Skip to main content

ದೇಶಿ ಹೈ ಮಾಸ್ಟ್ ದೀಪ ಅಳವಡಿಸಿರುವ ಯಡೇಹಳ್ಳಿ ಗ್ರಾಮ ಪಂಚಾಯತಿಯ ಪ್ರಯೋಗಶೀಲತೆ ಎಲ್ಲಾ ಗ್ರಾಮ ಪಂಚಾಯಿತಿಗಳು ಅಳವಡಿಸಿ ಕೊಳ್ಳಬಹುದು.

#ಎಲ್ಲಾ_ಗ್ರಾಮ_ಪಂಚಾಯತಿಗಳು_ಗಮನಿಸಲಿ

#ಸ್ವದೇಶಿ_ಹೈಮಾಸ್ಟ್

#ಸ್ಥಳಿಯ_ಗ್ರಾಮಪಂಚಾಯತ್_ಯೋಚಿಸಬೇಕಾಗಿದೆ.

#ನಮ್ಮೂರ_ನಾಲ್ಕು_ರಸ್ತೆ_ಸೇರುವ_ಸ್ಥಳದಲ್ಲಿ_ಅಳವಡಿಕೆ.

#ಸ್ಥಳಿಯ_ಗ್ರಾಮಪಂಚಾಯತನ_ಉತ್ತಮ_ಕಾರ್ಯ.

