Skip to main content

ವಿಶ್ವ ವಿಖ್ಯಾತ ಸುಂದರವಾದ ಸದೃಡವಾದ ಬೇಕಲ ಕೋಟೆ ಒಂದು ಚಾರಿತ್ರಿಕ ಅಧ್ಯಯನ ಎಂಬ ಸಂಶೋದನ ಗ್ರಂಥ ಬರೆದ ಗಡಿನಾಡ ಕನ್ನಡಿಗ ಶಿವಾನಂದ ಬೇಕಲ್ ಗೆ ಸಮಸ್ತ ಕನ್ನಡಿಗರ ಕೃತಜ್ಞತೆಗಳು

#ಶಿವಾನಂದ_ಬೇಕಲರ_ಬೇಕಲಕೋಟೆ_ಚಾರಿತ್ರಿಕ_ಅಧ್ಯಯನ.

#ಕೆಳದಿ_ಇತಿಹಾಸ_ಸ೦ಶೋದನೆಯಲ್ಲಿ_ಇದೊಂದು_ಮೈಲಿಕಲ್ಲು

#ಕೆಳದಿ_ಅರಸ_ಶಿವಪ್ಪನಾಯಕರಿಂದ_ನಿರ್ಮಾಣ

#ಬಗೆಹರಿದ_ಪ್ರಸಿದ್ದ_ಬೇಕಲ_ಕೋಟೆ_ವಿವಾದ.

