Skip to main content

ಭಾಗ - 55, ಆನಂದಪುರಂ ಇತಿಹಾಸ, ಮೈಸೂರು ಚಲೋ ಚಳವಳಿಯಲ್ಲಿ ಆನಂದಪುರಂ ಬದರಿನಾರಾಯಣಯ್ಯ೦ಗಾರರು ಮತ್ತು ಎ.ರಾಮರಾವ್ ಬಾಗವಹಿಸಿ ಜೈಲಿಗೆ ಹೋದವರು, ಈ ಚಳವಳಿಯಲ್ಲಿ ಭಾಗವಹಿಸಿದ್ದ ಕಾಗೋಡು ಕೆ.ಜಿ.ಒಡೆಯರ್ ಪಾರ್ಲಿಮೆಂಟ್ ಸದಸ್ಯರಾಗಿದ್ದು ಮತ್ತು ಎ.ಆರ್. ಬದರಿನಾರಾಯಣ ಅಯ್ಯಂಗಾರರು ವಿದ್ಯಾ ಮಂತ್ರಿಗಳಾಗಿದ್ದು ಇತಿಹಾಸ.

#ಭಾಗ_55.
#ಆನಂದಪುರಂ_ಇತಿಹಾಸ.

#ಸ್ವಾತಂತ್ರ್ಯ_ನಂತರ_ನಡೆದ_ಮೈಸೂರು_ಚಲೋ_ಚಳವಳಿ

#ಚಳವಳಿಯಲ್ಲಿ_ಭಾಗವಹಿಸಿ_ಜೈಲು_ಸೇರಿದವರಲ್ಲಿ_ಆನಂದಪುರಂನಿಂದ_ಇಬ್ಬರು.

#ಬದರಿನಾರಾಯಣಯ್ಯಂಗಾರ್_ಮತ್ತು_ರಾಮರಾವ್.

