Skip to main content

ಒಂದು ಕಾಲದ ಸಾಗರದ ಸುಪ್ರಸಿದ್ಧ ನಾಟಿ ಕೋಳಿ, ಅಕ್ಕಿ ರೊಟ್ಟಿಯ ಶೆಟ್ಟರ ಮದ್ಯ ಬಸ್ ಸ್ಟಾಂಡ್ ಸಮೀಪದ ಜೈಹಿಂದ್ ಹೋಟೆಲ್

#ಸಾಗರ_ಪಟ್ಟಣದ_ಕುಂಟು_ಶೆಟ್ಟರೆಂದೇ_ಪ್ರಸಿದ್ದರಾದ_ಶೆಟ್ಟರ_ನಾಟಿ_ಕೋಳಿ_ಜೈಹಿಂದ್‌_ಹೋಟೆಲ್

#ಅಕ್ಕಿರೊಟ್ಟಿ_ನಾಟಿಕೋಳಿ_ಸಾರಿನ_ಆಕಾಲದ_ಸುಪ್ರಸಿದ್ಧ_ಹೋಟೆಲ್ 

#ನಾಟಿಕೋಳಿ_ತಿರುವಕಲ್ಲಿನಲ್ಲಿ_ಮಸಾಲೆ_ರುಬ್ಬುವುದು_ಕಟ್ಟಿಗೆ_ಒಲೆಬಳಕೆಯ_ದೇಸಿಹೋಟೆಲ್
 
  ಈಗಿನ ಸಾಗರದ ಮಧ್ಯ ಬಸ್ ಸ್ಟ್ಯಾಂಡ್ ನಲ್ಲಿ ಶೆಟ್ಟರ ನಾಟಿ ಕೋಳಿ ಹೋಟೆಲ್ ಕೆಲವು ದಶಕಗಳ ಕಾಲ ಸುಪ್ರಸಿದ್ಧ ಆಗಿತ್ತು.
  ಈ ಶೆಟ್ಟರಿಗಾಗಿಯೇ ನಾಟಿ ಕೋಳಿ ಸಾಕುವವರು ಸಾಗರ ತಾಲ್ಲೂಕಿನ ಹೆಗ್ಗೋಡು ಮತ್ತು ಆವಿನಳ್ಳಿ ಭಾಗಗಳಲ್ಲಿ ಇದ್ದರು.
  ನಾಟಿ ಕೋಳಿ ಸಾರು, ಅಕ್ಕಿ ರೊಟ್ಟಿ ಮತ್ತು ಅನ್ನದ ಜೊತೆ ಸಾಗರ, ಹೊಸನಗರ ಮತ್ತು ಸೊರಬ ತಾಲ್ಲೂಕಿನ ಜನರಿಗೆ ಆಕಷ೯ಣೀಯ ಹೋಟೆಲ್ ಆಗಿತ್ತು.
  12 ಅಡಿ ಅಗಲ 50 ಅಡಿ ಉದ್ದದ ಬಾನ೯ಸ್ ಕುಟುಂಬದ ಮಾಲಿಕತ್ವದ ಸಣ್ಣ ಕಟ್ಟಡದ ಜಾಗದಲ್ಲಿ ಇವರ ಹೋಟೆಲ್ ಸುಮಾರು 3 ದಶಕ ಪ್ರಖ್ಯಾತಿ ಪಡೆದಿತ್ತು.
  1996 ರ ನಂತರ ಇವರ ವೃದ್ಧಾಪ್ಯದಿಂದ ಮತ್ತು ಸದರಿ ಜಾಗದಲ್ಲಿ ಹೊಸ ಕಟ್ಟಡ ಕಾಮಗಾರಿಗಾಗಿ ಶೆಟ್ಟರು ಹೋಟೆಲ್ ತ್ಯಜಿಸಿದರಂತೆ, ಅವರ ಮೂಲ ಊರಾದ ಕರಾವಳಿಯ ಹಳ್ಳಿಯಲ್ಲಿ ಸುಸಜ್ಜಿತ ಮನೆ ಆಸ್ತಿ ಮಾಡಿದ್ದಾರೆ ಅಂತ ಜನ ಹೇಳುತ್ತಿದ್ದನ್ನ ಕೇಳಿದ್ದೆ.