#ಈ_ಅಂಬೇಡ್ಕರ್_ವೃತ್ತ_ನಿರ್ಮಾಣ_1997ರಲ್ಲಿ

#ಆಗ_ಅಧ್ಯಕ್ಷರಾಗಿದ್ದ_ಗಣಪತಿ_ಈಗ_ಪುನಃ_ಅಧ್ಯಕ್ಷರು

   ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಆನಂದಪುರಂ ಹೋಬಳಿ ಕೇಂದ್ರ ಆನಂದಪುರಂಗೆ ಶಿವಮೊಗ್ಗ - ತೀರ್ಥಹಳ್ಳಿ - ಹೊಸನಗರ ಮತ್ತು ಶಿಕಾರಿಪುರದಿಂದ ಸಂಪರ್ಕ ರಸ್ತೆಗಳಿದೆ.
  ಶಿವಮೊಗ್ಗ - ಹೊನ್ನಾವರ ಈಗ ರಾಷ್ಟ್ರೀಯ ಹೆದ್ದಾರಿ 206 ಆಗಿದೆ. 
 ಇದೇ ರೀತಿ ಹಾವೇರಿ ಬೈಂದೂರು ರಾಷ್ಟ್ರೀಯ ಹೆದ್ದಾರಿ ಆಗಿ ಶಿಕಾರಿಪುರ ಹೊಸನಗರ ಸಂಪರ್ಕದ ರಾ.ಹೆ. ಆನಂದಪುರಂನಲ್ಲಿ ಹಾದು ಹೋಗಿರುವ ಶಿವಮೊಗ್ಗ ಹೊನ್ನಾವರ ರಾ.ಹೆ.ಗೆ ಆನಂದಪುರಂ ಸಮೀಪದ ಯಡೇಹಳ್ಳಿ ವೃತ್ತದಲ್ಲಿ ಸೇರುತ್ತದೆ ಅಷ್ಟೆ ಅಲ್ಲ ಈ ನಾಲ್ಕು ರಸ್ತೆ ಮದ್ಯ ತೀರ್ಥಹಳ್ಳಿಯಿಂದ ಬರುವ ರಾಜ್ಯ ಹೆದ್ದಾರಿಯು ಸೇರುತ್ತದೆ.
  10- ಡಿಸೆಂಬರ್ -1997ರಲ್ಲಿ  ನಮ್ಮ ಯಡೇಹಳ್ಳಿಯ ವೃತ್ತ ನಿರ್ಮಿಸಿ ಕನ್ನಡ ದ್ವಜ ಸ್ಥಂಭದಲ್ಲಿ ನಿರಂತರ ಕನ್ನಡ ದ್ವಜ ಹಾರುವಂತೆ ಮಾಡಿ, ಈ ವೃತ್ತಕ್ಕೆ ಸಂವಿದಾನ ಶಿಲ್ಪಿ ಡಾ.ಅಂಬೇಡ್ಕರ್ ವೃತ್ತ ಎಂದು ನಾಮಕರಣ ಮಾಡಲು ಮುಖ್ಯಸ್ಥರಾಗಿದ್ದವರು ಆಗಿನ ಗ್ರಾಮ ಪಂಚಾಯತನ ಅಧ್ಯಕ್ಷರಾಗಿದ್ದವರು ಕುಂಬಾರ ಸಮಾಜದ ಶ್ರಮಜೀವಿ #ಇರುವಕ್ಕಿಗಣಪತಿ.
  ಆನಂದಪುರಂ ನ ಕನ್ನಡ ಸಂಘದ ಸಹಕಾರದಿಂದ ನಿರಂತರ ಕನ್ನಡ ದ್ವಜಾರೋಹಣ ಖ್ಯಾತ ಪತ್ರಕರ್ತರಾದ #ಶೃಂಗೇಶರಿಂದ ನೆರವೇರಿಸಲಾಗಿತ್ತು.
  ಅಂಬೇಡ್ಕರ್ ವೃತ್ತ ಉದ್ಘಾಟನೆ ಆಗಿನ ಮಲೆನಾಡು ಅಭಿವೃದ್ದಿ ಮಂಡಳಿ ಅಧ್ಯಕ್ಷರಾಗಿದ್ದ ತೀರ್ಥಹಳ್ಳಿ ಮೂಲದವರಾದ (ಕುವೆಂಪು ಸಂಬಂದಿಗಳು) #ಶ್ರೀಮತಿ_ಸ್ವರ್ಣ_ಪ್ರಭಾಕರ್ ನೆರವೇರಿಸಿದ್ದರು.
