Skip to main content

ಭಾಗ - 55, ಆನಂದಪುರಂ ಇತಿಹಾಸ, ಮೈಸೂರು ಚಲೋ ಚಳವಳಿಯಲ್ಲಿ ಆನಂದಪುರಂ ಬದರಿನಾರಾಯಣಯ್ಯ೦ಗಾರರು ಮತ್ತು ಎ.ರಾಮರಾವ್ ಬಾಗವಹಿಸಿ ಜೈಲಿಗೆ ಹೋದವರು, ಈ ಚಳವಳಿಯಲ್ಲಿ ಭಾಗವಹಿಸಿದ್ದ ಕಾಗೋಡು ಕೆ.ಜಿ.ಒಡೆಯರ್ ಪಾರ್ಲಿಮೆಂಟ್ ಸದಸ್ಯರಾಗಿದ್ದು ಮತ್ತು ಎ.ಆರ್. ಬದರಿನಾರಾಯಣ ಅಯ್ಯಂಗಾರರು ವಿದ್ಯಾ ಮಂತ್ರಿಗಳಾಗಿದ್ದು ಇತಿಹಾಸ.

#ಭಾಗ_55.
#ಆನಂದಪುರಂ_ಇತಿಹಾಸ.

#ಸ್ವಾತಂತ್ರ್ಯ_ನಂತರ_ನಡೆದ_ಮೈಸೂರು_ಚಲೋ_ಚಳವಳಿ

#ಚಳವಳಿಯಲ್ಲಿ_ಭಾಗವಹಿಸಿ_ಜೈಲು_ಸೇರಿದವರಲ್ಲಿ_ಆನಂದಪುರಂನಿಂದ_ಇಬ್ಬರು.

#ಬದರಿನಾರಾಯಣಯ್ಯಂಗಾರ್_ಮತ್ತು_ರಾಮರಾವ್.

