Skip to main content

ಲಂಡನ್ ನ ಶ್ರೀಮಂತ ನಗರಿ ಪ್ಲೀಟ್ ನ ಕೌನ್ಸಿಲರ್ ಆಗಿ ಆಯ್ಕೆ ಆದ ಕನ್ನಡಿಗ ಅನಿವಾಸಿ ಭಾರತೀಯ ಕುಮಾರ್ ಕುಂಟಿಕಾನಮಠ ಇವರಿಗೆ ಸಮಸ್ತ ಕನ್ನಡಿಗರ ಅಭಿನಂದನೆಗಳು.

#ಅಭಿನಂದನೆಗಳು

#ದೂರದ_ಇಂಗ್ಲೇಂಡ್_ಶ್ರೀಮ೦ತ_ನಗರ_ಪ್ಲೀಟ್_ಸಿಟಿ_ಕೌನ್ಸಿಲರ್_ಆಗಿ_ಆಯ್ಕೆ

#ಶ್ರೀರಾಮಕಥಾಮಂಜರಿ_ಶ್ರೀಕೃಷ್ಣಕಥಾಮಂಜರಿ_ಬರೆದ_ಕುಂಟಿಕಾನಮಠ_ಬಾಲಕೃಷ್ಣಭಟ್_ಪುತ್ರ

#ಕಲಾರಾದಕ_ಉದ್ಯಮಿ_ಹಠಗಾರ_ಅನಿವಾಸಿ_ಭಾರತೀಯ

#ಕುಮಾರ್_ಕುಂಠಿಕಾನಮಠ

   ನಿನ್ನೆ ಗೆಳಿಯರಾದ ಕುಮಾರ್ ಕುಂಟಿಕಾನಮಠ ದೂರದ ಇಂಗ್ಲೇಂಡ್ ನ ಶ್ರೀಮಂತ ನಗರ ಪ್ಲೀಟ್ ಸಿಟಿ ಕೌನ್ಸಿಲರ್ ಆದ ಸುದ್ದಿ ಕೇಳಿ ಅತ್ಯಂತ ಸಂತೋಷದಿಂದ ಅವರಿಗೆ ಅಭಿನಂದನೆ ಅರ್ಪಿಸಿದೆ ಮತ್ತು ಈ ಸಂತೋಷವನ್ನು ಪೇಸ್ ಬುಕ್ ಗೆಳೆಯರಿಗಾಗಿ ಮತ್ತೊಮ್ಮೆ ಹಂಚಿಕೊಳ್ಳುವ ಬಯಕೆ ನನ್ನದು.
  ಪುರಾತನವಾದ ಕುಂಟಿಕಾನಮಠ ಕೇರಳದ ಕಾಸರಗೋಡಿನ ಸಮೀಪ ಇದೆ, ಇವರ ಕುಟುಂಬದ್ದೇ ಆದ ಈ ಮಠವನ್ನು ಇವರ ಜಾತಿಯ ಹೊಸನಗರದ ಮಠಾದೀಶರು ತಮ್ಮ ಶಿಷ್ಯರ ಭುಜ ಭಲ ಮತ್ತು ಅವರ ಹಣ ಬಲದಿಂದ ವಶಪಡಿಸಿಕೊಂಡಿದ್ದರು.
 ಆ ಸಂದಭ೯ದಲ್ಲಿ ಇವರ ವಯೋವೃದ್ದರಾಗಿದ್ದ ಇವರ ತಂದೆ ಕನ್ನಡದಲ್ಲಿ ಶ್ರೀ ರಾಮಕಥಾ ಮಂಜರಿ ಮತ್ತು ಶ್ರೀ ಕೃಷ್ಣ ಕಥಾ ಮಂಜರಿ ಎಂಬ ಬೃಹತ್ ಗ್ರಂಥ ಬರೆದ ಬೆಂಗಳೂರಿನ ಎನ್.ಎಲ್.ಎನ್. ವಿದ್ಯಾಸಂಸ್ಥೆಯಲ್ಲಿ ಕನ್ನಡ ಅಧ್ಯಾಪಕರಾಗಿದ್ದ ಕುಂಟಿಕಾನಮಠ ಬಾಲಕೃಷ್ಣ ಭಟ್ಟರ ಮೇಲೂ ಹಲ್ಲೆ ನಡೆಸಿದ್ದರಿಂದ ಈ ಕುಟುಂಬ ನೋವು ದುಃಖ ಅನುಭವಿಸಿತ್ತು.
  ಸದರಿ ಮಠಕ್ಕೆ ಲಕ್ಷಾಂತರ ದೇಣಿಗೆ ನೀಡಿದ್ದ ಕುಮಾರ್ ಲ೦ಡನ್ನಿಂದ ಸ್ವಾಮಿಗೆ ಪೋನಾಯಿಸಿದರೆ ಪೋನಿಗೆ ಸಿಗದ ಸ್ವಾಮಿ ನಂತರ ಇವರಿಗೆ ಬೆದರಿಕೆ ನೀಡಿದರು.
