Skip to main content

ಸದ್ಯದಲ್ಲೇ ಬಿಡುಗಡೆ ಆಗಲಿರುವ ನನ್ನ 29 ಸಣ್ಣ ಕಥಾ ಸಂಕಲನದಲ್ಲಿ ಶೃಂಗೇಶರ ಶುಭ ನುಡಿಗಳು ಮುದ್ರಣ ಆಗಿದೆ, ನನ್ನ ಅವರ ಗೆಳೆತನಕ್ಕೆ ಬೆಳ್ಳಿಹಬ್ಬವೂ ಹೌದು

 ಶೃಂಗೇಶರು ನನ್ನ ಒತ್ತಾಯಕ್ಕೆ ನನ್ನ ಕಥಾ ಸಂಕಲನಕ್ಕೆ ಶುಭ ನುಡಿ ಬರೆದಿದ್ದಾರೆ

#ಮೊದಲ_ಕಾದಂಬರಿಯಂತೆ_ಮೊದಲ_ಕಥಾ_ಸಂಕಲನಕ್ಕೂ_ಅವರ_ಸಹಕಾರವಿದೆ.

#ಗೆಳೆತನಕ್ಕೆ_ಬೆಳ್ಳಿ_ಹಬ್ಬ.

   ನನ್ನ ಮತ್ತು ಶೃಂಗೇಶರ ಗೆಳೆತನಕ್ಕೆ 25 ವರ್ಷದ ಗಡಿ ದಾಟಿದೆ ಒಂದು ರೀತಿ ಗೆಳೆತನದ ಬೆಳ್ಳಿಹಬ್ಬದ ಆಚರಣೆ.
  ಗೆಳೆತನ ಪರಿಚಯ ಪ್ರಾರಂಭ ಆಗಿದ್ದು ನನ್ನ ರಾಜಕೀಯ ಮತ್ತು ಅವರ ಪತ್ರಕರ್ತ ಜೀವನದಿಂದ,ಈಗ ರಾಜಕೀಯದಿಂದ ನಾನು ದೂರ ಆದಂತೆ ಶೃಂಗೇಶರು ಪತ್ರಿಕೋದ್ಯಮದಿಂದ ಒಂದು ಕಾಲು ತೆಗೆದಾಗಿದೆ.
  ಜಿಲ್ಲಾ ಪಂಚಾಯತ್ ನಲ್ಲಿ ಸದಸ್ಯನಾಗಿ ಭ್ರಷ್ಟಾಚಾರ ವಿರೋದದ ನನ್ನ ಹೋರಾಟದ ದಿನಗಳವು..... ಜೆ.ಹೆಚ್.ಪಟೇಲರು ಮುಖ್ಯಮಂತ್ರಿ, ಯಡೂರಪ್ಪ ವಿರೋದ ಪಕ್ಷದ ನಾಯಕರು, ಈಶ್ವರಪ್ಪ, ಕಾಗೋಡು, ಆರಗ ಜ್ಞಾನೇಂದ್ರ, ಮಂತ್ರಿ ಬಸವಣ್ಯಪ್ಪ, ಸಂಸದ ಡಿ.ಬಿ.ಚಂದ್ರೇಗೌಡರೆಲ್ಲ ಜಿಲ್ಲಾ ಪಂಚಾಯತ್ ಸಭೆಯಲ್ಲಿ ಭಾಗವಹಿಸುತ್ತಿದ್ದ ಕಾಲ ಅದು.
  ಬಡವರಿಗೆ ಖರೀದಿಸಿದ ಕೋಟ್ಯಾಂತರ ರೂಪಾಯಿ ಔಷದಿ ಕಳಪೆ ಅಂತ ಜಿಲ್ಲಾ ಸರ್ಜನರು ನೀಡಿದ ಗುಪ್ತ ಮಾಹಿತಿ ಹಿಡಿದು ಸಭೆಯಲ್ಲಿ ತನಿಖೆಗೆ ಒತ್ತಾಯಿಸಿದ ಮರುದಿನ ಬಡವರ ಔಷದಿ ವಿದ್ಯುತ್ ಶಾರ್ಟ್ ಸರ್ಕೂಟ್ ನಿಂದ ಭಸ್ಮ ಅಯಿತೆಂಬ ಅಧಿಕಾರಿಗಳ ಪತ್ರಿಕಾ ಹೇಳಿಕೆ ನೋಡಿ ಗೊತ್ತಾಯಿತು ಉದ್ದೇಶ ಪೂರ್ವಕವಾಗಿ ಕಳಪೆ ಔಷದಿ ಸುಟ್ಟಿದ್ದಾರಂತ.
