Skip to main content

ನಿನ್ನೆ (20- ಡಿಸೆಂಬರ್ -2020) ರಾತ್ರಿ ಆಕಾಶದಲ್ಲಿ ಬೆಳಕಿನ ಸರಮಾಲೆಯ ಮೆರವಣಿಗೆ ಏನದು? 1970 ರ ದಶಕದಲ್ಲಿ ಸಾಮೂಹಿಕ ಸನ್ನಿಯಂತೆ ಜನರ ಭಯಕ್ಕೆ ಕಾರಣ ಆಗಿದ್ದ ಆಕಾಶದಲ್ಲಿ ನಡೆಯುತ್ತಿದ್ದ ಶವ ಸಂಸ್ಕಾರದ ಮೆರವಣಿಗೆಯ ಸುದ್ದಿ.

#ನಿನ್ನೆ_ಆಕಾಶದಲ್ಲಿ_ಕಂಡದ್ದೇನು?
#ಕೆಲವೇ_ಕ್ಷಣದಲ್ಲಿ_ಸಾಮಾಜಿಕ_ಜಾಲತಾಣದಿಂದ_ಉತ್ತರ.

#ಎಪ್ಪತ್ತರ_ದಶಕದಲ್ಲಿ_ಸಾಮಾಜಿಕ_ಸನ್ನಿಯಂತೆ_ಭಯ_ಹರಡಿದ್ದ_ಆಕಾಶದಲ್ಲಿನ_ಶವಸಂಸ್ಕಾರದ_ಮೆರವಣಿಗೆ.

  ನಿನ್ನೆ ಸಂಜೆ ಆಕಾಶದಲ್ಲಿ ಬೆಳಕಿನ ದೀಪ ಮಾಲೆಯೊಂದು ಮೆರವಣಿಗೆಯಂತೆ ಹೋಯಿತು ಎಂಬ ಚಿತ್ರ - ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಯಿತು ಇದು ದಕ್ಷಿಣ ಭಾರತದಲ್ಲೆಲ್ಲ ಜನ ನೋಡಿದರಂತೆ ಈ ಸುದ್ದಿ ಪ್ರಕಟವಾದ ಕ್ಷಣದಲ್ಲೇ ಇದರ ನೈಜ ಕಾರಣವನ್ನು ಬಾಹ್ಯಾಕಾಶ ವೀಕ್ಷಕರು ತಮ್ಮ ಪ್ರತಿಕ್ರಿಯೆ ನೀಡಿದರು ಇದು ಅಮೆರಿಕಾದ ಶ್ರೀಮ೦ತ ಉದ್ಯಮಿ ವಿಶ್ವದಾದ್ಯಂತ ಅಂತರ್ಜಾಲ ಸಂಪರ್ಕ ಸುಲಭ ಮತ್ತು ಕೆಲವು ಪಟ್ಟು ವೇಗವಾಗಿ ನೀಡಲು ಹಾರಿಬಿಟ್ಟ #space_x ಎಂಬ ಸರಣಿ ಉಪಗ್ರಹಗಳ ಪ್ರತಿಪಲನ ಅಂತ.
  ಕ್ಷಣ ಮಾತ್ರದಲ್ಲಿ ಜನರ ಕುತೂಹಲ, ಆತಂಕಗಳು ಪರಿಹಾರ ಆಯಿತು ಇದು ವಿಜ್ಞಾನದ ಸಾಮಾಜಿಕ ಜಾಲ ತಾಣದ ತಾಕತ್ತು ಕೂಡ.
  1970 ರ ದಶಕದ ಪ್ರಾರಂಭದಲ್ಲಿ ಒಂದು ಆತಂಕಕಾರಿ ಸುದ್ದಿ ಎಲ್ಲಿಂದಲೋ ಹರಡಿತು ಅದೇನೆಂದರೆ ಅಮಾವಾಸ್ಯೆ ಹಿಂದೆ ಮುಂದಿನ ಮದ್ಯರಾತ್ರಿಯಲ್ಲಿ ಆಕಾಶದಲ್ಲಿ ಶವ ಸಂಸ್ಕಾರದ ಮೆರವಣಿಗೆ ಉತ್ತರದಿಂದ ದಕ್ಷಿಣಕ್ಕೆ ಹೋಗಿದ್ದು ಕೆಲವರು ನೋಡಿದ್ದೆವೆಂಬ ಸುದ್ದಿ ಪ್ರತಿ ತಿಂಗಳ ಅಮಾವಾಸ್ಯೆ ಸಂದರ್ಭದಲ್ಲಿ ಆ ಊರಲ್ಲಿ ಕಂಡಿತು ಈ ಊರಲ್ಲಿ ಕಂಡಿತು ಎಂಬ ಸುದ್ದಿ ಜನ ಸೇರುತ್ತಿದ್ದ ಊರ ಚೌಕದಲ್ಲಿ, ಕೃಷಿ ಕೆಲಸದ ನಡುವೆ, ಮಧ್ಯದ ಅಂಗಡಿಯಲ್ಲಿ, ಶಿಕಾರಿಗಾರರ ಮಧ್ಯ ಇದು ರೋಚಕ ಚರ್ಚಾ ವಿಷಯ ಆಗಿರುತ್ತಿತ್ತು.
   ಇದನ್ನು ನೋಡಿದವರು ಇದ್ದಾರೆ ಎಂಬ ಸುದ್ದಿ ಬಿಟ್ಟರೆ ಇದನ್ನು ಸಾಕ್ಷಿಕರಿಸುವ ಪೋಟೋ ಇತ್ಯಾದಿ ಯಾವುದು ಇರಲಿಲ್ಲ, ಇದು ಸುಳ್ಳು ಕಲ್ಪನೆ ಅಂತ ಅಥವ ಸಾಮೂಹಿಕ ಸನ್ನಿ ಆಗಿರುವ ಜನರ ಭಯಕ್ಕೆ ಕಾರಣವಾದ ಮೂಡ ನಂಬಿಕೆ ಎಂಬ ಯಾವುದೇ ವಿಚಾರವಾದಿ ಅಥವ ವಿಜ್ಞಾನಿಗಳ ಉತ್ತರ ಬರಲಿಲ್ಲ ಅಥವ ಬಂದಿದ್ದರೂ ಜನರ ತಲುಪಲಿಲ್ಲ ಕಾಣುತ್ತೆ.
  ಕ್ರಮೇಣ ಈ ಸುದ್ದಿ ನಮ್ಮ ನಮ್ಮ ಊರಲ್ಲೂ ಇಂತಹ ಘಟನೆ ನೋಡಿದ ಸುದ್ದಿ ಆಗಿ ಹಳ್ಳಿಗಳಲ್ಲಿ ಜನ ರಾತ್ರಿ ಮನೆಯ ಹೊರಗೆ ಬರುವುದೇ ನಿಂತು ಹೋಯಿತು.
  ಇಂತಹ ಸಂದರ್ಭದಲ್ಲಿ ನಾವೆಲ್ಲ ಚಿಕ್ಕವರಿದ್ದಾಗ ನಗರದ ದೇವಗಂಗೆಯ ನಮ್ಮ ದೊಡ್ಡಮ್ಮನ ಮನೆಯಲ್ಲಿ ಶಾಲಾ ಬೇಸಿಗೆ ರಜಾದಲ್ಲಿ ಇದ್ದಾಗ " ಭರ್ಮಣ್ಣ ನಿನ್ನೆ ರಾತ್ರಿ ಜಲ ಬಾದೆಗಾಗಿ ಮನೆ ಹೊರಗೆ ಬಂದಾಗ ಅವನ ಮನೆ ಎದುರಿನ ತೆಂಗಿನ ಮರದ ಸರೂತ ಆಕಾಶದಲ್ಲಿ ನಾಲ್ಕು ಜನ ಶವ ಒಂದನ್ನು ಚಟ್ಟದಲ್ಲಿ ಹೊತ್ತು ಒಯ್ಯುತ್ತಿದ್ದರಂತೆ ಹಿಂದಿನಿಂದ ರೋದಿಸುತ್ತಾ ಹಣ್ಣು ಕೂದಲ ಮುದುಕಿ ಹೋಗುತ್ತಿತ್ತಂತೆ " ಅಂದಾಗ ಇಡೀ ದೇವಗಂಗೆ ಎಂಬ ಸಣ್ಣ ಹಳ್ಳಿಯಲ್ಲಿ ಜನ ಭಯ ಬೀತರಾಗಿದ್ದರು, ನಾವೆಲ್ಲ ಕತ್ತಲಾಯಿತೆಂದರೆ ಕುಮುಟಿ ಬೀಳುವಂತೆ.
