Skip to main content

ಭಾಗ -31, ಆನಂದಪುರಂನಲ್ಲಿ ವಿದ್ಯಾ ಮಂತ್ರಿ ಬದರಿನಾರಾಯಣ್ ಅಯ್ಯಂಗಾರರು ಶಿಕ್ಷಣ ಪಡೆದ ಪ್ರಾಥಮಿಕ ಶಾಲಾ ಶಿಕ್ಷಕರಾಗಿದ್ದ ಸ್ವಾತಂತ್ರ್ಯ ಹೋರಾಟಗಾರ ಕೃಷ್ಣ ಮೂರ್ತಿ ಮಾಸ್ಟರ್

#ಭಾಗ_31.

#ಕೃಷ್ಣಮೂರ್ತಿ_ಮಾಸ್ಟರ್_ನಮ್ಮ_ತಂದೆಗೆ_ಪ್ರಾಥಮಿಕ_ಶಿಕ್ಷಣ_ನೀಡಿದವರು.

#ವಿದ್ಯಾಮಂತ್ರಿ_ಬದರಿನಾರಾಯಣ್_ಅಯ್ಯಂಗಾರರು_ಓದಿದ_ಪ್ರಾಥಮಿಕ_ಶಾಲೆಯಲ್ಲಿ_ಶಿಕ್ಷಕರು.

#ಸ್ವಾತಂತ್ರ_ಸಂಗ್ರಾಮಕ್ಕೂ_ಮುಮುಕಿದ್ದರು.

#ಖಾಧೀದಾರಿ_ಗಾಂಧೀವಾದಿ_ಶಿಸ್ತಿನ_ಶಿಕ್ಷಕರು.

