Skip to main content

ಭಾಗ -35 ಆನಂದಪುರಂ ಇತಿಹಾಸ. ಆನಂದಪುರಂ ಸಮೀಪದ ಬಳ್ಳಿಬೈಲು ಗ್ರಾಮದ ಕೊಂಗನಾಸಳ್ಳಿ ಸುಬ್ಬರಾವ್ ವಿದ್ಯಾರ್ಥಿ ಜೀವನದಲ್ಲಿ ಆನಂದಪುರಂನ ಪಿಯುಸಿ ಪ್ರಪ್ರಥಮ ಬ್ಯಾಚ್ ನಲ್ಲಿ ಸೈನ್ಸ್ ವಿಭಾಗದಲ್ಲಿ ಉತ್ತೀರ್ಣ ಆದ ಮೊದಲ ಪ್ರತಿಭಾವಂತರು ನಂತರ ಸುಬ್ಬಣ್ಣ ನಾಯಕರ ರೈತ ಬಂದು ಎಂಬ ಬೃಹತ್ ಉದ್ಯಮದಲ್ಲಿ ಉದ್ಯೋಗಿ ಆಗಿ ನಂತರ ಇಡೀ ರೈತ ಬಂದು ಸಂಸ್ಥೆ ಖರೀದಿಸಿ ಅಭಿವೃದ್ದಿ ಮಾಡಿದ ಸಾದನೆ ಸಾಮಾನ್ಯವಲ್ಲ.


#ಭಾಗ_35.
#ಆನಂದಪುರಂ_ಇತಿಹಾಸ.

#ಸುಬ್ಬಣ್ಣನಾಯಕರ_ಶಿಷ್ಯನಾಗಿ_ಸುಬ್ಬಣ್ಣನಾಯಕರ_ಆಸ್ತಿ_ಖರೀದಿಸಿದ_ಸುಬ್ಬರಾವ್ .

#ಆನ೦ದಪುರಂ_ಸಮೀಪದ_ಬಳ್ಳಿಬೈಲ್_ಎಂಬ_ಹಳ್ಳಿಯವರು.

#ಬದರಿನಾರಾಯಣ್_ಅಯ್ಯಂಗಾರರು_ಮಂಜೂರು_ಮಾಡಿಸಿದ್ದ #ಪಿಯುಸಿ_ಮೊದಲ_ಬ್ಯಾಚಿನಲ್ಲಿ_ಸಯನ್ಸನಲ್ಲಿ_ಉತ್ತೀರ್ಣರಾದ_ಏಕೈಕ_ಪ್ರತಿಭಾವಂತ_ವಿದ್ಯಾರ್ಥಿ

#ರೈತಬಂದು_ಹೆಸರು_ಸಂತೋಷ್_ಎ೦ದು_ಬದಲಿಸಿ_ಯಶಸ್ವಿ_ಉದ್ದಿಮೆದಾರದವರು.

#ಉದ್ಯಮದಲ್ಲಿ_ಅನೇಕ_ಕನಸು_ನನಸಾಗುವ_ಮೊದಲೆ_ಇಹಲೋಕ_ತ್ಯಜಿಸಿದ್ದು_ವಿಷಾದನೀಯ.

