Skip to main content

ಕಳೆದು ಹೋಗಿರುವ ಶಿವಮೊಗ್ಗದ ಜಿಲ್ಲಾ ಪಂಚಾಯತ್ ಲಾಂಚನ... ಮರುಬಳಕೆಗೆ ಚಾಲನೆ ಸಿಕ್ಕೀತಾ?

#ಶಿವಮೊಗ್ಗ_ಜಿಲ್ಲಾ_ಪಂಚಾಯತ್_ಲಾಂಚನ.

#ಇಕ್ಕೇರಿ_ಅಘೋರೇಶ್ವರ_ದೇವಾಲಯ
#ಸಹಬಾಳು_ಸಮಪಾಲು_ಸವೋ೯ದಯ_ಎಂಬ_ಸಂದೇಶದೊಡನೆ_ಇತ್ತು.

#ಈಗ_ಬಳಕೆಯಲ್ಲಿಲ್ಲ_ಏಕೆ?

#ಪಂಚಾಯತ್_ರಾಜ್_ಅಧಿಕಾರಿಗಳ_ನಿರ್ಲಕ್ಷ್ಯ
#ಜನಪರ_ಹೋರಾಟಗಾರರು_ಪತ್ರಕರ್ತರು_ಗಮನಹರಿಸಲಿ.
#ಹಾಲಿ_ಪಂಚಾಯತ್_ರಾಜ್_ಸಚಿವರು_ಶಿವಮೊಗ್ಗದ_ಈಶ್ವರಪ್ಪನವರು.

