Skip to main content

ಭಾಗ - 57, ಆನಂದಪುರಂ ಇತಿಹಾಸ, ದೇಶದ ಮೊದಲ ಪ್ರದಾನಿ ಜವಾಹರಲಾಲ್ ರ ಆನಂದಪುರಂ ಬೇಟಿ, ಜೊತೆಗೆ ಪುತ್ರಿ ಇಂದಿರಾಗಾಂಧಿ, ಅಯ್ಯಂಗಾರ್ ಕುಟು೦ಬದ ಸಾರಥ್ಯ ಮತ್ತು ರಾಜ ಪ್ರತಿನಿದಿಗಳಾಗಿದ್ದ ಕಾಗೋಡಿನ ಕೆ.ಜಿ.ಒಡೆಯರ್ ನೇತೃತ್ವ.

#ಭಾಗ_57.
 #ಆನಂದಪುರಂ_ಇತಿಹಾಸ

#ಆನಂದಪುರಂಗೆ_ಪ್ರದಾನಿ_ನೆಹರೂ.

#ಮಗಳು_ಇಂದಿರಾ_ಜೊತೆ_ಜೋಗ್_ಜಲಪಾತ_ಪ್ರವಾಸ.

#ಆನಂದಪುರಂ_ಪ್ರೌಡಶಾಲೆ_ಎದರು_ಗಿಡ_ನೆಡುತ್ತಾರೆ.

