Skip to main content

ಆಮ್ಲಜನಕ ಕೊರತೆಯಿಂದ 24 ಜನ ಕೊರಾನಾ ಪೀಡಿತರ ಮರಣ, ನೈತಿಕ ಹೊಣೆ ಹೊತ್ತು ಜಿಲ್ಲಾ ಮಂತ್ರಿ ರಾಜಿನಾಮೆ ನೀಡಿದರೆ ಅವರ ಪ್ರಾಮಾಣಿಕತೆ ಅವರನ್ನು ಮುಂದಿನ ಮುಖ್ಯಮಂತ್ರಿ ಸ್ಥಾನಕ್ಕೆ ಖಂಡಿತವಾಗಿ ಒಯ್ಯವುದು.

#ಚಾಮರಾಜನಗರ_ಜಿಲ್ಲಾ_ಉಸ್ತುವಾರಿ_ಶಿಕ್ಷಣ_ಸಚಿವ_ಸಜ್ಜನ_ರಾಜಕಾರಣಿ_ಸುರೇಶ್_ಕುಮಾರ್
#ರಾಜಿನಾಮೆ_ನೀಡಲಿ_ಎಂದು_ಅವರ_ಅಭಿಮಾನಿ_ಆಗಿ_ಒತ್ತಾಯ_ಮಾಡುತ್ತೇನೆ.
    
  ಇದು ಎರೆಡು ವರ್ಷದ ಹಿಂದಿನ ಪೋಸ್ಟ್ (4 - ಮೇ -2019) ಅವತ್ತು ಸುರೇಶ್ ಕುಮಾರ್ ಮಂತ್ರಿ ಆಗಿರಲಿಲ್ಲ ಈಗ ಹಾಲಿ ಶಿಕ್ಷಣ ಸಚಿವರು.
   ಅವರು ಜಿಲ್ಲಾ ಉಸ್ತುವಾರಿ ಆಗಿರುವ ಚಾಮನಗರದಲ್ಲಿನ ಜಿಲ್ಲಾ ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದ 24 ಜನ ಕೊರಾನ ಪೀಡಿತರು ಮೃತರಾಗಿದ್ದಾರೆ ಇದು ಸಜ್ಜನ ರಾಜಕಾರಣಿ ಸುರೇಶ್ ಕುಮಾರ್ ರಾಜಕೀಯ ಜೀವನದಲ್ಲಿ ಒಂದು ಕಪ್ಪು ಚುಕ್ಕೆ.
  ಈಗ ಸಕಾ೯ರ ಮತ್ತು ಪಕ್ಷದ ಕಾರಣದಿಂದ ಇವರಿಂದ ಕೊಡಿಸುತ್ತಿರುವ ಸಮಥ೯ನೆಗಳು ಇವರ ವ್ಯಕ್ತಿತ್ವಕ್ಕೆ ಮಸಿ ಬಳಿಯುತ್ತಿರುವುದು ಸುಳ್ಳಲ್ಲ
  ಆಮ್ಲಜನಕ ಇಲ್ಲದೆ ಸತ್ತವರು 3 ಜನ, ಉಳಿದ 21 ಜನ ಬೇರೆ ಕಾರಣದಿಂದ ಒಂದೇ ದಿನ ಅಂದರೆ ಆಸ್ಪತ್ರೆಯಲ್ಲಿ ಆಮ್ಲಜನಕ ಖಾಲಿ ಆದ ಸಂದಭ೯ದಲ್ಲೇ ಸತ್ತರು ಅನ್ನುವುದು ಯಾರಾದರು ನಂಬುವ ಸತ್ಯವೆ? ಇಂತಹ ಸುಳ್ಳನ್ನು ಸುರೇಶ್ ಕುಮಾರ್ ಬಾಯಲ್ಲಿ ಹೇಳಿಸುವ ಸಕಾ೯ರದ ಹುನ್ನಾರಕ್ಕೆ ಸುರೇಶ್ ಕುಮಾರ್ ಬಲಿಯಾಗುವುದಕ್ಕಿಂತ ತಮ್ಮ ಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಿದರೆ ಅವರ ವ್ಯಕ್ತಿತ್ವಕ್ಕೆ ಶೋಭೆ ಬರುತ್ತಿತ್ತು.

