Skip to main content

ಈ ವಷ೯ ನಡೆಯಲಿರುವ ಕೆಳದಿ ಉತ್ಸವದಲ್ಲಿ ಸಾಗರ ಪಟ್ಟಣ - ಗಣಪತಿ ಕೆರೆ ನಿರ್ಮಿಸಿದ್ದ ಕೆಳದಿ ರಾಜ ಹಿರಿಯ ವೆಂಕಟಪ್ಪ ನಾಯಕರ ಸ್ಮರಿಸುವುದು ಮರೆಯದಿರಲಿ, ಇವರ ಸದಾ ಸ್ಮರಣೆಗಾಗಿ ಸಾಗರದ ಪ್ರಮುಖ ಹೆದ್ದಾರಿಗೆ ಇವರ ನಾಮಕರಣವಾಗಲಿ


#ಕೆಳದಿ_ಉತ್ಸವದಲ್ಲಿ_ಸಾಗರ_ಪಟ್ಟಣ_ಕೆರೆ_ನಿರ್ಮಿಸಿದ_ರಾಜ_ವೆಂಕಟಪ್ಪನಾಯಕರ_ಪುನರ್_ಸ್ಮರಣೆ_ಆಗಲಿ

#ಸಾಗರ_ಪಟ್ಟಣದ_ಹೆಸರು_ನಾಲ್ಕು_ಶತಮಾನದ_ಹಿಂದೆ_ಸದಾಶಿವಸಾಗರ

#ಈಗಿನ_ಗಣಪತಿಕೆರೆಯೆ_ಸದಾಶಿವಸಾಗರ_ಎಂಬ_ಸರೋವರ.

#ಸಾಗರ_ಪಟ್ಟಣ_ನಿರ್ಮಿಸಿದ_ರಾಜ_ಹಿರಿಯವೆಂಕಟಪ್ಪನಾಯಕರ_ಒಂದೂ_ಸ್ಮಾರಕ_ಸಾಗರದಲ್ಲಿ_ಇಲ್ಲ

#ಬಿದನೂರು_ನಗರ_ವಾಸಿ_ಸಂಶೋದಕ_ಲೇಖಕ_ಅಂಬ್ರಯ್ಯ_ಮಠ
#ಬರೆದ_ಕೆಳದಿ_ಕುಲತಿಲಕ_ಹಿರಿಯ_ವೆಂಕಟಪ್ಪ_ನಾಯಕ_ಐತಿಹಾಸಿಕ_ಕಾದಂಬರಿ_ಅತ್ಯಂತ_ಮಹತ್ವದ್ದು.

  ಈ ವರ್ಷ ಸಾಗರ ತಾಲ್ಲೂಕಿನಲ್ಲಿ #ಕೆಳದಿ_ಉತ್ಸವ ವಿಜೃಂಬಣೆಯಲ್ಲಿ ನಡೆಯಲಿದೆ ಇದಕ್ಕಾಗಿ ರಾಜ್ಯ ಸರ್ಕಾರದಿಂದ 50 ಲಕ್ಷ ಅನುದಾನ ದೊರೆಯುವುದಾಗಿ ಶಾಸಕರಾದ #ಹರತಾಳು_ಹಾಲಪ್ಪನವರು_ ಘೋಷಿಸಿದ್ದಾರೆ, ಈ ಸಂದರ್ಭದಲ್ಲಿ ಇಲ್ಲಿ ಉಲ್ಲೇಖಿಸಿರುವ ವಿಷಯಗಳನ್ನು ಸಂಬಂದ ಪಟ್ಟವರು ಗಣನೆಗೆ ತೆಗೆದುಕೊಂಡು ಕೆಳದಿ ಉತ್ಸವ ಅರ್ಥಪೂರ್ಣವಾಗಿ ಮಾಡಬಹುದಾಗಿದೆ.

