Skip to main content

ದೇಶದ ಉಕ್ಕಿನ ಮಹಿಳೆ ಇಂದಿರಾಗೆ ಕಲ್ಲೆಸೆದು ಘಾಸಿಗೊಳಿದ ಶಿವಮೊಗ್ಗದ ಘಟನೆಗೆ 44 ವರ್ಷ.

#ಉಕ್ಕಿನ_ಮಹಿಳೆ_ಇಂದಿರಾಗೆ_ಕಲ್ಲೆಸೆದ_ಶಿವಮೊಗ್ಗದ_ಕಹಿಘಟನೆಗೆ_44ವರ್ಷ.

#ಇವತ್ತು_ಇಂದಿರಾ_104ನೇ_ಹುಟ್ಟುಹಬ್ಬ

#ಮುಚ್ಚಿಟ್ಟ_ಕಾಂಗ್ರೇಸ್_ಇತಿಹಾಸದ_ಪುಟ.

  ಇವತ್ತು ದೇಶದ ಉಕ್ಕಿನ ಮಹಿಳೆ ಮೊದಲ ಮಹಿಳಾ ಪ್ರಧಾನಿ ಇಂದಿರಾರ 104 ನೇ ಹುಟ್ಟುಹಬ್ಬ.
  19- ನವೆಂಬರ್ -1917 ಇಂದಿರಾರ ಜನ್ಮ ದಿನ.
 ಇಂದಿರಾ ಗಾಂಧಿ ಅವರ 60ನೇ ಹುಟ್ಟುಹಬ್ಬಕ್ಕೆ 20 ದಿನ ಮೊದಲು ದಿನಾಂಕ 30 ಅಕ್ಟೋಬರ್ 1977ರಂದು ಶಿವಮೊಗ್ಗದಲ್ಲಿ ಕಾಂಗ್ರೇಸ್ ಪಕ್ಷ ಬಹಿರಂಗ ಸಭೆಯೊಂದನ್ನು ಹಮ್ಮಿಕೊಂಡಿತ್ತು ಈ ಸಭೆಯನ್ನು ಉದ್ದೇಶಿಸಿ ಶ್ರೀಮತಿ ಇಂದಿರಾ ಗಾಂಧಿ ಮಾತಾಡುವವರಿದ್ದರು.
  ಈ ಸಭೆ ನಂತರ ತೀರ್ಥಹಳ್ಳಿ ಮಾರ್ಗವಾಗಿ ಶೃಂಗೇರಿ ಮೂಲಕ ಅವರು ಮಂಗಳೂರು ತಲುಪುವ ಕಾರ್ಯಕ್ರಮ ನಿರ್ಧಾರವಾಗಿತ್ತು.
  ಆ ದಿನ ಶಿವಮೊಗ್ಗದಲ್ಲಿ ಇಂದಿರಾ ಗಾಂಧಿ ನೋಡಲು ಜಿಲ್ಲೆಯ ಮೂಲೆ ಮೂಲೆಯಿಂದ ಸಹಸ್ರಾರು ಜನ ಸ್ವಯಂ ಪ್ರೇರಣೆಯಿಂದ ಬಂದಿದ್ದರು, ಇಂದಿರಾ ಗಾಂಧಿ ಈ ಯಶಸ್ವಿ ಸಭೆ ನಡೆಸಿ ತೀರ್ಥಹಳ್ಳಿಗೆ ನಿರ್ಗಮಿಸುವ ಮಾರ್ಗದಲ್ಲಿ ಇಂದಿರಾರ ಕಾರಿಗೆ ಕಲ್ಲು ಹೊಡೆಯುವ ಹೇಯ ಕೃತ್ಯಕ್ಕೆ ತಯಾರಿ ಒ0ದು ನಡೆದಿತ್ತು.
  ಶಿವಮೊಗ್ಗ ತೀರ್ಥಹಳ್ಳಿ ಮಾರ್ಗದಲ್ಲಿ (ಈಗಿನ ಬೈಪಾಸ್ ಸಮೀಪ) ಯುವಕರ ಗುಂಪೊಂದು ಇಂದಿರಾ ವಿರೋದಿ ಘೋಷಣೆಯೊಂದಿಗೆ ಇಂದಿರಾ ಕಾರು ಅಡ್ಡಗಟ್ಟಿ ಕಲ್ಲಿನ ಸುರಿಮಳೆ ನಡೆಸಿತು, ಇಂದಿರಾ ಗಾಂದಿ ಪ್ರಯಾಣಿಸುತ್ತಿದ್ದ ಅಂಬಾಸಿಡರ್ ಕಾರಿನ ಡ್ರೈವರ್ ಚಾಕಚಕ್ಯತೆಯಿಂದ ಆಗಬಹುದಾಗಿದ್ದ ದೊಡ್ಡ ದುರಂತ ತಪ್ಪಿಸಿ ತೀರ್ಥಹಳ್ಳಿ ಕಡೆಗೆ ಕಾರನ್ನು ವೇಗವಾಗಿ ಓಡಿಸುತ್ತಾನೆ.