  ಆಗ ನಾನು ಸ್ಥಳಿಯ ಜಿಲ್ಲಾ ಪಂಚಾಯತನ ಸದಸ್ಯ, ಯಡೇಹಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿದ್ದ ಗಣಪತಿ
 ವಿದ್ಯಾವಂತರಲ್ಲ ಆದರೆ ಅತ್ಯುತ್ತಮ ಆಡಳಿತ ಮಾಡಿದ ಕೀರ್ತಿ ಪಡೆದರು ಸುಮಾರು 25 ವರ್ಷದ ನಂತರ ಪುನಃ ಯಡೇಹಳ್ಳಿ ಗ್ರಾಮ ಪಂಚಾಯತನ ಅಧ್ಯಕ್ಷರಾಗಿದ್ದಾರೆ, ಇವರಿಗೆ #ಗೇರುಬೀಸಿನಶಿವಾನಂದ ಮತ್ತು #ಗೇರುಬೀಸಿನನಟರಾಜ ಎಂಬಿಬ್ಬರು ಉತ್ಸಾಹಿ ಯುವ ಸದಸ್ಯರು ಜೊತೆಯಾಗಿದ್ದಾರೆ.
  ಇವರೆಲ್ಲ ಸೇರಿ ಯಡೇಹಳ್ಳಿ ಅಂಬೇಡ್ಕರ್ ವೃತ್ತಕ್ಕೆ ಒಂದು ವಿಶೇಷ ಕಳೆ ಬರುವಂತ ಕೆಲಸ ಮಾಡಿದ್ದಾರೆ ಸ್ಥಳಿಯ ದೇಶಿ #ಹೈ_ಮಾಸ್ಟ್ ದೀಪ ಅಳವಡಿಸಿದ್ದಾರೆ ಇದನ್ನು ತಯಾರಿಸಿ ಅಳವಡಿಸಿದವರು ಆನಂದಪುರಂನ ಮಾರುತಿ ಇಂಡಸ್ಟ್ರೀಸ್ ಮಾಲಿಕ #ಪೂವಪ್ಪನವರು.
   ಸಾಮಾನ್ಯವಾಗಿ ಹೈ ಮಾಸ್ಟ್ ದೀಪ ಸಂಸದರ ಶಾಸಕರ ಅನುದಾನದಲ್ಲಿ ನಿರ್ಮಿಸುತ್ತಾರಾದರು ಅದರ ಬಾಳಿಕೆ ಕೆಲವೇ ವರ್ಷ ಆದರೆ ಈ ದೇಶಿ ಹೈ ಮಾಸ್ಟ್ ದೀಪ ಮುಂದಿನ 30 ವರ್ಷಕ್ಕೂ ಬಾಳಿಕೆಗೆ ಖಾತ್ರಿ ಇದೆ ಮತ್ತು ಬೆಲೆಯೂ ಕಡಿಮೆ.
  ಮುಂದಿನ ದಿನದಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಪ್ರಾರಂಭ ಮಾಡಿದರೆ ಇದನ್ನು ಬಿಚ್ಚಿ ಮತ್ತೆ ಬೇರೆ ಸೂಕ್ತ ಸ್ಥಳದಲ್ಲಿ ಅಳವಡಿಸ ಬಹುದಾಗಿದೆ.
  ಎಲ್ಲಾ ಗ್ರಾಮ ಪಂಚಾಯತ್ ಗಳು ಈ ನಿಟ್ಟಿನಲ್ಲಿ ತಮ್ಮ ತಮ್ಮ ಗ್ರಾಮಗಳಲ್ಲಿ ಸುಲಭವಾಗಿ ಕಡಿಮೆ ವೆಚ್ಚದಲ್ಲಿ ದೀರ್ಘ ಬಾಳಿಕೆಯ ಈ ಹೈ ಮಾಸ್ಟ್ ಬೀದಿ ದೀಪ ಅಳವಡಿಸಬಹುದಾಗಿದೆ.
   ಊರಿನ ಸೌಂದಯ೯ ಹೆಚ್ಚಿಸುವ,ಊರಿನ ರಕ್ಷಣೆಗಾಗಿ ಯಡೇಹಳ್ಳಿ ಗ್ರಾಮ ಪಂಚಾಯತನ ಆಡಳಿತ ಮಂಡಳಿ ಮತ್ತು ಸಿಬ್ಬಂದಿ ವರ್ಗಕ್ಕೆ ಅಭಿನಂದನೆ ಅರ್ಪಿಸುತ್ತೇನೆ.

