Skip to main content

ಭಾಗ_21, ಇಬ್ಬರು ಮುಖ್ಯಮಂತ್ರಿಗಳಾದ ಗುಂಡೂರಾವ್ ಮತ್ತು ರಾಮಕೃಷ್ಣ ಹೆಗ್ಗಡೆಯವರ ಆಪ್ತ ಮತ್ತು ವಿಶೇಷಾದಿಕಾರಿ ಆಗಿದ್ದ ತಾಳಗುಪ್ಪ ಕೆ.ರಾಮಪ್ಪ ವಿದ್ಯಾ ಮಂತ್ರಿ ಬದರಿನಾರಾಯಣ ಅಯ್ಯಂಗಾರ್ ಓದಿದ ಆನಂದಪುರಂ ಪ್ರಾಥಮಿಕ ಶಾಲೆಯಲ್ಲೇ ಓದಿದವರು.

#ಭಾಗ_21.

#ತಾಳಗುಪ್ಪ_ರಾಮಪ್ಪ

#ಆನಂದಪುರಂನಲ್ಲಿ_ಪ್ರಾಥಮಿಕ_ಮತ್ತು_ಮಾಧ್ಯಮಿಕ_ಶಿಕ್ಷಣ.

#ಮುಖ್ಯಮಂತ್ರಿ_ಗುಂಡೂರಾವ್_ಮತ್ತು_ರಾಮಕೃಷ್ಣಹೆಗಡೆಗೆ_ಆಪ್ತ_ಮತ್ತು_ವಿಶೇಷ_ಕರ್ತವ್ಯಾದಿಕಾರಿ.

