Skip to main content

ಗಾಡ್ ಪಾದರ್ ಇಲ್ಲದೆ ಸಾಗರ ತಾಲ್ಲೂಕಿನ ಹೋಬಳಿ ಕೇಂದ್ರ ತಾಳಗುಪ್ಪದಿಂದ ರಾಜ್ಯ ಕಾಂಗ್ರೇಸ್ ನಲ್ಲಿ ಆಯಕಟ್ಟಿನ ಸ್ಥಾನ ಪಡೆದ ಎಂ.ಎ.ಸಲೀ೦ ಮತ್ತ ಉಗ್ರಪ್ಪರ ಪತ್ರಿಕಾಗೋಷ್ಟಿ ಪೂರ್ವದ ಮಾತು ಕಥೆಯ ಬಿರುಗಾಳಿ.

#ಗೆಳೆಯ_ಸಾಗರದ_ಎಂ_ಎ_ಸಲೀಂ_ರಾಜಕಾರಣದಲ್ಲಿ_ಮುಂದುವರಿಯಲಿ.

#ಸಾಗರದಿಂದ_ಕೆಪಿಸಿಸಿ_ಸದಸ್ಯರು.

#ಅತ್ಯುತ್ತಮ_ಕ್ರೀಡಾಪಟು_ಮತ್ತು_ಛಾಯಾಚಿತ್ರ_ಗ್ರಾಹಕರು.
  ನಾನು ಸಾಗರದಲ್ಲಿ ಡಿಪ್ಲೋಮೋ ಓದುವಾಗ #ಎಂ_ಎ_ಸಲೀ೦ ಸಾಗರದ ಎಲ್.ಬಿ. ಕಾಲೇಜಿನಲ್ಲಿ ಪ್ರಸಿದ್ಧರಾಗಿದ್ದರು ಇವರ ತಮ್ಮ ಸುಲೇಮಾನ್ ನನ್ನ ಸಹಪಾಟಿ.
  ಕ್ರೀಡಾಪಟು, ಛಾಯಾಚಿತ್ರ ಗ್ರಾಹಕರೂ ಆಗಿದ್ದ ಸಲೀ೦ಗೆ ಅನೇಕ ಪ್ರಶಸ್ತಿಗಳೂ ಬಂದಿತ್ತು.
  ತಾಳಗುಪ್ಪದ ಪೋಲಿಸ್ ಠಾಣೆ ಎದರು ಇವರ ತಂದೆಯ ಕ್ಯಾಂಟೀನ್ ಇತ್ತು, ಕೇರಳ ಮೂಲದ ಕನ್ನಡಿಗರು ಇವರು.
   ನಾನು ಜಿಲ್ಲಾ ಪಂಚಾಯತ್ ಸದಸ್ಯನಾಗಿದ್ದಾಗ ಕೃಷಿ ಇಲಾಖೆಯ ಸಾವಿರಾರು ಕೋಟಿ ಬ್ರಷ್ಟಾಚಾರ ಬಯಲಿಗೆಳೆಯಲು ಸಹಕರಿಸಿದ ಮಿತ್ರ ಇವರು.
  ಜಾತ್ಯಾತೀತ ಮನೋಭಾವದ, ಕ್ರೀಡಾ ಮನಸ್ಸು ಮತ್ತು ಹುಮ್ಮಸ್ಸಿನ ಸಲೀಂ ಬೆಂಗಳೂರು ಸೇರಿ ಕಾಂಗ್ರೇಸ್ ಪಕ್ಷದ ಗರ್ಭಗುಡಿ ಸೇರಿದ್ದು ಆಶ್ಚರ್ಯವೇ, ನಂತರ ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನಿಂದ ಇವರನ್ನು ಪ್ರದೇಶ ಕಾಂಗ್ರೇಸ್ ಸಮಿತಿ ಸದಸ್ಯರಾದರು ಆಗ ಸ್ಥಳಿಯ ಶಾಸಕರಾಗಿದ್ದ ಕಾಗೋಡು ಪಕ್ಕದ ತಾಲ್ಲುಕ್ ಆಗಿರುವ ಹೊಸನಗರದಿಂದ ಕೆಪಿಸಿಸಿಗೆ ಹೋಗುವಂತ ಪರಿಸ್ಥಿತಿ ಉಂಟಾಯಿತು.