Comments

Popular posts from this blog

Blog number 1782. ಅರಳಸುರಳಿಯ ರಾಘವೇಂದ್ರ ಕೇಕೋಡರ ಕುಟುಂಬದ ತಪ್ಪು ನಿರ್ದಾರದ ದುರಂತ.

#ತೀರ್ಥಹಳ್ಳಿಯ_ಅರಳಸುರಳಿಯ_ಒಂದೇ_ಕುಟುಂಬದ_ನಾಲ್ವರು_ಮೃತರಾದ_ರಹಸ್ಯವೇನು? #ಈ_ಬಗ್ಗೆ_ಆ_ಊರಿನ_ಸಮೀಪದ_ಈ_ಕುಟುಂಬದ_ಪರಿಚಯ_ಇರುವವರಿಗೆ_ವಿಚಾರಿಸಿದ್ದೆ. #ಅವರು_ಈ_ಘಟನೆ_ಬಗ್ಗೆ_ಸವಿಸ್ತಾರವಾಗಿ_ಲಿಖಿತ_ಲೇಖನ_ಬರೆದಿದ್ದಾರೆ. #ಅವರ_ವಿನಂತಿ_ಅವರ_ಹೆಸರು_ಬಹಿರಂಗಗೊಳಿಸ_ಬಾರದು. #ಆದ್ದರಿಂದ_ಈ_ಲೇಖನ_ಪೋಸ್ಟ್_ಮಾಡಬಾರದೆಂದಿದ್ದೆ_ಆದರೆ_ಇದು_ಮಲೆನಾಡಿಗರ_ಮನೆ_ಮನೆಯ_ಕಥೆ #ಆದ್ದರಿಂದ_ಇಲ್ಲಿ_ಪೋಸ್ಟ್_ಮಾಡಿದೆ.    ಇಲ್ಲಿ ತಪ್ಪು ಯಾರದ್ದೂ ಇಲ್ಲ... ಪಶ್ಚಾತ್ತಾಪದ ಪ್ರಾಯಶ್ಚಿತ ಕೇಳಲು ಅವರಾರು ಇಲ್ಲ .....ಆದರೆ ಈ ರೀತಿ ಜೀವ ತ್ಯಾಗ ಮಾಡುವ ಆತುರದ ಕೆಟ್ಟ ನಿರ್ದಾರ ಮಾತ್ರ ಸರಿ ಅಲ್ಲ.     ಇವರ ಅಣ್ಣ ಆರ್.ಎಸ್.ಎಸ್. ಪ್ರಚಾರಕರಾಗಿ ದೆಹಲಿಯಲ್ಲಿ ಏಳು ವಷ೯ ಮೋದಿ ಜೊತೆ ಒಂದೇ ಕೋಣೆ ಹಂಚಿಕೊಂಡವರು, ಇನ್ನೊಬ್ಬ ಸಹೋದರ ಮೂಳೆ ತಜ್ಞರಾಗಿ ಶಿವಮೊಗ್ಗದಲ್ಲಿ ಆಸ್ಪತ್ರೆ ಮಾಡಿಕೊಂಡಿದ್ದಾರೆ.   #ದೀರ್ಘವಾದರೂ_ಪೂರ್ಣ_ಲೇಖನ_ಓದಿ   #ಹೀಗೊಂದು_ಸುಕುಟುಂಬ_ಆತ್ಮಾಘಾತ_ಮತ್ತು_ತದನಂತರದ_ಸಹಾಗಮನ.... ಮೂಡಣದಲ್ಲಿ ರವಿ ಮೂಡಲು ಅಣಿ ಯಾಗುತ್ತಿಧ್ದ .. ಹಾದಿಗಣಪತಿ ದೇವರು ಗರ್ಭಗುಡಿಯ ನಂದಾದೀಪದ ಮಂದ ಬೆಳಕಿನಲ್ಲಿ ತನ್ನ ಗುಡಿಯ ಎದುರಿನ ತಗ್ಗಿನಲ್ಲಿದ್ದ  ರಾಘವೇಂದ್ರ ಕೇಕೋಡರ ಮನೆಯನ್ನು ಎವೆಯಕ್ಕದೇ ನೋಡುತ್ತಲಿದ್ದ... ಊರ ಎಲ್ಲಾ ಮನೆಯಂತೆ ಆ ಮನೆಯಲ್ಲೂ ಆ ಬೆಳಗಿನಲ್ಲಿ ಮನೆಯೊಡತಿ ನಾಗರತ್ನಕ್ಕ ಆ ಸಮಯದಲ್ಲಿ ದೇವರಿಗೆ ದೀಪ ಹಚ್ಚಿ ಹೊಸ್ತಿಲು ಪೂಜೆ ಮಾಡ

Blog number 1037. ರಾಜಕುಮಾರಿ ಶಾಂತವ್ವ ಮತ್ತು ದಲಿತ ಯುವಕ ಸಿದ್ದೇಶ್ವರರ ಅಮರ ಪ್ರೇಮದ ಸ್ಮಾರಕ, ಅನ್ಯ ಜಾತಿ ವಿವಾಹವಾದ್ದರಿಂದ ರಾಜಕುಮಾರಿಗೆ ಸೂಳೆ ಪಟ್ಟ ನೀಡಿದ ಸಮಾಜ. ಸಮಾಜದ ಒಳಿತಿಗಾಗಿ ಶಾಂತವ್ವ ಕಟ್ಟಿಸಿದ ಬೃಹತ್ ಕೆರೆಗೆ ಜನ ಕರೆದದ್ದು ಸೂಳೆ ಕಟ್ಟಿಸಿದ ಕೆರೆ ಅದೇ ಸೂಳೆಕೆರೆ / ಶಾಂತಿ ಸಾಗರ