  ಕರ್ನಾಟಕದ ಕಲಾವಿದರನ್ನು ದೂರದ ಲಂಡನ್ ನಲ್ಲಿ ಆದರಿಸಿ ಅವರ ಕಲಾ ಪ್ರದರ್ಶನಕ್ಕೆ ಸಹಕರಿಸುವ ಕುಮಾರ್ ನ್ಯಾಯಕ್ಕಾಗಿ ಎಂತಹ ಹೋರಾಟಕ್ಕು ಸಿದ್ಧರು ಅದರಂತೆ ಕೇರಳದ ನ್ಯಾಯಾಲಯಕ್ಕೆ ಇದನ್ನು ಒಯ್ದರು ಅಂತಿಮವಾಗಿ ಗೆಲುವು ಇವರದ್ದಾಗಿ ಪುನಃ ಇವರ ಸುಪರ್ದಿಯಲ್ಲಿ ದೇವಾಲಯ ನವೀಕರಣ ಆಗುತ್ತಿದೆ, ದೌರ್ಜನ್ಯ ಮಾಡಿದ ಮಠ ಈ ಮಠದ ಆಭರಣ, ಹಣ ಮತ್ತು ಪಂಚಲೋಹದ ವಿಗ್ರಹ ಇನ್ನೂ ಹಿಂದುರುಗಿಸುವ ಮನಸ್ಸು ಮಾಡಿಲ್ಲ.
  ಹಿಂದಿನ ಮುಖ್ಯಮಂತ್ರಿ ಯಡೂರಪ್ಪನವರು ಈ ಮಠದ ಅವರಣದಲ್ಲಿ ಇವರ ತಂದೆಯ ಸ್ಮರಣಾರ್ಥ ಸಭಾ ಭವನಕ್ಕೆ ಕರ್ನಾಟಕ ಸರ್ಕಾರದಿಂದ ಹಣ ಮಂಜೂರು ಮಾಡಿದ್ದಾರೆ.
  ಯಡೂರಪ್ಪರ ಕುಟುಂಬಕ್ಕೆ ಇವರು ಆಪ್ತರು, ಯಡೂರಪ್ಪರ ಪುತ್ರ ಸಂಸದ ರಾಘವೇಂದ್ರ ಮತ್ತು ಕುಮಾರ್ ಪ್ರೌಡ ಶಾಲಾ ವಿದ್ಯಾಬ್ಯಾಸದಲ್ಲಿ ಸಹಪಾಠಿಗಳು.
  ಸಾಹಿತ್ಯ ಸೇವೆ, ಕಲಾಸೇವೆ,ಸಮಾಜ ಸೇವೆ ಮತ್ತು ದಾರ್ಮಿಕ ಸೇವೆಯಲ್ಲಿ ಸದಾ ಮುಂದಿರುವ ಕುಮಾರ್ ಕುಂಟಿಕಾನಮಠರು ಈಗ ಲಂಡನ್ನಿನ ಪ್ಲೀಟ್ ನಗರದ ಕೌನ್ಸಿಲರ್ ಆಗಿ ಆಯ್ಕೆ ಆಗಿದ್ದಾರೆ ಮುಂದಿನ ದಿನದಲ್ಲಿ ಇಂಗ್ಲೇಂಡಿನ ಪಾರ್ಲಿಮೆಂಟ್ ಗೂ ಆಯ್ಕೆ ಆಗಿ ಕರ್ನಾಟಕ ರಾಜ್ಯದ ಕನ್ನಡಿಗರಿಗೆ ಹೆಮ್ಮೆ ಉಂಟು ಮಾಡುವ ಸಂದರ್ಭ ಬರಲಿ ಎಂದು ಅವರಿಗೆ ಶುಭ ಹಾರೈಸುತ್ತೇನೆ.
   ನಾನು ಬರೆದ ಮೊದಲ ಕಾದಂಬರಿ "ಕೆಳದಿ ಸಾಮ್ರಾಜ್ಯ ಇತಿಹಾಸ ಮರೆತಿರುವ" #ಬೆಸ್ತರರಾಣಿ_ಚಂಪಕಾ           ಲಂಡನ್ ನ ಕನ್ನಡಿಗರಿಗೆ ತಲುಪಿಸಿದವರು ಇವರು.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...