Skip to main content

ಭಾಗ-37, ಆನಂದಪುರಂ ಇತಿಹಾಸ, ಶಿವಮೊಗ್ಗ ಜಿಲ್ಲೆಯ ಪ್ರಭಾವಿ ಕಾಂಗ್ರೇಸ್ ರಾಜಕಾರಣಿ ಬದರಿನಾಯಣ ಅಯ್ಯಂಗಾರರು ದೇವರಾಜು ಅರಸರ ಮಂತ್ರಿ ಮಂಡಲದಲ್ಲಿ ವಿದ್ಯಾ ಮಂತ್ರಿ ಆಗಿದ್ದವರಿಂದ ರಾಜಿನಾಮೆ ಪಡೆಯುವ ಷಡ್ಯಂತ್ರ

*#ಭಾಗ_37.*
*#ಆನಂದಪುರಂ_ಇತಿಹಾಸ.*

*#ವಿದ್ಯಾಮಂತ್ರಿ_ಬದರಿನಾರಾಯಣರ_ರಾಜಿನಾಮೆ.*

*#ಇಂದಿರಾಗಾಂಧಿಗೆ_ಸುಳ್ಳು_ಮಾಹಿತಿ_ನೀಡಿದ_ಪ್ರಕರಣ*

*#ರಾಜಿನಾಮೆ_ಬೇಡ_ಕಾಲಾವಕಾಶ_ಕೊಡಿ_ಎಂದು_ಮುಖ್ಯಮಂತ್ರಿ_ದೇವರಾಜ್_ಅರಸ್*

*#ಶಿವಮೊಗ್ಗದ_ಹೊಸನಗರದ_ಶಾಸಕರಾಗಿದ್ದ_ಶಿರ್ನಾಳಿ_ಚಂದ್ರಶೇಖರ್_ಕಾರಣ.*

  *ಆನಂದಪುರಂನ ಬದರಿನಾರಾಯಣ ಅಯ್ಯಂಗಾರರರು ಕರ್ನಾಟಕ ಪ್ರದೇಶ ಕಾಂಗ್ರೇಸ್ ನ ಆಗಿನ ಖಾಯಂ ಖಜಾಂಚಿಗಳು, ಶಿವಮೊಗ್ಗ ಜಿಲ್ಲಾ ಕೇಂದ್ರದಿಂದ ಶಾಸಕರಾಗಿ ವಿದ್ಯಾ ಮಂತ್ರಿ ಆಗಿದ್ದು ಅವತ್ತಿನ ಕಾಲದಲ್ಲಿ ಶಿವಮೊಗ್ಗ ಜಿಲ್ಲಾ ರಾಜಕಾರಣದಲ್ಲಿ ಬದರಿನಾರಾಯಣ ಅಯ್ಯಂಗಾರ್ ಎಷ್ಟು ಪ್ರಬಾವಶಾಲಿ ಅನ್ನುವುದು ಅಂದಾಜಿಸಬಹುದು.*
   *ಮುಖ್ಯಮ೦ತ್ರಿ ನಿಜಲಿಂಗಪ್ಪರ ವಿರುದ್ಧ ದೇವರಾಜ ಅರಸರ ಬಂಡಾಯಕ್ಕೆ ನೀರು ಗೊಬ್ಬರ ಹಾಕಿ ಪೋಷಿಸಿದವರೇ ಬದರಿನಾರಾಯಣ್ ಅಯ್ಯಂಗಾರರು, ಮುಂದೆ ವೀರೇಂದ್ರ ಪಾಟೀಲರು ಮುಖ್ಯಮಂತ್ರಿ ಅವಧಿಯಲ್ಲೂ ಹಿರಿಯ ಶಾಸಕರೂ ಶಿವಮೊಗ್ಗ ಜಿಲ್ಲೆಯ ಕಾಂಗ್ರೇಸ್ ಮುಖಂಡರಾಗಿದ್ದ ಬದರಿ ನಾರಾಯಣ ಅಯ್ಯಂಗಾರರಿಗೆ ದೇವರಾಜ ಅರಸರ ಗುಂಪು ಎಂಬ ಕಾರಣದಿಂದ ಮಂತ್ರಿ ಸ್ಥಾನ ಸಿಗುವುದಿಲ್ಲ.*