   ಸ್ವಾತಂತ್ರ್ಯ ನಂತರ ದೇಶದ ಪ್ರದಾನ ಮಂತ್ರಿ ಜವಾಹರಲಾಲ್ ನೆಹರೂರವರು ಜೋಗ ಜಲಪಾತ ವೀಕ್ಷಿಸಲು ಬರುವ ಕಾರ್ಯಕ್ರಮ ನಿಗದಿ ಅಗುತ್ತದೆ.
   ಶಿವಮೊಗ್ಗ ಮಾರ್ಗವಾಗಿ ಆನಂದಪುರಂ ಮೇಲೆ ಜೋಗ್ ಫಾಲ್ಸ್ ಗೆ ಹೋಗುವುದರಿಂದ ಆನಂದಪುರಂ ನಲ್ಲಿ ಪ್ರದಾನ ಮಂತ್ರಿಗಳು ಒಂದು ಬೇಟಿ ಮಾಡುವ ಕಾರ್ಯಕ್ರಮ ನಿಗದಿ ಮಾಡಿಸಲು ಜಮೀನ್ದಾರ್ ರಾಮಕೃಷ್ಣ ಅಯ್ಯಂಗಾರರು ಮತ್ತು ಅವರ ಪುತ್ರರಾದ ವೆಂಕಟಾಚಲ ಅಯ್ಯಂಗಾರ್ ಮತ್ತು ಬದರಿನಾರಾಯಣಯ್ಯಂಗಾರ್ ಯಶಸ್ವಿ ಆದ ಮತ್ತು ಐತಿಹಾಸಿಕ ಘಟನೆಗೆ ಕಾರಣರಾದ ಘಟನೆ ನಿಜಕ್ಕೂ ರೋಚಕ ಮತ್ತು ರೋಮಾಂಚನದ ವಿಷಯವಾಗಿತ್ತು ಆ ಕಾಲದಲ್ಲಿ.
   ಆಗಿನ್ನು ದೇಶದ ಮೊದಲ ಚುನಾವಣೆ ಆಗಿರುವುದಿಲ್ಲ ರಾಜ ಪ್ರತಿನಿದಿಗಳಾಗಿ ಕಾಗೋಡಿನ ಕೆ.ಜೆ. ಒಡೆಯರ್ ನೇಮಕ ಆಗಿರುತ್ತಾರೆ.
   ಅಯ್ಯಂಗಾರ್ ಕುಟುಂಬದ ಆತ್ಮೀಯರಾದ ಕೆ.ಜಿ. ಒಡೆಯರ್ (ಶಿವಮೊಗ್ಗ ಲೋಕಸಭಾ ಪ್ರಥಮ ಸದಸ್ಯರಾಗಿ ನಂತರ ಚುನಾವಣೆಯಲ್ಲಿ ಗೆಲ್ಲುತ್ತಾರೆ) ಪ್ರದಾನಿ ನೆಹರೂರವರ ಆನಂದಪುರಂ ಬೇಟಿ ನಿಗದಿಗೊಳಿಸುತ್ತಾರೆ.
  ಆನಂದಪುರಂ ಪ್ರೌಡ ಶಾಲೆ ಎದುರಿಗೆ ಇಕ್ಕೆಲದಲ್ಲಿ ಮೈಸೂರು ಮಹಾರಾಜರ ಆ ಕಾಲದಲ್ಲಿ ಮೈಸೂರು ರಾಜ್ಯದ ಎಲ್ಲಾ ಹೆದ್ದಾರಿಗಳಲ್ಲಿ ಸಾಲು ಮರಗಳಾಗಿ (ಆಯಾ ಪ್ರದೇಶದ ಹವಾಮಾನಕ್ಕೆ ತಕ್ಕ ಹಾಗೆ) ದೂಪ, ಹಲಸು, ಮಾವು,ಆಲ, ಅರಳಿ ಮರಗಳನ್ನು ಬೆಳೆಸಿದ್ದು ಅದು ಸಮೃದ್ದವಾಗಿ ಪ್ರಯಾಣಿಕರಿಗೆ ಜನ ಮತ್ತು ಜಾನುವಾರಿಗೆ ನೆರಳು ನೀಡುತ್ತಿದ್ದದ್ದನ್ನು ಪ್ರದಾನಿಯವರಿಗೆ ವಿವರಿಸುವ ಮತ್ತು ಪ್ರದಾನಿಯವರು ವೀಕ್ಷಿಸುವ ಕಾರ್ಯಕ್ರಮವದು.
   ಪ್ರೌಡ ಶಾಲೆ (ಈಗಿನ ಪದವಿ ಪೂವ೯ ಕಾಲೇಜ್) ಎದರು ಪ್ರದಾನಿಯವರನ್ನು ಸ್ಥಳಿಯರು ಸ್ವಾಗತಿಸುವುದು, ಪ್ರಧಾನಿಯವರ ಬೇಟಿ ಸ್ಮರಣಾರ್ಥ ಗೊಳಿಸಲು ಒಂದು ಗಿಡ ನೆಡಿಸುವುದು ನಂತರ ರಸ್ತೆಯ ಇಕ್ಕೆಲದಲ್ಲಿ ಶಿಸ್ತಾಗಿ ನಿಂತ ಶಾಲಾ ಮಕ್ಕಳು ಮತ್ತು ಆನಂದಪುರಂ ನಿವಾಸಿಗಳಿಗೆ ಪ್ರದಾನ ಮಂತ್ರಿಗಳಿಗೆ ಶುಭ ಹಾರೈಸಲು ಮತ್ತು ಶುಭ ಹಾರೈಕೆ ಸ್ಪೀಕರಿಸಲು ಪ್ರದಾನಿಗಳು ಸ್ವಲ್ಪ ದೂರ ನಡೆದು ಹೋಗುವುದು ಕಾರ್ಯಕ್ರಮ ಮತ್ತು ಈ ಕಾರ್ಯಕ್ರಮ ಹೆಚ್ಚು ಸಮಯ ತೆಗೆದುಕೊಳ್ಳದಂತೆ ನಿಗದಿ ಆಗುತ್ತದೆ.