  ಈ ಬಗ್ಗೆ ಸಿಓಡಿ ತನಿಖೆಗಾಗಿ ಹಠ ಹಿಡಿದಾಗ ಮುಖ್ಯ ಕಾರ್ಯ ನಿರ್ವಾಹಕರಾಗಿದ್ದ ಉಮಾಶಂಕರ್ (ಈಗ ಸರ್ಕಾರದಲ್ಲಿ ಉನ್ನತ ಹುದ್ದೆಯಲ್ಲಿದ್ದಾರೆ) ನೀಡಿದ ಸುಳ್ಳು ದೂರಿನಲ್ಲಿ ನನ್ನ ಜೈಲಿಗೆ ಹಾಕಿದ್ದರು (ಅವತ್ತಿನ ಸಭೆಯಲ್ಲಿ ಹಾಲಿ ಜಿಲ್ಲಾ ಮಂತ್ರಿ ಈಶ್ವರಪ್ಪ, ಹಾಲಿ ಗೃಹ ಸಚಿವರಾದ ಆರಗ ಜ್ಞಾನೇಂದ್ರ ಕೂಡ ಇದ್ದರು) ಒಂದು ಕೇಸಿನಲ್ಲಿ ಜಾಮೀನಾದರೂ ಇನ್ನೊಂದು ಕೇಸು ಸೃಷ್ಟಿಸಿ ಮತ್ತೆ ಜೈಲು.
  ಈ ಸಂದರ್ಭದಲ್ಲಿ ಆ ಕಾಲದ ಪ್ರಭಲ ಪತ್ರಿಕೆ ಆಗಿದ್ದ ಹಾಯ್ ಬೆಂಗಳೂರಲ್ಲಿ ಶೃಂಗೇಶರು ವೈಯಕ್ತಿಕ ಪರಿಚಯ ಇಲ್ಲದಿದ್ದರೂ ನನ್ನ ಹೋರಾಟ ಬೆಂಬಲಿಸಿ ಬರೆದ ಲೇಖನ ನನಗೆ ಆತ್ಮವಿಶ್ವಾಸ ಉಂಟು ಮಾಡಿತ್ತು ಹೀಗೆ ಶೃಂಗೇಶರ ಗೆಳೆತನ ಬೆಳ್ಳಿಹಬ್ಬ ದಾಟಿ ಮುಂದುವರಿಯುತ್ತಿರುವುದು ನನಗೂ ಸೋಜಿಗವೇ.
  ಕಳೆದ ವರ್ಷ ಇವರ ಮುದ್ರಣ ಸಂಸ್ಥೆಯಿಂದ ನನ್ನ ಮೊದಲ ಕಾದಂಬರಿ "ಬೆಸ್ತರ ರಾಣಿ ಚಂಪಕಾ" ಮುದ್ರಣ ಆಗಿ ಶೃಂಗೇಶ್ ರಿಂದ ಬಿಡುಗಡೆ ಆಗಿ ಅನೇಕ ದಾಖಲೆಗೆ ಕಾರಣ ಆಯಿತು, ಈಗ 29 ಕಥೆಗಳ ಕಥಾ ಸಂಕಲನ ಕೂಡ ಇವರ ಸಂಸ್ಥೆಯಿಂದಲೇ ಮುದ್ರಣ ಆಗುತ್ತಿದೆ ಈ ಪುಸ್ತಕಕ್ಕೆ ನಮ್ಮಿಬ್ಬರ ಗೆಳೆತನ ಮತ್ತು ಮುದ್ರಣ ಶ್ರಮಕ್ಕಾಗಿ ತಾವು ಶುಭ ಹಾರೈಕೆಯನ್ನು ಬರೆಯಲೇ ಬೇಕೆಂದು ಒತ್ತಾಯಿಸಿದ್ದಕ್ಕೆ ಶುಭ ಹಾರೈಕೆ ಬರೆದಿದ್ದಾರೆ.