   1947 ಆಗಸ್ಟ್ 15ಕ್ಕೆ ಸ್ಟಾತಂತ್ರ್ಯ ಲಭಿಸಿ ಈಗ 75 ನೇ ವರ್ಷಾಚಾರಣೆಯಲ್ಲಿದ್ದೇವೆ ಈ ಸಂದರ್ಭದಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಸ್ಮರಣಿ ಮತ್ತು ಆ ಕುಟುಂಬಗಳನ್ನು ಪ್ರೀತಿಯಿಂದ ಆಧರಿಸುವ ಈ ಸಂದರ್ಭದಲ್ಲಿ ಸಾಗರ ತಾಲ್ಲೂಕಿನಲ್ಲಿ ನಡೆದ ಮೈಸೂರು ಚಲೋ ಚಳವಳಿ ನೆನಪಿಸಿ ಕೊಳ್ಳಬೇಕಾಗಿದೆ.
  ಇದು ಬ್ರಿಟಿಷರ ವಿರುದ್ದ ನಡೆದ ಸ್ವಾತಂತ್ರ್ಯ ಚಳವಳಿ ಅಲ್ಲ, ಮೈಸೂರು ಸರಕಾರವು ಸ್ವತಂತ್ರ ಭಾರತದಲ್ಲಿ ಐಕ್ಯವಾಗಿ ಅರಸೊತ್ತಿಗೆ ಅಳಸಿಹಾಕಲು ಮೀನಾ - ಮೇಷ ಎಣಿಸಿತ್ತು ಆದ್ದರಿಂದ ಕಾಂಗ್ರೇಸ್ #ಮೈಸೂರು_ಚಲೋ ಚಳವಳಿಗೆ ಕರೆ ಕೊಟ್ಟಿತ್ತು.
  ಈ ಚಳವಳಿ ಮೈಸೂರು ರಾಜ್ಯದಲ್ಲಿ ಎಲ್ಲೆಡೆ ಹಬ್ಬಿ ಉಗ್ರ ರೂಪ ತಾಳಿತು, ಇದಕ್ಕೆ ಎಲ್ಲೆಲ್ಲೂ ರೈಲು ಚಳವಳಿ, ವಿದ್ಯಾರ್ಥಿ ಚಳವಳಿ, ಪೋಲಿಸರ ಮುಷ್ಕರಗಳಿಂದಲೂ ಚಳವಳಿಯ ಪರಿಣಾಮ ಪ್ರಚಂಡವಾಗಿ ಅರಮನೆ, ಆಳರಸರು ಅವರ ಸಕಾ೯ರ ಮತ್ತು ಅದರ ದಿವಾನ್ ಅರ್ಕಾಟ್ ಲಕ್ಷ್ಮಣ ಸ್ವಾಮಿ ಮೊದಲಿಯಾರ್ ಸಾಹೇಬರು ಮಣಿದರು.
  13- ಅಕ್ಟೋಬರ್ -1947ರಲ್ಲಿ ಮಹಾರಾಜರು "ಪ್ರಜಾಪ್ರತಿನಿದಿಗಳ ಮಂತ್ರಿ ಮಂಡಲ ಸ್ಥಾಪನೆ ಆಗಿದೆ" ಎಂದು ಘೋಷಿಸಿದರು, 24- ಅಕ್ಟೋಬರ್ - 1947 ರಂದು ಮೈಸೂರಿನಲ್ಲಿ ಜನತಾ ಸರಕಾರ ಸ್ಥಾಪನೆಯಾಗಿ ಕೆ.ಸಿ.ರೆಡ್ಡಿಯವರು ಮುಖ್ಯಮಂತ್ರಿ ಆಗಿ ಅಧಿಕಾರ ಸ್ವೀಕರಿಸಿದರು.
  ಅಧಿಕಾರ ಸ್ವೀಕರಿಸಿದ ಮುಖ್ಯಮಂತ್ರಿ ಕೆ.ಸಿ.ರೆಡ್ಡಿಯವರು ಅರಮನೆಯ ಸತ್ಯಾಗ್ರಹದಲ್ಲಿ ಭಾಗವಹಿಸಿ ಜೈಲು ಸೇರಿದವರನ್ನು ಬಿಡುಗಡೆ ಮಾಡಿ ಆದೇಶಿಸುತ್ತಾರೆ.