   ರಾಜ ಪ್ರಮುಖರಿಂದ ಗಣ್ಯರಿಗೆಲ್ಲ ರಾಜ ಪರಿವಾರದ ರಾಜ ಪೋಷಾಕನ್ನು ಧರಿಸಿ ನಿಗದಿತ ಸಮಯದಲ್ಲಿ ನಿಗದಿತ ಜಾಗದಲ್ಲಿ ನೆರೆಯುವ ವಿನಂತಿ ತಲುಪಿಸಿರುತ್ತಾರೆ.
  ಆನಂದಪುರಂನ ಭೂ ಮಾಲಿಕರು, ಕೊಡುಗೈ ದಾನಿಗಳು ಮತ್ತು ಇನಾಂದಾರರಾದ ರಾಮಕೃಷ್ಣ ಅಯ್ಯಂಗಾರವರು ಅವರ ಪುತ್ರರಾದ ವೆಂಕಟಾಚಲಯ್ಯಂಗಾರ್ ಮತ್ತು ಬದರಿನಾರಾಯಣ ಅಯ್ಯಂಗಾರ್ ಜೊತೆ ಆನಂದಪುರಂನ ಗಣ್ಯರೆಲ್ಲ ನೆರೆದಿರುತ್ತಾರೆ ಸಮಯಕ್ಕೆ ಸರಿಯಾಗಿ ಪ್ರದಾನ ಮಂತ್ರಿ ಜವಾಹರಲಾಲ್ ರು ಪುತ್ರಿ ಇಂದಿರಾಗಾಂಧಿ ಮತ್ತು ರಾಜ ಪ್ರಮುಖರಾದ ಕಾಗೋಡು ಕೆ.ಜಿ. ಒಡೆಯರ್ ಜೊತೆ ಆನಂದಪುರಂ ಪ್ರೌಡ ಶಾಲೆಯ ಗೇಟಿನ ಎದರು ಕಾರಿಂದ ಇಳಿಯುತ್ತಾರೆ.
   ಅಯ್ಯಂಗಾರ್ ಕುಟುಂಬ ಮತ್ತು ಸ್ಥಳಿಯರಿಂದ ಸ್ವಾಗತ ಸ್ವೀಕರಿಸಿ ನಂತರ ರಾಜ ಪ್ರಮುಖರಾದ ಕಾಗೋಡಿನ ಕೆ.ಜಿ. ಒಡೆಯರ್ ರಿಂದ ಮೈಸೂರು ರಾಜರಿಂದ ರಾಜ್ಯದಾದ್ಯಂತ ಬೆಳೆಸಿದ ಸಾಲು ಮರದ ಬಗ್ಗೆ ವಿವರಣೆ ತಿಳಿದುಕೊಳ್ಳುತ್ತಾರೆ.
  ಆನಂದಪುರಂಗೆ ದೇಶದ ಪ್ರಧಾನಿಗಳ ಆಪೂವ೯ ಬೇಟಿ ಸದಾ ಸ್ಮರಣೆಯಲ್ಲಿರಲಿ ಎಂದು ಸಸಿ ಒಂದು ನೆಡುತ್ತಾರೆ, ನಂತರ ಶಾಲಾ ಗಡಿಯವರೆಗೆ (ಈಗಿನ ವಿದ್ಯುತ್ ಇಲಾಖೆ ಕಛೇರಿ ವರೆಗೆ) ಹಸನ್ಮುಖರಾಗಿ ಎರೆಡೂ ಕೈ ಮುಗಿದು ನಡೆಯುತ್ತಾರೆ.
   ರಸ್ತೆಯ ಇಕ್ಕೆಲದಲ್ಲಿ ಶಿಸ್ತಾಗಿ ಸಾಲಾಗಿ ನಿಂತ ವಿದ್ಯಾರ್ಥಿ ವೃಂದ ಮತ್ತು ಆನಂದಪುರಂ ಜನತೆ ಈ ಐತಿಹಾಸಿಕ ಘಟನೆಯಿಂದ ಪುಳಕಿತರಾಗಿ ಸಾಕ್ಷಿಗಳಾಗುತ್ತಾರೆ.
  ಪ್ರದಾನಿ ಜವಾಹರಲಾಲ್ ನೆಹರು ಆನಂದಪುರಂ ಬೇಟಿ ನೆನಪು ಮಸುಕಾಗಿದೆ ಹಾಗೇ ನೆಹರೂರವರು ನೆಟ್ಟಿದ ಸಸಿ ಮರವಾಯಿತಾ? ಅದು ಯಾವ ಮರ? ಎಂಬುದು ಯಾರಿಗೂ ನೆನಪಿಲ್ಲದಿರುವುದು ವಿಪರ್ಯಾಸವಾಗಿದೆ.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...