ಪನವರು.

#ಅನಿವಾಯ೯ವಾಗಿ_ಬಿನ್ನಮತೀಯ_ಗುಂಪು_ಸೇರಿದ_ಬದರಿನಾರಾಯಣ್_ಅಯ್ಯ೦ಗಾರರು.

#ಆನಂದಪುರಂ_ಸಮೀಪದ_ಅವರ_ಹೊಸಕೊಪ್ಪದ_ತೋಟದ_ಮನೆಯಲ್ಲಿ_ನಡೆದ_ಸರಣಿ_ಬಿನ್ನಮತಿಯ_ಸಭೆಗಳು.

     ತೀಥ೯ಹಳ್ಳಿ ವಿಧಾನಸಭಾ ಕ್ಷೇತ್ರಕ್ಕೆ ಸಾಗರ - ಹೊಸನಗರ- ಮತ್ತು ತೀಥ೯ಹಳ್ಳಿ ತಾಲ್ಲೂಕು ಸೇರಿ ಒಂದು ಕ್ಷೇತ್ರ. ಸಾಗರ ತಾಲ್ಲೂಕಿನ ಆನಂದಪುರಂ ಕ್ಷೇತ್ರ ಮತ್ತು ಸಾಗರ ಪಟ್ಟಣದವರೆಗೆ ತೀಥ೯ಗಳ್ಳಿ ವಿಧಾನಸಭಾ ಕ್ಷೇತ್ರಕ್ಕೆ ಸೇರಿತ್ತು ಈ ಕ್ಷೇತ್ರದಿಂದ 1957 ರ ಎರಡನೇ ಮಹಾ ಚುನಾವಣೆಯಲ್ಲಿ  ಕಾಂಗ್ರೇಸ್ ಪಾರ್ಟಿಯಿಂದ ಬದರಿನಾರಾಯಣ ಅಯ್ಯಂಗಾರ್ ಸಮಾಜವಾದಿ ಪಾರ್ಟಿಯಿಂದ ಸ್ಪರ್ದಿಸಿದ್ದ (1952 ರಲ್ಲಿ ಈ ಕ್ಷೇತ್ರದಿಂದ ಮೊದಲ ಸಾವ೯ತ್ರಿಕ ಚುನಾವಣೆಯಲ್ಲಿ ಇದೇ ಬದರಿನಾರಾಯಣ ಅಯ್ಯಂಗಾರ್ ರನ್ನು ಸೋಲಿಸಿದ್ದ ) ಶಾಂತವೇರಿ ಗೋಪಾಲಗೌಡರನ್ನು ಸೋಲಿಸಿ ಆಯ್ಕೆ ಆಗುತ್ತಾರೆ.
   ಎರಡನೇ ವಿದಾನ ಸಭಾ ಚುನಾವಣೆಯಲ್ಲಿ (1957 ರಲ್ಲಿ) ತೀಥ೯ಹಳ್ಳಿ ವಿದಾನ ಸಭಾ ಕ್ಷೇತ್ರದಿಂದ ಹೊರತು ಪಡಿಸಿದ ಸಾಗರ ತಾಲ್ಲೂಕ್ ಮತ್ತು ಸೊರಬ ತಾಲ್ಲೂಕ್ ಸೇರಿ ಸಾಗರ ವಿಧಾನ ಸಭಾ ಕ್ಷೇತ್ರ ಆಗುತ್ತದೆ ಇಲ್ಲಿ ಕಾಂಗ್ರೇಸ್ ನಿಂದ ಕಾಗೋಡು ಹೋರಾಟದ ನೇತಾರ ಹೆಚ್.