 ಈ ಆರಮನೆ ಸತ್ಯಾಗ್ರಹ ಸಾಗರದ ತಾಲ್ಲೂಕ್ ಕಛೇರಿ (ಗಣಪತಿ ದೇವಸ್ಥಾನದ ಎದರು ಇತ್ತು.) ಎದುರು ಕಛೇರಿ ನೌಕರರು ಒಳ ಹೋಗದಂತೆ ತಡೆದು, ಕಛೇರಿ ಮೇಲೆ ದ್ವಜ ಹಾರಿಸಿದಾಗ ಪೋಲಿಸರು ಲಾಠಿ ಪ್ರಹಾರ ಮಾಡಿ ಎಲ್ಲರನ್ನು ಬಂಧಿಸುತ್ತಾರೆ ಆಗ ಪ್ಲೇಗ್ ಅಂಟು ರೋಗ ಹರಡಿದ ಕಾಲವಾದ್ದರಿಂದ ಸಾಗರದ ಜೈಲಿನ ಒಳಗೆ ಹೋಗಲು ಚಳವಳಿಗಾರರು ವಿರೋದಿಸಿದರೂ ಪೋಲಿಸರು ಬಲ ಪ್ರಯೋಗಿಸಿ ಜೈಲಿನಲ್ಲಿ ಹಾಕುತ್ತಾರೆ.
  ಬದರಿನಾರಾಯಣ ಅಯ್ಯಂಗಾರರು ಶಿವಮೊಗ್ಗದಲ್ಲಿ ವಕೀಲರಾಗಿ ಮತ್ತು ಕಾಂಗ್ರೇಸ್ ಮುಖಂಡರಾಗಿರುತ್ತಾರೆ ಅಯ್ಯಂಗಾರರ ಕುಟುಂಬ ದೇಶಭಕ್ತಿಯಲ್ಲಿ ಯಾವತ್ತೂ ಹಿಂದೆ ಹೆಜ್ಜೆ ಇಟ್ಟಿರುವುದಿಲ್ಲ ಆದರೆ ಮೈಸೂರು ಅರಸರ ಸಂಬಂದಗಳು ಇವರಿಗೆ ಮೈಸೂರು ಮಹಾರಾಜರ ಮೇಲೆ ವಿಶೇಷ ಗೌರವ ಇರುವ ಸಂದರ್ಭದಲ್ಲಿ ಬದರಿನಾರಾಯಣ ಅಯ್ಯಂಗಾರ್ ರ ತಂದೆ ರಾಮಕೃಷ್ಣ ಅಯ್ಯಂಗಾರರ ವಿರೋದದ ನಡುವೆ ಬದರಿನಾರಾಯಣ ಅಯ್ಯಂಗಾರ್ ಕಾಂಗ್ರೇಸ್ ನೀಡಿದ ಕರೆ "ಮೈಸೂರು ಚಲೋ" ಗೆ ಆನಂದಪುರಂ ನ ಇನ್ನೋರ್ವ ಸ್ವಾತಂತ್ರ ಹೋರಾಟಗಾರ ರಾಮರಾವ್ ಕರೆದುಕೊಂಡು ಭಾಗ ವಹಿಸುತ್ತಾರೆ.
  ಅವತ್ತು ಈ ಚಳವಳಿಯಲ್ಲಿ ಭಾಗವಹಿಸಿದ ಪ್ರಮುಖರು ಕಾಗೋಡಿನ ಕೆ.ಜಿ. ಒಡೆಯರ್, ಶಿರವಂತೆ ಹೆಚ್.ಎಲ್.ವೀರಭದ್ರಪ್ಪ ಗೌಡರು,ಹೆಚ್.ಗಣಪತಿಯಪ್ಪನವರು, ಸಾಗರದ ಪ್ರಖ್ಯಾತ ವಕೀಲರಾದ ಮೃತ್ಯುಂಜಯ ಭಾಪಟ್, ಬರಸಿನ ಧ್ಯಾವಪ್ಪ, ಸಾಗರದ ತುಳುಜಪ್ಪ, ವೆಂಕಟರಾವ್, ಸೀತಾರಾಮ ರಾವ್, ಭದ್ರಪ್ಪ, ಮಂಚಾಲೆ ಗಣಪತಿ, ಉಳ್ಳೂರು ಸುಬ್ಬರಾವ್, ಬಸವಣ್ಣಪ್ಪ ಮುಂತಾದವರು.
  ಮುಂದಿನ ದಿನದಲ್ಲಿ ಕಾಗೋಡಿನ ಕೆ.ಜಿ.ಒಡೆಯರ್ ಲೋಕಸಭಾ ಸದಸ್ಯರಾಗಿದ್ದು, ಬದರಿನಾರಾಯಣ ಅಯ್ಯಂಗಾರ್ ಶಾಸಕರಾಗಿ ವಿದ್ಯಾ ಮಂತ್ರಿಗಳಾಗಿದ್ದು ಇತಿಹಾಸ.