  ಆದರೂ ಆಗಬಾರದ ದುರಂತ ಕಲ್ಲೊಂದು ಕಾರಿನ ಗಾಜು ಮುರಿದು ಇಂದಿರಾರ ನೀಳಕಾಯದ ಮೂಗು ಗಾಯ ಮಾಡುತ್ತದೆ, 60 ವರ್ಷದ ಇಂದಿರಾ ಆ ಕ್ಷಣದಲ್ಲಿ ಏನು ಭಾವನೆ ತಾಳಿದರೋ ಗೊತ್ತಿಲ್ಲ.
  ಮಾರ್ಗ ಮಧ್ಯೆ ಮೂಗಿಗೆ ಬ್ಯಾಂಡೇಜು ಮಾಡಿಸಿ ಅದು ಕಾಣಿಸದಂತೆ ಸೆರಗಿನಿಂದ ಮುಖ ಮುಚ್ಚಿ ಪ್ರಯಾಣಿಸಿದರೂ ಈ ಘಟನೆ ದೇಶ ವಿದೇಶದ ಪತ್ರಿಕೆ ಮತ್ತು ರೇಡಿಯೋದಲ್ಲಿ ದೊಡ್ಡ ಸುದ್ದಿ ಆಯಿತು.
  ಇಂದಿರಾ ಅಭಿಮಾನಿಗಳು ದುಃಖಪಟ್ಟರೆ ವಿರೋದಿಗಳು ಸಂಭ್ರಮಿಸುತ್ತಾರೆ.
  ಅವತ್ತು ಶಿವಮೊಗ್ಗ ಜಿಲ್ಲೆಯಲ್ಲಿ ಪ್ರಮುಖ ಕಾಂಗ್ರೇಸ್  ವಿರೋದಿ ಜನತಾ ಪಕ್ಷವಾಗಿತ್ತು, ಜೆ.ಹೆಚ್.ಪಟೇಲರು ಮತ್ತು ಕಾಗೋಡು ತಿಮ್ಮಪ್ಪನವರು ಜನತಾ ಪಕ್ಷದ ಮುಖಂಡರಾಗಿದ್ದರು.
  ಮುಂದೆ ಪಟೇಲರು ಜನತಾ ಪರಿವಾರದಿಂದಲೇ ಮುಖ್ಯಮಂತ್ರಿ ಆಗುತ್ತಾರೆ, ಕಾಗೋಡು ಜನತಾ ಪಕ್ಷ ತೊರೆದು ಕಾಂಗ್ರೇಸ್ ಸೇರಿ ಮಂತ್ರಿ ಆಗುತ್ತಾರೆ.
  ಇವತ್ತಿಗೂ ಅಂದರೆ 44 ವರ್ಷದ ಹಿಂದೆ ಇಂದಿರಾ ಗಾಂಧಿಗೆ ಕಲ್ಲು ಹೊಡೆದವರು ಯಾರು? ಈ ದುಷ್ಕೃತ್ಯಕ್ಕೆ ಪ್ರೇರಣೆ ನೀಡಿದ ಮುಖಂಡರು ಯಾರು? ಎನ್ನುವುದು ಬಹಿರಂಗ ಆಗಲೇ ಇಲ್ಲ. ಇದೊಂದು ಕರಾಳ ಘಟನೆ ಕಾಂಗ್ರೇಸ್ ಪಕ್ಷದ ಇತಿಹಾಸದ ಪುಟದಿಂದ ಉದ್ದೇಶಪೂರ್ವಕವಾಗಿ ಅಳಿಸಲಾಯಿತಾ? ಗೊತ್ತಿಲ್ಲ.
  ಈ ಘಟನೆ ಜನ ಮಾನಸದಿಂದ ಅಳಿಸಿ ಹೋಗಿದೆ ಅಷ್ಟೆ ಏಕೆ ಕಾಂಗ್ರೇಸ್ ಪಕ್ಷದವರಿಗೂ ಗೊತ್ತಿರಲಿಕ್ಕಿಲ್ಲ !?

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...