Skip to main content

ಚಂಪಕ ಸರಸ್ಸುವಿನ ಶಿಲಾ ಮಯ ಆನೆಯ ಸುಂದರ ಚಿತ್ರ ಕ್ಲಿಕ್ಕಿಸಿದ ನಿವೃತ್ತ ಅಬಕಾರಿ ಅಧಿಕಾರಿ ಚೋರಡಿ ದತ್ತಾತ್ರೇಯರ ಕುಟುಂಬ.

#ಚ೦ಪಕಸರಸ್ಸುವಿನ_ಶಿಲಾಮಯ_ಆನೆಯ_ಸುಂದರ_ಚಿತ್ರ_ಸೆರೆಹಿಡಿದವರು.

#ಡೇರ್_ಅಂಡ್_ಡೆವಿಲ್_ಅಬಕಾರಿ_ಅಧಿಕಾರಿ_ಆಗಿದ್ದ_ದತ್ತಾತ್ರೇಯಸ್ವಾಮಿ.

#ನಾಣ್ಯ_ಸಂಗ್ರಹಾಕಾರರೂ_ಇತಿಹಾಸದ_ಬಗ್ಗೆ_ಹೆಚ್ಚಿನ_ಆಸಕ್ತಿ.

#ಇವರ_ಪತ್ನಿ_ಕುವೆಂಪು_ವಿಶ್ವವಿದ್ಯಾಲಯದ_ಸಿಂಡಿಕೇಟ್_ಸದಸ್ಯರು_ಜಿಲ್ಲಾ_ಮಹಿಳಾ_ಈಡಿಗ_ಸಮಾಜದ_ಅಧ್ಯಕ್ಷರು.