  ರಾಮಕೃಷ್ಣ ಹೆಗ್ಗಡೆಯವರು ಮುಖ್ಯಮಂತ್ರಿ ಮತ್ತು  ದೇವೇಗೌಡರು ಪ್ರಬಾವಿ ಮಂತ್ರಿಗಳಾಗಿದ್ದ ಕಾಲ ಆಗ ಶಿವಮೊಗ್ಗ ಜಿಲ್ಲೆಯಿಂದ ಜೆ.ಹೆಚ್.ಪಟೇಲರು ಮತ್ತು ಬಸವಣ್ಯಪ್ಪರು ಮಂತ್ರಿಗಳಾಗಿದ್ದ ಕಾಲ.
  ಪ್ರಥಮ ಶಿವಮೊಗ್ಗ ಜಿಲ್ಲಾ ಪರಿಷತ್ ಅಸ್ತಿತ್ವಕ್ಕೆ ಬಂದಾಗ ಜನತಾ ಪರಿವಾರಕ್ಕೆ ಅಧಿಕಾರ ಚೆನ್ನಗಿರಿ ತಾಲ್ಲೂಕಿನ ಪಟೇಲರ ಆಪ್ತರಾಗಿದ್ದ ಮಹಾದೇವಪ್ಪ (ಇವರನ್ನು ಮಹಾದೇವಜ್ಜ ಅಂತ ಪ್ರೀತಿಯಿಂದ ಕರೆಯುತ್ತಿದ್ದರು) ಅಧ್ಯಕ್ಷರು, ಉಪಾದ್ಯಕ್ಷರಾಗಿ ಸೊರಬದ ಪಾಣಿ ರಾಜಪ್ಪ ಆಯ್ಕೆ ಆಗಿದ್ದರು.
 ತೀರ್ಥಹಳ್ಳಿಯಿಂದ ಆರಗ ಜ್ಞಾನೇಂದ್ರ, ಸಾಗರದಿಂದ ಬಿ.ಆರ್.ಜಯಂತ್, ಭದ್ರಾವತಿಯಿಂದ ಬಲ್ಕೀಶ್ ಬಾನು, ಶಿಕಾರಿಪುರದಿಂದ ಪೂರ್ಯನಾಯಕ್ ಹೀಗೆ ಜಿಲ್ಲಾ ಪರಿಷತ್ ಸದಸ್ಯರಾಗಿದ್ದರು.
  ಈ ಸಂದರ್ಭದಲ್ಲೇ ಶಿವಮೊಗ್ಗ ಜಿಲ್ಲಾ ಪರಿಷತ್ ಗೆ ಲಾಂಚನ ಒಂದನ್ನು ಆಯ್ಕೆ ಮಾಡುತ್ತಾರೆ, ಅನೇಕರ ಸಲಹೆ ಸಹಕಾರದ ಜೊತೆಗೆ ಅಂತಿಮವಾಗಿ ಸಾಗರದ ಬಿ.ಆರ್.ಜಯಂತರು ಸೂಚಿಸಿದ ಲಾಂಚನ ಅಂತಿಮಗೊಳಿಸಿ 2000 ಇಸವಿ ಕೊನೆ ತನಕ ಜಿಲ್ಲಾ ಪಂಚಾಯತ್‌ನಲ್ಲೂ ಬಳಕೆ ಮಾಡುತ್ತಿದ್ದ ಲಾಂಚನ ಈಗೆಲ್ಲೂ ಕಾಣದಿರುವುದು ವಿಷಾದನೀಯ.
  ಕೆಳದಿ ಅರಸರ ಎರಡನೆ ರಾಜಧಾನಿ ಇಕ್ಕೇರಿಯ ಸುಂದರ ಶಿಲಾಮಯ ಅಘೋರೇಶ್ವರ ದೇವಾಲಯದ ನಂದೀ ಮಂಟಪದ ಚಿತ್ರ ಅದರ ಕೆಳಗೆ ಸಮಾನತೆ ಸಾರುವ  #ಸಹಬಾಳು_ಸಮಪಾಲು_ಸವೋ೯ದಯ ಎಂಬ ಸಂದೇಶದ ಸುಂದರವಾದ ಚೌಕಟ್ಟಿನ ಶಿವಮೊಗ್ಗ ಜಿಲ್ಲೆಯ ಜಿಲ್ಲಾ ಪರಿಷತ್ ಲಾಂಚನ ಆಗಿನ ರಾಜ್ಯದ ಅಧಿಕಾರದ ಚುಕ್ಕಾಣಿ ಹಿಡಿದ ರಾಮಕೃಷ್ಣ ಹೆಗ್ಗಡೆ, ದೇವೇಗೌಡರ ಪ್ರಶಂಸೆಗೂ ಕಾರಣವಾಗಿತ್ತು.
  ಆಗ ಜಿಲ್ಲಾ ಪರಿಷತ್ ಸದಸ್ಯರಾಗಿದ್ದ ಆರಗ ಜ್ಞಾನೇಂದ್ರ ಈಗಿನ ಸರ್ಕಾರದಲ್ಲಿ ಗೃಹ ಮಂತ್ರಿಗಳು, ಪೂರ್ಯಾ ನಾಯಕರು ಈಗಿಲ್ಲ ಇವರ ಪತ್ನಿ ಶಾಸಕಿ ಆಗಿದ್ದರು, ಬಿ.ಆರ್.ಜಯಂತ್ ಸಾಗರ ತಾಲ್ಲೂಕ್ ಕಾಂಗ್ರೇಸ್ ಅಧ್ಯಕ್ಷರು, ಬಲ್ಕೀಷ್ ಬಾನು ಏಐಸಿಸಿ ಸದಸ್ಯರು.
   ಅಧಿಕಾರಿಗಳ ನಿರ್ಲಕ್ಷದಿಂದ ಉದ್ದೇಶ ಪೂರ್ವಕವಾಗಿ ಜಿಲ್ಲಾ ಪಂಚಾಯಿತಿಯ ಪ್ರತಿಷ್ಠಿತ ಲಾಂಚನ ಕಡೆಗಾಣಿಸುತ್ತಿರುವ ಬಗ್ಗೆ ಶಿವಮೊಗ್ಗ ಜಿಲ್ಲೆಯ ಜನಪರ ಹೋರಾಟಗಾರರು, ಜನಪ್ರತಿನಿದಿಗಳು ಮತ್ತು ಪತ್ರಕರ್ತರು ಗಮನ ಹರಿಸಬೇಕಾಗಿದೆ.
  ಹಾಲಿ ಸರ್ಕಾರದಲ್ಲಿ ಪಂಚಾಯತ್ ರಾಜ್ ಸಚಿವರಾಗಿರುವ ಶಿವಮೊಗ್ಗ ಜಿಲ್ಲೆಯ ಈಶ್ವರಪ್ಪನವರು ಪುನಃ ಈ ಲಾಂಚನ ಬಳಕೆಗೆ ಕ್ರಮ ಕೈಗೊಳ್ಳಬಹುದೆಂಬ ಆಶಾ ಭಾವನೆ ಇದೆ.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...