Skip to main content

ಪಶ್ಚಿಮ ಘಟ್ಟದ ಮಲೆನಾಡಿನ ಪ್ರಖ್ಯಾತ ಅಕ್ಕಿ ಉಂಡೆ ಕಡಬು

#ಮಲೆನಾಡಿನ_ಚಿರಪರಿಚಿತ_ಉಂಡೆಕಡುಬು 

#ಸಸ್ಯಹಾರ_ಮಾಂಸಹಾರಕ್ಕೂ_ಬಳಕೆ.

#ಪಶ್ಚಿಮಘಟ್ಟದ_ಶಿವಮೊಗ್ಗ_ಚಿಕ್ಕಮಗಳೂರು_ಕೊಡುಗಿನಲ್ಲಿ_ಮಾತ್ರ_ಹೆಚ್ಚು.

   ಉಂಡೆ ಕಡಬು ಪಶ್ಚಿಮ ಘಟ್ಟದಲ್ಲಿನ ಮಲೆನಾಡಿನ ಕೆಲ ಪ್ರದೇಶದಲ್ಲಿ ಈ ಪರಿ ಖ್ಯಾತಿ (ಕುಖ್ಯಾತಿ) ಪಡೆಯಲು ಕಾರಣ ಏನಿರಬಹುದು?
  ತಾವು ಬೆಳೆಯುವ ಅಕ್ಕಿ ಕಾರಣವಾ? ಇಡ್ಲಿ, ದೊಸೆ ಮತ್ತು ರೊಟ್ಟಿಯಷ್ಟು ಶ್ರಮ ಇಲ್ಲವ೦ತನಾ? ಚಟ್ನಿ, ಸಾರು, ಮೀನು ಮತ್ತು ಮಾಂಸದ ಅಡುಗೆಗೆ ಒಳ್ಳೆ ಕಾಂಬಿನೇಷನ್ ಅಂತಾನಾ? ಹೀಗೆ ಹಲವು ಪ್ರಶ್ನೆಗಳಿದೆ.
   ಇತ್ತೀಚಿನ #ಮಲ್ನಾಡು_ಕಾರ್ಟೂನ್ ನಲ್ಲಿ "ಅಮ್ಮಾ ... ಇವತ್ತೇನೆ ?" ಅನ್ನೋ ಉಂಡೆ ಕಡಬು ಪ್ರಸಂಗ ಬಾರೀ ವೈರಲ್ಲೂ ಆಗಿತ್ತು.
  ಈಶಾನ್ಯ ಭಾರತ, ಗುಜರಾತ್ ಮತ್ತು ಪಂಜಾಬ್ ಅಡುಗೆಯಲ್ಲಿ ಅಕ್ಕಿಯ ಬೇರೆ ರೀತಿ ಕಡಬು ಇದೆ ಆದರೆ ನಮ್ಮ ಪಶ್ಚಿಮ ಘಟ್ಟ ಪ್ರದೇಶದ ಮಲೆನಾಡಿನ ಶಿವಮೊಗ್ಗ - ಚಿಕ್ಕ ಮಗಳೂರು - ಕೊಡಗು ಭಾಗದ ಈ ಉಂಡೆ ಕಡಬು ಕಾಣಬರುವುದಿಲ್ಲ ಹಾಗಾಗಿ ಇದು ಈ ಭಾಗದ exclusive ತಿಂಡಿಯೇ ಸರಿ.
   ಮಲೆನಾಡಿನ ಕೃಷಿಕರ ಮನೆಯಲ್ಲಿ ನಿತ್ಯ ಉಪಹಾರ ಅಕ್ಕಿ ಉಂಡೆ ಕಡಬು ಇದಕ್ಕೆ ನಂಜಿಕೊಳ್ಳುವ ವ್ಯಂಜನ ಮಾತ್ರ ಬದಲಾಗುತ್ತದಾರಿಂದ ಈ ಭಾಗದ ಮಕ್ಕಳು ಉಂಡೆ ಕಡಬು ಅಂದರೆ ಉರಿದು ಬೀಳುತ್ತಾರೆ, ಅಕ್ಕಿ ತುರಿ ಉಪ್ಪಿನೊಂದಿಗೆ ಬೇಯಿಸಿ ಉಂಡೆ ಕಟ್ಟಿ ಇಡ್ಲಿ ಪಾತ್ರೆಯಲ್ಲಿಟ್ಟರೆ ಆಯಿತು ಅದಾಗೆ ಬೆಂದು ಉಂಡೆ ಕಡಬು ಆಗುವ ಸುಲಭ ಅಡಿಗೆಗೆ ಗೃಹಿಣಿಯರು ಅವಲಂಬಿಸಿರುವುದರಿಂದ ಬೇರೆ ಉಪಹಾರ ತಯಾರಿಸುವ ಶ್ರಮ ಅವರಿಗೆ ಇಷ್ಟ ಇರುವುದಿಲ್ಲ.
  ಮಡಿಕೆರೆ, ಚಿಕ್ಕಮಗಳೂರು ಭಾಗದ ಹೊಂ ಸ್ಟೇ ಗೆ ಬರುವ ಪ್ರವಾಸಿಗಳಿಂದ ಈ ಮಲೆನಾಡ ಕ್ಯೂಸಿನ್ ಉಂಡೆ ಕಡಬು ಪಂದಿ ಕರಿ, ಉಂಡೆ ಕಡಬು ಚಿಕನ್, ಉಂಡೆ ಕಡಬು ಕಳಲೆ ಪಲ್ಯಕ್ಕೆ ಹೆಚ್ಚು ಬೇಡಿಕೆ ಉಂಟಂತೆ.
  ಇದೊಂದು ರೀತಿ ಬ್ರೆಡ್ ರೀತಿ ಎಲ್ಲಾ ರೀತಿ ಆಹಾರಕ್ಕೂ ಹೊಂದುತ್ತದೆ.
  ಇವತ್ತು ನಮ್ಮ ಮನೇನಲ್ಲಿ "ಎಂತ ತಿಂಡೀನೆ" ಅಂದಾಗ ಉಂಡೆ ಕಡಬು ಅನ್ನೋ ಉತ್ತರ ಕೇಳಿ ಬಂದಾಗ ಇದೆಲ್ಲ ನೆನಪಾಯಿತು.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...