  ಬದರಿನಾರಾರಾಯಣ್ ಆಯ್ಯಂಗಾರರ ತಂದೆ ರಾಮಕೃಷ್ಣ ಅಯ್ಯಂಗಾರರಿಗೆ ಆಪ್ತರಾಗಿದ್ದ ಆನಂದಪುರಂ ಆರ್ಟಿಸನ್ ಟ್ರೈನಿಂಗ್ ಸೆಂಟರ್ ನಲ್ಲಿ (ATI ಆಗ ಚಾಪೆ ತರಬೇತಿ) ತರಬೇತುದಾರರಾಗಿದ್ದ ಪುಟ್ಟಪ್ಪ ತಾಳಗುಪ್ಪ ಮೂಲದವರು.
  ಆಗ ಈ ತರಬೇತಿ ಕೇಂದ್ರ ಬೆಲ್ಲದ ಶೇಷಪ್ಪನವರ ಕಟ್ಟಡದಲ್ಲಿ ಇತ್ತು (ನಂತರ ಯಾಹ್ಯಾ ಸಾಹೇಬರು ಈ ಜಾಗ ಖರೀದಿಸಿ ದಿನಸಿ ಅಂಗಡಿ ಮಾಡುತ್ತಾರೆ) ತರಬೇತಿದಾರರಾದ ಪುಟ್ಟಪ್ಪ ಮತ್ತು ಚೌಡಮ್ಮ ದಂಪತಿಗಳಿಗೆ ಹಾಲಪ್ಪ, ಗಣಪತಿ, ರಾಮಪ್ಪ ಮತ್ತು ಮಂಜಪ್ಪ ಎಂಬ ನಾಲ್ಕು ಪುತ್ರರು.
   ದೊಡ್ಡ ಮಗ ಹಾಲಪ್ಪ ಶಿಕ್ಷಕರು, ಗಣಪತಿ ಜೋಗದಲ್ಲಿ ದಿನಸಿ ವ್ಯಾಪಾರ, ರಾಮಪ್ಪನವರು ವಿಧಾನ ಸೌದದ ಸಚಿವಾಲಯದಲ್ಲಿ ಮತ್ತು ಮಂಜಪ್ಪ ಆರೋಗ್ಯ ಇಲಾಖೆಯಲ್ಲಿ ಸೇವೆ ಸಲ್ಲಿಸಿದ್ದಾರೆ.
  ಕೆ.ರಾಮಪ್ಪರ ಮನೆತನದ ಹೆಸರು ಕರಡಿ ಮನೆತನ, ಇವರು ತಂದೆ ಆನಂದಪುರಂನಲ್ಲಿ ಉದ್ಯೋಗದಲ್ಲಿ ಇದ್ದಿದ್ದರಿಂದ ರಾಮಪ್ಪನವರ ಪ್ರಾಥಮಿಕ ಶಿಕ್ಷಣ ಮತ್ತು ಮಾಧ್ಯಮಿಕ ಶಿಕ್ಷಣ ಆನಂದಪುರಂ ನಲ್ಲೇ ನಡೆಯುತ್ತದೆ, ರಂಗನಾಥ ಭಟ್ಟರು ಇವರ ಶಾಲಾ ಸಹಪಾಠಿಗಳು.
  ಇವರು ವ್ಯಾಸಂಗ ಮಾಡಿದ ಶಾಲೆ ವಿದ್ಯಾ ಮಂತ್ರಿ ಬದರಿನಾರಾಯಣ್ ಆಯ್ಯಂಗಾರರು ಪ್ರಾಥಮಿಕ ಶಿಕ್ಷಣ ಪಡೆದ ಆನಂದಪುರಂನ ಪ್ರಾಥಮಿಕ ಶಾಲೆಯೇ.
  ನಂತರ ಇಲಾಖೆಯಲ್ಲಿ 34 ವರ್ಷ ಸೇವೆ ಸಲ್ಲಿಸುತ್ತಾರೆ ಇವರ 34 ವರ್ಷದ ಸೇವಾ ದಾಖಲೆಯಲ್ಲಿ ಇವರು ಪಡೆದ ರಜೆ ಕೇವಲ 22 ದಿನ ಮಾತ್ರ ಇದರಲ್ಲಿ 25 ವರ್ಷ ವಿದಾನ ಸೌದದ ಸಚಿವಾಲಯದಲ್ಲಿ ಇದರಲ್ಲಿ ರಾಜ್ಯದ ಇಬ್ಬರು ಮುಖ್ಯಮಂತ್ರಿಗಳಾದ ಗುಂಡೂರಾವ್ ಮತ್ತು ರಾಮಕೃಷ್ಣ ಹೆಗ್ಗಡೆಯವರ ಜೊತೆ ಎಂಟೂವರೆ ವರ್ಷ ದೀರ್ಘ ಕಾಲ ಆಪ್ತ ಮತ್ತು ವಿಶೇಷ ಅಧಿಕಾರಿ ( Asst cam Special officer) ಆಗಿ ಸೇವೆ ಸಲ್ಲಿಸಿದ್ದು ಸರ್ವಕಾಲಿಕ ದಾಖಲೆ.
