Skip to main content

ಜಿಲ್ಲಾ ಪಂಚಾಯತ್ ಸದಸ್ಯ ಅವಧಿ ಮುಗಿಯುವಾಗ ಅಕ್ಷರಶಃ ಪಾಪರ್ ಆಗಿದ್ದೆ, ವಿರೋದಿಗಳು ನನ್ನ ಮೇಲೆ ಸೇಡು ತೀರಿಸಿಕೊಂಡ ಪರಿ ಜೀವನದಲ್ಲಿ ಮರೆಯಲಾರದ ಸಂಕಷ್ಟದ ದಿನಗಳು, ಸೈತಾನನು ಸಮಾಜದಲ್ಲಿ ತೊಂದರೆ ಕೊಡುವವರು ಸೃಷ್ಟಿಸಿದಂತೆ ದೇವರು ಸಹಾಯ ಮಾಡುವವರನ್ನೂ ಸೃಷ್ಟಿಸಿದ್ದಾನೆ. ಈ ಸಾಲಿನಲ್ಲಿ ನನಗೆ ಶಿವಮೊಗ್ಗದ ಮದು ಲಾಯರ್ ಸ್ಮರಣೀಯರು.

#ಶಿವಮೊಗ್ಗದ_ಪ್ರಖ್ಯಾತ_ವಕೀಲರಾದ_ಮದುಲಾಯರ್

#ತೊಂದರೆ_ಕೊಡುವವರೂ_ಸಮಾಜದಲ್ಲಿ_ಇರುವಂತೆ_ಸಹಾಯ_ಮಾಡುವವರೂ_ಇರುತ್ತಾರೆ.

#ಜಿಲ್ಲಾಪಂಚಾಯತ್_ಸದಸ್ಯ_ಅವಧಿ_ಮುಗಿಯುವಾಗ_ಅಕ್ಷರಶಃ_ಪಾಪರ್_ಆಗಿದ್ದೆ.