    ದುಗ೯ಮ ಹಳ್ಳಿಯಲ್ಲಿ ಜನಿಸಿ ದೊಡ್ಡ ಉದ್ದಿಮೆದಾರರಾಗಿ ಆನಂದಪುರಂನ ಘನತೆ ಹೆಚ್ಚಿಸಿದ್ದ ಸುಬ್ರಾವ್ ಆನಂದಪುರಂನ ಸಂತೋಷ್ ರೈಸ್ ಇಂಡಸ್ಟ್ರಿಸ್ ಬೃಹತ್ ಅಕ್ಕಿ ಅವಲಕ್ಕಿ ಗಿರಣಿ ಮತ್ತು ಸಂತೋಷ್ ಆಗ್ರೋ ಎಂಬ ಬೃಹತ್ ಕೋಲ್ಡ್ ಸ್ಟೋರೇಜ್ ಗಳ ಮಾಲಿಕರಾದ ಶ್ರೀ ಸುಬ್ಬ ರಾವ್ ಇವತ್ತು ಇಲ್ಲ.
  ಇವರ ಜೀವನದ ಹಾದಿ ಅತ್ಯಂತ ದುಗ೯ಮ, ಸಾಗರ ತಾಲ್ಲೂಕಿನ ಆನ೦ದಪುರಂ ಹೋಬಳಿಯ ಬಳ್ಳಿ ಬೈಲು ಗ್ರಾಮದ ಕೊಂಗನಾಸಳ್ಳಿ ಎಂಬ ಹಳ್ಳಿಯ ಮಧ್ಯಮ ಹವ್ಯಕ ಬ್ರಾಹ್ಮಣ ಕುಟುಂಬದಲ್ಲಿ ಜನಿಸಿದ್ದ ಇವರು ಆನಂದಪುರಂನಲ್ಲಿ ವಿದ್ಯಾ ಮಂತ್ರಿ ಬದರಿನಾರಾಯಣ್ ಅಯ್ಯOಗಾರ್ ಕುಟುಂಬದವರು ಪ್ರಾರಂಬಿಸಿದ ಪಿಯುಸಿ ತರಗತಿಯ ಪ್ರಥಮ ಬ್ಯಾಚ್ ನಲ್ಲಿ ಸೈನ್ಸ್ ನಲ್ಲಿ ಉತ್ತಿಣ೯ರಾದ ಏಕೈಕ ವಿದ್ಯಾಥಿ೯ ಸುಬ್ಬ ರಾವ್.
   ಕೊಂಗನಾಸಳ್ಳಿಯಿ೦ದ ಆನಂದಪುರಕ್ಕೆ ರಸ್ತೆ ಇರಲಿಲ್ಲ, ದಟ್ಟ ಕಾಡು ಹಾಗಾಗಿ ಸುಬ್ಬರಾವ್ ಆನಂದಪುರದ ಅಗ್ರಹಾರದ ರಾಮ ಮಂದಿರ ಮತ್ತು ಅದರ ಸಮೀಪ ಬಾಡಿಗೆ ಕೊಠಡಿಯಲ್ಲಿ ವಿದ್ಯಾಭ್ಯಾಸ ಮಾಡಿದವರು.
  ಊರಿನ ಹಿರಿಯರಾದ ಅದ್ಯಾಪಕರಾದ ಶ್ರೀ ಬೋಜರಾಜ್ ಅಯ್ಯOಗಾರ್, ಆನಂದಪುರದ ಅಭಿವೃದ್ಧಿಗೆ ಕಾರಣಕತ೯ರಾದ ಗಾಂಧಿವಾದಿ ಶಿಕ್ಷಕ  ಎಸ್.ಆರ್.ಕೃಷ್ಣಪ್ಪ ಇವರಿಗೆ ಅನೇಕ ರೀತಿ ಸಹಕಾರ ನೀಡಿದವರು.ಪಿಯುಸಿ ಓದುವಾಗ ನಮ್ಮ ಅಣ್ಣ ಕೆ.ನಾಗರಾಜ್ ಇವರ ಕ್ಲಾಸ್ ಮೇಟ್ ಹಾಗಾಗಿ ಕೆಲ ಸಂಜೆ ನಮ್ಮ ಮನೆಗೆ  ಇವರು ಬರುತ್ತಿದ್ದರು.