  1972-73ರಲ್ಲಿ ನಿಜಲಿಂಗಪ್ಪರ ಸರ್ಕಾರದಲ್ಲಿ ರಾಮಕೃಷ್ಣ ಹೆಗ್ಗಡೆಯವರು ಆರ್ಥಿಕ ಸಚಿವರಾದಾಗ ಅವರ ಜೊತೆ ಕಾರ್ಯನಿರ್ವಹಿಸುತ್ತಾರೆ, 1980-83 ರಲ್ಲಿ ಮುಖ್ಯಮಂತ್ರಿ ಗುಂಡೂರಾಯರ ಜೊತೆ, 1983ರಿಂದ ಮುಖ್ಯಮಂತ್ರಿ ರಾಮಕೃಷ್ಣ ಹೆಗ್ಗಡೆಯವರ ಜೊತೆ ಕಾಯ೯ನಿರ್ವಹಿಸುತ್ತಾರೆ ಇವರ ಸೇವೆ ಬಗ್ಗೆ ರಾಮಕೃಷ್ಣ ಹೆಗ್ಗಡೆಯವರು ಬರೆದ ಗೌಪ್ಯ ಸೇವಾ ವರದಿ ಇವರ ಕಾರ್ಯದ ಕನ್ನಡಿ.
 1990 ರಲ್ಲಿ ರಾಮಕೃಷ್ಣ ಹೆಗ್ಗಡೆಯವರು ಯೋಜನಾ ಆಯೋಗದ ಉಪಾಧ್ಯಾಕ್ಷರಾದಾಗಲೂ ದೆಹಲಿಯಲ್ಲಿ ಅವರ ಜೊತೆ ಕಾರ್ಯನಿರ್ವಹಿಸುತ್ತಾರೆ.
  8-4-1934 ರಲ್ಲಿ ಜನಿಸುತ್ತಾರೆ, ಇವರ ಪತ್ನಿ ಕುಂಸಿ ಮೂಲದವರು ಇವರಿಗೆ ನಾಗೇಶ್, ಚಂದ್ರಿಕಾ, ರೇಣುಕಾ ಮತ್ತು ಮಂಜುನಾಥ ಎಂಬ ಮಕ್ಕಳು.
  ತಮ್ಮ ಪ್ರಾಥಮಿಕ ಶಿಕ್ಷಣದ ಸಮಯದಲ್ಲಿ ಆನಂದಪುರಂನ ರಂಗನಾಥ ಸ್ವಾಮಿ ಭಕ್ತರಾದ ರಾಮಪ್ಪನವರು ತಾಳಗುಪ್ಪದ ಗುಡ್ಡದ ರಂಗನಾಥನ ಭಕ್ತರೂ ಹೌದು ಹಾಗಾಗಿಯೆ ತಾಳಗುಪ್ಪದಲ್ಲಿ ತಮ್ಮ ಮಾತಾ ಪಿತೃಗಳ ಸ್ಮರಣಾಥ೯ "ಶ್ರೀರಂಗನಾಥ ಸ್ವಾಮಿ" ಕಲ್ಯಾಣ ಮಂಟಪ ಮತ್ತು ವೀರಭದ್ರ ಮತ್ತು ದೇವಿ ದೇವಸ್ಥಾನ ನಿರ್ಮಿಸಿ ಕೊಟ್ಟಿದ್ದಾರೆ.
  ಈ ದಂಪತಿಗಳ ಮೇಲೆ ಮಹದೇವ ಬಣಕಾರ್ ಎಂಬುವವರು ಬರೆದ ಪರಿಚಯದ ಕಿರು ಹೊತ್ತಿಗೆ "ರಾಮ -ಕ ಮಲ" ಇವರ ಬಗ್ಗೆ ಸಂಕ್ಷಿಪ್ತ ಮಾಹಿತಿ ನೀಡುತ್ತದೆ.
  ಈ ಕಿರು ಹೊತ್ತಿಗೆ,ರಾಮಪ್ಪ ದಂಪತಿಗಳ ಮತ್ತು ಕಲ್ಯಾಣ ಮಂಟಪದ ಪೋಟೊ ಮಾಹಿತಿಯನ್ನು ಸಕಾಲದಲಿ ದೊರಕಿಸಿ ಕೊಟ್ಟ ಪತ್ರಕರ್ತ ಮತ್ತು ಹೋರಾಟಗಾರ ತಾಳಗುಪ್ಪ ಓಂಕಾರ್ ಒದಗಿಸಿ ಕೊಟ್ಟು ಈ ಸರಣಿ ಲೇಖನ ಸಚಿತ್ರ ಮಾಡಲು ಕಾರಣರಾಗಿದ್ದಾರೆ ಅವರಿಗೆ ವಿಶೇಷ ಕೃತಜ್ಞತೆಗಳನ್ನು ಈ ಸಂದರ್ಭದಲ್ಲಿ ಹೇಳಲೇ ಬೇಕು.

