Skip to main content

ಮೊದಲ ಸಿಂಥೆಟಿಕ್ ಸೋಪು ಮಾರುಕಟ್ಟೆಗೆ ಬಂದು 88 ವರ್ಷ ಆಯಿತು. ಅದಕ್ಕೂ ಮೊದಲು ಸವಳು ಗುಡ್ಡದ ಮಣ್ಣು ಸ್ನಾನಕ್ಕೆ ಬಳಸುತ್ತಿದ್ದರು.

#ಸೋಪಿನ_ಪುರಾಣ

#ಶಿವಮೊಗ್ಗ_ಸಮೀಪದ_ನ್ಯಾಮತಿ_ತೀರ್ಥರಾಮೇಶ್ವರ_ಗುಡ್ಡದ_ಸವಳು_ಶತಮಾನಗಳ_ಕಾಲ_ಈ_ಭಾಗದ_ಸೋಪು_ಆಗಿತ್ತು.

#ಸಾವಯವ_ಮಣ್ಣಿನ_ಸೋಪು

#197Oರ_ನಂತರ_ಹುಟ್ಟಿದವರಿಗೆ_ಗೊತ್ತೇ_ಇಲ್ಲದ_ಸೋಪಿನ_ಪ್ರಪಂಚ

#ಮೊದಲ_ಸಿಂಥೆಟಿಕ್_ಸೋಪು_1933ರಲ್ಲಿ_ಪ್ರಾರ೦ಭ.

#ಶಿಲಾಯುಗದಲ್ಲೂ_ಜನ_ಸ್ನಾನಕ್ಕೆ_ಬಳಸುತ್ತಿದ್ದ_ಕ್ಷಾರಯುಕ್ತ_ಮಣ್ಣು.

