Skip to main content

ಆನಂದಪುರಂ ಇತಿಹಾಸ ಭಾಗ 62, ಆನಂದಪುರಂನ ಪ್ರತಿಷ್ಟಿತ ಕನ್ನಡ ಸಂಘ ಮತ್ತು ಆನಂದಪುರಂನ ಹೆಸರನ್ನು ಸಾಂಸ್ಕೃತಿಕವಾಗಿ ಕೆಲ ದಶಕ ಶ್ರೀಮಂತಗೊಳಿಸಿದ ಪ್ರಖರ ವಾಗ್ಮಿ ಕಲಾವಿದ ಸಂಘಟನಾಕಾರ ದಿವಂಗತ ಹಾ.ಮೊ.ಬಾಷಾ ಸ್ಮರಣೆಯಲ್ಲಿ

#ಆನಂದಪುರಂ_ಇತಿಹಾಸ
#ಭಾಗ_62.

#ಆನಂದಪುರಂ_ಜನತೆಯ_ಸದಾನೆನಪಿನಲ್ಲಿ_ಉಳಿದಿರುವ
#ದಿವ೦ಗತ_ಹಾ_ಮೋ_ಭಾಷಾ .

#ಕನ್ನಡಸಂಘ_ಉತ್ತುಂಗಕ್ಕೆ_ತಲುಪಿಸಿದ_ಕನಸುಗಾರ.

#ಆನಂದಪುರಂನ_ಮೂಲ_ನಿವಾಸಿಗಳು_ಈ_ಮನೆತನದವರು.

#ಆನಂದಪುರಂನ_ಏಕೈಕ_ಬಾರೂದ್_ಮನೆತನ.