Comments

Popular posts from this blog

Blog number 1782. ಅರಳಸುರಳಿಯ ರಾಘವೇಂದ್ರ ಕೇಕೋಡರ ಕುಟುಂಬದ ತಪ್ಪು ನಿರ್ದಾರದ ದುರಂತ.

#ತೀರ್ಥಹಳ್ಳಿಯ_ಅರಳಸುರಳಿಯ_ಒಂದೇ_ಕುಟುಂಬದ_ನಾಲ್ವರು_ಮೃತರಾದ_ರಹಸ್ಯವೇನು? #ಈ_ಬಗ್ಗೆ_ಆ_ಊರಿನ_ಸಮೀಪದ_ಈ_ಕುಟುಂಬದ_ಪರಿಚಯ_ಇರುವವರಿಗೆ_ವಿಚಾರಿಸಿದ್ದೆ. #ಅವರು_ಈ_ಘಟನೆ_ಬಗ್ಗೆ_ಸವಿಸ್ತಾರವಾಗಿ_ಲಿಖಿತ_ಲೇಖನ_ಬರೆದಿದ್ದಾರೆ. #ಅವರ_ವಿನಂತಿ_ಅವರ_ಹೆಸರು_ಬಹಿರಂಗಗೊಳಿಸ_ಬಾರದು. #ಆದ್ದರಿಂದ_ಈ_ಲೇಖನ_ಪೋಸ್ಟ್_ಮಾಡಬಾರದೆಂದಿದ್ದೆ_ಆದರೆ_ಇದು_ಮಲೆನಾಡಿಗರ_ಮನೆ_ಮನೆಯ_ಕಥೆ #ಆದ್ದರಿಂದ_ಇಲ್ಲಿ_ಪೋಸ್ಟ್_ಮಾಡಿದೆ.    ಇಲ್ಲಿ ತಪ್ಪು ಯಾರದ್ದೂ ಇಲ್ಲ... ಪಶ್ಚಾತ್ತಾಪದ ಪ್ರಾಯಶ್ಚಿತ ಕೇಳಲು ಅವರಾರು ಇಲ್ಲ .....ಆದರೆ ಈ ರೀತಿ ಜೀವ ತ್ಯಾಗ ಮಾಡುವ ಆತುರದ ಕೆಟ್ಟ ನಿರ್ದಾರ ಮಾತ್ರ ಸರಿ ಅಲ್ಲ.     ಇವರ ಅಣ್ಣ ಆರ್.ಎಸ್.ಎಸ್. ಪ್ರಚಾರಕರಾಗಿ ದೆಹಲಿಯಲ್ಲಿ ಏಳು ವಷ೯ ಮೋದಿ ಜೊತೆ ಒಂದೇ ಕೋಣೆ ಹಂಚಿಕೊಂಡವರು, ಇನ್ನೊಬ್ಬ ಸಹೋದರ ಮೂಳೆ ತಜ್ಞರಾಗಿ ಶಿವಮೊಗ್ಗದಲ್ಲಿ ಆಸ್ಪತ್ರೆ ಮಾಡಿಕೊಂಡಿದ್ದಾರೆ.   #ದೀರ್ಘವಾದರೂ_ಪೂರ್ಣ_ಲೇಖನ_ಓದಿ   #ಹೀಗೊಂದು_ಸುಕುಟುಂಬ_ಆತ್ಮಾಘಾತ_ಮತ್ತು_ತದನಂತರದ_ಸಹಾಗಮನ.... ಮೂಡಣದಲ್ಲಿ ರವಿ ಮೂಡಲು ಅಣಿ ಯಾಗುತ್ತಿಧ್ದ .. ಹಾದಿಗಣಪತಿ ದೇವರು ಗರ್ಭಗುಡಿಯ ನಂದಾದೀಪದ ಮಂದ ಬೆಳಕಿನಲ್ಲಿ ತನ್ನ ಗುಡಿಯ ಎದುರಿನ ತಗ್ಗಿನಲ್ಲಿದ್ದ  ರಾಘವೇಂದ್ರ ಕೇಕೋಡರ ಮನೆಯನ್ನು ಎವೆಯಕ್ಕದೇ ನೋಡುತ್ತಲಿದ್ದ... ಊರ ಎಲ್ಲಾ ಮನೆಯಂತೆ ಆ ಮನೆಯಲ್ಲೂ ಆ ಬೆಳಗಿನಲ್ಲಿ ಮನೆಯೊಡತಿ ನಾಗರತ್ನಕ್ಕ ಆ ಸಮಯದಲ್ಲಿ ದೇವರಿಗೆ ದೀಪ ಹಚ್ಚಿ ಹೊಸ್ತಿಲು ಪೂಜೆ ಮಾಡ

Blog number 1037. ರಾಜಕುಮಾರಿ ಶಾಂತವ್ವ ಮತ್ತು ದಲಿತ ಯುವಕ ಸಿದ್ದೇಶ್ವರರ ಅಮರ ಪ್ರೇಮದ ಸ್ಮಾರಕ, ಅನ್ಯ ಜಾತಿ ವಿವಾಹವಾದ್ದರಿಂದ ರಾಜಕುಮಾರಿಗೆ ಸೂಳೆ ಪಟ್ಟ ನೀಡಿದ ಸಮಾಜ. ಸಮಾಜದ ಒಳಿತಿಗಾಗಿ ಶಾಂತವ್ವ ಕಟ್ಟಿಸಿದ ಬೃಹತ್ ಕೆರೆಗೆ ಜನ ಕರೆದದ್ದು ಸೂಳೆ ಕಟ್ಟಿಸಿದ ಕೆರೆ ಅದೇ ಸೂಳೆಕೆರೆ / ಶಾಂತಿ ಸಾಗರ