Comments

Popular posts from this blog

Blog number 1782. ಅರಳಸುರಳಿಯ ರಾಘವೇಂದ್ರ ಕೇಕೋಡರ ಕುಟುಂಬದ ತಪ್ಪು ನಿರ್ದಾರದ ದುರಂತ.

#ತೀರ್ಥಹಳ್ಳಿಯ_ಅರಳಸುರಳಿಯ_ಒಂದೇ_ಕುಟುಂಬದ_ನಾಲ್ವರು_ಮೃತರಾದ_ರಹಸ್ಯವೇನು? #ಈ_ಬಗ್ಗೆ_ಆ_ಊರಿನ_ಸಮೀಪದ_ಈ_ಕುಟುಂಬದ_ಪರಿಚಯ_ಇರುವವರಿಗೆ_ವಿಚಾರಿಸಿದ್ದೆ. #ಅವರು_ಈ_ಘಟನೆ_ಬಗ್ಗೆ_ಸವಿಸ್ತಾರವಾಗಿ_ಲಿಖಿತ_ಲೇಖನ_ಬರೆದಿದ್ದಾರೆ. #ಅವರ_ವಿನಂತಿ_ಅವರ_ಹೆಸರು_ಬಹಿರಂಗಗೊಳಿಸ_ಬಾರದು. #ಆದ್ದರಿಂದ_ಈ_ಲೇಖನ_ಪೋಸ್ಟ್_ಮಾಡಬಾರದೆಂದಿದ್ದೆ_ಆದರೆ_ಇದು_ಮಲೆನಾಡಿಗರ_ಮನೆ_ಮನೆಯ_ಕಥೆ #ಆದ್ದರಿಂದ_ಇಲ್ಲಿ_ಪೋಸ್ಟ್_ಮಾಡಿದೆ.    ಇಲ್ಲಿ ತಪ್ಪು ಯಾರದ್ದೂ ಇಲ್ಲ... ಪಶ್ಚಾತ್ತಾಪದ ಪ್ರಾಯಶ್ಚಿತ ಕೇಳಲು ಅವರಾರು ಇಲ್ಲ .....ಆದರೆ ಈ ರೀತಿ ಜೀವ ತ್ಯಾಗ ಮಾಡುವ ಆತುರದ ಕೆಟ್ಟ ನಿರ್ದಾರ ಮಾತ್ರ ಸರಿ ಅಲ್ಲ.     ಇವರ ಅಣ್ಣ ಆರ್.ಎಸ್.ಎಸ್. ಪ್ರಚಾರಕರಾಗಿ ದೆಹಲಿಯಲ್ಲಿ ಏಳು ವಷ೯ ಮೋದಿ ಜೊತೆ ಒಂದೇ ಕೋಣೆ ಹಂಚಿಕೊಂಡವರು, ಇನ್ನೊಬ್ಬ ಸಹೋದರ ಮೂಳೆ ತಜ್ಞರಾಗಿ ಶಿವಮೊಗ್ಗದಲ್ಲಿ ಆಸ್ಪತ್ರೆ ಮಾಡಿಕೊಂಡಿದ್ದಾರೆ.   #ದೀರ್ಘವಾದರೂ_ಪೂರ್ಣ_ಲೇಖನ_ಓದಿ   #ಹೀಗೊಂದು_ಸುಕುಟುಂಬ_ಆತ್ಮಾಘಾತ_ಮತ್ತು_ತದನಂತರದ_ಸಹಾಗಮನ.... ಮೂಡಣದಲ್ಲಿ ರವಿ ಮೂಡಲು ಅಣಿ ಯಾಗುತ್ತಿಧ್ದ .. ಹಾದಿಗಣಪತಿ ದೇವರು ಗರ್ಭಗುಡಿಯ ನಂದಾದೀಪದ ಮಂದ ಬೆಳಕಿನಲ್ಲಿ ತನ್ನ ಗುಡಿಯ ಎದುರಿನ ತಗ್ಗಿನಲ್ಲಿದ್ದ  ರಾಘವೇಂದ್ರ ಕೇಕೋಡರ ಮನೆಯನ್ನು ಎವೆಯಕ್ಕದೇ ನೋಡುತ್ತಲಿದ್ದ... ಊರ ಎಲ್ಲಾ ಮನೆಯಂತೆ ಆ ಮನೆಯಲ್ಲೂ ಆ ಬೆಳಗಿನಲ್ಲಿ ಮನೆಯೊಡತಿ ನಾಗರತ್ನಕ್ಕ ಆ ಸಮಯದಲ್ಲಿ ದೇವರಿಗೆ ದೀಪ ಹಚ್ಚಿ ಹೊಸ್ತಿಲು ಪೂಜೆ ಮಾಡ

Blog number 1037. ರಾಜಕುಮಾರಿ ಶಾಂತವ್ವ ಮತ್ತು ದಲಿತ ಯುವಕ ಸಿದ್ದೇಶ್ವರರ ಅಮರ ಪ್ರೇಮದ ಸ್ಮಾರಕ, ಅನ್ಯ ಜಾತಿ ವಿವಾಹವಾದ್ದರಿಂದ ರಾಜಕುಮಾರಿಗೆ ಸೂಳೆ ಪಟ್ಟ ನೀಡಿದ ಸಮಾಜ. ಸಮಾಜದ ಒಳಿತಿಗಾಗಿ ಶಾಂತವ್ವ ಕಟ್ಟಿಸಿದ ಬೃಹತ್ ಕೆರೆಗೆ ಜನ ಕರೆದದ್ದು ಸೂಳೆ ಕಟ್ಟಿಸಿದ ಕೆರೆ ಅದೇ ಸೂಳೆಕೆರೆ / ಶಾಂತಿ ಸಾಗರ