#ಶೃಂಗೇಶ್_ಬರೆದಿದ್ದು_ಕಥಾ_ಸಂಕಲದಲ್ಲಿ

ಇವು ಕಥಾಪಾತ್ರಗಳಷ್ಟೇ ಅಲ್ಲ...

ಆತ್ಮೀಯರಾದ ಅರುಣ್ ಪ್ರಸಾದ್ ರವರ ಮತ್ತೊಂದು ಪುಸ್ತಕ ಮುದ್ರಣಗೊಂಡು ಓದುಗರ ಕೈಸೇರುತ್ತಿದೆ. ನನ್ನ ನೂರೆಂಟು ಉಪದ್ವ್ಯಾಪಗಳ ನಡುವೆ ವಹಿಸಬೇಕಾದಷ್ಟು ಆಸಕ್ತಿ ವಹಿಸಲಾರದ್ದಕ್ಕೆ ಪುಸ್ತಕದ ಮುದ್ರಣ ತಡವಾಯಿತಾದರು ಒಂದು ಉತ್ತಮ ಕಥಾಸಂಕಲನ ಓದುಗಾಸಕ್ತರ ಕೈಸೇರುತ್ತಿರುವುದರ ಖುಷಿ ಇದೆ.

    ಸಿದ್ಧಮಾದರಿಯ ಅನುಭವಲೋಕವನ್ನು ಮೀರಿ ಓದುಗರನ್ನು ಲವಲವಿಕೆಯ ವಿಸ್ತಾರ ಜಗತ್ತಿಗೆ ಕರೆದೊಯ್ಯುವ ಕತೆಗಳು ಇಲ್ಲಿವೆ.ಓದುತ್ತ ಹೋದರೆ ಇವು ಕತೆಯೋ, ಪ್ರಬಂಧಗಳೊ,ಅನುಭವ ಕಥನವೋ  ಗೊತ್ತಾಗದಂತೆ ಒಂದಕ್ಕೊಂದು ಬೆಸೆದುಕೊಂಡ ಜನಜೀವನವನ್ನು ಅನಾವರಣಗೊಳಿಸುವ ಇಲ್ಲಿನ ಬರವಣಿಗೆ ಆಪ್ತ ಭಾವ ಮೂಡಿಸುತ್ತದೆ.

    ಅರುಣ್ ಪ್ರಸಾದ್ ಜೊತೆ ಗಂಟೆಗಟ್ಟಲೆ ಹರಟೆ ಹೊಡೆಯುವಾಗ  ಇಲ್ಲಿನ ಪಾತ್ರಗಳು ಪ್ರತ್ಯಕ್ಷವಾದದ್ದು ಇದೆ.ಸ್ವಾರಸ್ಯಕರವಾಗಿ ಅವರ ಬಾಯಲ್ಲಿ ಕೇಳಿದ ಘಟನಾವಳಿಗಳು ಇಲ್ಲಿ ಕಥೆಯ ಸ್ವರೂಪ ಪಡೆದುಕೊಂಡಿವೆ.ಅಂದರೆ ಅರುಣ್ ಪ್ರಸಾದ್ ತಮ್ಮದೇ ಅನುಭವಗಳನ್ನು,ತಾವು ಕೇಳಿದ ಕತೆಗಳನ್ನು ಇಲ್ಲಿ ಚಂದವಾಗಿ ಕಟ್ಟಿಕೊಟ್ಟಿದ್ದಾರೆ.ಅವು ಯಾವುವೂ ಹೋರಾಗಿನದಲ್ಲ.