  ಕೇರಳದ ಕಾಸರಗೋಡಿನ ಸಮೀಪದ ಬೇಕಲಕೋಟೆ ವಿಶ್ವ ಪ್ರಸಿದ್ಧವಾದದು, ಇಲ್ಲಿ ಜಗತ್ತಿನ ಎಲ್ಲಾ ಭಾಷೆಯ ಸಿನಿಮಾ ಶೂಟಿಂಗ್ ಗೆ ಬರುತ್ತಾರೆ 1999 ರ ತನಕ ಈ ಕೋಟೆ ನಿರ್ಮಿಸಿದವರ ಬಗ್ಗೆ ವಿವಾದವಿತ್ತು.
  ಕೇರಳದ ಕೊಲತ್ತಿರಿ ಅರಸರು ನಿರ್ಮಿಸಿದರೆಂದು ಒಂದು ವಾದ ಇನ್ನೊಂದು ಮೈಸೂರಿನ ಹುಲಿ ಟಿಪ್ಪು ಸುಲ್ತಾನರು ನಿರ್ಮಿಸಿದ್ದೆಂಬ ವಾದ.
   ಆದರೆ ಬೇಕಲ ಕೋಟೆ ಕೆಳದಿ ಅರಸರಿಂದ ನಿರ್ಮಸಲ್ಪಟ್ಟಿದ್ದಾದರೂ ಅದನ್ನು ದೃಡ ಪಡಿಸುವ ಸಂಶೋದನೆ ಮತ್ತು ಕಾಳಜಿ ಇರಲಿಲ್ಲ.
  ಈ ಸಂದರ್ಭದಲ್ಲೇ ಬೇಕಲದಲ್ಲೇ ಹುಟ್ಟಿ ಬೆಳೆದು ಕೇರಳದ ಕ್ಯಾಲಿಕಟ್ ನಲ್ಲಿ ಬಿಎಸ್ಸಿ ವ್ಯಾಸಂಗ ಮಾಡಿ, ಮೈಸೂರಿನಲ್ಲಿ ಬಿಎಡ್ ಓದಿ, ದಾರವಾಡದಲ್ಲಿ ಎಂ.ಎ. ಪದವಿ ಪಡೆದು, ಗುಲ್ಬರ್ಗದಲ್ಲಿ ಪಿಹೆಚ್ ಡಿ ಪಡೆದ ಮತ್ತು ಗುಲ್ಬರ್ಗ ದೂರದರ್ಶನ ಕೇಂದ್ರದಲ್ಲಿ ಅಸಿಸ್ಟೆಂಟ್ ಸ್ಟೇಷನ್ ಡೈರೆಕ್ಟರ್ ಆಗಿದ್ದ ಶಿವಾನಂದ ಬೇಕಲ್ ರಿಗೆ ಕಾಸರಗೋಡು ಜಿಲ್ಲಾದಿಕಾರಿ ಆದಿಯಾಗಿ ಅನೇಕರು ಬೇಕಲ್ ಕೋಟೆ ನಿರ್ಮಾಣ ಮಾಡಿದವರಾರು ಎಂಬ ಸಂಶೋದನೆಗೆ ಒತ್ತಾಯಿಸಿದ್ದೆ ಈ ಚಾರಿತ್ರಿಕ ಅಧ್ಯಯನದ ಪುಸ್ತಕ #ಬೇಕಲ_ಕೋಟೆ 1999 ರಲ್ಲಿ ಪ್ರಕಟ ಆಗಲು ಕಾರಣವಾಯಿತು.
  ಕನ್ನಡ, ಮಲೆಯಾಳ, ಇಂಗ್ಲೀಷ್, ಹಿಂದಿ ಮತ್ತು ತುಳು ಬಾಷೆಯಲ್ಲಿ ಪಾಂಡಿತ್ಯ ಹೊಂದಿರುವ ಇವರು ಕೆಳದಿ ಇತಿಹಾಸದ ಸಂಶೋಧನೆ ಮಾಡಿದ್ದಾರೆ, ಕೆಳದಿ ಆಳ್ವಿಕೆಯ ಪ್ರದೇಶಗಳನ್ನೆಲ್ಲ ಸಂದರ್ಶಿಸಿ ಅಧಿಕೃತವಾಗಿ ಈ ಪುಸ್ತಕ ಬರೆದು ಪ್ರಕಟಿಸಿದ್ದು ಬೇಕಲಕೋಟೆಯ ವಿವಾದ ಅಂತ್ಯಗೊಳ್ಳಲು ಸಹಕಾರಿ ಆಗಿದ್ದು ಇತಿಹಾಸ ಸತ್ಯ.
 ಈಗ ಬೇಕಲ ಕೋಟೆ ನಿರ್ಮಾಣ ಮಾಡಿದವರು ನಮ್ಮ ಜಿಲ್ಲೆಯ ಪ್ರಸಿದ್ಧ ಅರಸರಾದ ಕೆಳದಿ ರಾಜ ಶಿವಪ್ಪ ನಾಯಕರು ಎಂದು ಸಾಬೀತಾಗಿದೆ.
  ಶಿವಾನಂದ ಬೇಕಲ್ ರಿಗೆ ಇಡೀ ಕನ್ನಡ ನಾಡೇ ಕೃತಜ್ಞತೆ ಹೇಳುತ್ತದೆ.
  ಈ ಪುಸ್ತಕ ಪ್ರಕಟನೆ ಮಾಡಿದ್ದು ಕನ್ನಡ ಸಾಹಿತ್ಯ ಪರಿಷತ್ತು ಕೇರಳ ಗಡಿನಾಡ ಘಟಕ, ಈಗ ಈ ಪುಸ್ತಕ ಲಭ್ಯವಿರುವ ಮಾಹಿತಿ ಬೇಕಿದ್ದವರು ಗಡಿನಾಡ ಕನ್ನಡ ಹೋರಾಟಗಾರ ಶಿವರಾಂ ಕಾಸರಗೋಡು ಇವರ ಸಂಪರ್ಕಿಸಬಹುದು 09448572016.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

ಶರಾವತಿ ನದಿ ಉಗಮ ಸ್ಥಾನ ಅಂಬುತೀಥ೯.