 ಈಗ ಸಾಗರ ಎಂಬ ನಮ್ಮ ಶಿವಮೊಗ್ಗ ಜಿಲ್ಲೆಯ ತಾಲ್ಲೂಕು ಕೇಂದ್ರ ಸುಮಾರು ನಾಲ್ಕುನೂರು ವರ್ಷದ ಹಿಂದೆ ಕೆಳದಿ ರಾಜ ಹಿರಿಯ ವೆಂಕಟಪ್ಪ ನಾಯಕರು ತಮ್ಮ ಅಜ್ಜ ಸದಾಶಿವ ನಾಯಕರ (ಆಳಿದ ಕಾಲ ಮಾನ 1530 - 1566) ಸ್ಮರಣಾರ್ಥ ಅವರ ಹೆಸರಲ್ಲಿ ಅಂದರೆ #ಸದಾಶಿವಸಾಗರ ಎಂದು ನಾಮಕರಣ ಮಾಡಿ ನಿರ್ಮಿಸಿದ ಆ ಕಾಲದ ಸುಂದರ ಪಟ್ಟಣ ಆಗಿತ್ತು.
 ಇದೇ ಹೆಸರಿನ ಸುಂದರ ಸರೋವರ ಗಣಪತಿ ದೇವಸ್ಥಾನದ ಕೆಳಗೆ ನಿಮಿ೯ಸಿದ್ದರು ಕಾಲಾಂತರದಲ್ಲಿ ಈ ಸದಾಶಿವ ಸಾಗರ ಎಂಬ ಸರೋವರ ಗಣಪತಿ ಕೆರೆ ಎಂದಾಗಿದೆ.
 
   ಕೆಳದಿ ರಾಜರಲ್ಲಿ ಹಿರಿಯ ವೆಂಕಟಪ್ಪ ನಾಯಕರು ದೀಘ೯ ಕಾಲದ 43 ವಷ೯ಆಡಳಿತ ಮಾಡಿದವರು(ಆಳಿದ ಕಾಲ ಮಾನ 1586-1629). ಹೆಚ್ಚು ರಾಜ್ಯ ವಿಸ್ತಾರ ಮಾಡಿದ್ದಾರೆ, ಇವತ್ತಿನ ಸಾಗರ ಪಟ್ಟಣ (ಸದಾಶಿವ ಸಾಗರ) ಕಟ್ಟಿದವರು, ಆನಂದಪುರ ಎಂದು ನಾಮಕರಣ, ಆನಂದಪುರಂ ಚಂಪಕ ಸರಸ್ಸು ನಿಮಿ೯ಸಿದ ರಾಜ ಹಿರಿಯ ವೆಂಕಟಪ್ಪ ನಾಯಕರು ಕೆಳದಿ ಇತಿಹಾಸದಲ್ಲಿ ಅಗ್ರಶ್ರೇಯಾಂಕದಲ್ಲಿ ಇದ್ದರೂ ರಾಜ ವೆಂಕಟಪ್ಪ ನಾಯಕರ ಹೆಸರು ಚಿರಸ್ಥಾಯಿ ಏಕೆ ಆಗಲಿಲ್ಲ? ಎಂಬ ಬಗ್ಗೆ ಸಂಶೋದನೆ ಆಗಬೇಕಾಗಿದೆ.
 ಈಗಲೂ ಕೆಳದಿ ರಾಜ ಹಿರಿಯ ವೆಂಕಟಪ್ಪ ನಾಯಕರು ಕಟ್ಟಿದ ಸಾಗರ ಪಟ್ಟಣದಲ್ಲಿ ಅವರ ಹೆಸರಿನ ರಸ್ತೆ, ಉದ್ಯಾನವನ ಅಥವ ಅವರ ನೆನಪಿಸುವ ಪ್ರತಿಮೆಯೂ ಇಲ್ಲ.
 