ಗಣಪತಿಯಪ್ಪರನ್ನು ಸ್ಪರ್ದಿಸಲು ಅವಕಾಶ ನೀಡುತ್ತಾರೆ ಆದರೆ ಹಿರಿಯರು ರೈತ ಸಂಘಟನೆಯಲ್ಲಿ ಮುಂಚೂಣಿಯಲ್ಲಿದ್ದ ಮರ್ತೂರು ಮೂಕಪ್ಪನವರು ತಮಗೆ ಸ್ಪರ್ದಿಸಲು ಅವಕಾಶ ನೀಡಲು ಗಣಪತಿಯಪ್ಪರನ್ನು ವಿನ೦ತಿಸುತ್ತಾರೆ,ಇದನ್ನು ಒಪ್ಪಿ ಗಣಪತಿಯಪ್ಪನವರು ಮೂಕಪ್ಪರಿಗೆ ಅವಕಾಶ ನೀಡಿ ಪ್ರಚಾರದಲ್ಲಿ ಭಾಗವಹಿಸುತ್ತಾರೆ ಮೂಕಪ್ಪನವರು ಸೊರಬದ ಮರಿಯಪ್ಪರನ್ನು ಸೋಲಿಸಿ ಶಾಸಕರಾಗುತ್ತಾರೆ.
  ಸಾಗರ ವಿಧಾನ ಸಭಾ ಕ್ಷೇತ್ರದಲ್ಲಿ ಕಾಂಗ್ರೇಸ್ ನ ಮೂಕಪ್ಪರ ಪರ ಮತ್ತು ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಸಮಾಜವಾದಿ ಪಾಟಿ೯ ಶಾಂತವೇರಿ ಗೋಪಾಲಗೌಡರ ಪರ ಗಣಪತಿಯಪ್ಪ ಪ್ರಚಾರ ನಡೆಸುತ್ತಾರೆ, ಅವರಿಗೆ ತಮ್ಮ ರೈತ ಹೋರಾಟ ಕಾಗೋಡು ಹೋರಾಟದ ಸಹವರ್ತಿಗಳನ್ನು ಪಕ್ಷ ಮೀರಿ ಬೆಂಬಲಿಸುವ ಅನಿವಾಯ೯ ಉಂಟಾಗುತ್ತದೆ.
  ನಂತರದ ಚುನಾವಣೆಯಲ್ಲಿ ಬದರಿನಾರಾಯಣ ಆಯ್ಯಂಗಾರರನ್ನು ಶಿವಮೊಗ್ಗ ಕ್ಷೇತ್ರದಿಂದಲೇ ಸ್ಪರ್ದಿಸುವಂತೆ ಶಿವಮೊಗ್ಗದ ಸ್ವಾತಂತ್ರ ಹೋರಾಟಗಾರರು ಮತ್ತು ಕಾಂಗ್ರೇಸ್ ನ ಪಕ್ಷದ ಮುಖಂಡರು ಒತ್ತಾಯಿಸುತ್ತಾರೆ, ವಕೀಲರಾಗಿ, ಡಿವಿಸ್ ಶಿಕ್ಷಣ ಸಂಸ್ಥೆ, ಬ್ರಾಹ್ಮಣ ವಿದ್ಯಾರ್ಥಿ ನಿಲಯ, ಶಿವಮೊಗ್ಗದ ಗಾಂಧಿ ಮಂದಿರ ಹೀಗೆ ಅನೇಕ ಜನಪರ ಕೆಲಸದಲ್ಲಿ ಭಾಗವಹಿಸಿ ಬದರಿನಾರಾಯಣ ಅಯ್ಯಂಗಾರರು ಶಿವಮೊಗ್ಗದಲ್ಲಿ ಪ್ರಸಿದ್ದಿ ಪಡೆದಿರುವುದು ಒಂದು ಕಾರಣ. 
