Skip to main content

ಕನ್ನಡದಲ್ಲಿ ಐಎಎಸ್ ಪಾಸು ಮಾಡಿದ ಮೊದಲ ಅಧಿಕಾರಿ ಕೆ.ಶಿವರಾಂ

2018ರ ಜೂನ್ ತಿಂಗಳಲ್ಲಿ ದಿಡೀರ್ ಆಗಿ ಬಂದಿದ್ದ ಕೆ.ಶಿವರಾಂ ನನಗೆ ತುಂಬಾ ಇಷ್ಟ, ನನ್ನ ಅತಿಥ್ಯ ಸ್ವೀಕರಿಸಿದ 3 ವರ್ಷದ ಹಿಂದಿನ ನೆನಪುಗಳು.
*ಕೆ.ಶಿವರಾಂ ಕನ್ನಡದಲ್ಲಿ ಐಎಎಸ್ ಮಾಡಿದ ಮೊದಲಿಗರು.*
*ಇವರ ಜೀವನ ಒಂದು ಹೊರಾಟ ಯಾಕೆಂದರೆ ಇವರ ಬಾಲ್ಯ ಅತ್ಯಂತ ಬಡತನದ್ದು, ದಲಿತ ಕುಟುಂಬದಲ್ಲಿ ಜನಿಸಿದ ಇವರು ಎಲ್ಲಾ ಸವಾಲುಗಳನ್ನ ಎದುರಿಸಿ ದೊಡ್ಡ ಹುದ್ದೆ ಪಡೆದ ಕಥೆ ಎಲ್ಲರಿಗೂ ಒಂದು ಪ್ರೇರಣೆ ಆಗುತ್ತದೆ.*
  *ಶಿವಮೊಗ್ಗದ ಜಿಲ್ಲಾ ಪಂಚಾಯತ್ ಗೆ ಮುಖ್ಯ ಕಾಯ೯ ನಿವಾ೯ಹಕ ಅಧಿಕಾರಿಯಾಗಿ ಇವರು ಬಂದಾಗ ಜಿಲ್ಲಾ ಪಂಚಾಯತ್ ಸದಸ್ಯರಾದ ನಮಗೆಲ್ಲ ಕುತೂಹಲ ಆಗಷ್ಟೆ ಇವರ ಬಾ ನಲ್ಲೆ ಮದು ಚಂದ್ರಕೆ ಎಂಬ ಸಿನಿಮಾದಿಂದ ಇವರು ಖ್ಯಾತರಾಗಿದ್ದರು, ಬೆಂಗಳೂರು ಬಿಡಿಎ ಅಧಿಕಾರಿ ಆಗಿದ್ದಾಗ ಬೆಂಗಳೂರಲ್ಲಿ ಬಡವರಿಗೆ ಆಶ್ರಯ ನಿವೇಶನ ನೀಡಿ ದಾಖಲೆ ಮಾಡಿದ್ದರು, ಮೈಸೂರಿನಲ್ಲಿ ಕೂಡ ಅಭಿವೃದ್ಧಿ ಮಾಡಿ ಖ್ಯಾತರಾಗಿದ್ದರು.*
   *ಇವರು ಶಿವಮೊಗ್ಗ ಬಂದಾಗಲೇ ನಮ್ಮ ಊರಾದ ಆನಂದಪುರಂನಲ್ಲಿ ಜಿಲ್ಲಾ ಮಟ್ಟದ ಯುವಜನ ಮೇಳ ಆನಂದಪುರಂನ ಕನ್ನಡ ಸಂಘದ ಆಗಿನ ಅದ್ಯಕ್ಷರಾಗಿದ್ದ ಹಾ.ಮೊ.ಬಾಷ ನೇತೃತ್ವದಲ್ಲಿ ಹಮ್ಮಿಕೊಂಡಿದ್ದೆವು. ಉದ್ಘಾಟನೆ ಮಾಜಿ ಮುಖ್ಯಮಂತ್ರಿ ಬಂಗಾರಪ್ಪರಿಂದ, ಕಾಗೋಡು ತಿಮ್ಮಪ್ಪ, ಕುಮಾರ್ ಬಂಗಾರಪ್ಪಾ, ಆಗಿನ ಜಿಲ್ಲಾ ಪಂಚಾಯತ ಅಧ್ಯಕ್ಷೆ ಶ್ರೀಮತಿ ಬಲ್ಕಿಶ್ ಬಾನು ಮುಂತಾದವರೆಲ್ಲ ಭಾಗವಹಿಸಿದ್ದರು,.*