  ನಂತರ ಈ ರೀತಿಯ ಹೋಟೆಲ್ ಸಾಗರದಲ್ಲಿ ಯಾವುದೂ ಬರಲಿಲ್ಲ ಬೆಂಗಳೂರಿನಲ್ಲಿ ಇಂತಹ ಹೊಸರೀತಿಯ ಹೋಟೆಲ್ ಗಳು ಪ್ರಸಿದ್ಧವಾಗಿದೆ.
  ಸ್ಥಳಿಯವಾಗಿ ಬೆಳೆಸುವ ನಾಟಿ ಕೋಳಿ ಮತ್ತು ಸ್ಥಳಿಯವಾಗಿ ಬೆಳೆಯುವ ಅಕ್ಕಿ ಇದನ್ನು ಬಳಸಿ ಸ್ವಯಂ ಉದ್ಯೋಗ ಮಾಡುವ ಸಾಧ್ಯತೆ ಕೆಲವು ದಶಕದ ಹಿಂದೆಯೇ ಶೆಟ್ಟರು ತೋರಿಸಿ ಕೊಟ್ಟಿದ್ದಾರೆ.
   ಅವರು ನಡೆಯುವಾಗ ಸಣ್ಣದಾಗಿ ಕು೦ಟುತ್ತಿದ್ದರಿಂದ ಈ ಹೆಸರು ಅವರಿಗೆ ಬಂದಿತ್ತು ಅದನ್ನು ಶೆಟ್ಟರೂ ವಿರೋದಿಸಲಿಲ್ಲ ಹಾಗಾಗಿ ಅದೇ ಅವರ ಖಾಯಂ ಹೆಸರಾಗಿತ್ತು ಈಗಲೂ ಅವರ ಮೂಲ ಹೆಸರು ಯಾರಿಗೆ ಕೇಳಿದರೂ ಸಿಗಲಿಲ್ಲ.
  ಶೆಟ್ಟರ ನಾಟಿ ಕೋಳಿ ಸಾರು ಅಕ್ಕಿ ರೊಟ್ಟಿ ಒಂದು ಕಾಲದಲ್ಲಿ ಸಾಗರಕ್ಕೆ ಬರುವ ಮಂತ್ರಿ ಮಹೋದಯರಿಂದ ಚಲನಚಿತ್ರ ನಟ ನಟಿಯರವರೆಗೆ ಪ್ರಸಿದ್ದಿ ಪಡೆದಿತ್ತು ಈಗಲೂ ಗೊತ್ತಿರುವವರು ನೆನಪಿಸಿಕೊಳ್ಳುತ್ತಾರೆ.
  ಇವರು ಹೃದಯಾಘಾತದಿಂದ ಮೃತರಾದಾಗ ಸಾಗರ ಪೇಟೆಯ ವರ್ತಕರು ತಮ್ಮ ವ್ಯಾಪಾರ ವಹೀ ವಾಟು ಬಂದ್ ಮಾಡಿ ಸಂತಾಪ ಸೂಚಿಸಿದ್ದರೆಂದು ಆಗಿನ ಅಬಕಾರಿ ಗುತ್ತಿಗೆದಾರರಾದ ನಾರಾಯಣ ರಾಯರು ನೆನಪಿಸಿದ್ದಾರೆ.
  ಶೆಟ್ಟರ ಅಸಲಿ ಹೆಸರು ಬಸಪ್ಪ ಶೆಟ್ಟರೆಂದು ಸಾಗರದ ಹಾಲಿ ಶಾಸಕರು ಹಾಗೂ ಮಾಜಿ ಮಂತ್ರಿಗಳಾದ ಹರತಾಳು ಹಾಲಪ್ಪನವರು ನನ್ನ ಈ ಪೇಸ್ ಪುಸ್ತಕದ ಲೇಖನಕ್ಕೆ ಉತ್ತರಿಸಿದ್ದಾರೆ.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

ಶರಾವತಿ ನದಿ ಉಗಮ ಸ್ಥಾನ ಅಂಬುತೀಥ೯.

