Skip to main content

ಹದಿನಾರನೆ ವಯಸ್ಸಲ್ಲಿ ದಿನಸಿ ಅಂಗಡಿ ವ್ಯವಹಾರ

#ಹೊಟ್ಟೆಪಾಡಿಗಾಗಿ_ಉದ್ಯೋಗದಲ್ಲಿ_ಅವತಾರಗಳು
#ವಿದಿಯಾಟದ_ಜೀವನ_ಪಲ್ಲಟವಲ್ಲವೇ?
  
 #ನಲವತ್ತೊಂದು_ವರ್ಷದ_ಹಿಂದಿನ_ನೆನಪಿನ_ಚಿತ್ರ.
  1980 ರಲ್ಲಿ ನಾನು ಎಸ್. ಎಸ್.ಎಲ್.ಸಿ ಆದರೆ ಎಂಟನೆ ತರಗತಿಯಿಂದನೇ ಸಾಗರದ ಮುನ್ಸಿಪಲ್ ಹೈಸ್ಕೂಲ್ ಗೆ ಚಕ್ಕರ್ ಪ್ರತಿ ದಿನ ಆನಂದಪುರಂನಿಂದ ಬರುತ್ತಿದ್ದ ಗೆಳೆಯನ ಜೊತೆ ಸಾಗರ ರೈಲು ನಿಲ್ದಾಣದ ಎದುರಿನ ಪುಟ್ಬಾಲ್ ಮೈದಾನದಲ್ಲಿ ಕ್ರಿಕೆಟ್.
  ಹಾಗಾಗಿ ಆ ವರ್ಷ ಪರೀಕ್ಷೆ ತೆಗೆದುಕೊಳ್ಳದೆ ಒಂದು ವರ್ಷ ಓದಿ ಎಸ್.ಎಸ್.ಎಲ್.ಸಿ ಪರೀಕ್ಷೆ ತೆಗೆದುಕೊಳ್ಳುವುದೆಂದು ತೀರ್ಮಾನಿಸಿ ಬಿಟ್ಟಿದ್ದೆ ಆದರೆ ನನ್ನ ತೀರ್ಮಾನ ಪರೀಕ್ಷೆಗೆ ಒಂದು ವಾರ ಇರುವಾಗ ತಂದೆಯವರಲ್ಲಿ ತಿಳಿಸಿದಾಗ ಅವರು ಒಪ್ಪಲೇ ಇಲ್ಲ ಆದ್ದರಿಂದ ಸಾಗರದ ಶ್ರೀ ಟ್ರೇಡರ್ಸ್ ನಲ್ಲಿ ಕನ್ನಡ, ಇಂಗ್ಲೀಷ್, ಹಿಂದಿ ಮತ್ತು ಸಮಾಜಶಾಸ್ತ್ರದ ಎಸ್ ಎಸ್.ಎಲ್.ಸಿ ಬಂದು ಎಂಬ (ಆ ಕಾಲದ ಪ್ರಸಿದ್ದ ಗೈಡುಗಳು) ಗೈಡ್ ಖರೀದಿಸಿ ಓದಿ ಈ ನಾಲ್ಕು ಸಬ್ಜೆಕ್ಟ್ ಉತ್ತಮ ಅಂಕದಲ್ಲೇ ಪಾಸು ಮಾಡಿದೆ.
   ಗಣಿತ ಮತ್ತು ವಿಜ್ಞಾನ ಪರೀಕ್ಷೆ ಬರೆಯಲೇ ಇಲ್ಲ, ಅದನ್ನು ಆನಂದಪುರಂ ರತ್ನಾಕರ ಮಾಸ್ಟರ್ ಎಂಬ ಸಹೃದಯಿ ಶಿಕ್ಷಕರಿಂದ ಟ್ಯೂಷನ್ ಪಡೆದು ಸಪ್ಲಿಮೆಂಟರಿ ಪರೀಕ್ಷೆ ಪಾಸು ಮಾಡಿಕೊಂಡೆ.
  ಈ ಒಂದು ವರ್ಷದ ಗ್ಯಾಪ್ ನ್ನು ಸದುಪಯೋಗ ಮಾಡಿಕೊಳ್ಳಲು ದಿನಸಿ ಅಂಗಡಿ ಕನಸು ಕಂಡಿದ್ದೆ ಆಗಲೇ ನನ್ನ ತಂದೆಯ ಗೆಳೆಯರು, ನಮ್ಮ ಕುಟುಂಬದ ಶ್ರೇಯಸ್ಸು ಯಾವತ್ತೂ ಬಯಸುವ ಹಿರೆಯರಕದ ಯೋಮಕೇಶಪ್ಪ ಗೌಡರು ಬಂಡವಾಳ ಸಾಲವಾಗಿ(ಬಡ್ಡಿ ಇಲ್ಲದೆ) ನೀಡಿದ ಹತ್ತು ಸಾವಿರ (1980 ರಲ್ಲಿ ದೊಡ್ಡ ಮೊತ್ತ) ಬೀಜ ಧನದಲ್ಲಿ ದಿನಸಿ ಅಂಗಡಿ ಪ್ರಾರಂಬಿಸಿದೆ.
   ಈ ದಿನಸಿ ಅಂಗಡಿ ವ್ಯವಹಾರದ ಅ ಆ (ABCD) ಕಲಿಸಿತು, ಇದರ ನಂತರ ಸಾಗರದಲ್ಲಿ ಡಿಫ್ಲೋಮ ಓದಲು ತಂದೆಯವರು ಸೇರಿಸಿದರು, ನಂತರ ಕಾಲಕಾಲಕ್ಕೆ ವ್ಯವಹಾರ ಉದ್ಯೋಗಗಳು ಬದಲಾಯಿತು. ಲಾಭ-ನಷ್ಟ ಮಿತ್ರದ್ರೋಹ ಗಳು ಸಮನಾಂತರ ರೇಖೆಯಾಗೆ ಚಲಿಸಿತು, ಪ್ರತಿಯೊಬ್ಬ ಉದ್ಯೋಗಾಂಕ್ಷಿಯ ಅನುಭವ ಹೀಗೆ ಇರುತ್ತದೆ ನನ್ನದೇನು ವಿಶೇಷವಲ್ಲ ಆದರೆ ವಿದಿ ಉದ್ಯೋಗದಲ್ಲಿ ಸ್ಥಾನ ಪಲ್ಲಟ ಮಾಡಿಸಿ ಗುರಿ ಸೇರಿಸುವುದು ಸುಳ್ಳಲ್ಲ ಹಾಗೆಯೇ ಸತತ ಪ್ರಯತ್ನದ ಶ್ರಮವೂ ಇರಲೇಬೇಕು.
   ಇದೆಲ್ಲ ಮೊನ್ನೆಯ ನನ್ನ ಕಡತ ಯಜ್ಞದಲ್ಲಿ ನನ್ನ ದಿನಸಿ ಅಂಗಡಿಯ ಪೋಟೋ ಉಡುಪಿ ಜಿಲ್ಲೆಯ ಕೋಟಾ ಸಮೀಪದ ಕಡಲ ಕಿನಾರೆಯ ಹಿರಿಯ ಗೆಳಯ ದಿವಂಗತ #ಮನೋಹರ_ತೋಳಾರ್ ತೆಗೆದದ್ದು ಸಿಕ್ಕಿದಾಗ ನೆನಪಾಯಿತು.
  41 ವರ್ಷದ ಹಿಂದಿನ ಪೋಟೋ ಮತ್ತು ನೆನಪುಗಳು.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...