   *ದೇವರಾಜ್ ಅರಸರು ಮುಖ್ಯಮಂತ್ರಿ ಆದ ಮೇಲೆ ಬದರಿನಾರಾಯಣ ಅಯ್ಯಂಗಾರರಿಗೆ ಕ್ಯಾಬಿನೆಟ್ ದರ್ಜೆ ವಿದ್ಯಾ ಮಂತ್ರಿ ಸ್ಥಾನ ಸಿಗುತ್ತದೆ ಇದು ಇಡೀ ಶಿವಮೊಗ್ಗ ಜಿಲ್ಲೆಯ ಕಾಂಗ್ರೇಸ್ ಪಕ್ಷದಲ್ಲಿ ಸಂಚಲನ ಉಂಟು ಮಾಡುತ್ತದೆ.*
  *ಒಂದೆ ಒಂದು ಪೈಸೆಯ ಭ್ರಷ್ಟಾಚಾರ ಇಲ್ಲದ, ಸಾತ್ವಿಕ ಜೀವನದ, ಸ್ವಾತಂತ್ರ್ಯ ಹೋರಾಟಗಾರರಾಗಿದ್ದ ಬದರಿನಾರಾಯಣ ಅಯ್ಯಂಗಾರರು ವಿದ್ಯಾ ಮಂತ್ರಿಗಳಾಗಿ ಸುಮ್ಮನೆ ಕೂರಲಿಲ್ಲ ರಾಜ್ಯದದ್ಯಾಂತ ಶಿಕ್ಷಣ ಇಲಾಖೆಯ ಉನ್ನತೀಕರಣಕ್ಕಾಗಿ ಪ್ರವಾಸ, ಅಧ್ಯಯನ ಮಾಡಲು ಪ್ರಾರಂಬಿಸಿದರು.*
  *ಶಿಕ್ಷಣ ಇಲಾಖೆಯಲ್ಲಿನ ಇವರ ಶ್ರಮ ಮತ್ತು ಸಾಧನೆ ಮುಖ್ಯಮಂತ್ರಿ ದೇವರಾಜ ಅರಸರಿಗೆ ಸಮಾದಾನ ಮತ್ತು ಸಂತೋಷ ತರಿಸಿತ್ತು ಆದ್ದರಿಂದ ಆಪ್ತ ಗೆಳೆಯ ಬದರಿನಾರಾಯಣರು ಶಿಕ್ಷಣ ಕ್ಷೇತ್ರದಲ್ಲಿ ಯಾವುದೇ ಹೊಸ ಕಾಯ೯ಕ್ರಮ ತರಲು ಮುಂದಾದರೆ ಮುಖ್ಯಮಂತ್ರಿಗಳು ಹಸಿರು ನಿಶಾನೆ ಇರುತ್ತಿತ್ತು.*
  *ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿನ ವಿದ್ಯಾರ್ಥಿಗಳಿಗೆ ದೇಶದ ಸ್ವಾತಂತ್ರ್ಯ ಹೋರಾಟಗಾರರ ಪರಿಚಯದ ಕಿರುಹೊತ್ತಿಗೆ ನೀಡಬೇಕು ಇದರಿಂದ ಅವರಲ್ಲಿ ದೇಶಾಭಿಮಾನ ವಿದ್ಯಾರ್ಥಿ ದೆಸೆಯಿಂದಲೇ ಬೆಳೆಸಿದರೆ ಮುಂದಿನ ಜನಾಂಗ ಸುಶಿಕ್ಷಿತವಾಗುವ ಜೊತೆ ಸ್ವಾತಂತ್ರ್ಯ ಹೋರಾಟದ ಕಷ್ಟ ಮತ್ತು ಇದಕ್ಕಾಗಿ ಜೀವ ತೇಯ್ದ ಸ್ವಾತಂತ್ರ್ಯ ಸೇನಾನಿಗಳ ನೆನಪು ಉಳಿಯಲಿ ಎಂಬ ಆಸೆ ಆಕಾಂಕ್ಷೆ ಸ್ವತಃ ಸ್ವಾತಂತ್ರ್ಯ ಹೋರಾಟ ಮಾಡಿದ ವಿದ್ಯಾ ಮಂತ್ರಿ ಬದರಿನಾರಾಯಣ ಅಯ್ಯಂಗಾರರದ್ದು ಈಗಿನ ಕಾಲದಲ್ಲಿಯಾದರೆ ಇದು ದೊಡ್ಡ ವಿಚಾರವೇ ಅಲ್ಲ ಆದರೆ 1972 ರಲ್ಲಿ ದೇಶದಲ್ಲಿ ಪ್ರಿಂಟಿಂಗ್ ಟೆಕ್ನಾಲಜಿ ಅತ್ಯಂತ ಹಿಂದುಳಿದ ಕಾಲದಲ್ಲಿ ಈ ಯೋಜನೆ ಮಹತ್ವದ ಯೋಜನೆ ಆಗಿತ್ತು.*
  *ವಿದ್ಯಾ ಮಂತ್ರಿ ಬದರಿನಾರಾಯಣರ ದೇಶಭಕ್ತಿಯ ದೂರದೃಷ್ಟಿಯ ಈ ಯೋಜನೆ ಮುಖ್ಯಮಂತ್ರಿ ಮತ್ತು ಮಂತ್ರಿ ಮಂಡಲ ಅನುಮತಿ ನೀಡಿದ ನಂತರ, ಈ ಕಿರು ಹೊತ್ತಿಗೆ ಚಿತ್ರ ಸಹಿತ ಮುದ್ರಿಸಿ ನೀಡುವ ಕೆಲಸ ರಾಷ್ಟ್ರೋತ್ಥಾನ ಪರಿಷತ್ ಗುತ್ತಿಗೆ ಪಡೆಯುತ್ತದೆ ಆಗಲೇ ದೇವರಾಜ ಅರಸರ ವಿರೋದಿ ಕಾಂಗ್ರೇಸ್ ಬಣ ಸಕ್ರಿಯವಾಯಿತು, ಪ್ರಧಾನ ಮಂತ್ರಿ ಇಂದಿರಾ ಗಾಂಧಿಯವರಲ್ಲಿ ರಾಜ್ಯ ಕಾಂಗ್ರೇಸ್ ಪಕ್ಷದ ಸರ್ಕಾರ ಆರ್.ಎಸ್.ಎಸ್ ನ್ನು ಪೋಷಿಸುತ್ತದೆ ಎಂಬ ಬಾವನೆ ಉಂಟಾಗುವಂತೆ ಮಾಡುತ್ತಾರೆ ಆದರೆ ಮುಖ್ಯಮಂತ್ರಿ ದೇವರಾಜ ಅರಸರ ಮೇಲೆ ಕ್ರಮ ಕೈಗೊಳ್ಳಲು ಯಾವುದೇ ಸಬೂತು ಇರುವುದಿಲ್ಲ ಆದರೆ ವಿದ್ಯಾ ಮಂತ್ರಿ ಬದರಿನಾರಾಯಣರ ಖಾತೆಗೆ ಸಂಬಂದ ಪಟ್ಟ ವಿಚಾರ ಆದ್ದರಿಂದ ತಕ್ಷಣ ಬದರಿನಾರಾಯಣ ಅಯ್ಯಂಗಾರನ್ನ ಮಂತ್ರಿ ಮಂಡಲದಿಂದ ಕೈ ಬಿಡಲು ದೆಹಲಿ ಹೈಕಮಾಂಡ್ ಆದೇಶ ನೀಡುತ್ತದೆ.*