  ಆ ಕಾಲದಲ್ಲಿ ಹಿರಿಯ ಮುಖಂಡ ಕುರುಬ ಸಮಾಜದ ಮುಖಂಡರಾದ ಎಸ್.ಆರ್.ತಿಮ್ಮಯ್ಯ (ಈಗಿನ ಕಾಂಗ್ರೇಸ್ ಮುಖಂಡರಾದ ಶೇಷಾದ್ರಿ ತಂದೆ ಮತ್ತು ಕೆಂಚಪ್ಪ (ಈಗಿನ ನಗರ ಸಭಾ ಮುಖಂಡರಾದ ಮರಿಯಪ್ಪರ ತ೦ದೆ) ಬದರಿನಾರಾಯಣರ ರಾಜಕಾರಣದ ಕೊನೆಯವರೆಗೂ ಅವರ ಕಟ್ಟಾ ಬೆಂಬಲಿಗರಾಗುತ್ತಾರೆ, ಶೀನಪ್ಪ ಶೆಟ್ಟರು ಮತ್ತು ನಾಗಪ್ಪ ಶೆಟ್ಟರೂ ಬೆಂಬಲಿಸುತ್ತಾರೆ.
  ಸತತವಾಗಿ ಶಾಸಕರಾದರೂ, ಶಿವಮೊಗ್ಗ ಜಿಲ್ಲೆಯ ಕಾಂಗ್ರೇಸ್ ಪಕ್ಷದ ಸಂಘಟನೆಯಲ್ಲಿ ಪ್ರಮುಖರಾದ ಬದರಿನಾರಾಯಣ ಅಯ್ಯಂಗಾರರನ್ನು ಮಂತ್ರಿ ಮಾಡಲು ಆಗಿನ ಮುಖ್ಯಮಂತ್ರಿ ನಿಜಲಿಂಗಪ್ಪನವರು ಮುಂದಾಗಲಿಲ್ಲ ಇದರಿಂದ ಬದರಿನಾರಾಯಣ ಅಯ್ಯಂಗಾರರು ಅವರ ವಿರೋದಿ ಗುಂಪಾದ ದೇವರಾಜ ಅರಸು, ಕೊಲ್ಲೂರು ಮಲ್ಲಪ್ಪ, ಸಿದ್ಧ ವೀರಪ್ಪ, ಆರ್.ಎ೦. ಪಟೇಲರ ಜೊತೆ ಸೇರುತ್ತಾರೆ ಇವರ ಅನೇಕ ಗುಪ್ತವಾದ ಬಿನ್ನಮತಿಯ ಕಾಂಗ್ರೇಸ್ ಸಭೆಗಳು ಆನಂದಪುರಂ ಸಮೀಪದ ಅಯ್ಯಂಗಾರರ ಹೊಸಕೊಪ್ಪದ ತೋಟದ ಮನೆ ಸಾಕ್ಷಿ ಆಗುತ್ತದೆ.
  ಈ ತೋಟ ಈಗ ಬೆಂಗಳೂರಿನ ಪ್ರಸಿದ್ದ ಮದುರಾ ಗಾರ್ಮೆಂಟ್ ನ ನಾರಾಯಣ ಭಟ್ ಆಯ್ಯಂಗಾರರಿಂದ  ಖರೀದಿಸಿದ್ದಾರೆ ಅಲ್ಲಿ ಸಾವಯುವ ಕೃಷಿ ಮತ್ತು ಸಾವಯುವ ಡೈರಿ ನಡೆಸುತ್ತಿದ್ದಾರೆ ಅಲ್ಲಿ ಈಗ ಮಾಲಕಿ ಶ್ರೀಮತಿ ಮದುರಾ ಭಟ್ಟರು ವಿಶ್ರಾಂತ ಜೀವನ ನಡೆಸಿದ್ದಾರೆ.
  ವೀರೆಂದ್ರ ಪಾಟೀಲರು ಮುಖ್ಯಮಂತ್ರಿ ಆದರೂ ಬದರಿನಾರಾಯಣರಿಗೆ ದೂರ ಇಡುತ್ತಾರೆ ಆದರೆ ದೇವರಾಜು ಅರಸು ಅವರು ಮುಖ್ಯಮಂತ್ರಿ ಆದ ಮೇಲೆ ಬದರಿನಾರಾಯಣ ಅಯ್ಯಂಗಾರರು ವಿದ್ಯಾಮಂತ್ರಿಗಳಾಗುತ್ತಾರೆ.

