Skip to main content

ಭಾರತ ದೇಶದಲ್ಲಿ ದೀಪಾವಳಿಯಲ್ಲಿ ಜನ ಸುಡುವ ಪಟಾಕಿ ಮೂರು ಸಾವಿರ ಕೋಟಿಗೂ ಹೆಚ್ಚಿನ ಮೌಲ್ಯದ್ದು

#ಭಾರತದ_ದೀಪಾವಳಿ_ಪಟಾಕಿ_ವಹಿವಾಟು_ಮೂರುಸಾವಿರಕೋಟಿ_ಮೀರಿದೆ.
#ಅಸುರಕ್ಷಿತ_ವಲಯದ_ಬಾಲಕಾಮಿ೯ಕರ_ಬಳಕೆಯ_ಉದ್ದಿಮೆ.
#ಪರಿಸರ_ಸಂರಕ್ಷಣೆ_ಮರಿಚಿಕೆ

      ಪಟಾಕಿ ಶಬ್ದ ಮಕ್ಕಳ ಬಾಲ್ಯದಲ್ಲಿ ಆಕರ್ಷಕ ಅದಕ್ಕೆ ರಂಗು ರಂಗಿನ ಬೆಳಕಿನ ಚಿತ್ತಾರದ ಚಮತ್ಕಾರವೂ ಸೇರಿಸಿ ಎಲ್ಲಾ ವಯೋಮಾನದವರಿಗೂ ಆಕರ್ಷಿಸುವಂತೆ ಮಾಡಿದ್ದಾರೆ.    
       ವಿವಿದ ವಿನ್ಯಾಸ ಗುಣಮಟ್ಟಗಳಿಂದ ಇದರ ಬೆಲೆ ಕೂಡ ಹೆಚ್ಚು, ಈಗೆಲ್ಲ ಪಟಾಕಿಗೂ ಕರೆನ್ಸಿಗೂ ನೇರ ಸಂಬಂದ ಇದೆ, ಸಭೆ ಸಮಾರಂಭ ಉತ್ಸವಗಳಲ್ಲಿ ಲಕ್ಷಾಂತರ ರೂಪಾಯಿ ಸುಡುತ್ತಾರೆ. ನಿಶ್ವಿತ ವರಮಾನ ಇರುವ ಉದ್ಯೋಗಿಗಳ ಕುಟು೦ಬ, ವಾಣಿಜ್ಯ ಬೆಳೆಯ ರೈತರು, ಲಾಭದಾಯಕ ಉದ್ದಿಮೆ ಇರುವವರೇ ಇದರ ಹೆಚ್ಚಿನ ಗ್ರಾಹಕರು.
     ಇಲ್ಲಿ ಸಿಗುವ ಕ್ಷಣಿಕ ಸುಖ ಮತ್ತು ಶಬ್ದ ಹಾಗೂ ಬೆಳಕಲ್ಲಿ ತಮ್ಮ ಅಂತಸ್ತು ಪ್ರದರ್ಶನದ ಸ್ಪರ್ದೆಯಿಂದ ಪರಿಸರ ಸಂರಕ್ಷಣೆ ಗಮನಕ್ಕೆ ಬರುತ್ತಿಲ್ಲ.