   ರಾಜ್ಯದ ಕಾಂಗ್ರೇಸ್ ಪಕ್ಷದ ಘಟಾನುಘಟಿಗಳಿಗೆ ಮತ್ತು ದೆಹಲಿ ಹೈಕಮಾಂಡ್ ನೊಂದಿಗೂ ಸಂಪರ್ಕ ಹೊಂದಿರುವ ಸಲೀ೦ ಡಿ.ಕೆ.ಶಿವಕುಮಾರರಿಗೆ ಅತ್ಯಾಪ್ತರಾಗಿದ್ದರು ಅವರು ವಿದ್ಯುತ್ ಮಂತ್ರಿ ಆಗಿದ್ದಾಗ ಸಲೀ೦ಗೆ 60 ಎಕರೆ ಸೋಲಾರ್ ಪಾರ್ಕ್ ಮಂಜೂರು ಮಾಡಿಸಿ ಅದನ್ನು ಉಡುಪಿಯ ಮೀನುಗಾರ ಮುಖಂಡ ಗುತ್ತಿಗೆದಾರ ಜಿ.ಶಂಕರ್ ಗೆ ಇವರಿಂದ ಸಬ್ ಕಂಟ್ರಾಕ್ಟ್ ಅಗ್ರಿಮೆಂಟ್ ಮಾಡಿ ಸಲೀಂ ರಿಂದ ಶಂಕರ್ ಗೆ ಹಸ್ತಾಂತರಿಸಿದ್ದಾರೆ.
  ಇವತ್ತು ಸಲೀ೦ ಮತ್ತು ಉಗ್ರಪ್ಪ ಪತ್ರಿಕಾಗೋಷ್ಠಿ ಮೊದಲು ಬ್ರಷ್ಟಾಚಾರ ಪರ್ಸೆಂಟೇಜ್ ರಾಜಕಾರಣದ ಬಗ್ಗೆ ಮಾತಾಡಿಕೊಂಡದ್ದು ರಾಜ್ಯ ರಾಜಕಾರಣದಲ್ಲಿ ದೊಡ್ಡ ಶಬ್ದ ಮಾಡಿದೆ, ಕಾಂಗ್ರೇಸ್ ಪಕ್ಷದ ವಿರುದ್ದ ಬಿಜೆಪಿಗೊಂದು ಅಸ್ತ್ರವೂ ಸಿಕ್ಕಿದೆ ಇದರಿಂದ ಸಲೀಂರನ್ನು 6 ವರ್ಷ ಪಕ್ಷದಿಂದ ಉಚ್ಚಾಟಿಸಿದ್ದಾರೆ.
   ಸಲೀಂ ಹೇಳಿದ್ದು ಸುಳ್ಳಲ್ಲ ಆದರೆ ಅವರದೇ ಪಕ್ಷದ ಚೌಕಟ್ಟಿನಲ್ಲಿ ಅವರ ನಡತೆ ತಪ್ಪು ಇದರಿಂದ ವೈಯಕ್ತಿಕವಾಗಿ ಸಲೀ೦ಗೆ ನಷ್ಟವೋ ಅಥವ ಡಿ.ಕೆ. ವಿರೋದಿಗಳಿಂದ ಸಲೀಂಗೆ ಲಾಭವೋ ಗೊತ್ತಿಲ್ಲ.
  ಆದರೆ ಗೆಳೆಯ ಸಲೀಂ ಯಾವುದೇ ಗಾಡ್ ಪಾದರ್ ಇಲ್ಲದೆ ತಲುಪಿದ ಸ್ಥಾನ ಸಣ್ಣದಲ್ಲ ಆದರೆ ಈ ಘಟನೆ ಅವರ ಮುಂದಿನ ದಿನದ ರಾಜಕಾರಣದಲ್ಲಿ ಬೀರುವ ಪರಿಣಾಮ ಏನು ಅಂತ ಗೊತ್ತಿಲ್ಲ.
  ಈಗ ಬಂದಿರುವ ರಾಜಕಾರಣದ ಗಂಡಾಂತರ ಸಲೀಂ ಜೀವನದಲ್ಲಿ ಕರಗಿ ಹೋಗಿ ಮುಂದಿನ ಅವರ ರಾಜಕಾರಣ ಜೀವನ ಪ್ರಜ್ವಲಿಸಲಿ ಎಂದು ಗೆಳೆಯನಾಗಿ ಹಾರೈಸುತ್ತೇನೆ.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...