  *ಈ ಅದ್ದೂರಿ ಮತ್ತು ಯಶಸ್ವಿ ಯುವಜನ ಮೇಳ ಅತ್ಯಂತ ವಣ೯ಮಯವಾಗಿ ನಡೆಯಲು ಅವತ್ತು ಜಿಲ್ಲಾ ಪಂಚಾಯತ್ ಅಧಿಕಾರಿಯಾಗಿದ್ದ ಕೆ.ಶಿವರಾಂ ಕಾರಣ ಕತ೯ರು.*
*ಅವರ ಮತ್ತು ನನ್ನ ಗೆಳೆತನ ಅಪೂವ೯, ಅವರ ಜೀವನದ ಬಗ್ಗೆ ಕೇಳಿದಾಗ ಅವರಾಡಿದ ಮಾತುಗಳು .....*
  *ವಾರದ ಮುದ್ದೆ ಊಟದಲ್ಲಿ ವಿದ್ಯಾಭ್ಯಾಸ ಮಾಡಿ ಬೆಂಗಳೂರಿನ ಸೆಂಟ್ರಲ್ ಜೈಲ್ನಲ್ಲಿ FDC ಯಾಗಿ ಕೆಲಸಕ್ಕೆ ಸೇರುತ್ತಾರೆ ಸ್ವಲ್ಪ ದಿನದಲ್ಲಿ ಅವರಿಗೆ ಅಲ್ಲಿನ ಪೋಲಿಸ್ ಅಧಿಕಾರಿಗಳ ನೋಡಿ ತಾನೂ ಡಿವೈಎಸ್ಪಿ ಆಗಬೇಕು ಅಂತ ಅನ್ನಿಸುತ್ತದೆ ಯಾಕೆಂದರೆ ಅವರಿಗೆ ಸಿಗುವ ಗೌರವ, ನಂತರ ಓದಿ ಪರೀಕ್ಷೆ ಬರೆದು Dy SP ಆಗುತ್ತಾರೆ ಮಿರಿ ಮಿರಿ ಮಿಂಚುವ ಕೆಂಪು ಬೂಟಿನಲ್ಲಿ ಜೀಪಿನಲ್ಲಿ ಬಂದಿಳಿಯುತ್ತಾರೆ ಆದರೆ ಸ್ವಲ್ಪ ದಿನದಲ್ಲೇ ಅವರಿಗೆ ಭ್ರಮನಿರಸನ ಆಗುತ್ತೆ IAS ಅಥವ IPS ಆಗಲೇ ಬೇಕು ಅನ್ನುವ ಮಹತ್ವಾಕಾಂಕ್ಷೆ ಮೂಡುತ್ತದೆ.*
  *ಕೊನೆಗೂ ಅದನ್ನ ಸಾದಿಸುತ್ತಾರೆ ಅದು ನಮ್ಮ ರಾಜ್ಯದ ಕನ್ನಡ ಬಾಷೆಯಲ್ಲಿ ಐಎಎಸ್ ಪರೀಕ್ಷೆ ಬರೆದು ಪಾಸು ಮಾಡಿದ ಮೊದಲಿಗರೆಂಬ ದಾಖಲೆಯಲ್ಲಿ.*  
  *ಇವರ ಮನೆಯಲ್ಲಿ ರಾಗಿ ಮುದ್ದೆ ಉಪ್ಪು ಸಾರು ಊಟ ಮಾಡಿದ್ದೆ ಇವತ್ತು ನನ್ನ ಅತಿಥಿ ಆಗಿ ಬಿರಿಯಾನಿ ತಿಂದದ್ದು ನನಗೆ ಅತ್ಯಂತ ಸಂತೋಷವಾಯಿತು.*
  *ಇವರ ಜೀವನ ಒಂದು ಸಾದನೆ ಯುವ ಜನರಿಗೆ ಪ್ರೇರಣೆ ಕೂಡ ಪ್ರಯತ್ನ ಮಾಡಿದರೆ ಏನನ್ನು ಸಾದಿಸಬಹುದು ಎಂಬುದಕ್ಕೆ ಒಂದು ಉದಾಹರಣೆ.*

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...