ಇವತ್ತು ಸಾಮಾಜಿಕ ಜಾಲತಾಣಗಳಲ್ಲಿ ಅವರ ಬರವಣಿಗೆ ತುಂಬಾ ಜನರನ್ನು ತಲುಪುತ್ತಿವೆ.ಆದರೆ ಅವರ ಪ್ರಕಟಿತ ಕಾದಂಬರಿ ಮತ್ತು ಇಲ್ಲಿನ ಕತೆಗಳೆಲ್ಲವು ಅವರು ಈ ಮೊದಲೇ ಬರೆದಂತಹವುಗಳೇ ಆಗಿವೆ ಎಂಬುದನ್ನು ಮನದಲ್ಲಿ ಇಟ್ಟುಕೊಂಡು ಓದಿದರೆ ಇಲ್ಲಿನ ಕತೆಗಳನ್ನು ಗ್ರಹಿಸಲು ಅನುಕೂಲವಾಗಲಿದೆ.

ಅರುಣ್ ಪ್ರಸಾದ್ ರ ಜೀವನಾನುಭವವು ತುಂಬಾ ವೈವಿಧ್ಯ ಮಯವಾದುದು.ಜನಪರ ಹೋರಾಟ,ರಾಜಕೀಯ ಚಟುವಟಿಕೆಗಳಲ್ಲಿ ಅವರು ತೊಡಗಿಸಿಕೊಂಡಾಗಿನ ಅನುಭವಗಳು ಮಲೆನಾಡಿನ ರಾಜಕೀಯ,ಸಾಮಾಜಿಕ ದಾಖಲೆಯಾಗಿಯೂ ಮಹತ್ವದವು ಎಂಬುದನ್ನು ಗ್ರಹಿಸಿ ಹೇಳುವುದಾದರೆ ಅವರಿಂದ ಒಂದು  ಅನುಭವ ಕಥನ ಅಥವಾ ಆತ್ಮ ಚರಿತ್ರೆ ಪುಸ್ತಕ ಬರಲಿ ಎಂಬುದು ನನ್ನಂತಹ ಗೆಳೆಯರ ಅಪೇಕ್ಷೆ.

ಅರುಣ್ ಪ್ರಸಾದ್ ತಮ್ಮ ಬರವಣಿಗೆಯನ್ನು ಹೀಗೆಯೇ ಮುಂದುವರಿಸಲಿ....

ಶೃಂಗೇಶ್
ಪತ್ರಕರ್ತ

Comments

Popular posts from this blog

Blog number 1782. ಅರಳಸುರಳಿಯ ರಾಘವೇಂದ್ರ ಕೇಕೋಡರ ಕುಟುಂಬದ ತಪ್ಪು ನಿರ್ದಾರದ ದುರಂತ.