    ಪಟಾಕಿ ಉದ್ಯಮವೂ ಬಾಲಕಾರ್ಮಿಕರನ್ನೆ ಅವಲಂಬಿಸಿದೆ ಏಕೆಂದರೆ ಪಟಾಕಿ ತಯಾರಕನಿಗೆ ಹತ್ತು ಪೈಸೆ ಸಿಕ್ಕುತದೆ ಅದೇ ಪಟಾಕಿ ಮಾರುವ ಮಧ್ಯವರ್ತಿಗೆ ರೂಪಾಯಿ ಲಾಭ ತರುತ್ತದೆ ಆದ್ದರಿಂದ ಅತ್ಯಂತ ಕಡಿಮೆ ಕೂಲಿಯ ಮತ್ತು ಬಾಲ್ಯವಸ್ಥೆಯ ಮಕ್ಕಳ ಕೈ ಬೆರಳ ಕೌಶಲ್ಯ ಕೂಡ ಬಾಲ ಕಾಮಿ೯ಕ ಬಳಕೆ ಇದಕ್ಕೆ ಕಾರಣವಾಗಿದೆ.
  ಪಟಾಕಿಗೆ ಬೇಕಾದ ಕಚ್ಚಾ ವಸ್ತುಗಳನ್ನು ತಯಾರಿಸುವ ಸಂಸ್ಥೆಗಳಿಗೆ ತಮ್ಮ ವಸ್ತು ದೊಡ್ಡ ಮಟ್ಟದ ಖರೀದಿದಾರ ಪಟಾಕಿ ಕಾರ್ಖಾನೆ ನಿರಂತರ ನಡೆಯದಿದ್ದರೆ ನಷ್ಟ ಖಚಿತ.
  ಸಿಡಿ ಮದ್ದು ತಯಾರಿಕೆ - ದಾಸ್ತಾನು -ಸಾಗಾಣಿಕೆ  ಮತ್ತು ಬಳಕೆಯಲ್ಲಿ ಪ್ರತಿ ವರ್ಷ ಅವಘಡ ಮತ್ತು ಸಾವುಗಳು ಕೂಡ ಗಣನೀಯವಾಗಿ ಏರುತ್ತಿದೆ.
  ಚೀನಾ ದೇಶದ ಪಟಾಕಿ ಉದ್ಯಮ ಜಾಗತಿಕವಾಗಿ ದೊಡ್ಡ ಮಟ್ಟದ್ದು ಮತ್ತು ಭಾರತ ಅದರ ಉತ್ಪನ್ನಗಳ ದೊಡ್ಡ ಗ್ರಾಹಕ ಇತ್ತೀಚಿಗೆ ಚೀನಾ ವಸ್ತುಗಳ ಬಹಿಷ್ಕಾರದ ಟ್ರೆಂಡ್ ನಿಂದಾಗಿ ಚೀನಾ ದೇಶದ ಎಲ್ಲಾ ವಸ್ತುಗಳು ಮೇಡ್ ಇನ್ ಚೀನಾ ಅನ್ನುವುದು ಬದಲಿಸಿ ನೇಪಾಳ ಸಿಂಗಪೂರ ಮತ್ತು ಮಲೇಶಿಯಾದ ಬದಲಿ ದಾರಿಯಲ್ಲಿ ಬರುತ್ತದೆ.
  ಪರಿಸರ ಕಾಳಜಿ ಮತ್ತು ಕುಟುಂಬ ರಕ್ಷಣೆಯ ಕಾಳಜಿಯಿಂದ ಹಬ್ಬ ಹರಿದಿನಗಳಲ್ಲಿ ಸಿಡಿ ಮದ್ದು ಖರೀದಿಸುವವರು ಕಡಿಮೆ ಆಗುತ್ತಿದ್ದಾರ?