               👇2 ವಷ೯ದ ಹಿಂದಿನ ಪೋಸ್ಟ್
#ನನ್ನ_ಇವತ್ತಿನ_ವಿಶೇಷ_ಅತಿಥಿ_ಮಾಜಿ_ಕಾನೂನು_ಸಚಿವ_ಹಾಲಿ_ರಾಜಾಜಿ_ನಗರದ_ಶಾಸಕರಾದ_ಶ್ರೀಸುರೇಶ್_ಕುಮಾರ್#
  ಕನಾ೯ಟಕ ರಾಜ್ಯದಲ್ಲಿ ಸಜ್ಜನ ರಾಜಕಾರಣಿ ಅಂತ ಎಲ್ಲಾ ಪಕ್ಷದವರಿಂದ ಕರೆಸಿಕೊಳ್ಳುವ S. ಸುರೇಶ್ ಕುಮಾರ್ ಗೆ ರಾಜ್ಯದಾದ್ಯಂತ ಅಭಿಮಾನಿಗಳಿದ್ದಾರೆ.
  ನಾನು ಅವರ ಅಭಿಮಾನಿ, ಪೇಸ್ ಬುಕ್ ನಲ್ಲಿ ಅವರನ್ನ ಹಿಂಬಾಲಿಸುತ್ತೇನೆ, ಅವರ ಯಾವುದೇ ಹೇಳಿಕೆ ಇದ್ದರೂ ತಪ್ಪದೇ ಓದುತ್ತೇನೆ.
  ಸರಳ ಜೀವನ, ಆಹಾರ ಉಡುಪುಗಳ ಸುರೇಶ್ ಕುಮಾರ್ ಕೊಡಗಿನ ಹಿಂದಿನ ಚುನಾವಣೆಯಲ್ಲಿ ಸಣ್ಣ ಪಾರಂ ಹೌಸ್ ನ ಕೊಟ್ಟಿಗೆಯಲ್ಲಿ ವಾಸ್ತವ್ಯ ಹೂಡಿದ್ದರು ಅದರ ನಿತ್ಯ posting ನೋಡುತ್ತಿದ್ದೆ, ಇವತ್ತಿನ ರಾಜಕಾರಣಿಗಳು  ಕಾರು ಬಾರು, ವಿದೇಶ ಪ್ರಯಾಣ, ಪಂಚತಾರ ಸೇವೆ ಬಯಸುವಾಗ ಇವರು ಸರಳ ಮಾಗ೯ದಲ್ಲಿ ಜೀವನ ಮಾಡುವುದು ಇವತ್ತಿನ ಅಪರೂಪದಲ್ಲಿ ಅಪರೂಪ.
  ಇವರಿಗೆ ಡಾಕ್ಟರೇಟ್ ಕೊಡುವುದಾಗಿ ಯಾರೋ ಸಂಪಕಿ೯ಸಿದರು, ಬೇರೆಯವರಾದರೆ ಹಿಂದೆ ಮುಂದೆ ನೋಡದೆ ಹೆಸರಿನ ಮುಂದೆ ಡಾಕ್ಟರ್ ಅಂತ ಹಾಕಿ ಕೊಳ್ಳಲು ಓಡುತ್ತಿದ್ದರು ಆದರೆ ಇವರು ಅದನ್ನ ನಿರಾಕರಿಸಿದ್ದಲ್ಲದೆ ನಕಲಿ ಡಾಕ್ಟರೇಟ್ ನೀಡುವ ಆ ಸಂಸ್ಥೆಯ ಅಸಲಿಯತ್ತು ಬಯಲಿಗೆಳೆದರು.