  ಒಂದು ಕಾಲದಲ್ಲಿ ಮಲೆನಾಡಿನಲ್ಲಿ ಸುತ್ತ ನೂರಾರು ಹಳ್ಳಿಗಳ ಮಧ್ಯೆ ಒಂದು ಪೇಟೆ ಸೃಷ್ಟಿ ಆಗುತ್ತಿತ್ತು, ಆ ಪೇಟೆಯಲ್ಲಿ ಸುತ್ತ ಹಳ್ಳಿಯ ಜನರ ಕೃಷಿ ಉಪಕರಣ ತಯಾರಿಸುವ, ದುರಸ್ತಿ ಮಾಡುವ ವಿಶ್ವಕರ್ಮಿಯರ ಕುಲುಮೆಗಳು, ಕ್ಷೌರಿಕರ ಅಂಗಡಿಗಳು, ಪಂಡಿತರುಗಳು, ನಿತ್ಯ ಉಪಯೋಗಿ ಹಿತ್ತಾಳೆ ಪಾತ್ರೆಗಳಿಗೆ ಕಲಾಯಿ ಹಾಕುವವರು, ಜೋಡು ಹೊಲೆದು ಕೊಡುವವರು, ದಿನಸಿ ಮಾರಾಟ ಮಾಡುವವರು, ಕಂಬಳಿ ಮಾರುವವರು, ಕುಂಬಾರರ ಮನೆಗಳು, ಪುರೋಹಿತರು, ಡಬ್ಬ - ಛತ್ರಿ- ಟಾರ್ಚ್ ದುರಸ್ತಿಗಾರರ ಮತ್ತು ಪಸಲು ರಕ್ಷಣೆಗಾಗಿ - ಶಿಕಾರಿಗಾಗಿ ಬಳಸುವ ಬಂದೂಕುಗಳಿಗೆ ಮದ್ದು ತಯಾರಿಸುವ ಬಾರೂದ್ ಮನೆತನಗಳು ಇದ್ದರೆ ಮಾತ್ರ ಅದು ಪೇಟೆಯ ಅರ್ಹತೆ ಪಡೆಯುತ್ತಿತ್ತು.
  ಇಂತಹ ಪೇಟೆಗಳಲ್ಲೆ ಬ್ರಿಟೀಷ್ ಆಡಳಿತದ ಪೋಲಿಸ್ ಠಾಣೆ ಇತ್ಯಾದಿಗಳು ಬಂದವು.
   ಆನಂದಪುರಂ ಇಂತಹ ಪೇಟೆ ಆಗಿ ಹೋಬಳಿ ಆಗಿ ನಂತರ ತಾಲ್ಲೂಕ್ ಕೂಡ ಕೆಲ ದಶಕ ಕಾಲ ಆಗಿದ್ದು ಇತಿಹಾಸ.
  ಆನಂದಪುರಂ ಸುತ್ತಮುತ್ತ ದಟ್ಟ ಅರಣ್ಯದಿಂದ ರೈತರ ಪಸಲು ರಕ್ಷಣೆಗಾಗಿ ಮದ್ದುಗುಂಡುಗಳನ್ನು ತಯಾರಿಸಿ ಕೊಡುವ ಉದ್ಯೋಗ ಮಾಡಲು ದೂರದ ಹೊನ್ನಾವರದಿಂದ ಬಂದ ಬಾರೂದ್ ಮೊಯಿದ್ದೀನ್ ಸಾಹೇಬರ ಕುಟುಂಬವೇ ಮೂಲವೋ ಅಥವ ಅದಕ್ಕಿಂತ ಮೊದಲೇ ಅವರ ಕುಟುಂಬದವರು ಬಂದಿದ್ದರಾ ಎಂಬ ನಿಖರ ಮಾಹಿತಿ ಈ ಕುಟುಂಬದ ಈಗಿನ ತಲೆಮಾರಿನವರಿಗೆ ಇಲ್ಲ.
  ಮದ್ದು ಗುಂಡು ತಯಾರಿಸಿ ಮಾರಾಟ ಮಾಡಲು ಬ್ರಿಟಿಷರ ಕಾಲದಲ್ಲಿ ಲೈಸೆನ್ಸ್ ಪಡೆದು ಈ ಕುಟು೦ಬ ಆನಂದಪುರಂನ ಆ ಕಾಲದ ಸರ್ ಮಿರ್ಜಾ ಇಸ್ಮಾಯಿಲ್ ತಂಗುದಾಣದ (ನಂತರ ಇದು ದೊಡ್ಡಿ ಆಯಿತು) ಪಕ್ಕದಲ್ಲಿ ಆಗಿನ ಪುರ ಪ್ರಮುಖರಾದ ಅಯ್ಯಂಗಾರ್ ಕುಟುಂಬದ ಅನುಮತಿಯಿಂದ ಈ ಕುಟುಂಬ ಆನಂದಪುರಂ ಕೆರೆ ಪಕ್ಕದಲ್ಲಿ ನೆಲೆಸಿತ್ತು.
  ಮದ್ದುಗುಂಡು ಮಾರಾಟ ಮಾಡುವವರಿಗೆ ಬಾರೂದ್ ಮನೆತನ ಎಂಬ ಅಡ್ಡಹೆಸರು ಇರುತ್ತಿತ್ತು, ವರ್ಷ ಪೂರ್ತಿ ಮದ್ದುಗುಂಡು ಅರೆದು ತಯಾರಿಸಿ ಮಾರಾಟ, ಹಬ್ಬ ಹರಿದಿನದಲ್ಲಿ ಆ ಕಾಲದ ದೇಸಿ ಸಿಡಿ ಮದ್ದು ಮಾರಾಟದಿಂದ ಅವರದ್ದು ಶ್ರೀಮಂತ ಜೀವನವೇ ಆಗಿತ್ತು.
  ಹೊನ್ನಾವರದ ಬಾರೂದ್ ಮೊಯಿದೀನ್ ಸಾಬ್ ರಿಗೆ ಐವರು ಮಕ್ಕಳು ಹಸನಾರ್, ಅಮೀನಾಬಿ, ಹಮೀದ್ ಸಾಬ್, ಆಹ್ಮದ್ ಖುನ್ನಿ, ಮತ್ತು ಇಬ್ರಾಹಿಂ.
   ಮನೆತನದ ಉದ್ಯೋಗವನ್ನು ಹಸನಾರ್ ಸಾಬ್ ಮತ್ತು ಹಮೀದ್ ಸಾಹೇಬರು ಮುಂದುವರೆಸುತ್ತಾರೆ, ಉಳಿದವರು ಸಾಗರ ಮತ್ತು ಗೋವಾದಲ್ಲಿ ಉದ್ಯೋಗ ಮಾಡುತ್ತಾರೆ, ಅಮೀನಾಬಿಯವರನ್ನು ಚಾಬು ಸಾಹೇಬರಿಗೆ ವಿವಾಹ ಮಾಡುತ್ತಾರೆ.
