Skip to main content

ಭಾಗ - 54, ಆನಂದಪುರಂ ಇತಿಹಾಸ, ಆನಂದಪುರಂ ಜನತ ಸಂರಕ್ಷಿಸಿಕೊಳ್ಳಬೇಕಾದ 10 ನೇ ಶತಮಾನದ ಶಾಸನಗಳು, ಅಂತರಾಸಿಪುರ, ಆನಂದೂರು ಮತ್ತು ಔಷದಪುರ ಎನ್ನುವುದು ಆನಂದಪುರಂನ ಮೂಲ ಹೆಸರುಗಳು.

#ಭಾಗ_54.
#ಆನಂದಪುರಂ_ಇತಿಹಾಸ.

#ಕ್ರಿಸ್ತ_ಶಕ_ಹತ್ತನೇ_ಶತಮಾನದ_ದಾಖಲೆಯ_ಶಾಸನ_ಸಂರಕ್ಷಿಸ_ಬೇಕು.

#ಕೆಳದಿ_ರಾಜ_ವೆಂಕಟಪ್ಪ_ನಾಯಕರು_ಆನಂದಪುರಂ_ನಾಮಕರಣ_ಮಾಡುವ_ಮೊದಲಿನ_ಹೆಸರುಗಳು

#ಅಂತರಾಸಿಪುರ_ಆನಂದೂರು_ಔಷದಪುರ_ಎಂಬ_ಹೆಸರಿತ್ತು.

#ಎಲ್ಲಾ_ಊರಿಗೂ_ಇತಿಹಾಸ_ಇರುತ್ತದೆ_ಆದರೆ_ಆನಂದಪುರಂನಷ್ಟು_ಪುರಾತನ_ದಾಖಲೆ_ಇರುವ_ಊರು_ಕಡಿಮೆ.
 
   ಈಗಿನ ಹುಂಚದ ಹೊಂಬುಜದಲ್ಲಿರುವ ಪಂಚ ಬಸದಿಯ ಶಾಸನದಲ್ಲಿ #ಆನಂದೂರು ಎಂದು ಈಗಿನ ಆನಂದಪುರಂ ಪ್ರದೇಶದ ಉಲ್ಲೇಖ ಇದೆ.
  ಆನಂದಪುರಂನಿಂದ ಶಿವಮೊಗ ಮಾರ್ಗದಲ್ಲಿ  ರಾಷ್ಟ್ರಿಯ ಹೆದ್ದಾರಿ 206 ರಲ್ಲಿ ಆಚಾಪುರಕ್ಕಿಂತ ಹಿಂದೆ ಎಡಬಾಗದಲ್ಲಿರುವ ಬೃಹತ್ ಶಿಲಾ ಶಾಸನ ಮುಂದಿನ ಪೀಳಿಗೆಗಾಗಿ ಈಗಲೇ ಸಂರಕ್ಷಿಸಿಕೊಳ್ಳಬೇಕಾಗಿದೆ ಇದು ಆನಂದಪುರಂ ಇತಿಹಾಸವನ್ನು ಕ್ರಿಸ್ತ ಶಕ 10 ನೇ ಶತಮಾನಕ್ಕೆ ಒಯ್ಯುವ ಅತ್ಯಂತ ಪುರಾತನ ದಾಖಲೆ ಕೂಡ.
  ಕ್ರಿ.ಶ. 25- ಏಪ್ರಿಲ್ -1042 ರಲ್ಲಿ ಬನವಾಸಿ ನಾಡಿನ ರಾಜ್ಯಪಾಲ ಬಿಜ್ಜಳನ ಸಾಮಂತ ಗೋರರಸನು ಅಂದಾಸುರದಲ್ಲಿ ನಿರ್ಮಿಸಿದ ಗೋನೇಶ್ವರ ಮತ್ತು ಸೂಯ೯ ಮಾತಾ೯೦ಡೇಶ್ವರ ದೇವಾಲಯ ನಿರ್ಮಾಣದಲ್ಲಿ ಇಟ್ಟಿಗೆ ಶಿಲೆಯ ಕಾಮಗಾರಿ ನಿರ್ವಹಿಸಿದ ಚಿಕ್ಕ ಎಂಬ ಕುಶಲ ಕರ್ಮಿಗೆ ಭೂದಾನ ಮಾಡಿದ ಶಾಸನ ಇದು.
  ಈ ಶಾಸನ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲೇ ಇದ್ದು ವಾಹನ ಸಂಚಾರ ದಟ್ಟಣೆಯಿಂದ ಯಾವುದೇ ಅವಘಡ ಸಂಭವಿಸಿದರೆ ಈ ಪ್ರಾಚಿನ ಶಾಸನ ಕಳೆದುಕೊಳ್ಳುವ ಅಪಾಯ ಇದೆ.
  ಇದೇ ರೀತಿ ಆಚಾಪುರದ ತೀರ್ಥದಲ್ಲಿರುವ ಶಾಸನ ಕ್ರಿ.ಶ. 25- ಡಿಸೆಂಬರ್ -1079ರದ್ದು ಇದು ಕಲ್ಯಾಣಿ ಚಾಲುಕ್ಯ ರಾಜ ಇಮ್ಮುಡಿ ಜಯಸಿಂಹನ ಸಾಮಂತ ಮಾಚರಾಜನ ಶಾಸನ ಆಗಿದೆ ಆಚಾಪುರದ ಹಿಂದಿನ ಹೆಸರು ಮಾಚರಾಜಪುರ ಆಗಿತ್ತು, ಈ ಶಾಸನದಲ್ಲಿ ಮಾಚರಾಜನು ಮಾಚೇಶ್ವರ ಎಂಬ ಶಿವಲಿಂಗ ಪ್ರತಿಷ್ಟಾಪಿಸಿ ದಾನ ನೀಡಿದ ಉಲ್ಲೇಖವಿದೆ.
  ಇದೇ ರೀತಿ 9-10 ನೇ ಶತಮಾನದಲ್ಲಿ ಮಲಂದೂರಿನಲ್ಲಿ ಸಹಸ್ರ ಗೋದಾನ ಮಾಡಿದ ಶಾಸನವಿದೆ.
  1902 ರಲ್ಲಿ ಪ್ರಕಟವಾಗಿರುವ ಎಪಿಗ್ರಾಫಿಯ ಕರ್ನಾಟಕದಲ್ಲಿ ಆನಂದಪುರಂ ಹೋಬಳಿಯಲ್ಲಿ ದೊರೆತಿರುವ 36 ಶಾಸನಗಳು ಮತ್ತು 2 ತಾಮ್ರ ಶಾಸನದ ಸಂಪೂರ್ಣ ವಿವರ ಇದೆ ದಾಖಲಾಗದ ಇನ್ನೂ ಅನೇಕ ಶಾಸನಗಳು ಇತ್ತೀಚೆಗೆ ಕಂಡು ಬಂದಿದ್ದು ಅವುಗಳ ಸ೦ಶೋದನೆ ಆಗಬೇಕಾಗಿದೆ.

ನಾಳೆ ಮುಂದಿನ ಭಾಗ - 55.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...