ಇಡೀ ರಾಜ್ಯಕ್ಕೆ ವಿದ್ಯುತ್ ನೀಡುವ ಶರಾವತಿ ನದಿಯ ಉಗಮ ಸ್ಥಾನ ಅಂಬುತೀಥ೯, ಆರಗ ಸಮೀಪದ ತೀಥ೯ಳ್ಳಿ ತಾಲ್ಲೂಕಿನಲ್ಲಿದೆ( ಶಿವಮೊಗ್ಗ ಜಿಲ್ಲೆ)    ಅಂಬು ತೀಥ೯ದಲ್ಲಿ ಶ್ರೀ ರಾಮ ವನವಾಸದಲ್ಲಿದ್ದಾಗ ಸೀತಾ ಮಾತೆಗೆ ಪೂಜೆಗೆ ನೀರು ಸಿಗದಿದ್ದಾಗ ರಾಮ ತನ್ನ ಅಂಬಿನಿಂದ (ಬಿಲ್ಲಿನ ಬಾಣದಿಂದ) ನೆಲ ಸೀಳಿ ನೀರು ತಂದರೆ೦ದು ರಾಮಾಯಣದಲ್ಲಿ ಉಲ್ಲೇಖವಿದೆ, ಹಾಗಾಗಿ ಈ ಸ್ಥಳಕ್ಕೆ ಅಂಬುತೀಥ೯ ಎಂಬ ಹೆಸರು ಬ೦ತು ಎಂಬುದು ಸ್ಥಳ ಪುರಾಣ.    ಇಲ್ಲಿ ಸಣ್ಣ ತೊರೆಯಾಗಿ ಹುಟ್ಟುವ ನದಿ ಬಾಣದಿಂದ ಹುಟ್ಟಿದ್ದರಿಂದ ಶರಾವತಿ ಎ೦ಬ ಹೆಸರು ಪಡೆದು ಪೂವ೯ಕ್ಕೆ ಹರಿದು ನಂತರ ಪಶ್ಚಿಮ ಮುಖವಾಗಿ ತಿರುಗಿ ಹೊಸನಗರ ತಾಲ್ಲೂಕನ್ನ ದಾಟಿ ಸಾಗರ ತಾಲ್ಲೂಕಿನ ಜೋಗದಲ್ಲಿ ಜಲಪಾತವಾಗಿ ದಟ್ಟ ಕಾನನದ ಕಣಿವೆ ಮುಖಾಂತರ ಹರಿದು ಹೊನ್ನಾವರದಲ್ಲಿ ಅರಬ್ಬಿ ಸಮುದ್ರ ಸೇರುತ್ತದೆ.   ಈ ನದಿಗೆ ಮೊದಲಿಗೆ ಹೀರೇ ಬಾಸ್ಕರ ಎಂಬಲ್ಲಿ ನಂತರ ಲಿಂಗನಮಕ್ಕಿಯಲ್ಲಿ ಆಣೆಕಟ್ಟು ಕಟ್ಟಿ ರಾಜ್ಯಕ್ಕೆ ಜಲ ವಿದ್ಯುತ್ ನೀಡುತ್ತಿರುವುದರಿಂದ ಲಕ್ಷಾಂತರ ಎಕರೆ ಕಾಡು, ಜಮೀನು ಅನೇಕ ಊರು ಮುಳುಗಡೆ ಆಯಿತು ಸಾವಿರಾರು ಕುಟುಂಬಗಳು ಸಂತ್ರಸ್ಥರಾದದ್ದು ಇತಿಹಾಸ.    ಈ ನದಿ ಜೋಗದಲ್ಲಿ ದುಮುಕುವ ಜಲಪಾತ ವಿಶ್ವದ ಸುಂದರ ಜಲಪಾತದಲ್ಲಿ ಒಂದಾಗಿದೆ.    ಹಾಗಾಗಿ ಶರಾವತಿ ನದಿಯ ಉಗಮ ಸ್ಥಾನಕ್ಕೆ ಮಹತ್ವವಿದೆ, ಒಮ್ಮೆಯಾದರೂ ಈ ನದಿ ಮೂಲ ಸಂದಶಿ೯ಸಬೇಕು ಆದರೆ ಇಲ್ಲಿ ಶರಾವತಿ ವ...

Blog number 1037. ರಾಜಕುಮಾರಿ ಶಾಂತವ್ವ ಮತ್ತು ದಲಿತ ಯುವಕ ಸಿದ್ದೇಶ್ವರರ ಅಮರ ಪ್ರೇಮದ ಸ್ಮಾರಕ, ಅನ್ಯ ಜಾತಿ ವಿವಾಹವಾದ್ದರಿಂದ ರಾಜಕುಮಾರಿಗೆ ಸೂಳೆ ಪಟ್ಟ ನೀಡಿದ ಸಮಾಜ. ಸಮಾಜದ ಒಳಿತಿಗಾಗಿ ಶಾಂತವ್ವ ಕಟ್ಟಿಸಿದ ಬೃಹತ್ ಕೆರೆಗೆ ಜನ ಕರೆದದ್ದು ಸೂಳೆ ಕಟ್ಟಿಸಿದ ಕೆರೆ ಅದೇ ಸೂಳೆಕೆರೆ / ಶಾಂತಿ ಸಾಗರ