# ಸೂಳೆಕೆರೆ (ಶಾಂತಿ ಸಾಗರ) ಅಂತರ್ ಜಾತಿ ಪ್ರೇಮ ವಿವಾಹದ ದುರOತ ಕಥೆ. #ಅಕ್ಟೋಬರ್ 2019 ರಲ್ಲಿ ತುಂಬಿ ತುಳುಕಿತ್ತು.  ಚಿತ್ರದುಗ೯, ದಾವಣಗೆರೆ ಬಳ್ಳಾರಿ ಮುಂತಾದ ಮಳೆ ಕಡಿಮೆ ಆಗುತ್ತಿದ್ದ ಜಿಲ್ಲೆಗಳಲ್ಲಿ ಅದೂ ಅಕ್ಟೋಬರ್ ತಿಂಗಳ 2019 ರಲ್ಲಿ  ಬಂದಿದ್ದ ಬಾರಿ ಮಳೆ ಎಲ್ಲಾ ಕೆರೆ, ಹೊಂಡಗಳು ತುಂಬಿ ತುಳುಕಿದೆ, ಸಾಮಾಜಿಕ ಜಾಲ ತಾಣದಲ್ಲಿ 40 ವಷ೯ದಲ್ಲಿ ಇಂತ ಮಳೆ ಬಂದಿಲ್ಲ ಅಂತ ಸುದ್ದಿ ಹರಿದಾಡುತ್ತಿತ್ತು ಮತ್ತು  ಸೂಳೆಕೆರೆ ತುಂಬಿ ಕೋಡಿ ಬಿದ್ದಿದೆ ಅಂತೆಲ್ಲ Post ನೋಡಿ ಬೆಂಗಳೂರಿಂದ ಬರುವಾಗ ಚಿತ್ರದುಗ೯ ಮಾಗ೯ವಾಗಿ ಚನ್ನಗಿರಿ ತಲುಪಿ ಸೂಳೆಕೆರೆ ನೋಡಲು ಹೋಗಿದ್ದೆ.  11ನೇ ಶತಮಾನದಲ್ಲಿ (1128ರಲ್ಲಿ)ಕೇವಲ 3 ವಷ೯ದಲ್ಲಿ ಈ ಕೆರೆ ನಿಮಾ೯ಣ ಮಾಡಿಸಿದ್ದು ಶಾಂತವ್ವ ಎಂಬ ರಾಜ ಕುಮಾರಿ ಅವಳು ಸ್ವಣ೯ವತಿ ಪಟ್ಟಣದ ದೊರೆ ವಿಕ್ರಮ ರಾಜನ ಮಗಳು, ಸಿದ್ದೇಶ್ವರ ಎಂಬ ಅನ್ಯ ಜಾತಿಯ ಯುವಕನೊ೦ದಿಗೆ ಗಾಂದವ೯ ವಿವಾಹ ಆಗುತ್ತಾಳೆ ಇದನ್ನ ಸಹಿಸದ ಮತ್ತು ಒಪ್ಪದ ಜನತೆ ಸೂಳೆ ಎಂದು ಮೂದಲಿಸುತ್ತಾರOತೆ ಈ ರೀತಿ ತನಗೆ ಬಂದ ಕಳಂಕ ಕಳೆಯಲು ಈ ಬೃಹತ್ ಕೆರೆ ತನ್ನ ಪತಿ ಸಿದ್ದೇಶ್ವರನ ಜೊತೆ ಸೇರಿ ನಿಮಿ೯ಸಿ ಕೆರೆಗೆ ಹಾರವಾದಳೆoಬ ಇತಿಹಾಸ ಇದೆ ಇದರಿಂದ ನೊಂದ ಪತಿ ಸಿದ್ಧೇಶ್ವರ ಕೂಡ ಎದುರಿನ ಗುಡ್ಡದಲ್ಲಿ ಜೀವ ತ್ಯಾಗ ಮಾಡುತ್ತಾನೆ ಈಗ ಅಲ್ಲಿ ಸಿದ್ದೇಶ್ವರ ದೇವಸ್ಥಾನವಿದೆ.   ಈ ಕೆರೆ ಈಗಲೂ ಸೂಳೆಕೆರೆ ಎಂದೆ ಹೆಸರಾಗಿದೆ ಈ

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್ಪಿಸಿಕೊಳ್ಳಬೇಕು ಅಂತ ಬಿದನೂರು ನಗರ ಸಮೀಪದ ದೇವಗಂಗೆ ಎಂಬ ಕೆಳದಿ