# ಸೂಳೆಕೆರೆ (ಶಾಂತಿ ಸಾಗರ) ಅಂತರ್ ಜಾತಿ ಪ್ರೇಮ ವಿವಾಹದ ದುರOತ ಕಥೆ. #ಅಕ್ಟೋಬರ್ 2019 ರಲ್ಲಿ ತುಂಬಿ ತುಳುಕಿತ್ತು.  ಚಿತ್ರದುಗ೯, ದಾವಣಗೆರೆ ಬಳ್ಳಾರಿ ಮುಂತಾದ ಮಳೆ ಕಡಿಮೆ ಆಗುತ್ತಿದ್ದ ಜಿಲ್ಲೆಗಳಲ್ಲಿ ಅದೂ ಅಕ್ಟೋಬರ್ ತಿಂಗಳ 2019 ರಲ್ಲಿ  ಬಂದಿದ್ದ ಬಾರಿ ಮಳೆ ಎಲ್ಲಾ ಕೆರೆ, ಹೊಂಡಗಳು ತುಂಬಿ ತುಳುಕಿದೆ, ಸಾಮಾಜಿಕ ಜಾಲ ತಾಣದಲ್ಲಿ 40 ವಷ೯ದಲ್ಲಿ ಇಂತ ಮಳೆ ಬಂದಿಲ್ಲ ಅಂತ ಸುದ್ದಿ ಹರಿದಾಡುತ್ತಿತ್ತು ಮತ್ತು  ಸೂಳೆಕೆರೆ ತುಂಬಿ ಕೋಡಿ ಬಿದ್ದಿದೆ ಅಂತೆಲ್ಲ Post ನೋಡಿ ಬೆಂಗಳೂರಿಂದ ಬರುವಾಗ ಚಿತ್ರದುಗ೯ ಮಾಗ೯ವಾಗಿ ಚನ್ನಗಿರಿ ತಲುಪಿ ಸೂಳೆಕೆರೆ ನೋಡಲು ಹೋಗಿದ್ದೆ.  11ನೇ ಶತಮಾನದಲ್ಲಿ (1128ರಲ್ಲಿ)ಕೇವಲ 3 ವಷ೯ದಲ್ಲಿ ಈ ಕೆರೆ ನಿಮಾ೯ಣ ಮಾಡಿಸಿದ್ದು ಶಾಂತವ್ವ ಎಂಬ ರಾಜ ಕುಮಾರಿ ಅವಳು ಸ್ವಣ೯ವತಿ ಪಟ್ಟಣದ ದೊರೆ ವಿಕ್ರಮ ರಾಜನ ಮಗಳು, ಸಿದ್ದೇಶ್ವರ ಎಂಬ ಅನ್ಯ ಜಾತಿಯ ಯುವಕನೊ೦ದಿಗೆ ಗಾಂದವ೯ ವಿವಾಹ ಆಗುತ್ತಾಳೆ ಇದನ್ನ ಸಹಿಸದ ಮತ್ತು ಒಪ್ಪದ ಜನತೆ ಸೂಳೆ ಎಂದು ಮೂದಲಿಸುತ್ತಾರOತೆ ಈ ರೀತಿ ತನಗೆ ಬಂದ ಕಳಂಕ ಕಳೆಯಲು ಈ ಬೃಹತ್ ಕೆರೆ ತನ್ನ ಪತಿ ಸಿದ್ದೇಶ್ವರನ ಜೊತೆ ಸೇರಿ ನಿಮಿ೯ಸಿ ಕೆರೆಗೆ ಹಾರವಾದಳೆoಬ ಇತಿಹಾಸ ಇದೆ ಇದರಿಂದ ನೊಂದ ಪತಿ ಸಿದ್ಧೇಶ್ವರ ಕೂಡ ಎದುರಿನ ಗುಡ್ಡದಲ್ಲಿ ಜೀವ ತ್ಯಾಗ ಮಾಡುತ್ತಾನೆ ಈಗ ಅಲ್ಲಿ ಸಿದ್ದೇಶ್ವರ ದೇವಸ್ಥಾನವಿದೆ.   ಈ ಕೆರೆ ಈಗಲೂ ಸೂಳೆಕೆರೆ ಎಂದೆ ಹೆಸರಾಗಿದೆ ಈ

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್ಪಿಸಿಕೊಳ್ಳಬೇಕು ಅಂತ ಬಿದನೂರು ನಗರ ಸಮೀಪದ ದೇವಗಂಗೆ ಎಂಬ ಕೆಳದಿ