  ನಂತರ ಹಮೀದ್ ಸಾಹೇಬರು ವಾಚ್ ಮತ್ತು ಗಡಿಯಾರ, ರೇಡಿಯೋ ಇತ್ಯಾದಿ ದುರಸ್ತಿಯಲ್ಲಿ ನಿಪುಣರಾಗಿ ರೈಸ್ ಮಿಲ್ ಮೆಕಾನಿಕ್ ಆಗಿ ಪ್ರಸಿದ್ಧರಾಗುತ್ತಾರೆ, ಸುಬ್ಬಣ್ಣ ನಾಯಕರ ರೈತ ಬಂದು ಗ್ರಾಮೋದ್ಯೋಗದಲ್ಲಿ ಪ್ರಮುಖ ಮೆಕ್ಯಾನಿಕ್ ಆಗಿ ಆಧುನಿಕ ನೈಲಾನ್ ಅವಲಕ್ಕಿ ತಯಾರಿಸುವ ಯಂತ್ರ ಕಂಡು ಹಿಡಿಯುತ್ತಾರೆ ಆದರೆ ಅದನ್ನು ಪೇಟೆಂಟ್ ಇತ್ಯಾದಿ ಮಾಡದಿದ್ದರಿಂದ ಇವರಿಗೆ ವೈಯಕ್ತಿಕ ಲಾಭ ದೊರೆಯುವುದಿಲ್ಲ ಆದರೆ ಇವರ ಮಾದರಿ ಯಂತ್ರವೇ ಈಗಲೂ ಎಲ್ಲೆಡೆ ಇದೆ.
    ಹಸನಾರ್ ಸಾಬ್ ಮತ್ತು ಶ್ರೀಮತಿ ಖತಿಜಾಬಿ ದಂಪತಿಗಳಿಗೆ ಬಾಬು (ಅಬ್ದುಲ್ ಖಾದರ್ ), ಖಾಸಿಂ, ಹಾ. ಮೊ. ಬಾಷಾ ಮತ್ತು ಷ೦ಷು ಎಂಬ ನಾಲ್ಕು ಗಂಡು ಮಕ್ಕಳು. ಜಾಯಿರಾಬಿ, ಆಲೀಮಾ, ಪಾತೀಮಾ ಮತ್ತು ನೇಬಾನು ಎಂಬ ನಾಲ್ಕು ಹೆಣ್ಣು ಮಕ್ಕಳು.
  ಇವರಲ್ಲಿ ಹಾ.ಮೊ. ಬಾಷಾ ಕನ್ನಡದ ಕಟ್ಟಾ ಅಭಿಮಾನಿ, ಸಂಘಟನಾ ಚತುರ, ಪ್ರಖರ ವಾಗ್ಮಿ, ಕಲಾವಿದರೂ ಆಗಿದ್ದರು.
  ಆನಂದಪುರಂನ ಕನ್ನಡ ಸಂಘದಲ್ಲಿಯೇ ಅವರ ಜೀವಮಾನದ ಹೆಚ್ಚಿನ ಕಾಲ ಕಳೆದು ಆ ಮೂಲಕ 1980 ರಿಂದ 2008ರವರೆಗೆ ಸುಮಾರು 3 ದಶಕ ಕಾಲ ಆನಂದಪುರಂನಲ್ಲಿ ನಿರಂತರ ಸಾಂಸ್ಕೃತಿಕ, ಸಾಮಾಜಿಕ ಕಾರ್ಯಗಳನ್ನು ನಡೆಸಿ ಊರಿಗೆ ಹೆಸರು ತಂದ ಖ್ಯಾತಿ ಇವರದ್ದು. ಹಾ.ಮೋ. ಬಾಷಾರ ನಾಟಕ ಇದೆ ಅಂದರೆ ಜನ ಕಿಕ್ಕಿರಿದು ಸೇರುತ್ತಿದ್ದರು ಅವರ ಹಾಸ್ಯಕ್ಕೆ ನಕ್ಕೂ ನಕ್ಕೂ ಹೊಟ್ಟೆ ನೋವಾಯಿತು ಅನ್ನುತ್ತಿದ್ದರು,ಭಾಷಣಕ್ಕೆ ನಿಂತರೆ ಪಿನ್ ಡ್ರಾಪ್ ಸೈಲೆನ್ಸ್ ಇವರ ಬಾಯಿಂದ ಬರುತ್ತಿದ್ದ ನಿರ್ಗಳ ವಚನ, ಗಾದೆ ಮತ್ತು ನುಡಿಮುತ್ತುಗಳು ಕೇಳುಗರಿಗೆ ಮಂತ್ರ ಮುಗ್ದರಾಗಿಸುತ್ತಿತ್ತು.
  ವಿಷದ ಹಾವು ಹಿಡಿದು ಕಾಡಿಗೆ ಬಿಡುತ್ತಿದ್ದರು ಈ ಹವ್ಯಾಸವೇ ಇವರ ಅಕಾಲಿಕ ಮೃತ್ಯುವಿಗೆ ಕಾರಣವಾಯಿತು ಎಂಬುದು ವಿಷಾದನೀಯ ಸಂಗತಿ.
 ಇವರ ಪತ್ನಿ ಕೂಡ ಇತ್ತೀಚಿಗೆ ಅಪಘಾತದಲ್ಲಿ ಮೃತರಾಗಿದ್ದಾರೆ ಇವರ ಮಗಳು ಮತ್ತು ಮಗ ಸಂಬಂದಿಕರ ನೆರವಿನಿಂದ ವಿದ್ಯಾಬ್ಯಾಸ ಮುಂದುವರಿಸಿದ್ದಾರೆ.
  ಇವತ್ತಿಗೂ ಹಾ.ಮೋ. ಭಾಷಾ ಅಂದರೆ ಜಿಲ್ಲೆಯಲ್ಲಿ ಕನ್ನಡ ಭಾಷಾಭಿಮಾನಿಗಳಿಗೆ ಹೆಮ್ಮೆಯ ವ್ಯಕ್ತಿತ್ವ ಮತ್ತು ನೆನಪು.

(ನಾಳೆ ಮುಂದಿನ ಭಾಗ - 63)

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...