   ಶಿವಮೊಗ್ಗ ಜಿಲ್ಲೆಯಲ್ಲಿ ಕೆಳದಿ ಅರಸರಾದ ರಾಜ ವೆಂಕಟಪ್ಪ ನಾಯಕರ ಬಗ್ಗೆ ಹೆಚ್ಚು ಮಾಹಿತಿ ಸಾವ೯ಜನಿಕರಿಗೆ ಬೇಕಾಗಿದೆ ಇಂತಹ ಒಂದು ಉಪಯುಕ್ತ ಕೆಲಸ ಮಾನ್ಯ ಅಂಬ್ರಯ್ಯ ಮಠ  #ಕೆಳದಿ_ಕುಲತಿಲಕ_ಹಿರಿಯ_ವೆಂಕಟಪ್ಪನಾಯಕ ಎಂಬ ಐತಿಹಾಸಿಕ ಕಾದಂಬರಿ ಮೂಲಕ ಮಾಡಿದ್ದಾರೆ
   ಈ ಪುಸ್ತಕ ವಿಶೇಷವಾಗಿ ಶಿವಮೊಗ್ಗ ಜಿಲ್ಲೆಯ ಜನ, ಕೆಳದಿ ಇತಿಹಾಸದ ಬಗ್ಗೆ ಆಸಕ್ತಿ ಇರುವವರು ಮತ್ತು ವಿಶೇಷವಾಗಿ ಸಾಗರ ಪಟ್ಟಣಿಗರು ಓದಲೇ ಬೇಕು.

    ಸಾಗರ ಪಟ್ಟಣ ಕಟ್ಟಿದ ರಾಜ ವೆಂಕಟಪ್ಪ ನಾಯಕರ ಹೆಸರು ಎಲ್ಲಿಯೂ ಸ್ಮಾರಕವಾಗಿ ಸಾಗರದಲ್ಲೇ ಇಲ್ಲ!! ಇದನ್ನು ನಾಲ್ಕು ಶತಮಾನದ ನಂತರ ವಾದರೂ ಸರಿ ಪಡಿಸಲು ಸಾಗರದ ಜನಪ್ರತಿನಿದಿಗಳು ಮುಂದಾಗಬೇಕು ಅವರಿಗೆ ಸಾಗರದ ಜನತೆ ಕೈ ಜೋಡಿಸಬೇಕು.
   ಮುಂದಿನ ದಿನದಲ್ಲಿ ಇತಿಹಾಸ ಸಂಶೋದಕರು, ಶಾಲಾ ಕಾಲೇಜುಗಳಲ್ಲಿ ವೆಂಕಟಪ್ಪ ನಾಯಕರ ಬಗ್ಗೆ ಹೆಚ್ಚಿನ ಮಾಹಿತಿ ನೀಡುವ ಕೆಲಸ ಆಗಬೇಕಾಗಿದೆ.
  ಇಟಲಿಯ ಪ್ರವಾಸಿ ಡಲ್ಲೊ ವಿಲ್ಲಾ ಇಕ್ಕೇರಿಯಲ್ಲಿ ವೆಂಕಟಪ್ಪ ನಾಯಕರ ಬೇಟಿ ಮಾಡಿದ ಬಗ್ಗೆ ಬರೆದ ದಾಖಲೆ ಈ ಪುಸ್ತಕದಲ್ಲಿದೆ, ರಾಣಿ ಅಬ್ಬಕ್ಕ, ಕಾಳು ಮೆಣಸಿನ ರಾಣಿ ಚೆನ್ನ ಬೈರಾದೇವಿ, ಬಿದನೂರಿನ ರಾಣಿ ಅಮ್ಮಿದೇವಮ್ಮ ವೆಂಕಟಪ್ಪ ನಾಯಕರಿಂದ ಸಹಾಯ ಕೇಳಿ ರಾಜ್ಯ ಕಳೆದುಕೊಂಡ ಕಥೆ ಅವರೇ ಪಾತ್ರಗಳಾಗಿ ಈ ಕಾದಂಬರಿಯಲ್ಲಿ ಅಂಬ್ರಯ್ಯ ಮಠರು ಸ್ವಾರಸ್ಯವಾಗಿ ಹೇಳಿಸಿದ್ದಾರೆ.
  ಅದೇ ರೀತಿ ಪಟ್ಟದ ರಾಣಿ ಭದ್ರಮ್ಮಾಜಿ, ಚಂಪಕಾ ಮತ್ತು ಶಿವಪ್ಪ ನಾಯಕರಿಂದಲೂ ಇತಿಹಾಸ ನಮಗೆ ಮನನ ಮಾಡುವಂತೆ ಬರೆದಿದ್ದಾರೆ.
    ಅನೇಕ ಬರಹ ಕಾದಂಬರಿಗಳನ್ನು ಬರೆದ ಅಂಬ್ರಯ್ಯ ಮಠರು ತಮ್ಮ ಸಂಶೋದನೆಗಾಗಿಯೇ ಕೆಳದಿ ರಾಜರ ಹಾಲಿ  ಪಳಯುಳಿಕೆ ಆಗಿರುವ ರಾಜದಾನಿ ಬಿದನೂರು ನಗರದಲ್ಲಿ ನೆಲೆಸಿದ್ದಾರೆ.
ಹೆಚ್ಚಿನ ಮಾಹಿತಿ ಮತ್ತು ಪುಸ್ತಕಕ್ಕಾಗಿ  94812 54412 ಅಂಬ್ರಯ್ಯ ಮಠರ ವಾಟ್ಸ್ ಪ್ ನಂಬರ್ ಗೆ ಸಂಪಕಿ೯ಸಬಹುದು@