Comments

Popular posts from this blog

Blog number 1782. ಅರಳಸುರಳಿಯ ರಾಘವೇಂದ್ರ ಕೇಕೋಡರ ಕುಟುಂಬದ ತಪ್ಪು ನಿರ್ದಾರದ ದುರಂತ.

#ತೀರ್ಥಹಳ್ಳಿಯ_ಅರಳಸುರಳಿಯ_ಒಂದೇ_ಕುಟುಂಬದ_ನಾಲ್ವರು_ಮೃತರಾದ_ರಹಸ್ಯವೇನು? #ಈ_ಬಗ್ಗೆ_ಆ_ಊರಿನ_ಸಮೀಪದ_ಈ_ಕುಟುಂಬದ_ಪರಿಚಯ_ಇರುವವರಿಗೆ_ವಿಚಾರಿಸಿದ್ದೆ. #ಅವರು_ಈ_ಘಟನೆ_ಬಗ್ಗೆ_ಸವಿಸ್ತಾರವಾಗಿ_ಲಿಖಿತ_ಲೇಖನ_ಬರೆದಿದ್ದಾರೆ. #ಅವರ_ವಿನಂತಿ_ಅವರ_ಹೆಸರು_ಬಹಿರಂಗಗೊಳಿಸ_ಬಾರದು. #ಆದ್ದರಿಂದ_ಈ_ಲೇಖನ_ಪೋಸ್ಟ್_ಮಾಡಬಾರದೆಂದಿದ್ದೆ_ಆದರೆ_ಇದು_ಮಲೆನಾಡಿಗರ_ಮನೆ_ಮನೆಯ_ಕಥೆ #ಆದ್ದರಿಂದ_ಇಲ್ಲಿ_ಪೋಸ್ಟ್_ಮಾಡಿದೆ.    ಇಲ್ಲಿ ತಪ್ಪು ಯಾರದ್ದೂ ಇಲ್ಲ... ಪಶ್ಚಾತ್ತಾಪದ ಪ್ರಾಯಶ್ಚಿತ ಕೇಳಲು ಅವರಾರು ಇಲ್ಲ .....ಆದರೆ ಈ ರೀತಿ ಜೀವ ತ್ಯಾಗ ಮಾಡುವ ಆತುರದ ಕೆಟ್ಟ ನಿರ್ದಾರ ಮಾತ್ರ ಸರಿ ಅಲ್ಲ.     ಇವರ ಅಣ್ಣ ಆರ್.ಎಸ್.ಎಸ್. ಪ್ರಚಾರಕರಾಗಿ ದೆಹಲಿಯಲ್ಲಿ ಏಳು ವಷ೯ ಮೋದಿ ಜೊತೆ ಒಂದೇ ಕೋಣೆ ಹಂಚಿಕೊಂಡವರು, ಇನ್ನೊಬ್ಬ ಸಹೋದರ ಮೂಳೆ ತಜ್ಞರಾಗಿ ಶಿವಮೊಗ್ಗದಲ್ಲಿ ಆಸ್ಪತ್ರೆ ಮಾಡಿಕೊಂಡಿದ್ದಾರೆ.   #ದೀರ್ಘವಾದರೂ_ಪೂರ್ಣ_ಲೇಖನ_ಓದಿ   #ಹೀಗೊಂದು_ಸುಕುಟುಂಬ_ಆತ್ಮಾಘಾತ_ಮತ್ತು_ತದನಂತರದ_ಸಹಾಗಮನ.... ಮೂಡಣದಲ್ಲಿ ರವಿ ಮೂಡಲು ಅಣಿ ಯಾಗುತ್ತಿಧ್ದ .. ಹಾದಿಗಣಪತಿ ದೇವರು ಗರ್ಭಗುಡಿಯ ನಂದಾದೀಪದ ಮಂದ ಬೆಳಕಿನಲ್ಲಿ ತನ್ನ ಗುಡಿಯ ಎದುರಿನ ತಗ್ಗಿನಲ್ಲಿದ್ದ  ರಾಘವೇಂದ್ರ ಕೇಕೋಡರ ಮನೆಯನ್ನು ಎವೆಯಕ್ಕದೇ ನೋಡುತ್ತಲಿದ್ದ... ಊರ ಎಲ್ಲಾ ಮನೆಯಂತೆ ಆ ಮನೆಯಲ್ಲೂ ಆ ಬೆಳಗಿನಲ್ಲಿ ಮನೆಯೊಡತಿ ನಾಗರತ್ನಕ್ಕ ಆ ಸಮಯದಲ್ಲಿ ದೇವರಿಗೆ ದೀಪ ಹಚ್ಚಿ ಹೊಸ್ತಿಲು ಪೂಜೆ ಮಾಡ

Blog number 1037. ರಾಜಕುಮಾರಿ ಶಾಂತವ್ವ ಮತ್ತು ದಲಿತ ಯುವಕ ಸಿದ್ದೇಶ್ವರರ ಅಮರ ಪ್ರೇಮದ ಸ್ಮಾರಕ, ಅನ್ಯ ಜಾತಿ ವಿವಾಹವಾದ್ದರಿಂದ ರಾಜಕುಮಾರಿಗೆ ಸೂಳೆ ಪಟ್ಟ ನೀಡಿದ ಸಮಾಜ. ಸಮಾಜದ ಒಳಿತಿಗಾಗಿ ಶಾಂತವ್ವ ಕಟ್ಟಿಸಿದ ಬೃಹತ್ ಕೆರೆಗೆ ಜನ ಕರೆದದ್ದು ಸೂಳೆ ಕಟ್ಟಿಸಿದ ಕೆರೆ ಅದೇ ಸೂಳೆಕೆರೆ / ಶಾಂತಿ ಸಾಗರ