#ತೀರ್ಥಹಳ್ಳಿಯ_ಅರಳಸುರಳಿಯ_ಒಂದೇ_ಕುಟುಂಬದ_ನಾಲ್ವರು_ಮೃತರಾದ_ರಹಸ್ಯವೇನು? #ಈ_ಬಗ್ಗೆ_ಆ_ಊರಿನ_ಸಮೀಪದ_ಈ_ಕುಟುಂಬದ_ಪರಿಚಯ_ಇರುವವರಿಗೆ_ವಿಚಾರಿಸಿದ್ದೆ. #ಅವರು_ಈ_ಘಟನೆ_ಬಗ್ಗೆ_ಸವಿಸ್ತಾರವಾಗಿ_ಲಿಖಿತ_ಲೇಖನ_ಬರೆದಿದ್ದಾರೆ. #ಅವರ_ವಿನಂತಿ_ಅವರ_ಹೆಸರು_ಬಹಿರಂಗಗೊಳಿಸ_ಬಾರದು. #ಆದ್ದರಿಂದ_ಈ_ಲೇಖನ_ಪೋಸ್ಟ್_ಮಾಡಬಾರದೆಂದಿದ್ದೆ_ಆದರೆ_ಇದು_ಮಲೆನಾಡಿಗರ_ಮನೆ_ಮನೆಯ_ಕಥೆ #ಆದ್ದರಿಂದ_ಇಲ್ಲಿ_ಪೋಸ್ಟ್_ಮಾಡಿದೆ.    ಇಲ್ಲಿ ತಪ್ಪು ಯಾರದ್ದೂ ಇಲ್ಲ... ಪಶ್ಚಾತ್ತಾಪದ ಪ್ರಾಯಶ್ಚಿತ ಕೇಳಲು ಅವರಾರು ಇಲ್ಲ .....ಆದರೆ ಈ ರೀತಿ ಜೀವ ತ್ಯಾಗ ಮಾಡುವ ಆತುರದ ಕೆಟ್ಟ ನಿರ್ದಾರ ಮಾತ್ರ ಸರಿ ಅಲ್ಲ.     ಇವರ ಅಣ್ಣ ಆರ್.ಎಸ್.ಎಸ್. ಪ್ರಚಾರಕರಾಗಿ ದೆಹಲಿಯಲ್ಲಿ ಏಳು ವಷ೯ ಮೋದಿ ಜೊತೆ ಒಂದೇ ಕೋಣೆ ಹಂಚಿಕೊಂಡವರು, ಇನ್ನೊಬ್ಬ ಸಹೋದರ ಮೂಳೆ ತಜ್ಞರಾಗಿ ಶಿವಮೊಗ್ಗದಲ್ಲಿ ಆಸ್ಪತ್ರೆ ಮಾಡಿಕೊಂಡಿದ್ದಾರೆ.   #ದೀರ್ಘವಾದರೂ_ಪೂರ್ಣ_ಲೇಖನ_ಓದಿ   #ಹೀಗೊಂದು_ಸುಕುಟುಂಬ_ಆತ್ಮಾಘಾತ_ಮತ್ತು_ತದನಂತರದ_ಸಹಾಗಮನ.... ಮೂಡಣದಲ್ಲಿ ರವಿ ಮೂಡಲು ಅಣಿ ಯಾಗುತ್ತಿಧ್ದ .. ಹಾದಿಗಣಪತಿ ದೇವರು ಗರ್ಭಗುಡಿಯ ನಂದಾದೀಪದ ಮಂದ ಬೆಳಕಿನಲ್ಲಿ ತನ್ನ ಗುಡಿಯ ಎದುರಿನ ತಗ್ಗಿನಲ್ಲಿದ್ದ  ರಾಘವೇಂದ್ರ ಕೇಕೋಡರ ಮನೆಯನ್ನು ಎವೆಯಕ್ಕದೇ ನೋಡುತ್ತಲಿದ್ದ... ಊರ ಎಲ್ಲಾ ಮನೆಯಂತೆ ಆ ಮನೆಯಲ್ಲೂ ಆ ಬೆಳಗಿನಲ್ಲಿ ಮನೆಯೊಡತಿ ನಾಗರತ್ನಕ್ಕ ಆ ಸಮಯದಲ್ಲಿ ದೇವರಿಗೆ ದೀಪ ಹಚ್ಚಿ ಹೊಸ್ತಿಲು ಪೂಜೆ ಮಾಡ

Blog number 1037. ರಾಜಕುಮಾರಿ ಶಾಂತವ್ವ ಮತ್ತು ದಲಿತ ಯುವಕ ಸಿದ್ದೇಶ್ವರರ ಅಮರ ಪ್ರೇಮದ ಸ್ಮಾರಕ, ಅನ್ಯ ಜಾತಿ ವಿವಾಹವಾದ್ದರಿಂದ ರಾಜಕುಮಾರಿಗೆ ಸೂಳೆ ಪಟ್ಟ ನೀಡಿದ ಸಮಾಜ. ಸಮಾಜದ ಒಳಿತಿಗಾಗಿ ಶಾಂತವ್ವ ಕಟ್ಟಿಸಿದ ಬೃಹತ್ ಕೆರೆಗೆ ಜನ ಕರೆದದ್ದು ಸೂಳೆ ಕಟ್ಟಿಸಿದ ಕೆರೆ ಅದೇ ಸೂಳೆಕೆರೆ / ಶಾಂತಿ ಸಾಗರ