  *ಮುಖ್ಯಮಂತ್ರಿ ದೇವರಾಜ ಅರಸರು ಈ ಎಲ್ಲಾ ಕಾರಣಕ್ಕೆ ಕಾರಣರಾರು ಎಂದು ಅರಿತಿರುತ್ತಾರೆ ಮತ್ತು ಸ್ವತಃ ಪ್ರದಾನ ಮಂತ್ರಿ ಇಂದಿರಾಗಾಂಧಿಯವರಿಗೆ ಮನವರಿಕೆ ಮಾಡಿ ಸರಿಪಡಿಸುವ ಉದ್ದೇಶ ಹೊಂದಿರುತ್ತಾರೆ, ಬದರಿನಾರಾಯಣ ಆಯ್ಯಂಗಾರರು ಸ್ವಾತಂತ್ರ್ಯ ಹೋರಾಟಗಾರರು, ಕಾಂಗ್ರೇಸ್ ನ ಪ್ರಭಲ ಮುಖಂಡರು ಅವರು ಆರ್.ಎಸ್.ಎಸ್ ಸಂಪರ್ಕದವರಲ್ಲ ಎಂದು ಅವರಿಗೆ ಗೊತ್ತಿರುತ್ತದೆ.*
  *ಆದರೆ ಅಧಿಕಾರ ಹಣಕ್ಕಿಂತ ಜೀವನದಲ್ಲಿ ವೈಯಕ್ತಿಕ ತತ್ವ ಸಿದ್ದಾಂತವೇ ದೊಡ್ಡದೆಂದು ತೀರ್ಮಾನಿಸಿದ್ದ ಬದರಿನಾರಾಯಣ ಅಯ್ಯಂಗಾರರು ರಾಜಿನಾಮೆ ನೀಡಿದ್ದನ್ನು ಮಂತ್ರಿ ಮಂಡಲದ ಸಹೋದ್ಯೋಗಿಗಳು, ಸ್ವತಃ ಮುಖ್ಯಮಂತ್ರಿ ಒತ್ತಾಯಿಸಿದರು ವಾಪಾಸು ಪಡೆಯುವುದಿಲ್ಲ.*
 *ದೇವರಾಜ ಅರಸರ ವಿರೋದಿ ಬಣ ಈ ಕೆಲಸಕ್ಕೆ ಆಯ್ಕೆ ಮಾಡಿಕೊಂಡಿದ್ದು ಆಗ ಶಿವಮೊಗ್ಗ ಜಿಲ್ಲೆಯ ಹೊಸನಗರದ ಶಾಸಕರಾಗಿದ್ದ ಆಗಿನ ಯುವ ವಕೀಲರು, ರಾಷ್ಟ್ರೀಯ ಯುವ ಕಾಂಗ್ರೇಸ್ ಮುಖಂಡರಾಗಿ ರಷ್ಯಾ ಮುಂತಾದ ದೇಶಗಳ ಪ್ರವಾಸ ಮಾಡಿ ಪ್ರಧಾನಿ ಇಂದಿರಾ ಗಾಂದಿಗೆ ನಿಕಟರಾಗಿದ್ದ ಹಿಂದಿ ಇಂಗ್ಲೀಷ್ ಬಾಷೆಯಲ್ಲಿ ಪ್ರಬುದ್ಧತೆ ಪಡೆದಿದ್ದ ಶ್ರೀಮಂತ ಭೂಮಾಲಿಕರು ಮತ್ತು ಬ್ರಾಹ್ಮಣರಾಗಿದ್ದ ಶಿರ್ನಾಳಿ ಮನೆತನದ ಶಿರ್ನಾಳಿ ಚಂದ್ರಶೇಖರ್ ಅವರನ್ನು ಅವರು ವಹಿಸಿಕೊಂಡ ಈ ಕೆಲಸ ಯಶಸ್ವಿ ಆಗಿ ಮಾಡಿ ಮುಗಿಸುತ್ತಾರೆ.*
  *ಈ ರೀತಿ ಆನಂದಪುರಂ ಬದರಿನಾರಾಯಣ್ ಅಯ್ಯಂಗಾರ್ ವಿದ್ಯಾ ಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡುತ್ತಾರೆ.*
(ನಾಳೆ ಮುಂದಿನ ಭಾಗ - 38)