# ಸೂಳೆಕೆರೆ (ಶಾಂತಿ ಸಾಗರ) ಅಂತರ್ ಜಾತಿ ಪ್ರೇಮ ವಿವಾಹದ ದುರOತ ಕಥೆ. #ಅಕ್ಟೋಬರ್ 2019 ರಲ್ಲಿ ತುಂಬಿ ತುಳುಕಿತ್ತು.  ಚಿತ್ರದುಗ೯, ದಾವಣಗೆರೆ ಬಳ್ಳಾರಿ ಮುಂತಾದ ಮಳೆ ಕಡಿಮೆ ಆಗುತ್ತಿದ್ದ ಜಿಲ್ಲೆಗಳಲ್ಲಿ ಅದೂ ಅಕ್ಟೋಬರ್ ತಿಂಗಳ 2019 ರಲ್ಲಿ  ಬಂದಿದ್ದ ಬಾರಿ ಮಳೆ ಎಲ್ಲಾ ಕೆರೆ, ಹೊಂಡಗಳು ತುಂಬಿ ತುಳುಕಿದೆ, ಸಾಮಾಜಿಕ ಜಾಲ ತಾಣದಲ್ಲಿ 40 ವಷ೯ದಲ್ಲಿ ಇಂತ ಮಳೆ ಬಂದಿಲ್ಲ ಅಂತ ಸುದ್ದಿ ಹರಿದಾಡುತ್ತಿತ್ತು ಮತ್ತು  ಸೂಳೆಕೆರೆ ತುಂಬಿ ಕೋಡಿ ಬಿದ್ದಿದೆ ಅಂತೆಲ್ಲ Post ನೋಡಿ ಬೆಂಗಳೂರಿಂದ ಬರುವಾಗ ಚಿತ್ರದುಗ೯ ಮಾಗ೯ವಾಗಿ ಚನ್ನಗಿರಿ ತಲುಪಿ ಸೂಳೆಕೆರೆ ನೋಡಲು ಹೋಗಿದ್ದೆ.  11ನೇ ಶತಮಾನದಲ್ಲಿ (1128ರಲ್ಲಿ)ಕೇವಲ 3 ವಷ೯ದಲ್ಲಿ ಈ ಕೆರೆ ನಿಮಾ೯ಣ ಮಾಡಿಸಿದ್ದು ಶಾಂತವ್ವ ಎಂಬ ರಾಜ ಕುಮಾರಿ ಅವಳು ಸ್ವಣ೯ವತಿ ಪಟ್ಟಣದ ದೊರೆ ವಿಕ್ರಮ ರಾಜನ ಮಗಳು, ಸಿದ್ದೇಶ್ವರ ಎಂಬ ಅನ್ಯ ಜಾತಿಯ ಯುವಕನೊ೦ದಿಗೆ ಗಾಂದವ೯ ವಿವಾಹ ಆಗುತ್ತಾಳೆ ಇದನ್ನ ಸಹಿಸದ ಮತ್ತು ಒಪ್ಪದ ಜನತೆ ಸೂಳೆ ಎಂದು ಮೂದಲಿಸುತ್ತಾರOತೆ ಈ ರೀತಿ ತನಗೆ ಬಂದ ಕಳಂಕ ಕಳೆಯಲು ಈ ಬೃಹತ್ ಕೆರೆ ತನ್ನ ಪತಿ ಸಿದ್ದೇಶ್ವರನ ಜೊತೆ ಸೇರಿ ನಿಮಿ೯ಸಿ ಕೆರೆಗೆ ಹಾರವಾದಳೆoಬ ಇತಿಹಾಸ ಇದೆ ಇದರಿಂದ ನೊಂದ ಪತಿ ಸಿದ್ಧೇಶ್ವರ ಕೂಡ ಎದುರಿನ ಗುಡ್ಡದಲ್ಲಿ ಜೀವ ತ್ಯಾಗ ಮಾಡುತ್ತಾನೆ ಈಗ ಅಲ್ಲಿ ಸಿದ್ದೇಶ್ವರ ದೇವಸ್ಥಾನವಿದೆ.   ಈ ಕೆರೆ ಈಗಲೂ ಸೂಳೆಕೆರೆ ಎಂದೆ ಹೆಸರಾಗಿದೆ ಈ

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್ಪಿಸಿಕೊಳ್ಳಬೇಕು ಅಂತ ಬಿದನೂರು ನಗರ ಸಮೀಪದ ದೇವಗಂಗೆ ಎಂಬ ಕೆಳದಿ