   ಇವತ್ತು ಅವರು FBಯಲ್ಲಿ ತಮ್ಮ ಮತ್ತು ತಮ್ಮ ಶ್ರೀಮತಿಯೊಂದಿಗಿನ ಬಾವ ಚಿತ್ರ ಹಾಕಿದ್ದು ನೋಡಿ ನನ್ನ ನೆನಪು 25 ವರ್ಷದ ಹಿಂದಕ್ಕೆ ಓಡಿತು.
  ನನ್ನ ಅನೇಕ ಸಂಕಷ್ಟಗಳಿಗೆ ಆಗ ನಾನು ಜಿಲ್ಲಾ ಪಂಚಾಯತ್ ಸದಸ್ಯನಾಗಿದ್ದೆ ಕಾರಣ ಆಗಿತ್ತು.
  ಬಂಗಾರಪ್ಪನವರು ನನಗೆ ನೀಡಿದ ಪ್ರೋತ್ಸಾಹ ಕಾಗೋಡು ತಿಮ್ಮಪ್ಪರನ್ನ ಕೆರಳಿಸಿತು ಅವರ ಸುತ್ತಲೂ ಇದ್ದವರು ನನ್ನ ಮೇಲೆ ಮುರುಕೊಂಡು ಬಿದ್ದ ಪರಿ ಇತ್ತಲ್ಲ ಅದನ್ನು ಜೀವಮಾನದಲ್ಲಿ ಮರೆಯಲಾರದ ದಿನಗಳು.
   ಮಂತ್ರಿಗಳ ಅಧಿಕಾರ ಅವರ ಹಿಂಬಾಲಕರು ಬಳಸಿಕೊಂಡು ದ್ವೇಷ ಸಾಧನೆ ಮಾಡಿದರೆ ಅದಕ್ಕೆ ಅಧಿಕಾರಿಗಳೂ ಒಲೈಸುವ ಲಾಭ ಪಡೆಯಲು ಅವರವರಲ್ಲೇ ಪೈಪೋಟಿ ಉಂಟಾಗಿ ನನ್ನ ಮತ್ತು ನನ್ನ ಸಂಗಡಿಗರ ಮೇಲೆ ವಿವಿದ 22 ಕೇಸ್ ಸಾಗರದಲ್ಲಿ, ಶಿವಮೊಗ್ಗ ಜಿಲ್ಲಾ ಕೇಂದ್ರದಲ್ಲಿ 4 ಕೇಸ್ ಗಳು,ರೌಡಿ ಶೀಟರ್ ದಾಖಲೆ, ವ್ಯವಹಾರಗಳಲ್ಲಿ ತೊಂದರೆ ಇದರಿಂದ ನನ್ನ ವ್ಯವಹಾರ ನೆಲ ಕಚ್ಚಿತ್ತು.
   ರೈಸ್ ಮಿಲ್ ಕೆ.ಎಸ್.ಪ್ ಸಿ ಹರಾಜಿಗೆ ತಂದಿತ್ತು ಅಲ್ಲಿ ವ್ಯವಸ್ಥಾಪಕ ಆದವರು ನನ್ನ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಸಾಮಾನ್ಯ ಕುಟುಂಬದ ಪ್ರತಿಭಾವಂತ ಯುವಕ ಆದರೆ ಆತನನ್ನು ವಿರೋದಿಗಳು ಬಳಸಿಕೊಂಡಿದ್ದರಿಂದ ಇಲ್ಲದ ತೊಂದರೆ ಅವಮಾನ ಆತ ಸತತವಾಗಿ ನೀಡಿದ ಇದಕ್ಕಾಗಿ ಸಕಾ೯ರದ ಜೀಪನ್ನು ಬಳಸುತ್ತಿದ್ದರು.
  ಮನೆ ಸಾಗರದ SBI ಜಪ್ತಿಗೆ ಮತ್ತು ಜಮೀನುಗಳು ಬೀಮನ ಕೋಣೆಯ ಪಿ.ಎಲ್.ಡಿ ಬ್ಯಾಂಕ್ ಗೆ ಅಡಮಾನ ಆಗಿ ಬಿಟ್ಟಿತ್ತು.
  ಜಿಲ್ಲಾ ಪಂಚಾಯತ್ ಸದಸ್ಯನಾಗುವ ಮುನ್ನ ಇದ್ದ ಕಾರು ಬೈಕ್ ಗಳು ಕಳೆದುಕೊಂಡು ಬಸ್ಸಿನಲ್ಲೇ ಪ್ರಯಾಣಿಸುತ್ತಿದ್ದೆ.
  ಜಿಲ್ಲಾ ಪಂಚಾಯತ್ ಅಧಿಕಾರ ಮುಗಿದ ತಕ್ಷಣ ಗೆಳೆಯರೂ ದೂರ ಆದರು ಅಧಿಕಾರ ಹಣ ಎರೆಡೂ ಇಲ್ಲದ ಮತ್ತು ಸಕಾ೯ರದ ಮಂತ್ರಿಗಳ ದ್ವೇಷಕ್ಕೆ ತುತ್ತಾದ ಉಪಯೋಗಕ್ಕೆ ಭಾರದ ಗೆಳೆಯನ ಸಮೀಪ ಇದ್ದರೆ ಆಗುವ ನಷ್ಟದ ಪರಿಜ್ಞಾನ ಅವರಿಗಿತ್ತು.
  ಆಗಲೆ ಸಾಗರದ SBI ಬ್ಯಾಂಕ್ ಗೆ ವಗ೯ವಾಗಿ ಬಂದ ಉಮೇಶ್ ಹೆಗ್ಗಡೆ (ಈಗ ರವಿ ಬೆಳೆಗೆರೆ ಹಾಯ್ ಬೆಂಗಳೂರು ಮತ್ತು ಅವರ ಶಿಕ್ಷಣ ಸಂಸ್ಥೆಯ CEO), ಕೆ.ಎಸ್.ಎಫ್.ಸಿ ಯಲ್ಲಿದ್ದ ಶಾಲಾ ಸಹಪಾಟಿ ನಮ್ಮ ಊರಿನ ದಾಸ ಕೊಪ್ಪದ ನಾಗರಾಜ್, ಪಿ.ಎಲ್.ಡಿ. ಬ್ಯಾಂಕಿನ ವ್ಯವಸ್ಥಾಪಕರಾಗಿದ್ದ ಹಂದಿಗೋಳ್ ಸಾಹೇಬರು (ನಂತರ ಜಿಲ್ಲಾ ವ್ಯವಸ್ಥಾಪಕರಾಗಿ ನಂತರ ರಾಜ್ಯ ಮಟ್ಟದ ಹುದ್ದೆ ನಿರ್ವಹಿಸಿ ಈಗ ಶಿವಮೊಗ್ಗ ಸಮೀಪದಲ್ಲಿ ಪೆಟ್ರೋಲ್ ಬಂಕ್ ಮಾಲಿಕರಾಗಿದ್ದಾರೆ) ಇವರೆಲ್ಲ ನನಗೆ ದೈಯ೯ ನೀಡಿದ್ದರಿಂದ ಮತ್ತು ತೊಂದರೆ ನಿವಾರಿಸಿದ್ದರಿಂದ ಸಾಲ ತೀರುವಳಿ ಮಾಡಿ ಆಸ್ತಿ ಉಳಿಸಿಕೊಂಡೆ.
  ಆಗ ಮದು ಲಾಯರ್ ನನ್ನ ಪರಿಸ್ಥಿತಿ ಅರಿತು ಅವತ್ತು ಹೇಳಿದ್ದು "ಅರುಣ್ ಪ್ರಸಾದ್ ನಿಮ್ಮ ಕೇಸ್ ಗಳನ್ನ ಉಚಿತವಾಗಿ ನಡೆಸಿ ಗೆದ್ದು ಕೊಡುತ್ತೇನೆ, ನೀವು ಕೋಟ್೯ಗೆ ತಪ್ಪದೇ ಬರಬೇಕು" ಅಂತ ಹೇಳಿ ಶಿವಮೊಗ್ಗದ ಕೋಟ್೯ ಪಕ್ಕದ ಡಿಸಿಸಿ ಬ್ಯಾಂಕ್ ಅವರಣದ ಕ್ಯಾಂಟೀನ್ ನಲ್ಲಿ ಕಾಫಿ ಕುಡಿಸಿದ್ದರು ಮತ್ತು ಅದರಂತೆ ನಡೆದರು.
  ಮದು ಲಾಯರ್ ಮಾಡಿದ ಉಪಕಾರ ಯಾವತ್ತೂ ಮರೆಯಲುಂಟಾ? ಇವತ್ತು ಮದುಲಾಯರ್ ದಂಪತಿ ಪೋಟೋ ಪೇಸ್ ಬುಕ್ ನಲ್ಲಿ ಪೋಸ್ಟ್ ಆಗಿದ್ದು ನೋಡಿ ನೆನಪಾಯಿತು.
  ಇವತ್ತಿಗೂ ಶಿವಮೊಗ್ಗ ಜಿಲ್ಲೆಯಲ್ಲಿ ಮದು ಲಾಯರ್ ಸುಪ್ರಸಿದ್ದರು.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...