Skip to main content

ಪ್ರವಾಸಿ ಎಬಿಡಿಬಿ ಬರೆದ ಬ್ರಾಹ್ಮಣ ಪುರೋಹಿತರ ವ್ಯಾಜ್ಯ

#ಪ್ರವಾಸಿ ಕಂಡ ಇಂಡಿಯಾ ಪುಸ್ತಕದಲ್ಲಿ ಬುದ್ಧಿವಂತ ಬ್ರಾಹ್ಮಣ ಪುರೋಹಿತರ ಒಂದು ವೃತ್ತಾಂತವನ್ನ ಪ್ರವಾಸಿ ಎಬಿ ಡೂಬಾ ಬರೆದಿದ್ದಾರೆ ಓದಿ#

     18 ಅಥವಾ 19 ನೇ ಶತಮಾನದಲ್ಲಿ ಒಂದು ಊರಿನಲ್ಲಿ 11 ಜನ ಪುರೋಹಿತರು ಬರಗಾಲದ ಕಾರಣ ಉದ್ಯೋಗ ಅರಸಿಕೊಂಡು ಬೇರೆ ಊರಿಗೆ ಹೋಗುತ್ತಾರೆ, ಮಾಗ೯ದಲ್ಲಿ ಊಟ ಉಪಚಾರಕ್ಕಾಗಿ ಬೇಕಾದ ಆಹಾರ ಧಾನ್ಯಗಳನ್ನ ಕಟ್ಟಿಕೊಂಡು ತೆಗೆದು ಕೊಂಡು ಹೋಗುತ್ತಾರೆ.
  ಮುಂದಿನ ಊರು ತಲುಪಿ, ಒಲೆ ಹೂಡಿ, ಅಡುಗೆ ಮಾಡಲು ಹೊಸ ಮಡಿಕೆ ತರಲು ಊರ ಒಳಗೆ ಹೋಗುತ್ತಾರೆ. ಆದರೆ ಅವರ ದುರಾದೃಷ್ಟ ಇಡೀ ಊರೇ ಬರಗಾಲದಿಂದ ಗುಳೆ ಹೋಗಿರುತ್ತೆ, ಹೇಗೋ ಏನೋ ಒಬ್ಬ ಅಗಸ ಉಳಿದಿರುತ್ತಾನೆ ಅವನ ಹತ್ತಿರ ಇವರ ಅಡುಗೆಗೆ ಬೇಕಾದ ಹೊಸ ಮಡಿಕೆ ಕೇಳುತ್ತಾರೆ. ಆದರೆ ಅವನ ಹತ್ತಿರ ಹೊಸ ಮಡಕೆಗಳು ಇರುವುದಿಲ್ಲ. ಆದರೆ ಆತ ಬಳಸಿದ ಮಡಕೆಗಳನ್ನ ಇವರು ಕೇಳಿದರೂ ಆತ ಕೊಡುವುದಿಲ್ಲ ಕಾರಣ ಶೂದ್ರ ಬಳಸಿದ ಮಡಿಕೆ ಬ್ರಾಹ್ಮಣ ಬಳಸುವಂತಿಲ್ಲ ಬಳಸಿದರೆ ಅದು ನೀಡಿದವನಿಗೆ ಪಾಪ ಬರುತ್ತೆ ಅಂತ. ಬರಗಾಲದ ಊರಿನಲ್ಲಿ ಇದೆಲ್ಲ ಪಾಲಿಸಲು ಹೋದರೆ ಉಪವಾಸದಿಂದ ಸಾಯಬೇಕೆಂದು ಬಳಸಿದ ಮಡಕೆಯನ್ನ ಒತ್ತಾಯದಿಂದ ತರುತ್ತಾರೆ. ಇವರಲ್ಲಿನ ಒಬ್ಬ ಪುರೋಹಿತ ಇದು ಧಮ೯ ವಿರೋಧ ಅಂತ ಇವರು ತಯಾರಿಸಿದ ಅಡುಗೆ ನಿರಾಕರಿಸಿ ಉಪವಾಸ ಉಳಿಯುತ್ತಾನೆ.
 ಮರು ದಿನ ಮುಂದಿನ ಊರಿಗೆ ತಲುಪಿದಾಗ ಅಲ್ಲಿನ ಸ್ವಜಾತಿ ಬಾಂಧವರ ಎದುರು ಈ ವಿಚಾರ ಪ್ರಸ್ತಾಪ ಆಗಿ ಹಿಂದಿನ ದಿನ ಶೂದ್ರರು ಬಳಸಿದ ಮಡಕೆಯಲ್ಲಿ 10 ಜನ ಪುರೋಹಿತರು ಅಡುಗೆ ತಯಾರಿಸಿ ಊಟ ಮಾಡಿದ್ದರಿಂದ ಧಮ೯ ವಿರೋಧಿ ಕಾಯ೯ ನಡೆಸಿ ಜಾತಿ ಭ್ರಷ್ಟರಾಗಿದ್ದಾರೆಂದು ಈ ಅಡುಗೆ ಬಳಸದೆ ಉಪವಾಸ ಉಳಿದ ಪುರೋಹಿತ ದೂರುತ್ತಾನೆ.
  ನಂತರ ಉಳಿದ ಬುದ್ಧಿವಂತ 10 ಬ್ರಾಹ್ಮಣರು ಹಿಂದಿನ ದಿನ ತಾವು ಎಷ್ಟು ತಡೆದರೂ ಕೇಳದೆ ಈಗ ದೂರು ನೀಡುತ್ತಿರುವವನೆ ಅಗಸ ಬಳಸಿದ ಮಡಕೆಯಲ್ಲಿ ಅಡುಗೆ ಮಾಡಿ ಊಟ ಮಾಡಿದ ಎಂದು, ತಾವು ಪರಿಪರಿ ಆಗಿ ಶಾಸ್ತ್ರ ನಿಷೇಧ ವಿವರಿಸಿದರೂ ಕೇಳಲಿಲ್ಲ ಎಂದಾಗ ಹತ್ತು ಜನರ ಒಗ್ಗಟ್ಟಿನ ಸಾಕ್ಷದ ಎದುರು ನಿಜ ಶಾಸ್ತ್ರ ನಿಷ್ಠ ಬ್ರಾಹ್ಮಣನ ವಾದ ಬಿದ್ದು ಹೋಗಿ ಅವನನ್ನ ಧಮ೯ ವಿರೋಧಿ ಎಂದು ಜಾತಿಯಿಂದ ಬಹಿಷ್ಕಾರ ಹಾಕಿ ಊರಿಂದ ಓಡಿಸಿ ಬಿಡುತ್ತಾರೆ.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...