   1947 ಆಗಸ್ಟ್ 15ಕ್ಕೆ ಸ್ಟಾತಂತ್ರ್ಯ ಲಭಿಸಿ ಈಗ 75 ನೇ ವರ್ಷಾಚಾರಣೆಯಲ್ಲಿದ್ದೇವೆ ಈ ಸಂದರ್ಭದಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಸ್ಮರಣಿ ಮತ್ತು ಆ ಕುಟುಂಬಗಳನ್ನು ಪ್ರೀತಿಯಿಂದ ಆಧರಿಸುವ ಈ ಸಂದರ್ಭದಲ್ಲಿ ಸಾಗರ ತಾಲ್ಲೂಕಿನಲ್ಲಿ ನಡೆದ ಮೈಸೂರು ಚಲೋ ಚಳವಳಿ ನೆನಪಿಸಿ ಕೊಳ್ಳಬೇಕಾಗಿದೆ.
  ಇದು ಬ್ರಿಟಿಷರ ವಿರುದ್ದ ನಡೆದ ಸ್ವಾತಂತ್ರ್ಯ ಚಳವಳಿ ಅಲ್ಲ, ಮೈಸೂರು ಸರಕಾರವು ಸ್ವತಂತ್ರ ಭಾರತದಲ್ಲಿ ಐಕ್ಯವಾಗಿ ಅರಸೊತ್ತಿಗೆ ಅಳಸಿಹಾಕಲು ಮೀನಾ - ಮೇಷ ಎಣಿಸಿತ್ತು ಆದ್ದರಿಂದ ಕಾಂಗ್ರೇಸ್ #ಮೈಸೂರು_ಚಲೋ ಚಳವಳಿಗೆ ಕರೆ ಕೊಟ್ಟಿತ್ತು.
  ಈ ಚಳವಳಿ ಮೈಸೂರು ರಾಜ್ಯದಲ್ಲಿ ಎಲ್ಲೆಡೆ ಹಬ್ಬಿ ಉಗ್ರ ರೂಪ ತಾಳಿತು, ಇದಕ್ಕೆ ಎಲ್ಲೆಲ್ಲೂ ರೈಲು ಚಳವಳಿ, ವಿದ್ಯಾರ್ಥಿ ಚಳವಳಿ, ಪೋಲಿಸರ ಮುಷ್ಕರಗಳಿಂದಲೂ ಚಳವಳಿಯ ಪರಿಣಾಮ ಪ್ರಚಂಡವಾಗಿ ಅರಮನೆ, ಆಳರಸರು ಅವರ ಸಕಾ೯ರ ಮತ್ತು ಅದರ ದಿವಾನ್ ಅರ್ಕಾಟ್ ಲಕ್ಷ್ಮಣ ಸ್ವಾಮಿ ಮೊದಲಿಯಾರ್ ಸಾಹೇಬರು ಮಣಿದರು.
  13- ಅಕ್ಟೋಬರ್ -1947ರಲ್ಲಿ ಮಹಾರಾಜರು "ಪ್ರಜಾಪ್ರತಿನಿದಿಗಳ ಮಂತ್ರಿ ಮಂಡಲ ಸ್ಥಾಪನೆ ಆಗಿದೆ" ಎಂದು ಘೋಷಿಸಿದರು, 24- ಅಕ್ಟೋಬರ್ - 1947 ರಂದು ಮೈಸೂರಿನಲ್ಲಿ ಜನತಾ ಸರಕಾರ ಸ್ಥಾಪನೆಯಾಗಿ ಕೆ.ಸಿ.ರೆಡ್ಡಿಯವರು ಮುಖ್ಯಮಂತ್ರಿ ಆಗಿ ಅಧಿಕಾರ ಸ್ವೀಕರಿಸಿದರು.
  ಅಧಿಕಾರ ಸ್ವೀಕರಿಸಿದ ಮುಖ್ಯಮಂತ್ರಿ ಕೆ.ಸಿ.ರೆಡ್ಡಿಯವರು ಅರಮನೆಯ ಸತ್ಯಾಗ್ರಹದಲ್ಲಿ ಭಾಗವಹಿಸಿ ಜೈಲು ಸೇರಿದವರನ್ನು ಬಿಡುಗಡೆ ಮಾಡಿ ಆದೇಶಿಸುತ್ತಾರೆ.
 ಈ ಆರಮನೆ ಸತ್ಯಾಗ್ರಹ ಸಾಗರದ ತಾಲ್ಲೂಕ್ ಕಛೇರಿ (ಗಣಪತಿ ದೇವಸ್ಥಾನದ ಎದರು ಇತ್ತು.) ಎದುರು ಕಛೇರಿ ನೌಕರರು ಒಳ ಹೋಗದಂತೆ ತಡೆದು, ಕಛೇರಿ ಮೇಲೆ ದ್ವಜ ಹಾರಿಸಿದಾಗ ಪೋಲಿಸರು ಲಾಠಿ ಪ್ರಹಾರ ಮಾಡಿ ಎಲ್ಲರನ್ನು ಬಂಧಿಸುತ್ತಾರೆ ಆಗ ಪ್ಲೇಗ್ ಅಂಟು ರೋಗ ಹರಡಿದ ಕಾಲವಾದ್ದರಿಂದ ಸಾಗರದ ಜೈಲಿನ ಒಳಗೆ ಹೋಗಲು ಚಳವಳಿಗಾರರು ವಿರೋದಿಸಿದರೂ ಪೋಲಿಸರು ಬಲ ಪ್ರಯೋಗಿಸಿ ಜೈಲಿನಲ್ಲಿ ಹಾಕುತ್ತಾರೆ.
  ಬದರಿನಾರಾಯಣ ಅಯ್ಯಂಗಾರರು ಶಿವಮೊಗ್ಗದಲ್ಲಿ ವಕೀಲರಾಗಿ ಮತ್ತು ಕಾಂಗ್ರೇಸ್ ಮುಖಂಡರಾಗಿರುತ್ತಾರೆ ಅಯ್ಯಂಗಾರರ ಕುಟುಂಬ ದೇಶಭಕ್ತಿಯಲ್ಲಿ ಯಾವತ್ತೂ ಹಿಂದೆ ಹೆಜ್ಜೆ ಇಟ್ಟಿರುವುದಿಲ್ಲ ಆದರೆ ಮೈಸೂರು ಅರಸರ ಸಂಬಂದಗಳು ಇವರಿಗೆ ಮೈಸೂರು ಮಹಾರಾಜರ ಮೇಲೆ ವಿಶೇಷ ಗೌರವ ಇರುವ ಸಂದರ್ಭದಲ್ಲಿ ಬದರಿನಾರಾಯಣ ಅಯ್ಯಂಗಾರ್ ರ ತಂದೆ ರಾಮಕೃಷ್ಣ ಅಯ್ಯಂಗಾರರ ವಿರೋದದ ನಡುವೆ ಬದರಿನಾರಾಯಣ ಅಯ್ಯಂಗಾರ್ ಕಾಂಗ್ರೇಸ್ ನೀಡಿದ ಕರೆ "ಮೈಸೂರು ಚಲೋ" ಗೆ ಆನಂದಪುರಂ ನ ಇನ್ನೋರ್ವ ಸ್ವಾತಂತ್ರ ಹೋರಾಟಗಾರ ರಾಮರಾವ್ ಕರೆದುಕೊಂಡು ಭಾಗ ವಹಿಸುತ್ತಾರೆ.
  ಅವತ್ತು ಈ ಚಳವಳಿಯಲ್ಲಿ ಭಾಗವಹಿಸಿದ ಪ್ರಮುಖರು ಕಾಗೋಡಿನ ಕೆ.ಜಿ. ಒಡೆಯರ್, ಶಿರವಂತೆ ಹೆಚ್.ಎಲ್.ವೀರಭದ್ರಪ್ಪ ಗೌಡರು,ಹೆಚ್.ಗಣಪತಿಯಪ್ಪನವರು, ಸಾಗರದ ಪ್ರಖ್ಯಾತ ವಕೀಲರಾದ ಮೃತ್ಯುಂಜಯ ಭಾಪಟ್, ಬರಸಿನ ಧ್ಯಾವಪ್ಪ, ಸಾಗರದ ತುಳುಜಪ್ಪ, ವೆಂಕಟರಾವ್, ಸೀತಾರಾಮ ರಾವ್, ಭದ್ರಪ್ಪ, ಮಂಚಾಲೆ ಗಣಪತಿ, ಉಳ್ಳೂರು ಸುಬ್ಬರಾವ್, ಬಸವಣ್ಣಪ್ಪ ಮುಂತಾದವರು.
  ಮುಂದಿನ ದಿನದಲ್ಲಿ ಕಾಗೋಡಿನ ಕೆ.ಜಿ.ಒಡೆಯರ್ ಲೋಕಸಭಾ ಸದಸ್ಯರಾಗಿದ್ದು, ಬದರಿನಾರಾಯಣ ಅಯ್ಯಂಗಾರ್ ಶಾಸಕರಾಗಿ ವಿದ್ಯಾ ಮಂತ್ರಿಗಳಾಗಿದ್ದು ಇತಿಹಾಸ.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...