  ಸದನದಲ್ಲಿ ಇವರ ಪಕ್ಷದವರೇ ಬ್ಲೂಪಿಲಂ ವೀಕ್ಷಿಸಿ ಸುದ್ದಿ ಆದಾಗ ಇವರ ಕೋಪ ನೋಡಬೇಕಿತ್ತು, ಅಯೋಗ್ಯ ಕೆಲಸ ಮಾಡಿದ ಮಂತ್ರಿಗಳನ್ನ ಲೆಪ್ಟ್ ರೈಟ್ ಮಾಡಿದ್ದರು, ಜೀವನದಲ್ಲಿ ನಡೆ ನುಡಿ ಮತ್ತು ಆಚರಣೆಯಲ್ಲಿ ಈ ರೀತಿ ಶಿಸ್ತು ಅಳವಡಿಸಿಕೊಂಡಿರುವ ಇಂತವರು ರಾಜಕೀಯ ಪಕ್ಷದಲ್ಲಿ ಇರುವುದೂ ಅಸಾಧ್ಯ ಆದರೆ ಇದ್ದರೂ ಅತ್ಯಂತ ಕಡಿಮೆ ಅದರಲ್ಲಿ ಇವರೊಬ್ಬರು ಮಾತ್ರ.
  ಇಂತವರು ಮುಖ್ಯಮಂತ್ರಿ ಆಗ ಬೇಕು ಅಂತ ನಾವೆಲ್ಲ ಅನೇಕ ಬಾರಿ ಚಚಿ೯ಸಿದ್ದೆವು.
  ಇವತ್ತು ಇವರು ನನ್ನ ಕಚೇರಿಗೆ ಬಂದಿದ್ದು ನನ್ನ ಆತಿಥ್ಯ ಸ್ವೀಕರಿಸಿದ್ದು ನನಗೆ ಅತ್ಯಂತ ಸಂತೋಷ ಆಯಿತು, ಕಾಫಿ, ಟೀ ಹಾಲು ಸೇರಿಸಿದ್ದು ಇವರಿಗೆ ಆಗಿ ಬರುವುದಿಲ್ಲ, ಲೆಮನ್ ಸೋಡ, ಬ್ಲಾಕ್ ಟೀ ಸೇವಿಸಿದರು.
  ವಿಶೇಷ ಅಂದರೆ ಇವರ ಸೋಷಿಯಲ್ ಮೀಡೀಯಾದ ಪೇಸ್ ಬುಕ್, ವಾಟ್ಸ್ಪ್ ಇವರೇ ನಿವ೯ಹಿಸುತ್ತಾರೆ! ಇವತ್ತಿನ ದಿನದ ರಾಜಕಾರಣಿಗಳಲ್ಲಿ ಇಂತವರು ವಿರಳ.
 ಇದೆಲ್ಲ ಹೇಳಿದ್ದಕ್ಕೆ ಅವರು ಹೇಳಿದ್ದು ನಾನು ಇನ್ನು ಎಷ್ಟು ದಿನ ರಾಜಕಾರಣ ಮಾಡಬಲ್ಲೆ? ಅಂತ ನನಗೆ ನಾನೇ ಪ್ರಶ್ನೆ ಮಾಡಿಕೊಳ್ಳುತ್ತೇನೆ ಅಂದರು.
  ಸ್ವಚ್ಚ, ಸಜ್ಜನ ರಾಜಕಾರಣ ಮಾಡುವ ಇಂತವರು ರಾಜಕಾರಣದಲ್ಲಿ ಯಾವತ್ತೂ ಇರಲಿ, ಮುಂದಿನ ದಿನದಲ್ಲಿ ಕನ್ನಡ ನಾಡಿನ ಮುಖ್ಯಮಂತ್ರಿಯೂ ಆಗಲಿ ಅಂತ ಹಾರೈಸಿದೆ