ಇಡೀ ರಾಜ್ಯಕ್ಕೆ ವಿದ್ಯುತ್ ನೀಡುವ ಶರಾವತಿ ನದಿಯ ಉಗಮ ಸ್ಥಾನ ಅಂಬುತೀಥ೯, ಆರಗ ಸಮೀಪದ ತೀಥ೯ಳ್ಳಿ ತಾಲ್ಲೂಕಿನಲ್ಲಿದೆ( ಶಿವಮೊಗ್ಗ ಜಿಲ್ಲೆ)    ಅಂಬು ತೀಥ೯ದಲ್ಲಿ ಶ್ರೀ ರಾಮ ವನವಾಸದಲ್ಲಿದ್ದಾಗ ಸೀತಾ ಮಾತೆಗೆ ಪೂಜೆಗೆ ನೀರು ಸಿಗದಿದ್ದಾಗ ರಾಮ ತನ್ನ ಅಂಬಿನಿಂದ (ಬಿಲ್ಲಿನ ಬಾಣದಿಂದ) ನೆಲ ಸೀಳಿ ನೀರು ತಂದರೆ೦ದು ರಾಮಾಯಣದಲ್ಲಿ ಉಲ್ಲೇಖವಿದೆ, ಹಾಗಾಗಿ ಈ ಸ್ಥಳಕ್ಕೆ ಅಂಬುತೀಥ೯ ಎಂಬ ಹೆಸರು ಬ೦ತು ಎಂಬುದು ಸ್ಥಳ ಪುರಾಣ.    ಇಲ್ಲಿ ಸಣ್ಣ ತೊರೆಯಾಗಿ ಹುಟ್ಟುವ ನದಿ ಬಾಣದಿಂದ ಹುಟ್ಟಿದ್ದರಿಂದ ಶರಾವತಿ ಎ೦ಬ ಹೆಸರು ಪಡೆದು ಪೂವ೯ಕ್ಕೆ ಹರಿದು ನಂತರ ಪಶ್ಚಿಮ ಮುಖವಾಗಿ ತಿರುಗಿ ಹೊಸನಗರ ತಾಲ್ಲೂಕನ್ನ ದಾಟಿ ಸಾಗರ ತಾಲ್ಲೂಕಿನ ಜೋಗದಲ್ಲಿ ಜಲಪಾತವಾಗಿ ದಟ್ಟ ಕಾನನದ ಕಣಿವೆ ಮುಖಾಂತರ ಹರಿದು ಹೊನ್ನಾವರದಲ್ಲಿ ಅರಬ್ಬಿ ಸಮುದ್ರ ಸೇರುತ್ತದೆ.   ಈ ನದಿಗೆ ಮೊದಲಿಗೆ ಹೀರೇ ಬಾಸ್ಕರ ಎಂಬಲ್ಲಿ ನಂತರ ಲಿಂಗನಮಕ್ಕಿಯಲ್ಲಿ ಆಣೆಕಟ್ಟು ಕಟ್ಟಿ ರಾಜ್ಯಕ್ಕೆ ಜಲ ವಿದ್ಯುತ್ ನೀಡುತ್ತಿರುವುದರಿಂದ ಲಕ್ಷಾಂತರ ಎಕರೆ ಕಾಡು, ಜಮೀನು ಅನೇಕ ಊರು ಮುಳುಗಡೆ ಆಯಿತು ಸಾವಿರಾರು ಕುಟುಂಬಗಳು ಸಂತ್ರಸ್ಥರಾದದ್ದು ಇತಿಹಾಸ.    ಈ ನದಿ ಜೋಗದಲ್ಲಿ ದುಮುಕುವ ಜಲಪಾತ ವಿಶ್ವದ ಸುಂದರ ಜಲಪಾತದಲ್ಲಿ ಒಂದಾಗಿದೆ.    ಹಾಗಾಗಿ ಶರಾವತಿ ನದಿಯ ಉಗಮ ಸ್ಥಾನಕ್ಕೆ ಮಹತ್ವವಿದೆ, ಒಮ್ಮೆಯಾದರೂ ಈ ನದಿ ಮೂಲ ಸಂದಶಿ೯ಸಬೇಕು ಆದರೆ ಇಲ್ಲಿ ಶರಾವತಿ ವ...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...