Comments

Popular posts from this blog

Blog number 1782. ಅರಳಸುರಳಿಯ ರಾಘವೇಂದ್ರ ಕೇಕೋಡರ ಕುಟುಂಬದ ತಪ್ಪು ನಿರ್ದಾರದ ದುರಂತ.

#ತೀರ್ಥಹಳ್ಳಿಯ_ಅರಳಸುರಳಿಯ_ಒಂದೇ_ಕುಟುಂಬದ_ನಾಲ್ವರು_ಮೃತರಾದ_ರಹಸ್ಯವೇನು? #ಈ_ಬಗ್ಗೆ_ಆ_ಊರಿನ_ಸಮೀಪದ_ಈ_ಕುಟುಂಬದ_ಪರಿಚಯ_ಇರುವವರಿಗೆ_ವಿಚಾರಿಸಿದ್ದೆ. #ಅವರು_ಈ_ಘಟನೆ_ಬಗ್ಗೆ_ಸವಿಸ್ತಾರವಾಗಿ_ಲಿಖಿತ_ಲೇಖನ_ಬರೆದಿದ್ದಾರೆ. #ಅವರ_ವಿನಂತಿ_ಅವರ_ಹೆಸರು_ಬಹಿರಂಗಗೊಳಿಸ_ಬಾರದು. #ಆದ್ದರಿಂದ_ಈ_ಲೇಖನ_ಪೋಸ್ಟ್_ಮಾಡಬಾರದೆಂದಿದ್ದೆ_ಆದರೆ_ಇದು_ಮಲೆನಾಡಿಗರ_ಮನೆ_ಮನೆಯ_ಕಥೆ #ಆದ್ದರಿಂದ_ಇಲ್ಲಿ_ಪೋಸ್ಟ್_ಮಾಡಿದೆ.    ಇಲ್ಲಿ ತಪ್ಪು ಯಾರದ್ದೂ ಇಲ್ಲ... ಪಶ್ಚಾತ್ತಾಪದ ಪ್ರಾಯಶ್ಚಿತ ಕೇಳಲು ಅವರಾರು ಇಲ್ಲ .....ಆದರೆ ಈ ರೀತಿ ಜೀವ ತ್ಯಾಗ ಮಾಡುವ ಆತುರದ ಕೆಟ್ಟ ನಿರ್ದಾರ ಮಾತ್ರ ಸರಿ ಅಲ್ಲ.     ಇವರ ಅಣ್ಣ ಆರ್.ಎಸ್.ಎಸ್. ಪ್ರಚಾರಕರಾಗಿ ದೆಹಲಿಯಲ್ಲಿ ಏಳು ವಷ೯ ಮೋದಿ ಜೊತೆ ಒಂದೇ ಕೋಣೆ ಹಂಚಿಕೊಂಡವರು, ಇನ್ನೊಬ್ಬ ಸಹೋದರ ಮೂಳೆ ತಜ್ಞರಾಗಿ ಶಿವಮೊಗ್ಗದಲ್ಲಿ ಆಸ್ಪತ್ರೆ ಮಾಡಿಕೊಂಡಿದ್ದಾರೆ.   #ದೀರ್ಘವಾದರೂ_ಪೂರ್ಣ_ಲೇಖನ_ಓದಿ   #ಹೀಗೊಂದು_ಸುಕುಟುಂಬ_ಆತ್ಮಾಘಾತ_ಮತ್ತು_ತದನಂತರದ_ಸಹಾಗಮನ.... ಮೂಡಣದಲ್ಲಿ ರವಿ ಮೂಡಲು ಅಣಿ ಯಾಗುತ್ತಿಧ್ದ .. ಹಾದಿಗಣಪತಿ ದೇವರು ಗರ್ಭಗುಡಿಯ ನಂದಾದೀಪದ ಮಂದ ಬೆಳಕಿನಲ್ಲಿ ತನ್ನ ಗುಡಿಯ ಎದುರಿನ ತಗ್ಗಿನಲ್ಲಿದ್ದ  ರಾಘವೇಂದ್ರ ಕೇಕೋಡರ ಮನೆಯನ್ನು ಎವೆಯಕ್ಕದೇ ನೋಡುತ್ತಲಿದ್ದ... ಊರ ಎಲ್ಲಾ ಮನೆಯಂತೆ ಆ ಮನೆಯಲ್ಲೂ ಆ ಬೆಳಗಿನಲ್ಲಿ ಮನೆಯೊಡತಿ ನಾಗರತ್ನಕ್ಕ ಆ ಸಮಯದಲ್ಲಿ ದೇವರಿಗೆ ದೀಪ ಹಚ್ಚಿ ಹೊಸ್ತಿಲು ಪೂಜೆ ಮಾಡ

Blog number 1037. ರಾಜಕುಮಾರಿ ಶಾಂತವ್ವ ಮತ್ತು ದಲಿತ ಯುವಕ ಸಿದ್ದೇಶ್ವರರ ಅಮರ ಪ್ರೇಮದ ಸ್ಮಾರಕ, ಅನ್ಯ ಜಾತಿ ವಿವಾಹವಾದ್ದರಿಂದ ರಾಜಕುಮಾರಿಗೆ ಸೂಳೆ ಪಟ್ಟ ನೀಡಿದ ಸಮಾಜ. ಸಮಾಜದ ಒಳಿತಿಗಾಗಿ ಶಾಂತವ್ವ ಕಟ್ಟಿಸಿದ ಬೃಹತ್ ಕೆರೆಗೆ ಜನ ಕರೆದದ್ದು ಸೂಳೆ ಕಟ್ಟಿಸಿದ ಕೆರೆ ಅದೇ ಸೂಳೆಕೆರೆ / ಶಾಂತಿ ಸಾಗರ