    ಈಗೆಲ್ಲ ಅಮೆಜಾನ್ ನಿಂದ ಡೆಡ್ ಸೀ (ಮೃತ ಸಮುದ್ರದ) ಮಣ್ಣಿನ ಸೋಪು ನಮ್ಮ ಹಳ್ಳಿಗಳಲ್ಲೂ ಖರೀದಿಸುತ್ತಿದ್ದಾರೆ ಕಾರಣ ಚಮ೯ ಕಾಂತಿ ಹೆಚ್ಚಿಸುತ್ತದೆ, ಮೃದು ಮಾಡುತ್ತದೆ, ಚರ್ಮದ ಟಾಕ್ಸಿನ್ ಕೊಳೆ ತೆಗೆಯುತ್ತದೆ, ಪೇಶಿಯಲ್ ವಾಷ್ ಮಾಡುವುದರಿಂದ ಮುಖದ ಚರ್ಮ ಹೈಡ್ರೇಟ್ ಮಾಡುತ್ತದೆ ಅಂತ.
  ಇದು ಸತ್ಯವೂ ಹೌದು 1933ರಲ್ಲಿ Procto and Gamble ಕಂಪನಿ ಸಿಂಥೆಟಿಕ್ ಸೋಪು ಮಾರುಕಟ್ಟೆಗೆ ತರುವ ಮುನ್ನ ಜನ ಆಯಾ ಪ್ರದೇಶದಲ್ಲಿ ಸಿಗುವ ಕ್ಷಾರದ ಮಣ್ಣು ಸೋಪಿನಂತೆ ಬಳಸುತ್ತಿದ್ದರು.
  ಇದರ ಬಳಕೆ ಕ್ರಿಸ್ತ ಪೂರ್ವ 2800 ರಲ್ಲಿ ಇದ್ದಿತ್ತು ಎಂಬ ಸಂಶೋದನೆಯಲ್ಲಿ ಗೊತ್ತಾಗಿದೆ ಅಂತೆ.
    ಶೀಗೆ ಪುಡಿ, ಅಂಟುವಾಳಗಳ ಬಳಕೆ ಕೂಡ ಈಗ ಕಡಿಮೆ
  ಒಂದು ಕಾಲದಲ್ಲಿ ಅಂದರೆ ಸುಮಾರು 1965ರ ತನಕ ನಮ್ಮ ಭಾಗದಲ್ಲಿ ಹತ್ತಾರು ಕತ್ತೆ ಮೇಲೆ ಎತ್ತಿನ ಗಾಡಿಗಳಲ್ಲಿ ಸವಳು ಮಣ್ಣಿನ ಮೂಟೆಗಳನ್ನ ತುಂಬಿಕೊಂಡು "ಸವಳು ಬೇಕಾ ಸವಳು" ಅಂತ ಸೋಪಿನ ಮಣ್ಣು ಮಾರಾಟಕ್ಕೆ ಬರುತ್ತಿದ್ದರೆಂದರೆ 50 ವಷ೯ದಲ್ಲಿ ಎಂತಹ ಬದಲಾವಣೆ ನೋಡಿ ಈಗ ಸೋಪು ಶಾಂಪುವಿನ ಕಾಲ.
  ಒಂದು ಸೇರು ಭತ್ತ ಅಥವ ರಾಗಿಗೆ 3 ಸೇರು ಸವಳು ನೀಡುತ್ತಿದ್ದರಂತೆ ಅದನ್ನ ಸೋರುವ ಮಣ್ಣಿನ ಮಡಕೆಗಳಲ್ಲಿ (ಉಪಯೋಗಕ್ಕೆ ಬರದ ಮಡಕೆ) ಶೇಖರಿಸಿ ಇಡುತ್ತಿದ್ದರು, ಇದನ್ನ ಸ್ನಾನಕ್ಕೆ ಬಟ್ಟೆ ತೊಳೆಯಲು ಉಪಯೋಗಿಸುತ್ತಿದ್ದರು ಇದರಲ್ಲಿ ನೊರೆ ಬರುತ್ತಿತ್ತು ಮತ್ತು ಮಣ್ಣಿನಲ್ಲಿನ ಸೂಕ್ಷ್ಮ ಮರಳು ಮನುಷ್ಯನ ಚಮ೯ದ ಮೇಲ್ಪದರದ ಕೊಳೆ ಬ್ರಷ್ನಂತೆ ತೆಗೆಯುತ್ತಿತ್ತು.
  ಹೊನ್ನಾಳಿ ನ್ಯಾಮತಿ ಮದ್ಯದ ಬೆಳಗುತ್ತಿಯ ತೀಥ೯ರಾಮೇಶ್ವರ ದೇವರ ಗುಡ್ಡ ಈ ಸವಳು (ಸೋಪಿನ ಮಣ್ಣಿನ) ಗಣಿ ಆಗಿತ್ತು.
  ಮಂಡ್ಯದಲ್ಲೂ, ಚಿಕ್ಕಮಗಳೂರಿನಲ್ಲೂ ಈ ರೀತಿಯ ಮಣ್ಣಿನ ಗುಡ್ಡದಿಂದ ಸವಳು ಮಣ್ಣು ಮಾರಾಟ ಬಳಕೆ ಇತ್ತಂತೆ.
  ನಂತರ ಕಸ್ತೂರಿ, 50I ಬಾರ್ ಸೋಪು, ನಂದಿ, ವಿನಾಯಕ ಹೀಗೆ ಮುಂದುವರಿದು ವಾಷಿOಗ್ ಮೆಷಿನ್ ಜಗತ್ತು  ಸೇರಿ ಸಪ್೯ ಅಕ್ಸೆಲ್ ವಾಷಿ೦ಗ್ ಪೌಡರ್ ವರೆಗೆ ಬಂದಿದ್ದೇವೆ, ವಾಷಿಂಗ್ ಪೌಡರ್ ನಿಮಾ೯ ಸೇರಿ.
 ಅದೇ ರೀತಿ ಸ್ನಾನದ ಸೋಪುಗಳು ಲೈಪ್ ಬಾಯ್ ನಿಂದ ಮೈಸೂರು ಸ್ಯಾ೦ಡೆಲ್ ವರೆಗೆ ಬದಲಾಗಿದ್ದೇವೆ, ಹಮಾಮ್, ಲಕ್ಸ್ ಇವೆಲ್ಲವೂ ಇದೆ.
  ಈಗ 100% ಸಾವಯವ ಸೋಪು ಅಂತ ಜ್ವಾಲಮುಖಿ ಮಣ್ಣಿನ ಸೋಪು, ಡೆಡ್ ಸೀ ಮಡ್ ಸೋಪು ಅ೦ತೆಲ್ಲ ಶ್ರೀಮಂತ ವಗ೯ದಲ್ಲಿ ಪ್ರಚಲಿತವಾಗಿದೆ.
  ಕೇವಲ 50 ವಷ೯ದ ಹಿಂದೆ ಬಳಕೆಯಲ್ಲಿದ್ದ ನಮ್ಮ ಜಿಲ್ಲೆಯ ಸವಳು ಸೋಪಿನ ಮಣ್ಣು ಆದುನೀಕರಣದಲ್ಲಿ ಕಳೆದು ಹೋದರು ಈಗ ಅದು ದೂರದ ಜ್ವಾಲಾಮುಖಿ ಮಣ್ಣಿನ ಅಥವ ಡೆಡ್ ಸೀ ಮಣ್ಣಿನ ಸೋಪಿನ ರೂಪದಲ್ಲಿ ದುಬಾರಿ ಬೆಲೆಯಲ್ಲಿ ಪ್ರತ್ಯಕ್ಷ ಆಗಿದೆ.
  ಕಾಲ ಚಕ್ರ ಸದಾ ತಿರುಗುತ್ತಿದೆ ನೋಡಿ.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...