  ನಂತರ ರೈತ ಬಂದು ಗ್ರಾಮೋದ್ಯೋಗದ ಸುಬ್ಬಣ್ಣನಾಯ್ಕರ ಅಕ್ಕಿ ಗಿರಣಿಯಲ್ಲಿ ಗುಮಸ್ತರಾಗಿ ಕೆಲಸ ಪ್ರಾರಂಬಿಸಿ ನಂತರ ಅವರ ನಂಬಿಗೆಯ ಬ೦ಟರಾಗಿ ವ್ಯವಸ್ಥಾಪಕರಾಗಿ ಮುಂದೆ ಸುಬ್ಬಣ್ಣಾ ನಾಯ್ಕರು ಉದ್ಧಿಮೆಯಿಂದ ನಿವೃತ್ತಿ ಘೋಷಿಸಿದಾಗ ಆನಂದಪುರದ ಬೃಹತ್ ಅಕ್ಕಿ ಮತ್ತು ಅವಲಕ್ಕಿ ಗಿರಣಿಯನ್ನ ಸುಬ್ಬರಾವ್ ಗೆ ವಹಿಸಿ ನಂತರ ಸುಬ್ಬರಾವ್ ಗೆ ಮಾರಾಟ ಮಾಡುತ್ತಾರೆ ಮತ್ತು ಆನಂದಪುರದ ಕೆರೆ ಕೆಳಗಿನ ಸುಬ್ಬಣ್ಣ ನಾಯಕರ ಕೃಷಿ ಜಮೀನು ಕೂಡ ಇವರೇ ಖರೀದಿಸಿ ಅಡಿಕೆ ತೋಟ ಮಾಡಿದ್ದಾರೆ.
  ನಂತರ ಸುಬ್ಬರಾವ್ ಇಡೀ ಅಕ್ಕಿ ಗಿರಣಿಯನ್ನ ಮಾದರಿ ಅಕ್ಕಿ ಗಿರಣಿಯಾಗಿ ಬದಲಿಸುತ್ತಾರೆ, ವೈಜ್ಞಾನಿಕವಾಗಿ ಆಧುನಿಕರಣ ಮಾಡಿ ದೊಡ್ಡ ಪ್ರಮಾಣದಲ್ಲಿ ಗುಣಮಟ್ಟದ ಅಕ್ಕಿ, ಅವಲಕ್ಕಿ ಉತ್ಪಾದನೆ ಮತ್ತು ಮಾರಾಟ ಮಾಡಿ ಅಂತರ್ ರಾಜ್ಯದಲ್ಲಿ ಹೆಸರಾಂತ ಉದ್ದಿಮೆದಾರರಾಗಿ ಹೆಸರು ಮಾಡುತ್ತಾರೆ.
  ಅಡಿಕೆ ಕೃಷಿಯಲ್ಲಿ ಕೂಡ ಯಶಸ್ವಿ ಆಗುತ್ತಾರೆ, ನಂತರ ಜಿಲ್ಲೆಯ ಮೊದಲ ಬೃಹತ್ ಕೋಲ್ಡ್ ಸ್ಟೋರೇಜ್ ನಿಮಿ೯ಸಿ ಈ ಭಾಗದ ಒಣ ಶುಂಠಿ ವ್ಯಾಪರಸ್ಥರಿಗೆ ಅನುಕೂಲ ಮಾಡಿದ್ದರಿಂದ ಆನಂದಪುರಂ ಶುಂಠಿ ಉದ್ಯಮದ ಹಬ್ ಆಗಲು ಕಾರಣಕತ೯ರಾದರು.