Comments

Popular posts from this blog

ಶರಾವತಿ ನದಿ ಉಗಮ ಸ್ಥಾನ ಅಂಬುತೀಥ೯.

ಇಡೀ ರಾಜ್ಯಕ್ಕೆ ವಿದ್ಯುತ್ ನೀಡುವ ಶರಾವತಿ ನದಿಯ ಉಗಮ ಸ್ಥಾನ ಅಂಬುತೀಥ೯, ಆರಗ ಸಮೀಪದ ತೀಥ೯ಳ್ಳಿ ತಾಲ್ಲೂಕಿನಲ್ಲಿದೆ( ಶಿವಮೊಗ್ಗ ಜಿಲ್ಲೆ)    ಅಂಬು ತೀಥ೯ದಲ್ಲಿ ಶ್ರೀ ರಾಮ ವನವಾಸದಲ್ಲಿದ್ದಾಗ ಸೀತಾ ಮಾತೆಗೆ ಪೂಜೆಗೆ ನೀರು ಸಿಗದಿದ್ದಾಗ ರಾಮ ತನ್ನ ಅಂಬಿನಿಂದ (ಬಿಲ್ಲಿನ ಬಾಣದಿಂದ) ನೆಲ ಸೀಳಿ ನೀರು ತಂದರೆ೦ದು ರಾಮಾಯಣದಲ್ಲಿ ಉಲ್ಲೇಖವಿದೆ, ಹಾಗಾಗಿ ಈ ಸ್ಥಳಕ್ಕೆ ಅಂಬುತೀಥ೯ ಎಂಬ ಹೆಸರು ಬ೦ತು ಎಂಬುದು ಸ್ಥಳ ಪುರಾಣ.    ಇಲ್ಲಿ ಸಣ್ಣ ತೊರೆಯಾಗಿ ಹುಟ್ಟುವ ನದಿ ಬಾಣದಿಂದ ಹುಟ್ಟಿದ್ದರಿಂದ ಶರಾವತಿ ಎ೦ಬ ಹೆಸರು ಪಡೆದು ಪೂವ೯ಕ್ಕೆ ಹರಿದು ನಂತರ ಪಶ್ಚಿಮ ಮುಖವಾಗಿ ತಿರುಗಿ ಹೊಸನಗರ ತಾಲ್ಲೂಕನ್ನ ದಾಟಿ ಸಾಗರ ತಾಲ್ಲೂಕಿನ ಜೋಗದಲ್ಲಿ ಜಲಪಾತವಾಗಿ ದಟ್ಟ ಕಾನನದ ಕಣಿವೆ ಮುಖಾಂತರ ಹರಿದು ಹೊನ್ನಾವರದಲ್ಲಿ ಅರಬ್ಬಿ ಸಮುದ್ರ ಸೇರುತ್ತದೆ.   ಈ ನದಿಗೆ ಮೊದಲಿಗೆ ಹೀರೇ ಬಾಸ್ಕರ ಎಂಬಲ್ಲಿ ನಂತರ ಲಿಂಗನಮಕ್ಕಿಯಲ್ಲಿ ಆಣೆಕಟ್ಟು ಕಟ್ಟಿ ರಾಜ್ಯಕ್ಕೆ ಜಲ ವಿದ್ಯುತ್ ನೀಡುತ್ತಿರುವುದರಿಂದ ಲಕ್ಷಾಂತರ ಎಕರೆ ಕಾಡು, ಜಮೀನು ಅನೇಕ ಊರು ಮುಳುಗಡೆ ಆಯಿತು ಸಾವಿರಾರು ಕುಟುಂಬಗಳು ಸಂತ್ರಸ್ಥರಾದದ್ದು ಇತಿಹಾಸ.    ಈ ನದಿ ಜೋಗದಲ್ಲಿ ದುಮುಕುವ ಜಲಪಾತ ವಿಶ್ವದ ಸುಂದರ ಜಲಪಾತದಲ್ಲಿ ಒಂದಾಗಿದೆ.    ಹಾಗಾಗಿ ಶರಾವತಿ ನದಿಯ ಉಗಮ ಸ್ಥಾನಕ್ಕೆ ಮಹತ್ವವಿದೆ, ಒಮ್ಮೆಯಾದರೂ ಈ ನದಿ ಮೂಲ ಸಂದಶಿ೯ಸಬೇಕು ಆದರೆ ಇಲ್ಲಿ ಶರಾವತಿ ವ...

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

Blog number 1037. ರಾಜಕುಮಾರಿ ಶಾಂತವ್ವ ಮತ್ತು ದಲಿತ ಯುವಕ ಸಿದ್ದೇಶ್ವರರ ಅಮರ ಪ್ರೇಮದ ಸ್ಮಾರಕ, ಅನ್ಯ ಜಾತಿ ವಿವಾಹವಾದ್ದರಿಂದ ರಾಜಕುಮಾರಿಗೆ ಸೂಳೆ ಪಟ್ಟ ನೀಡಿದ ಸಮಾಜ. ಸಮಾಜದ ಒಳಿತಿಗಾಗಿ ಶಾಂತವ್ವ ಕಟ್ಟಿಸಿದ ಬೃಹತ್ ಕೆರೆಗೆ ಜನ ಕರೆದದ್ದು ಸೂಳೆ ಕಟ್ಟಿಸಿದ ಕೆರೆ ಅದೇ ಸೂಳೆಕೆರೆ / ಶಾಂತಿ ಸಾಗರ