  ಶಿಕ್ಷಣದಿಂದ ದೇಶ ಅಭಿವೃದ್ಧಿ, ಶಿಕ್ಷಣದಿಂದ ದೇಶಕ್ಕೆ ಸ್ವಾತಂತ್ರ, ಖಾದಿ ಸ್ವದೇಶಿ ಅನ್ನುವ ಮಂತ್ರಗಳಿಂದ ನಮ್ಮ ಹಿರಿಯರು ಸ್ವಾತಂತ್ರ ಪೂರ್ವದಲ್ಲಿ ನಿಸ್ವಾಥ೯ವಾಗಿ ಶಿಕ್ಷಣ ನೀಡುತ್ತಿದ್ದರು ಇದರಿಂದ ಅವರಿಗೆ ಸರಿಯಾದ ಪ್ರತಿಫಲ ದೊರೆಯುತ್ತಿರಲಿಲ್ಲ ಆದರೆ ಅದು ಹಣದಿಂದ ಬೆಲೆ ಕಟ್ಟಲಾಗದ ಸೇವಾವೃತ್ತಿಯ ದ್ಯೇಯ ಸಿದ್ದಾಂತದ ಕೃಷ್ಣಮೂರ್ತಿ ಮಾಸ್ಟರ್ ಆನಂದಪುರಂನ ಸ್ವಾತಂತ್ರ್ಯ ಪೂರ್ವದ ಮತ್ತು ಸ್ವಾತಂತ್ರ್ಯ ನಂತರದಲ್ಲಿ ಶಿಕ್ಷಣ ಶಿಕ್ಷಣ ನೀಡಿದ ಅಗ್ರಗಣ್ಯರು.
  ನಮ್ಮ ತಂದೆ ಇವರಿಂದ ಶಿಕ್ಷಣ ಪಡೆದವರು, ನಮ್ಮ ತಂದೆಯು ಬುದ್ದಿವಂತರೆಂಬ ಬಗ್ಗೆ ಹೆಮ್ಮೆ ಮತ್ತು ನಮ್ಮ ತಂದೆಯ ಬಡತನದ ಬಗ್ಗೆ ಅನುಕಂಪ ಇವರಿಗೆ.
  ನನ್ನಣ್ಣನಿಗೂ ಒಂದು ವರ್ಷ ಶಿಕ್ಷಕರಾಗಿದ್ದರು, ಆರು ಅಡಿ ಉದ್ದದ ನೀಳಕಾಯ ಶರೀರದ ಸ್ಪುರದೃಪ ಅವರದ್ದೆಂದು ಅವರನ್ನು ನೋಡಿದವರು ನೆನಪಿಸಿ ಕೊಳ್ಳುತ್ತಾರೆ.
  ಗಾಂಧಿವಾದಿಗಳಾಗಿ, ಖಾಧಿ ವಸ್ತ್ರದಾರಿಗಳಾಗಿ ಆ ಕಾಲದಲ್ಲಿ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಭಾಗವಹಿಸಿದ ನಮ್ಮ ಊರಿನಲ್ಲಿನ ಕೆಲವೇ ಕೆಲವರಲ್ಲಿ ಕೃಷ್ಣಮೂರ್ತಿ ಮಾಸ್ಟರ್ ಒಬ್ಬರು.
  ಇವರು ವಿದ್ಯಾಮಂತ್ರಿ ಬದರಿನಾರಾಯಣ್ ಅಯ್ಯಂಗಾರರು ಓದಿದ ಪ್ರಾಥಮಿಕಶಾಲೆ ಮತ್ತು ದಾಸಕೊಪ್ಪದ ಶಾಲೆಯಲ್ಲಿ ವೃತ್ತಿ ಮಾಡಿದ್ದರು, ಯಾವಾಗಲು ಸೈಕಲ್ ನಲ್ಲೇ ಪ್ರಯಾಣಿಸುತ್ತಿದ್ದರು.
  ಹೊಸನಗರ ಮೂಲದ ಇವರು ಇಲ್ಲೇ ವೃತ್ತಿ ಮಾಡಿ ನಂತರ ಆನಂದಪುರಂನಲ್ಲೇ ನೆಲೆಸಿ ಖ್ಯೆರಾ ಎಂಬ ಹಳ್ಳಿಯಲ್ಲಿ ಕೃಷಿ ಭೂಮಿ ಹೊಂದಿ ಕೃಷಿ ಕೂಡ ಮಾಡಿದ್ದರು.
  ಕೃಷ್ಣ ಮೂರ್ತಿ ಮಾಸ್ಟರ್ ರುಕ್ಮಿಣಿಯಮ್ಮ ದಂಪತಿಗಳಿಗೆ ಚಂದ್ರಶೇಖರ್, ಜಯರತ್ನ, ರವೀಂದ್ರನಾಥ, ಸರಸ್ವತಿ, ಪುಷ್ಪಲತಾ ಮತ್ತು ಲಕ್ಷ್ಮೀಷ್ ಕುಮಾರ ಎಂಬ ಮೂರು ಪುತ್ರರು ಮತ್ತು ಮೂವರು ಪುತ್ರಿಯರಿದ್ದಾರೆ.
 ಈಗ ಇವರ ಪತ್ನಿ ಮತ್ತು ಕೊನೆಯ ಪುತ್ರ ಲಕ್ಷ್ಮೀಷ್
ಆನಂದಪುರಂನಲ್ಲಿದ್ದಾರೆ, ಇವರ ಮೊದಲ ಪುತ್ರ ಚಂದ್ರಶೇಖರ್ ಉಡುಪಿ ಜಿಲ್ಲೆಯಲ್ಲಿ ಶಿಕ್ಷಣ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು ಮತ್ತು ಮಂತ್ರಿಗಳಿಗೆ ಆಪ್ತ ಸಹಾಯಕರು ಆಗಿ ಈಗ ನಿವೃತ್ತರಾಗಿ ಅಲ್ಲೇ ನೆಲೆಸಿದ್ದಾರೆ.
  ಇಬ್ಬರು ಪುತ್ರಿಯರಲ್ಲಿ ಕೊನೆಯ ಪುತ್ರಿ ಸರಸ್ವತಿ ಅತ್ಯುತ್ತಮ ಕ್ರೀಡಾಪಟುಗಳಾಗಿದ್ದು ರಾಜ್ಯ ಮಟ್ಟದ ಪ್ರಶಸ್ತಿ ವಿಜೇತರು ಈಗ  ಶಿವಮೊಗ್ಗದ ಸರ್ಕಾರಿ ಶಾಲೆಯಲ್ಲಿ ಶಿಕ್ಷಕಿ ಆಗಿದ್ದಾರೆ.
  ಇನ್ನೊಬ್ಬ ಪುತ್ರ ರವೀಂದ್ರ ಸಾರಿಗೆ ಸಂಸ್ಥೆಯಲ್ಲಿದ್ದಾರೆ.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...