  ಇತ್ತೀಚಿಗೆ ಸಣ್ಣ ವಯಸ್ಸಲ್ಲೇ ಅನಾರೋಗ್ಯದಿಂದ ಉದ್ಯಮದಿಂದ ಕ್ರಮೇಣ ನಿವೃತ್ತರಾದರು ಇದರಿಂದ ಆನಂದಪುರದಲ್ಲಿ ಮುಂದಿನ ದಿನಗಳಲ್ಲಿ ಸ್ವಯಂ ಉದ್ಯೋಗ ಸೃಷ್ಟಿಸುವ ಇವರ ಅನೇಕ ಕನಸಿನ ಉದ್ದಿಮೆಗಳು ನಿಂತು ಹೋದವು.
  ಆನಂದಪುರದ ಹಳ್ಳಿಯ ಕೃಷಿ ಕುಟುಂಬದ ಬಡ ಯುವಕ ಈ ಎಲ್ಲಾ ಕೈಗಾರಿಕಾ ಕ್ರಾಂತಿ ಮಾಡಿ ಮುಂದಿನ ದಿನದಲ್ಲಿ ಈ ಮಾಗ೯ದಲ್ಲಿ ಭವಿಷ್ಯ ಹುಡುಕುವ ಭಾವಿ ಉದ್ದಿಮೆದಾರರಿಗೆ ರೋಲ್ ಮಾಡೆಲ್ ಆಗಿದ್ದಾರೆ.
   ಸಾವಿರಾರು ಎಕರೆ ಭೂ ಒಡೆಯರು, ಇನಾಂದಾರರು, ಕೊಡುಗೈ ದಾನಿಗಳು, ಆನಂದಪುರಂನಲ್ಲಿ ಆಸ್ಪತ್ರೆ, ಪಶು ಆಸ್ಪತ್ರೆ, ಶಾಲಾ ಕಾಲೇಜು ಸ್ಥಾಪಿಸಿದ್ದ ಜಮೀನ್ದಾರ್ ರಾಮಕೃಷ್ಣ ಅಯ್ಯಂಗಾರ್ ಪ್ರಾರಂಬಿಸಿದ್ದ "ರಾಮಕೃಷ್ಣ ಅಕ್ಕಿ ಗಿರಣಿ " ಶಿವಪುರದ ಸುಬ್ಬಣ್ಣ ನಾಯಕರು ಖರೀದಿಸಿ "ರೈತಬಂದು ಗ್ರಾಮೋದ್ಯೋಗ" ಎಂದು ಪ್ರಸಿದ್ಧಿ ಆಗಿದ್ದು ಒಂದು ಅಧ್ಯಾಯ ಆಗಿದ್ದರೆ ಇದನ್ನು ಸ್ಥಳಿಯ ಸುಬ್ಬಣ್ಣ ನಾಯಕರ ಶಿಷ್ಯ ಸುಬ್ಬರಾವ್ ಖರೀದಿಸಿ " ಸಂತೋಷ್ ರೈಸ್ ಇಂಡಸ್ಟ್ರಿ ಸ್" ಎಂದು ಆನಂದಪುರ೦ ಅಕ್ಕಿ ಅವಲಕ್ಕಿ ಉದ್ಯಮವನ್ನು ಇನ್ನೊಂದು ಎತ್ತರಕ್ಕೆ ಒಯ್ದಿದ್ದು ಎರಡನೆ ಅದ್ಯಾಯ.
(ನಾಳೆ ಭಾಗ- 36)