Comments

Popular posts from this blog

Blog number 1782. ಅರಳಸುರಳಿಯ ರಾಘವೇಂದ್ರ ಕೇಕೋಡರ ಕುಟುಂಬದ ತಪ್ಪು ನಿರ್ದಾರದ ದುರಂತ.

#ತೀರ್ಥಹಳ್ಳಿಯ_ಅರಳಸುರಳಿಯ_ಒಂದೇ_ಕುಟುಂಬದ_ನಾಲ್ವರು_ಮೃತರಾದ_ರಹಸ್ಯವೇನು? #ಈ_ಬಗ್ಗೆ_ಆ_ಊರಿನ_ಸಮೀಪದ_ಈ_ಕುಟುಂಬದ_ಪರಿಚಯ_ಇರುವವರಿಗೆ_ವಿಚಾರಿಸಿದ್ದೆ. #ಅವರು_ಈ_ಘಟನೆ_ಬಗ್ಗೆ_ಸವಿಸ್ತಾರವಾಗಿ_ಲಿಖಿತ_ಲೇಖನ_ಬರೆದಿದ್ದಾರೆ. #ಅವರ_ವಿನಂತಿ_ಅವರ_ಹೆಸರು_ಬಹಿರಂಗಗೊಳಿಸ_ಬಾರದು. #ಆದ್ದರಿಂದ_ಈ_ಲೇಖನ_ಪೋಸ್ಟ್_ಮಾಡಬಾರದೆಂದಿದ್ದೆ_ಆದರೆ_ಇದು_ಮಲೆನಾಡಿಗರ_ಮನೆ_ಮನೆಯ_ಕಥೆ #ಆದ್ದರಿಂದ_ಇಲ್ಲಿ_ಪೋಸ್ಟ್_ಮಾಡಿದೆ.    ಇಲ್ಲಿ ತಪ್ಪು ಯಾರದ್ದೂ ಇಲ್ಲ... ಪಶ್ಚಾತ್ತಾಪದ ಪ್ರಾಯಶ್ಚಿತ ಕೇಳಲು ಅವರಾರು ಇಲ್ಲ .....ಆದರೆ ಈ ರೀತಿ ಜೀವ ತ್ಯಾಗ ಮಾಡುವ ಆತುರದ ಕೆಟ್ಟ ನಿರ್ದಾರ ಮಾತ್ರ ಸರಿ ಅಲ್ಲ.     ಇವರ ಅಣ್ಣ ಆರ್.ಎಸ್.ಎಸ್. ಪ್ರಚಾರಕರಾಗಿ ದೆಹಲಿಯಲ್ಲಿ ಏಳು ವಷ೯ ಮೋದಿ ಜೊತೆ ಒಂದೇ ಕೋಣೆ ಹಂಚಿಕೊಂಡವರು, ಇನ್ನೊಬ್ಬ ಸಹೋದರ ಮೂಳೆ ತಜ್ಞರಾಗಿ ಶಿವಮೊಗ್ಗದಲ್ಲಿ ಆಸ್ಪತ್ರೆ ಮಾಡಿಕೊಂಡಿದ್ದಾರೆ.   #ದೀರ್ಘವಾದರೂ_ಪೂರ್ಣ_ಲೇಖನ_ಓದಿ   #ಹೀಗೊಂದು_ಸುಕುಟುಂಬ_ಆತ್ಮಾಘಾತ_ಮತ್ತು_ತದನಂತರದ_ಸಹಾಗಮನ.... ಮೂಡಣದಲ್ಲಿ ರವಿ ಮೂಡಲು ಅಣಿ ಯಾಗುತ್ತಿಧ್ದ .. ಹಾದಿಗಣಪತಿ ದೇವರು ಗರ್ಭಗುಡಿಯ ನಂದಾದೀಪದ ಮಂದ ಬೆಳಕಿನಲ್ಲಿ ತನ್ನ ಗುಡಿಯ ಎದುರಿನ ತಗ್ಗಿನಲ್ಲಿದ್ದ  ರಾಘವೇಂದ್ರ ಕೇಕೋಡರ ಮನೆಯನ್ನು ಎವೆಯಕ್ಕದೇ ನೋಡುತ್ತಲಿದ್ದ... ಊರ ಎಲ್ಲಾ ಮನೆಯಂತೆ ಆ ಮನೆಯಲ್ಲೂ ಆ ಬೆಳಗಿನಲ್ಲಿ ಮನೆಯೊಡತಿ ನಾಗರತ್ನಕ್ಕ ಆ ಸಮಯದಲ್ಲಿ ದೇವರಿಗೆ ದೀಪ ಹಚ್ಚಿ ಹೊಸ್ತಿಲು ಪೂಜೆ ಮಾಡ

Blog number 1037. ರಾಜಕುಮಾರಿ ಶಾಂತವ್ವ ಮತ್ತು ದಲಿತ ಯುವಕ ಸಿದ್ದೇಶ್ವರರ ಅಮರ ಪ್ರೇಮದ ಸ್ಮಾರಕ, ಅನ್ಯ ಜಾತಿ ವಿವಾಹವಾದ್ದರಿಂದ ರಾಜಕುಮಾರಿಗೆ ಸೂಳೆ ಪಟ್ಟ ನೀಡಿದ ಸಮಾಜ. ಸಮಾಜದ ಒಳಿತಿಗಾಗಿ ಶಾಂತವ್ವ ಕಟ್ಟಿಸಿದ ಬೃಹತ್ ಕೆರೆಗೆ ಜನ ಕರೆದದ್ದು ಸೂಳೆ ಕಟ್ಟಿಸಿದ ಕೆರೆ ಅದೇ ಸೂಳೆಕೆರೆ / ಶಾಂತಿ ಸಾಗರ