# ಸೂಳೆಕೆರೆ (ಶಾಂತಿ ಸಾಗರ) ಅಂತರ್ ಜಾತಿ ಪ್ರೇಮ ವಿವಾಹದ ದುರOತ ಕಥೆ. #ಅಕ್ಟೋಬರ್ 2019 ರಲ್ಲಿ ತುಂಬಿ ತುಳುಕಿತ್ತು.  ಚಿತ್ರದುಗ೯, ದಾವಣಗೆರೆ ಬಳ್ಳಾರಿ ಮುಂತಾದ ಮಳೆ ಕಡಿಮೆ ಆಗುತ್ತಿದ್ದ ಜಿಲ್ಲೆಗಳಲ್ಲಿ ಅದೂ ಅಕ್ಟೋಬರ್ ತಿಂಗಳ 2019 ರಲ್ಲಿ  ಬಂದಿದ್ದ ಬಾರಿ ಮಳೆ ಎಲ್ಲಾ ಕೆರೆ, ಹೊಂಡಗಳು ತುಂಬಿ ತುಳುಕಿದೆ, ಸಾಮಾಜಿಕ ಜಾಲ ತಾಣದಲ್ಲಿ 40 ವಷ೯ದಲ್ಲಿ ಇಂತ ಮಳೆ ಬಂದಿಲ್ಲ ಅಂತ ಸುದ್ದಿ ಹರಿದಾಡುತ್ತಿತ್ತು ಮತ್ತು  ಸೂಳೆಕೆರೆ ತುಂಬಿ ಕೋಡಿ ಬಿದ್ದಿದೆ ಅಂತೆಲ್ಲ Post ನೋಡಿ ಬೆಂಗಳೂರಿಂದ ಬರುವಾಗ ಚಿತ್ರದುಗ೯ ಮಾಗ೯ವಾಗಿ ಚನ್ನಗಿರಿ ತಲುಪಿ ಸೂಳೆಕೆರೆ ನೋಡಲು ಹೋಗಿದ್ದೆ.  11ನೇ ಶತಮಾನದಲ್ಲಿ (1128ರಲ್ಲಿ)ಕೇವಲ 3 ವಷ೯ದಲ್ಲಿ ಈ ಕೆರೆ ನಿಮಾ೯ಣ ಮಾಡಿಸಿದ್ದು ಶಾಂತವ್ವ ಎಂಬ ರಾಜ ಕುಮಾರಿ ಅವಳು ಸ್ವಣ೯ವತಿ ಪಟ್ಟಣದ ದೊರೆ ವಿಕ್ರಮ ರಾಜನ ಮಗಳು, ಸಿದ್ದೇಶ್ವರ ಎಂಬ ಅನ್ಯ ಜಾತಿಯ ಯುವಕನೊ೦ದಿಗೆ ಗಾಂದವ೯ ವಿವಾಹ ಆಗುತ್ತಾಳೆ ಇದನ್ನ ಸಹಿಸದ ಮತ್ತು ಒಪ್ಪದ ಜನತೆ ಸೂಳೆ ಎಂದು ಮೂದಲಿಸುತ್ತಾರOತೆ ಈ ರೀತಿ ತನಗೆ ಬಂದ ಕಳಂಕ ಕಳೆಯಲು ಈ ಬೃಹತ್ ಕೆರೆ ತನ್ನ ಪತಿ ಸಿದ್ದೇಶ್ವರನ ಜೊತೆ ಸೇರಿ ನಿಮಿ೯ಸಿ ಕೆರೆಗೆ ಹಾರವಾದಳೆoಬ ಇತಿಹಾಸ ಇದೆ ಇದರಿಂದ ನೊಂದ ಪತಿ ಸಿದ್ಧೇಶ್ವರ ಕೂಡ ಎದುರಿನ ಗುಡ್ಡದಲ್ಲಿ ಜೀವ ತ್ಯಾಗ ಮಾಡುತ್ತಾನೆ ಈಗ ಅಲ್ಲಿ ಸಿದ್ದೇಶ್ವರ ದೇವಸ್ಥಾನವಿದೆ.   ಈ ಕೆರೆ ಈಗಲೂ ಸೂ...