Comments

Popular posts from this blog

Blog number 1782. ಅರಳಸುರಳಿಯ ರಾಘವೇಂದ್ರ ಕೇಕೋಡರ ಕುಟುಂಬದ ತಪ್ಪು ನಿರ್ದಾರದ ದುರಂತ.

#ತೀರ್ಥಹಳ್ಳಿಯ_ಅರಳಸುರಳಿಯ_ಒಂದೇ_ಕುಟುಂಬದ_ನಾಲ್ವರು_ಮೃತರಾದ_ರಹಸ್ಯವೇನು? #ಈ_ಬಗ್ಗೆ_ಆ_ಊರಿನ_ಸಮೀಪದ_ಈ_ಕುಟುಂಬದ_ಪರಿಚಯ_ಇರುವವರಿಗೆ_ವಿಚಾರಿಸಿದ್ದೆ. #ಅವರು_ಈ_ಘಟನೆ_ಬಗ್ಗೆ_ಸವಿಸ್ತಾರವಾಗಿ_ಲಿಖಿತ_ಲೇಖನ_ಬರೆದಿದ್ದಾರೆ. #ಅವರ_ವಿನಂತಿ_ಅವರ_ಹೆಸರು_ಬಹಿರಂಗಗೊಳಿಸ_ಬಾರದು. #ಆದ್ದರಿಂದ_ಈ_ಲೇಖನ_ಪೋಸ್ಟ್_ಮಾಡಬಾರದೆಂದಿದ್ದೆ_ಆದರೆ_ಇದು_ಮಲೆನಾಡಿಗರ_ಮನೆ_ಮನೆಯ_ಕಥೆ #ಆದ್ದರಿಂದ_ಇಲ್ಲಿ_ಪೋಸ್ಟ್_ಮಾಡಿದೆ.    ಇಲ್ಲಿ ತಪ್ಪು ಯಾರದ್ದೂ ಇಲ್ಲ... ಪಶ್ಚಾತ್ತಾಪದ ಪ್ರಾಯಶ್ಚಿತ ಕೇಳಲು ಅವರಾರು ಇಲ್ಲ .....ಆದರೆ ಈ ರೀತಿ ಜೀವ ತ್ಯಾಗ ಮಾಡುವ ಆತುರದ ಕೆಟ್ಟ ನಿರ್ದಾರ ಮಾತ್ರ ಸರಿ ಅಲ್ಲ.     ಇವರ ಅಣ್ಣ ಆರ್.ಎಸ್.ಎಸ್. ಪ್ರಚಾರಕರಾಗಿ ದೆಹಲಿಯಲ್ಲಿ ಏಳು ವಷ೯ ಮೋದಿ ಜೊತೆ ಒಂದೇ ಕೋಣೆ ಹಂಚಿಕೊಂಡವರು, ಇನ್ನೊಬ್ಬ ಸಹೋದರ ಮೂಳೆ ತಜ್ಞರಾಗಿ ಶಿವಮೊಗ್ಗದಲ್ಲಿ ಆಸ್ಪತ್ರೆ ಮಾಡಿಕೊಂಡಿದ್ದಾರೆ.   #ದೀರ್ಘವಾದರೂ_ಪೂರ್ಣ_ಲೇಖನ_ಓದಿ   #ಹೀಗೊಂದು_ಸುಕುಟುಂಬ_ಆತ್ಮಾಘಾತ_ಮತ್ತು_ತದನಂತರದ_ಸಹಾಗಮನ.... ಮೂಡಣದಲ್ಲಿ ರವಿ ಮೂಡಲು ಅಣಿ ಯಾಗುತ್ತಿಧ್ದ .. ಹಾದಿಗಣಪತಿ ದೇವರು ಗರ್ಭಗುಡಿಯ ನಂದಾದೀಪದ ಮಂದ ಬೆಳಕಿನಲ್ಲಿ ತನ್ನ ಗುಡಿಯ ಎದುರಿನ ತಗ್ಗಿನಲ್ಲಿದ್ದ  ರಾಘವೇಂದ್ರ ಕೇಕೋಡರ ಮನೆಯನ್ನು ಎವೆಯಕ್ಕದೇ ನೋಡುತ್ತಲಿದ್ದ... ಊರ ಎಲ್ಲಾ ಮನೆಯಂತೆ ಆ ಮನೆಯಲ್ಲೂ ಆ ಬೆಳಗಿನಲ್ಲಿ ಮನೆಯೊಡತಿ ನಾಗರತ್ನಕ್ಕ ಆ ಸಮಯದಲ್ಲಿ ದೇವರಿಗೆ ದೀಪ ಹಚ್ಚಿ ಹೊಸ್ತಿಲು ಪೂಜೆ ಮಾಡ

Blog number 1037. ರಾಜಕುಮಾರಿ ಶಾಂತವ್ವ ಮತ್ತು ದಲಿತ ಯುವಕ ಸಿದ್ದೇಶ್ವರರ ಅಮರ ಪ್ರೇಮದ ಸ್ಮಾರಕ, ಅನ್ಯ ಜಾತಿ ವಿವಾಹವಾದ್ದರಿಂದ ರಾಜಕುಮಾರಿಗೆ ಸೂಳೆ ಪಟ್ಟ ನೀಡಿದ ಸಮಾಜ. ಸಮಾಜದ ಒಳಿತಿಗಾಗಿ ಶಾಂತವ್ವ ಕಟ್ಟಿಸಿದ ಬೃಹತ್ ಕೆರೆಗೆ ಜನ ಕರೆದದ್ದು ಸೂಳೆ ಕಟ್ಟಿಸಿದ ಕೆರೆ ಅದೇ ಸೂಳೆಕೆರೆ / ಶಾಂತಿ ಸಾಗರ