Comments

Popular posts from this blog

Blog number 1782. ಅರಳಸುರಳಿಯ ರಾಘವೇಂದ್ರ ಕೇಕೋಡರ ಕುಟುಂಬದ ತಪ್ಪು ನಿರ್ದಾರದ ದುರಂತ.

#ತೀರ್ಥಹಳ್ಳಿಯ_ಅರಳಸುರಳಿಯ_ಒಂದೇ_ಕುಟುಂಬದ_ನಾಲ್ವರು_ಮೃತರಾದ_ರಹಸ್ಯವೇನು? #ಈ_ಬಗ್ಗೆ_ಆ_ಊರಿನ_ಸಮೀಪದ_ಈ_ಕುಟುಂಬದ_ಪರಿಚಯ_ಇರುವವರಿಗೆ_ವಿಚಾರಿಸಿದ್ದೆ. #ಅವರು_ಈ_ಘಟನೆ_ಬಗ್ಗೆ_ಸವಿಸ್ತಾರವಾಗಿ_ಲಿಖಿತ_ಲೇಖನ_ಬರೆದಿದ್ದಾರೆ. #ಅವರ_ವಿನಂತಿ_ಅವರ_ಹೆಸರು_ಬಹಿರಂಗಗೊಳಿಸ_ಬಾರದು. #ಆದ್ದರಿಂದ_ಈ_ಲೇಖನ_ಪೋಸ್ಟ್_ಮಾಡಬಾರದೆಂದಿದ್ದೆ_ಆದರೆ_ಇದು_ಮಲೆನಾಡಿಗರ_ಮನೆ_ಮನೆಯ_ಕಥೆ #ಆದ್ದರಿಂದ_ಇಲ್ಲಿ_ಪೋಸ್ಟ್_ಮಾಡಿದೆ.    ಇಲ್ಲಿ ತಪ್ಪು ಯಾರದ್ದೂ ಇಲ್ಲ... ಪಶ್ಚಾತ್ತಾಪದ ಪ್ರಾಯಶ್ಚಿತ ಕೇಳಲು ಅವರಾರು ಇಲ್ಲ .....ಆದರೆ ಈ ರೀತಿ ಜೀವ ತ್ಯಾಗ ಮಾಡುವ ಆತುರದ ಕೆಟ್ಟ ನಿರ್ದಾರ ಮಾತ್ರ ಸರಿ ಅಲ್ಲ.     ಇವರ ಅಣ್ಣ ಆರ್.ಎಸ್.ಎಸ್. ಪ್ರಚಾರಕರಾಗಿ ದೆಹಲಿಯಲ್ಲಿ ಏಳು ವಷ೯ ಮೋದಿ ಜೊತೆ ಒಂದೇ ಕೋಣೆ ಹಂಚಿಕೊಂಡವರು, ಇನ್ನೊಬ್ಬ ಸಹೋದರ ಮೂಳೆ ತಜ್ಞರಾಗಿ ಶಿವಮೊಗ್ಗದಲ್ಲಿ ಆಸ್ಪತ್ರೆ ಮಾಡಿಕೊಂಡಿದ್ದಾರೆ.   #ದೀರ್ಘವಾದರೂ_ಪೂರ್ಣ_ಲೇಖನ_ಓದಿ   #ಹೀಗೊಂದು_ಸುಕುಟುಂಬ_ಆತ್ಮಾಘಾತ_ಮತ್ತು_ತದನಂತರದ_ಸಹಾಗಮನ.... ಮೂಡಣದಲ್ಲಿ ರವಿ ಮೂಡಲು ಅಣಿ ಯಾಗುತ್ತಿಧ್ದ .. ಹಾದಿಗಣಪತಿ ದೇವರು ಗರ್ಭಗುಡಿಯ ನಂದಾದೀಪದ ಮಂದ ಬೆಳಕಿನಲ್ಲಿ ತನ್ನ ಗುಡಿಯ ಎದುರಿನ ತಗ್ಗಿನಲ್ಲಿದ್ದ  ರಾಘವೇಂದ್ರ ಕೇಕೋಡರ ಮನೆಯನ್ನು ಎವೆಯಕ್ಕದೇ ನೋಡುತ್ತಲಿದ್ದ... ಊರ ಎಲ್ಲಾ ಮನೆಯಂತೆ ಆ ಮನೆಯಲ್ಲೂ ಆ ಬೆಳಗಿನಲ್ಲಿ ಮನೆಯೊಡತಿ ನಾಗರತ್ನಕ್ಕ ಆ ಸಮಯದಲ್ಲಿ ದೇವರಿಗೆ ದೀಪ ಹಚ್ಚಿ ಹೊಸ್ತಿಲು ಪೂಜೆ ಮಾಡ

Blog number 1037. ರಾಜಕುಮಾರಿ ಶಾಂತವ್ವ ಮತ್ತು ದಲಿತ ಯುವಕ ಸಿದ್ದೇಶ್ವರರ ಅಮರ ಪ್ರೇಮದ ಸ್ಮಾರಕ, ಅನ್ಯ ಜಾತಿ ವಿವಾಹವಾದ್ದರಿಂದ ರಾಜಕುಮಾರಿಗೆ ಸೂಳೆ ಪಟ್ಟ ನೀಡಿದ ಸಮಾಜ. ಸಮಾಜದ ಒಳಿತಿಗಾಗಿ ಶಾಂತವ್ವ ಕಟ್ಟಿಸಿದ ಬೃಹತ್ ಕೆರೆಗೆ ಜನ ಕರೆದದ್ದು ಸೂಳೆ ಕಟ್ಟಿಸಿದ ಕೆರೆ ಅದೇ ಸೂಳೆಕೆರೆ / ಶಾಂತಿ ಸಾಗರ