# ಸೂಳೆಕೆರೆ (ಶಾಂತಿ ಸಾಗರ) ಅಂತರ್ ಜಾತಿ ಪ್ರೇಮ ವಿವಾಹದ ದುರOತ ಕಥೆ. #ಅಕ್ಟೋಬರ್ 2019 ರಲ್ಲಿ ತುಂಬಿ ತುಳುಕಿತ್ತು.  ಚಿತ್ರದುಗ೯, ದಾವಣಗೆರೆ ಬಳ್ಳಾರಿ ಮುಂತಾದ ಮಳೆ ಕಡಿಮೆ ಆಗುತ್ತಿದ್ದ ಜಿಲ್ಲೆಗಳಲ್ಲಿ ಅದೂ ಅಕ್ಟೋಬರ್ ತಿಂಗಳ 2019 ರಲ್ಲಿ  ಬಂದಿದ್ದ ಬಾರಿ ಮಳೆ ಎಲ್ಲಾ ಕೆರೆ, ಹೊಂಡಗಳು ತುಂಬಿ ತುಳುಕಿದೆ, ಸಾಮಾಜಿಕ ಜಾಲ ತಾಣದಲ್ಲಿ 40 ವಷ೯ದಲ್ಲಿ ಇಂತ ಮಳೆ ಬಂದಿಲ್ಲ ಅಂತ ಸುದ್ದಿ ಹರಿದಾಡುತ್ತಿತ್ತು ಮತ್ತು  ಸೂಳೆಕೆರೆ ತುಂಬಿ ಕೋಡಿ ಬಿದ್ದಿದೆ ಅಂತೆಲ್ಲ Post ನೋಡಿ ಬೆಂಗಳೂರಿಂದ ಬರುವಾಗ ಚಿತ್ರದುಗ೯ ಮಾಗ೯ವಾಗಿ ಚನ್ನಗಿರಿ ತಲುಪಿ ಸೂಳೆಕೆರೆ ನೋಡಲು ಹೋಗಿದ್ದೆ.  11ನೇ ಶತಮಾನದಲ್ಲಿ (1128ರಲ್ಲಿ)ಕೇವಲ 3 ವಷ೯ದಲ್ಲಿ ಈ ಕೆರೆ ನಿಮಾ೯ಣ ಮಾಡಿಸಿದ್ದು ಶಾಂತವ್ವ ಎಂಬ ರಾಜ ಕುಮಾರಿ ಅವಳು ಸ್ವಣ೯ವತಿ ಪಟ್ಟಣದ ದೊರೆ ವಿಕ್ರಮ ರಾಜನ ಮಗಳು, ಸಿದ್ದೇಶ್ವರ ಎಂಬ ಅನ್ಯ ಜಾತಿಯ ಯುವಕನೊ೦ದಿಗೆ ಗಾಂದವ೯ ವಿವಾಹ ಆಗುತ್ತಾಳೆ ಇದನ್ನ ಸಹಿಸದ ಮತ್ತು ಒಪ್ಪದ ಜನತೆ ಸೂಳೆ ಎಂದು ಮೂದಲಿಸುತ್ತಾರOತೆ ಈ ರೀತಿ ತನಗೆ ಬಂದ ಕಳಂಕ ಕಳೆಯಲು ಈ ಬೃಹತ್ ಕೆರೆ ತನ್ನ ಪತಿ ಸಿದ್ದೇಶ್ವರನ ಜೊತೆ ಸೇರಿ ನಿಮಿ೯ಸಿ ಕೆರೆಗೆ ಹಾರವಾದಳೆoಬ ಇತಿಹಾಸ ಇದೆ ಇದರಿಂದ ನೊಂದ ಪತಿ ಸಿದ್ಧೇಶ್ವರ ಕೂಡ ಎದುರಿನ ಗುಡ್ಡದಲ್ಲಿ ಜೀವ ತ್ಯಾಗ ಮಾಡುತ್ತಾನೆ ಈಗ ಅಲ್ಲಿ ಸಿದ್ದೇಶ್ವರ ದೇವಸ್ಥಾನವಿದೆ.   ಈ ಕೆರೆ ಈಗಲೂ ಸೂ...