   ಭರ್ಮಣ್ಣ ಕೆಲಸಕ್ಕೆ ಹೋದಲ್ಲೆಲ್ಲ ಜನರಿಗೆ ಈ ಕಥೆ ಹೇಳುವುದೇ ಕೆಲಸ ಆಯಿತು, ದೈರ್ಯವಂತ ಯುವಕರು ಒಂದಾಗಿ ಕೆಲ ಅಮಾವಾಸ್ಯೆ ರಾತ್ರಿಯಲ್ಲಿ ಭತ್ತದ ಕಣದಲ್ಲಿ ಮಲಗಿ ರಾತ್ರಿ ಇಡೀ ಆಕಾಶ ವೀಕ್ಷಣೆ ಮಾಡಿದೆವು ಇಂತಹ ಯಾವುದೇ ಘಟನೆ ಕಾಣಲಿಲ್ಲ ಅಂದರೂ ಅವರ ಪ್ರತ್ಯಕ್ಷ ಪರೀಕ್ಷೆಗಿಂತ ಪರೋಕ್ಷವಾಗಿ ಹರಡಿದ ಸುದ್ದಿಯೇ ನೈಜದಂತೆ ಜನರಲ್ಲಿ ಅಚ್ಚೊತ್ತಿ ಬಿಟ್ಟಿತ್ತು.
 ರಜಾ ಮುಗಿಸಿ ನಮ್ಮ ಊರಿಗೆ ಬಂದಾಗ ಅದು ಇಲ್ಲೂ ಸುದ್ದಿ ಮಾಡುತ್ತಿತ್ತು,  ಅಂತಹ ಬೂತ ಚೌಡಿ ಕಂಡರೆ ಹೆದರದ ಡುಮಿಂಗಣ್ಣರ ಮಗ ಜಾನಣ್ಣ ನಿನ್ನೆ ಆಕಾಶದಲ್ಲಿ ಇಂತಹ ಘಟನೆ ನೋಡಿ ಚಳಿ ಜ್ವರದಿಂದ ಮಲಗಿದವರು ಎದ್ದಿಲ್ಲ ಅಂತ.
  ಇದು ಕೆಡುಗಾಲ ಬರುವ ಮುನ್ಸೂಚನೆ, ಕೆಲ ದಿನದಲ್ಲಿ ಪ್ರಳಯ ಆಗಲಿದೆ ಇಂತಹ ಅನೇಕ ಭಯಕ್ಕೆ ಕಾರಣ ಆಗಿತ್ತು ಇದು ಮಳೆಗಾಲದಲ್ಲಿ ಮರೆತು ಹೋದರೂ ಪ್ರತಿ ಬೇಸಿಗೆಯ ಕಾಲದಲ್ಲಿ ಪುನ: ಸುದ್ದಿ ಆಗುತ್ತಿತ್ತು, ಒಂದೆರೆಡು ವರ್ಷದ ನಂತರ ಮರೆತು ಹೋಯಿತು.
  ನಮ್ಮ ಊರಲ್ಲಿ ಹಿರಿಯ ಮಿತ್ರರಿದ್ದಾರೆ ಮೊನ್ನೆ ಅವರು ತಾವೂ ಇದನ್ನು ತನ್ನ ಕಣ್ಣಿಂದ ನೋಡಿದ್ದೆ ಅಂತಿದ್ದರು.
  ಇದು ಉತ್ತರ ಸಿಗದ ಜನರ ಭಯಹರಡುವ ಒ0ದು ಸುದ್ದಿ ಮಾತ್ರ ಆಗಿತ್ತು.
  ಆ ಕಾಲದಲ್ಲಿ ಅಂತರ್ಜಾಲದ ಉಪಗ್ರಹದ ಈ ಸರಣಿ ಬೆಳಕಿನ ಮೆರವಣಿಗೆ ನೋಡಿದ್ದರೆ ಏನೇನೆಲ್ಲ ಸುದ್ದಿ ಆಗುತ್ತಿತ್ತೋ !?.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...