  ನಾನು ಬರೆದ ಕಾದಂಬರಿ ತರಿಸಿಕೊಂಡು ಕೆಲವೇ ಗಂಟೆಯಲ್ಲಿ ಓದಿದ್ದರಂತೆ ಹಾಲಿ ಶಿವಮೊಗ್ಗ ತಾಲ್ಲೂಕಿನ ಚೋರಡಿಯಲ್ಲಿ ಕೃಷಿಯೊಂದಿಗೆ ನಿವೃತ್ತ ಜೀವನ ಮಾಡುತ್ತಿರುವ ದತ್ತಾತ್ರೇಯ ದಂಪತಿಗಳು.
  ಈ ಕಾದಂಬರಿಯ ಕೇಂದ್ರವಾದ ರಾಣಿ ಚಂಪಕಳ ಸ್ಮರಣೆಗಾಗಿ ಕೆಳದಿ ರಾಜ ವೆಂಕಟಪ್ಪ ನಾಯಕರು ನಿರ್ಮಿಸಿದ ಚಂಪಕ ಸರಸ್ಸುವಿಗೆ ಇತ್ತೀಚಿಗೆ ಬೇಟಿ ನೀಡಿದ್ದರು ಮತ್ತು ಚಿತ್ರಿಕರಿಸಿದ್ದ ಕೆಲ ಸುಂದರ ಚಿತ್ರ ಕಳಿಸಿದ್ದಾರೆ.
  ಇದರಲ್ಲಿ ಚಂಪಕ ಸರಸ್ಸುವಿನ ಎರೆಡು ಸುಂದರ ಆನೆಗಳಲ್ಲಿ ಒಂದು ಆನೆಯ ಪೋಟೋ ಮಾತ್ರ ಈವರೆಗೆ ತೆಗೆದ ಆನೆ ಚಿತ್ರಗಳಲ್ಲಿ ಇದು ವಿಶೇಷ ಅನ್ನಿಸುವಂತ ನವೀನ ಕೋನದಲ್ಲಿ ತೆಗೆದದ್ದು ನೋಡಿ ಆಶ್ಚಯ೯ ಆಯಿತು.
  ನಾನು ಊರಲ್ಲಿಲ್ಲದ್ದರಿಂದ ಇವರ ನನ್ನ ಬೇಟಿ ಆಗಲಿಲ್ಲ, ದತ್ತಾತ್ರೇಯರು ಅಬಕಾರಿ ಇಲಾಖೆಯಲ್ಲಿದ್ದಾಗ ಡೇರ್ ಡೆವಿಲ್ ಅಧಿಕಾರಿ ಅಂತಾನೆ ಹೆಸರು ಪಡೆದಿದ್ದರು, ನಕಲಿ ಬ್ರಾಂಡಿ ಮಾಡುವವರಿಗೆ ಸಿಂಹಸ್ವಪ್ನ ಆಗಿದ್ದರು ಯಾರದೇ ಪ್ರಭಾವಕ್ಕೂ ಒಳಗಾಗದ ಡೊಂಟ್ ಕೇರ್ ಸ್ವಭಾವ ಇವರದ್ದು.
   ಚೋರಡಿಯಲ್ಲಿ ಇವರು ಅತ್ಯುತ್ತಮ ಅಡಿಕೆ ತೋಟವನ್ನು ತೀರ್ಥಹಳ್ಳಿಯ ಪ್ರಗತಿ ಪರ ಕೃಷಿ ಸಂಶೋದಕರಾಗಿದ್ದ ಪುರುಶೋತ್ತಮರ ಮಾರ್ಗದರ್ಶನದಲ್ಲಿ ಮಾಡಿದ್ದಾರೆ ಇಲ್ಲೇ ನಿವೃತ್ತ ಜೀವನ ನಡೆಸಿದ್ದಾರೆ.
  ಓದು ಬರಹದ ಜೊತೆ ಇವರ ನಾಣ್ಯ ಸಂಗ್ರಹದ ಹವ್ಯಾಸವೂ ಇದೆ, ಇವರ ನಾಣ್ಯ ಸಂಗ್ರಹದಲ್ಲಿ ಅಮೂಲ್ಯ ಮತ್ತು ಅಪರೂಪದ ನಾಣ್ಯಗಳಿದೆ.
  ಇವರ ಪತ್ನಿ ಶ್ರೀಮತಿ ಗೀತಾಂಜಲಿ ಕೂಡ ಸದಾ ಕ್ರಿಯಾಶೀಲರು ಶಿವಮೊಗ್ಗ ಜಿಲ್ಲಾ ಈಡಿಗ ಸಮಾಜದ ಮಹಿಳಾ ಅಧ್ಯಕ್ಷರಾಗಿದ್ದು ಈಗ ಪ್ರತಿಷ್ಠಿತ ಕುವೆಂಪು ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯೆ ಆಗಿದ್ದಾರೆ.
  ಗೀತಾಂಜಲಿಯವರ ಅಜ್ಜ ಸಾಹುಕಾರ್ ಆನಂದ್ ಮಾಸ್ತರು ಆನಂದಪುರಂನವರು, ಇವರ ತಂದೆ ಸತ್ಯನಾರಾಯಣ್ ಆನಂದಪುರಂ ನಲ್ಲಿ ಜನಾನುರಾಗಿ ಆಗಿದ್ದರು, ಇವರೆಲ್ಲರ ಪ್ರಾಥಮಿಕ ವಿದ್ಯಾಬ್ಯಾಸ ಆನಂದಪುರದಲ್ಲೇ ಆಗಿದ್ದು ದತ್ತಾತ್ರೇಯರು ಒ0ದು ರೀತಿಯಲ್ಲಿ ಆನಂದಪುರಂನ ಅಳಿಯರಂತೆ.
  ಅವರ ಕುಟುಂಬದವರೆಲ್ಲರ ಚಂಪಕ ಸರಸ್ಸು ಬೇಟಿ ಮಾಡಿದ ನೆನಪನ್ನು ಆನೆಯ ವಿಶೇಷವಾದ ಸುಂದರವಾದ ಪೋಟೋ ತೆಗೆದು ಚಿರಸ್ಥಾಯಿ ಮಾಡಿದ್ದಾರೆ ಅವರಿಗೆ ಅಭಿನಂದನೆಗಳು.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...