# ಸೂಳೆಕೆರೆ (ಶಾಂತಿ ಸಾಗರ) ಅಂತರ್ ಜಾತಿ ಪ್ರೇಮ ವಿವಾಹದ ದುರOತ ಕಥೆ. #ಅಕ್ಟೋಬರ್ 2019 ರಲ್ಲಿ ತುಂಬಿ ತುಳುಕಿತ್ತು.  ಚಿತ್ರದುಗ೯, ದಾವಣಗೆರೆ ಬಳ್ಳಾರಿ ಮುಂತಾದ ಮಳೆ ಕಡಿಮೆ ಆಗುತ್ತಿದ್ದ ಜಿಲ್ಲೆಗಳಲ್ಲಿ ಅದೂ ಅಕ್ಟೋಬರ್ ತಿಂಗಳ 2019 ರಲ್ಲಿ  ಬಂದಿದ್ದ ಬಾರಿ ಮಳೆ ಎಲ್ಲಾ ಕೆರೆ, ಹೊಂಡಗಳು ತುಂಬಿ ತುಳುಕಿದೆ, ಸಾಮಾಜಿಕ ಜಾಲ ತಾಣದಲ್ಲಿ 40 ವಷ೯ದಲ್ಲಿ ಇಂತ ಮಳೆ ಬಂದಿಲ್ಲ ಅಂತ ಸುದ್ದಿ ಹರಿದಾಡುತ್ತಿತ್ತು ಮತ್ತು  ಸೂಳೆಕೆರೆ ತುಂಬಿ ಕೋಡಿ ಬಿದ್ದಿದೆ ಅಂತೆಲ್ಲ Post ನೋಡಿ ಬೆಂಗಳೂರಿಂದ ಬರುವಾಗ ಚಿತ್ರದುಗ೯ ಮಾಗ೯ವಾಗಿ ಚನ್ನಗಿರಿ ತಲುಪಿ ಸೂಳೆಕೆರೆ ನೋಡಲು ಹೋಗಿದ್ದೆ.  11ನೇ ಶತಮಾನದಲ್ಲಿ (1128ರಲ್ಲಿ)ಕೇವಲ 3 ವಷ೯ದಲ್ಲಿ ಈ ಕೆರೆ ನಿಮಾ೯ಣ ಮಾಡಿಸಿದ್ದು ಶಾಂತವ್ವ ಎಂಬ ರಾಜ ಕುಮಾರಿ ಅವಳು ಸ್ವಣ೯ವತಿ ಪಟ್ಟಣದ ದೊರೆ ವಿಕ್ರಮ ರಾಜನ ಮಗಳು, ಸಿದ್ದೇಶ್ವರ ಎಂಬ ಅನ್ಯ ಜಾತಿಯ ಯುವಕನೊ೦ದಿಗೆ ಗಾಂದವ೯ ವಿವಾಹ ಆಗುತ್ತಾಳೆ ಇದನ್ನ ಸಹಿಸದ ಮತ್ತು ಒಪ್ಪದ ಜನತೆ ಸೂಳೆ ಎಂದು ಮೂದಲಿಸುತ್ತಾರOತೆ ಈ ರೀತಿ ತನಗೆ ಬಂದ ಕಳಂಕ ಕಳೆಯಲು ಈ ಬೃಹತ್ ಕೆರೆ ತನ್ನ ಪತಿ ಸಿದ್ದೇಶ್ವರನ ಜೊತೆ ಸೇರಿ ನಿಮಿ೯ಸಿ ಕೆರೆಗೆ ಹಾರವಾದಳೆoಬ ಇತಿಹಾಸ ಇದೆ ಇದರಿಂದ ನೊಂದ ಪತಿ ಸಿದ್ಧೇಶ್ವರ ಕೂಡ ಎದುರಿನ ಗುಡ್ಡದಲ್ಲಿ ಜೀವ ತ್ಯಾಗ ಮಾಡುತ್ತಾನೆ ಈಗ ಅಲ್ಲಿ ಸಿದ್ದೇಶ್ವರ ದೇವಸ್ಥಾನವಿದೆ.   ಈ ಕೆರೆ ಈಗಲೂ ಸೂಳೆಕೆರೆ ಎಂದೆ ಹೆಸರಾಗಿದೆ ಈ

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್ಪಿಸಿಕೊಳ್ಳಬೇಕು ಅಂತ ಬಿದನೂರು ನಗರ ಸಮೀಪದ ದೇವಗಂಗೆ ಎಂಬ ಕೆಳದಿ