# ಸೂಳೆಕೆರೆ (ಶಾಂತಿ ಸಾಗರ) ಅಂತರ್ ಜಾತಿ ಪ್ರೇಮ ವಿವಾಹದ ದುರOತ ಕಥೆ. #ಅಕ್ಟೋಬರ್ 2019 ರಲ್ಲಿ ತುಂಬಿ ತುಳುಕಿತ್ತು.  ಚಿತ್ರದುಗ೯, ದಾವಣಗೆರೆ ಬಳ್ಳಾರಿ ಮುಂತಾದ ಮಳೆ ಕಡಿಮೆ ಆಗುತ್ತಿದ್ದ ಜಿಲ್ಲೆಗಳಲ್ಲಿ ಅದೂ ಅಕ್ಟೋಬರ್ ತಿಂಗಳ 2019 ರಲ್ಲಿ  ಬಂದಿದ್ದ ಬಾರಿ ಮಳೆ ಎಲ್ಲಾ ಕೆರೆ, ಹೊಂಡಗಳು ತುಂಬಿ ತುಳುಕಿದೆ, ಸಾಮಾಜಿಕ ಜಾಲ ತಾಣದಲ್ಲಿ 40 ವಷ೯ದಲ್ಲಿ ಇಂತ ಮಳೆ ಬಂದಿಲ್ಲ ಅಂತ ಸುದ್ದಿ ಹರಿದಾಡುತ್ತಿತ್ತು ಮತ್ತು  ಸೂಳೆಕೆರೆ ತುಂಬಿ ಕೋಡಿ ಬಿದ್ದಿದೆ ಅಂತೆಲ್ಲ Post ನೋಡಿ ಬೆಂಗಳೂರಿಂದ ಬರುವಾಗ ಚಿತ್ರದುಗ೯ ಮಾಗ೯ವಾಗಿ ಚನ್ನಗಿರಿ ತಲುಪಿ ಸೂಳೆಕೆರೆ ನೋಡಲು ಹೋಗಿದ್ದೆ.  11ನೇ ಶತಮಾನದಲ್ಲಿ (1128ರಲ್ಲಿ)ಕೇವಲ 3 ವಷ೯ದಲ್ಲಿ ಈ ಕೆರೆ ನಿಮಾ೯ಣ ಮಾಡಿಸಿದ್ದು ಶಾಂತವ್ವ ಎಂಬ ರಾಜ ಕುಮಾರಿ ಅವಳು ಸ್ವಣ೯ವತಿ ಪಟ್ಟಣದ ದೊರೆ ವಿಕ್ರಮ ರಾಜನ ಮಗಳು, ಸಿದ್ದೇಶ್ವರ ಎಂಬ ಅನ್ಯ ಜಾತಿಯ ಯುವಕನೊ೦ದಿಗೆ ಗಾಂದವ೯ ವಿವಾಹ ಆಗುತ್ತಾಳೆ ಇದನ್ನ ಸಹಿಸದ ಮತ್ತು ಒಪ್ಪದ ಜನತೆ ಸೂಳೆ ಎಂದು ಮೂದಲಿಸುತ್ತಾರOತೆ ಈ ರೀತಿ ತನಗೆ ಬಂದ ಕಳಂಕ ಕಳೆಯಲು ಈ ಬೃಹತ್ ಕೆರೆ ತನ್ನ ಪತಿ ಸಿದ್ದೇಶ್ವರನ ಜೊತೆ ಸೇರಿ ನಿಮಿ೯ಸಿ ಕೆರೆಗೆ ಹಾರವಾದಳೆoಬ ಇತಿಹಾಸ ಇದೆ ಇದರಿಂದ ನೊಂದ ಪತಿ ಸಿದ್ಧೇಶ್ವರ ಕೂಡ ಎದುರಿನ ಗುಡ್ಡದಲ್ಲಿ ಜೀವ ತ್ಯಾಗ ಮಾಡುತ್ತಾನೆ ಈಗ ಅಲ್ಲಿ ಸಿದ್ದೇಶ್ವರ ದೇವಸ್ಥಾನವಿದೆ.   ಈ ಕೆರೆ ಈಗಲೂ ಸೂಳೆಕೆರೆ ಎಂದೆ ಹೆಸರಾಗಿದೆ ಈ

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್ಪಿಸಿಕೊಳ್ಳಬೇಕು ಅಂತ ಬಿದನೂರು ನಗರ ಸಮೀಪದ ದೇವಗಂಗೆ ಎಂಬ ಕೆಳದಿ