# ಸೂಳೆಕೆರೆ (ಶಾಂತಿ ಸಾಗರ) ಅಂತರ್ ಜಾತಿ ಪ್ರೇಮ ವಿವಾಹದ ದುರOತ ಕಥೆ. #ಅಕ್ಟೋಬರ್ 2019 ರಲ್ಲಿ ತುಂಬಿ ತುಳುಕಿತ್ತು.  ಚಿತ್ರದುಗ೯, ದಾವಣಗೆರೆ ಬಳ್ಳಾರಿ ಮುಂತಾದ ಮಳೆ ಕಡಿಮೆ ಆಗುತ್ತಿದ್ದ ಜಿಲ್ಲೆಗಳಲ್ಲಿ ಅದೂ ಅಕ್ಟೋಬರ್ ತಿಂಗಳ 2019 ರಲ್ಲಿ  ಬಂದಿದ್ದ ಬಾರಿ ಮಳೆ ಎಲ್ಲಾ ಕೆರೆ, ಹೊಂಡಗಳು ತುಂಬಿ ತುಳುಕಿದೆ, ಸಾಮಾಜಿಕ ಜಾಲ ತಾಣದಲ್ಲಿ 40 ವಷ೯ದಲ್ಲಿ ಇಂತ ಮಳೆ ಬಂದಿಲ್ಲ ಅಂತ ಸುದ್ದಿ ಹರಿದಾಡುತ್ತಿತ್ತು ಮತ್ತು  ಸೂಳೆಕೆರೆ ತುಂಬಿ ಕೋಡಿ ಬಿದ್ದಿದೆ ಅಂತೆಲ್ಲ Post ನೋಡಿ ಬೆಂಗಳೂರಿಂದ ಬರುವಾಗ ಚಿತ್ರದುಗ೯ ಮಾಗ೯ವಾಗಿ ಚನ್ನಗಿರಿ ತಲುಪಿ ಸೂಳೆಕೆರೆ ನೋಡಲು ಹೋಗಿದ್ದೆ.  11ನೇ ಶತಮಾನದಲ್ಲಿ (1128ರಲ್ಲಿ)ಕೇವಲ 3 ವಷ೯ದಲ್ಲಿ ಈ ಕೆರೆ ನಿಮಾ೯ಣ ಮಾಡಿಸಿದ್ದು ಶಾಂತವ್ವ ಎಂಬ ರಾಜ ಕುಮಾರಿ ಅವಳು ಸ್ವಣ೯ವತಿ ಪಟ್ಟಣದ ದೊರೆ ವಿಕ್ರಮ ರಾಜನ ಮಗಳು, ಸಿದ್ದೇಶ್ವರ ಎಂಬ ಅನ್ಯ ಜಾತಿಯ ಯುವಕನೊ೦ದಿಗೆ ಗಾಂದವ೯ ವಿವಾಹ ಆಗುತ್ತಾಳೆ ಇದನ್ನ ಸಹಿಸದ ಮತ್ತು ಒಪ್ಪದ ಜನತೆ ಸೂಳೆ ಎಂದು ಮೂದಲಿಸುತ್ತಾರOತೆ ಈ ರೀತಿ ತನಗೆ ಬಂದ ಕಳಂಕ ಕಳೆಯಲು ಈ ಬೃಹತ್ ಕೆರೆ ತನ್ನ ಪತಿ ಸಿದ್ದೇಶ್ವರನ ಜೊತೆ ಸೇರಿ ನಿಮಿ೯ಸಿ ಕೆರೆಗೆ ಹಾರವಾದಳೆoಬ ಇತಿಹಾಸ ಇದೆ ಇದರಿಂದ ನೊಂದ ಪತಿ ಸಿದ್ಧೇಶ್ವರ ಕೂಡ ಎದುರಿನ ಗುಡ್ಡದಲ್ಲಿ ಜೀವ ತ್ಯಾಗ ಮಾಡುತ್ತಾನೆ ಈಗ ಅಲ್ಲಿ ಸಿದ್ದೇಶ್ವರ ದೇವಸ್ಥಾನವಿದೆ.   ಈ ಕೆರೆ ಈಗಲೂ ಸೂಳೆಕೆರೆ ಎಂದೆ ಹೆಸರಾಗಿದೆ ಈ

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್ಪಿಸಿಕೊಳ್ಳಬೇಕು ಅಂತ ಬಿದನೂರು ನಗರ ಸಮೀಪದ ದೇವಗಂಗೆ ಎಂಬ ಕೆಳದಿ