# ಸೂಳೆಕೆರೆ (ಶಾಂತಿ ಸಾಗರ) ಅಂತರ್ ಜಾತಿ ಪ್ರೇಮ ವಿವಾಹದ ದುರOತ ಕಥೆ. #ಅಕ್ಟೋಬರ್ 2019 ರಲ್ಲಿ ತುಂಬಿ ತುಳುಕಿತ್ತು.  ಚಿತ್ರದುಗ೯, ದಾವಣಗೆರೆ ಬಳ್ಳಾರಿ ಮುಂತಾದ ಮಳೆ ಕಡಿಮೆ ಆಗುತ್ತಿದ್ದ ಜಿಲ್ಲೆಗಳಲ್ಲಿ ಅದೂ ಅಕ್ಟೋಬರ್ ತಿಂಗಳ 2019 ರಲ್ಲಿ  ಬಂದಿದ್ದ ಬಾರಿ ಮಳೆ ಎಲ್ಲಾ ಕೆರೆ, ಹೊಂಡಗಳು ತುಂಬಿ ತುಳುಕಿದೆ, ಸಾಮಾಜಿಕ ಜಾಲ ತಾಣದಲ್ಲಿ 40 ವಷ೯ದಲ್ಲಿ ಇಂತ ಮಳೆ ಬಂದಿಲ್ಲ ಅಂತ ಸುದ್ದಿ ಹರಿದಾಡುತ್ತಿತ್ತು ಮತ್ತು  ಸೂಳೆಕೆರೆ ತುಂಬಿ ಕೋಡಿ ಬಿದ್ದಿದೆ ಅಂತೆಲ್ಲ Post ನೋಡಿ ಬೆಂಗಳೂರಿಂದ ಬರುವಾಗ ಚಿತ್ರದುಗ೯ ಮಾಗ೯ವಾಗಿ ಚನ್ನಗಿರಿ ತಲುಪಿ ಸೂಳೆಕೆರೆ ನೋಡಲು ಹೋಗಿದ್ದೆ.  11ನೇ ಶತಮಾನದಲ್ಲಿ (1128ರಲ್ಲಿ)ಕೇವಲ 3 ವಷ೯ದಲ್ಲಿ ಈ ಕೆರೆ ನಿಮಾ೯ಣ ಮಾಡಿಸಿದ್ದು ಶಾಂತವ್ವ ಎಂಬ ರಾಜ ಕುಮಾರಿ ಅವಳು ಸ್ವಣ೯ವತಿ ಪಟ್ಟಣದ ದೊರೆ ವಿಕ್ರಮ ರಾಜನ ಮಗಳು, ಸಿದ್ದೇಶ್ವರ ಎಂಬ ಅನ್ಯ ಜಾತಿಯ ಯುವಕನೊ೦ದಿಗೆ ಗಾಂದವ೯ ವಿವಾಹ ಆಗುತ್ತಾಳೆ ಇದನ್ನ ಸಹಿಸದ ಮತ್ತು ಒಪ್ಪದ ಜನತೆ ಸೂಳೆ ಎಂದು ಮೂದಲಿಸುತ್ತಾರOತೆ ಈ ರೀತಿ ತನಗೆ ಬಂದ ಕಳಂಕ ಕಳೆಯಲು ಈ ಬೃಹತ್ ಕೆರೆ ತನ್ನ ಪತಿ ಸಿದ್ದೇಶ್ವರನ ಜೊತೆ ಸೇರಿ ನಿಮಿ೯ಸಿ ಕೆರೆಗೆ ಹಾರವಾದಳೆoಬ ಇತಿಹಾಸ ಇದೆ ಇದರಿಂದ ನೊಂದ ಪತಿ ಸಿದ್ಧೇಶ್ವರ ಕೂಡ ಎದುರಿನ ಗುಡ್ಡದಲ್ಲಿ ಜೀವ ತ್ಯಾಗ ಮಾಡುತ್ತಾನೆ ಈಗ ಅಲ್ಲಿ ಸಿದ್ದೇಶ್ವರ ದೇವಸ್ಥಾನವಿದೆ.   ಈ ಕೆರೆ ಈಗಲೂ ಸೂಳೆಕೆರೆ ಎಂದೆ ಹೆಸರಾಗಿದೆ ಈ

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್ಪಿಸಿಕೊಳ್ಳಬೇಕು ಅಂತ ಬಿದನೂರು ನಗರ ಸಮೀಪದ ದೇವಗಂಗೆ ಎಂಬ ಕೆಳದಿ