# ಸೂಳೆಕೆರೆ (ಶಾಂತಿ ಸಾಗರ) ಅಂತರ್ ಜಾತಿ ಪ್ರೇಮ ವಿವಾಹದ ದುರOತ ಕಥೆ. #ಅಕ್ಟೋಬರ್ 2019 ರಲ್ಲಿ ತುಂಬಿ ತುಳುಕಿತ್ತು.  ಚಿತ್ರದುಗ೯, ದಾವಣಗೆರೆ ಬಳ್ಳಾರಿ ಮುಂತಾದ ಮಳೆ ಕಡಿಮೆ ಆಗುತ್ತಿದ್ದ ಜಿಲ್ಲೆಗಳಲ್ಲಿ ಅದೂ ಅಕ್ಟೋಬರ್ ತಿಂಗಳ 2019 ರಲ್ಲಿ  ಬಂದಿದ್ದ ಬಾರಿ ಮಳೆ ಎಲ್ಲಾ ಕೆರೆ, ಹೊಂಡಗಳು ತುಂಬಿ ತುಳುಕಿದೆ, ಸಾಮಾಜಿಕ ಜಾಲ ತಾಣದಲ್ಲಿ 40 ವಷ೯ದಲ್ಲಿ ಇಂತ ಮಳೆ ಬಂದಿಲ್ಲ ಅಂತ ಸುದ್ದಿ ಹರಿದಾಡುತ್ತಿತ್ತು ಮತ್ತು  ಸೂಳೆಕೆರೆ ತುಂಬಿ ಕೋಡಿ ಬಿದ್ದಿದೆ ಅಂತೆಲ್ಲ Post ನೋಡಿ ಬೆಂಗಳೂರಿಂದ ಬರುವಾಗ ಚಿತ್ರದುಗ೯ ಮಾಗ೯ವಾಗಿ ಚನ್ನಗಿರಿ ತಲುಪಿ ಸೂಳೆಕೆರೆ ನೋಡಲು ಹೋಗಿದ್ದೆ.  11ನೇ ಶತಮಾನದಲ್ಲಿ (1128ರಲ್ಲಿ)ಕೇವಲ 3 ವಷ೯ದಲ್ಲಿ ಈ ಕೆರೆ ನಿಮಾ೯ಣ ಮಾಡಿಸಿದ್ದು ಶಾಂತವ್ವ ಎಂಬ ರಾಜ ಕುಮಾರಿ ಅವಳು ಸ್ವಣ೯ವತಿ ಪಟ್ಟಣದ ದೊರೆ ವಿಕ್ರಮ ರಾಜನ ಮಗಳು, ಸಿದ್ದೇಶ್ವರ ಎಂಬ ಅನ್ಯ ಜಾತಿಯ ಯುವಕನೊ೦ದಿಗೆ ಗಾಂದವ೯ ವಿವಾಹ ಆಗುತ್ತಾಳೆ ಇದನ್ನ ಸಹಿಸದ ಮತ್ತು ಒಪ್ಪದ ಜನತೆ ಸೂಳೆ ಎಂದು ಮೂದಲಿಸುತ್ತಾರOತೆ ಈ ರೀತಿ ತನಗೆ ಬಂದ ಕಳಂಕ ಕಳೆಯಲು ಈ ಬೃಹತ್ ಕೆರೆ ತನ್ನ ಪತಿ ಸಿದ್ದೇಶ್ವರನ ಜೊತೆ ಸೇರಿ ನಿಮಿ೯ಸಿ ಕೆರೆಗೆ ಹಾರವಾದಳೆoಬ ಇತಿಹಾಸ ಇದೆ ಇದರಿಂದ ನೊಂದ ಪತಿ ಸಿದ್ಧೇಶ್ವರ ಕೂಡ ಎದುರಿನ ಗುಡ್ಡದಲ್ಲಿ ಜೀವ ತ್ಯಾಗ ಮಾಡುತ್ತಾನೆ ಈಗ ಅಲ್ಲಿ ಸಿದ್ದೇಶ್ವರ ದೇವಸ್ಥಾನವಿದೆ.   ಈ ಕೆರೆ ಈಗಲೂ ಸೂಳೆಕೆರೆ ಎಂದೆ ಹೆಸರಾಗಿದೆ ಈ

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್ಪಿಸಿಕೊಳ್ಳಬೇಕು ಅಂತ ಬಿದನೂರು ನಗರ ಸಮೀಪದ ದೇವಗಂಗೆ ಎಂಬ ಕೆಳದಿ