# ಸೂಳೆಕೆರೆ (ಶಾಂತಿ ಸಾಗರ) ಅಂತರ್ ಜಾತಿ ಪ್ರೇಮ ವಿವಾಹದ ದುರOತ ಕಥೆ. #ಅಕ್ಟೋಬರ್ 2019 ರಲ್ಲಿ ತುಂಬಿ ತುಳುಕಿತ್ತು.  ಚಿತ್ರದುಗ೯, ದಾವಣಗೆರೆ ಬಳ್ಳಾರಿ ಮುಂತಾದ ಮಳೆ ಕಡಿಮೆ ಆಗುತ್ತಿದ್ದ ಜಿಲ್ಲೆಗಳಲ್ಲಿ ಅದೂ ಅಕ್ಟೋಬರ್ ತಿಂಗಳ 2019 ರಲ್ಲಿ  ಬಂದಿದ್ದ ಬಾರಿ ಮಳೆ ಎಲ್ಲಾ ಕೆರೆ, ಹೊಂಡಗಳು ತುಂಬಿ ತುಳುಕಿದೆ, ಸಾಮಾಜಿಕ ಜಾಲ ತಾಣದಲ್ಲಿ 40 ವಷ೯ದಲ್ಲಿ ಇಂತ ಮಳೆ ಬಂದಿಲ್ಲ ಅಂತ ಸುದ್ದಿ ಹರಿದಾಡುತ್ತಿತ್ತು ಮತ್ತು  ಸೂಳೆಕೆರೆ ತುಂಬಿ ಕೋಡಿ ಬಿದ್ದಿದೆ ಅಂತೆಲ್ಲ Post ನೋಡಿ ಬೆಂಗಳೂರಿಂದ ಬರುವಾಗ ಚಿತ್ರದುಗ೯ ಮಾಗ೯ವಾಗಿ ಚನ್ನಗಿರಿ ತಲುಪಿ ಸೂಳೆಕೆರೆ ನೋಡಲು ಹೋಗಿದ್ದೆ.  11ನೇ ಶತಮಾನದಲ್ಲಿ (1128ರಲ್ಲಿ)ಕೇವಲ 3 ವಷ೯ದಲ್ಲಿ ಈ ಕೆರೆ ನಿಮಾ೯ಣ ಮಾಡಿಸಿದ್ದು ಶಾಂತವ್ವ ಎಂಬ ರಾಜ ಕುಮಾರಿ ಅವಳು ಸ್ವಣ೯ವತಿ ಪಟ್ಟಣದ ದೊರೆ ವಿಕ್ರಮ ರಾಜನ ಮಗಳು, ಸಿದ್ದೇಶ್ವರ ಎಂಬ ಅನ್ಯ ಜಾತಿಯ ಯುವಕನೊ೦ದಿಗೆ ಗಾಂದವ೯ ವಿವಾಹ ಆಗುತ್ತಾಳೆ ಇದನ್ನ ಸಹಿಸದ ಮತ್ತು ಒಪ್ಪದ ಜನತೆ ಸೂಳೆ ಎಂದು ಮೂದಲಿಸುತ್ತಾರOತೆ ಈ ರೀತಿ ತನಗೆ ಬಂದ ಕಳಂಕ ಕಳೆಯಲು ಈ ಬೃಹತ್ ಕೆರೆ ತನ್ನ ಪತಿ ಸಿದ್ದೇಶ್ವರನ ಜೊತೆ ಸೇರಿ ನಿಮಿ೯ಸಿ ಕೆರೆಗೆ ಹಾರವಾದಳೆoಬ ಇತಿಹಾಸ ಇದೆ ಇದರಿಂದ ನೊಂದ ಪತಿ ಸಿದ್ಧೇಶ್ವರ ಕೂಡ ಎದುರಿನ ಗುಡ್ಡದಲ್ಲಿ ಜೀವ ತ್ಯಾಗ ಮಾಡುತ್ತಾನೆ ಈಗ ಅಲ್ಲಿ ಸಿದ್ದೇಶ್ವರ ದೇವಸ್ಥಾನವಿದೆ.   ಈ ಕೆರೆ ಈಗಲೂ ಸೂಳೆಕೆರೆ ಎಂದೆ ಹೆಸರಾಗಿದೆ ಈ

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್ಪಿಸಿಕೊಳ್ಳಬೇಕು ಅಂತ ಬಿದನೂರು ನಗರ ಸಮೀಪದ ದೇವಗಂಗೆ ಎಂಬ ಕೆಳದಿ