Skip to main content

ಹೊಸನಗರದ ಮಾಜಿ ಶಾಸಕ ಸ್ವಾಮಿ ರಾವ್ ರಿಂದ ಸಾಗರ ರೈಲು ನಿಲ್ದಾಣಕ್ಕೆ ಡಾ.ರಾಮ ಮನೋಹರ ಲೋಹಿಯಾ ಹೆಸರು ನಾಮಕರಣಕ್ಕೆ ಅರ್ಜಿ ನೀಡಿ ಎರೆಡು ವರ್ಷ ಆಯಿತು.

#ಬಿಜೆಪಿ ಪಕ್ಷದ ಪ್ರಮುಖರಾದ ಹೊಸನಗರದ ಮಾಜಿ ಶಾಸಕರಾದ ಸ್ವಾಮಿ ರಾವ್ ರ ಮನವಿ ಸಂಸದರು ಪುರಸ್ಕರಿಸುತ್ತಾರಾ?
 ಬಿಜೆಪಿ ಗೆಲುವಿಗೆ ಶ್ರಮಿಸಿದ ಸ್ವಾಮಿ ರಾಯನ್ನ ಕಡೆಗಾಣಿಸಲಾಗಿದೆಯ?#
 
     ಈವರೆಗೆ ಸಾಗರದ ರೈಲು ನಿಲ್ದಾಣಕ್ಕೆ ಡಾ.ರಾಮಮನೋಹರ ಲೋಹಿಯಾ ಎಂದು ಪುನರ್ ನಾಮಕರಣಕ್ಕೆ ಹಲವರು ಒತ್ತಾಯಿಸುತ್ತಿದ್ದರು ನಿನ್ನೆ (8- ಜನವರಿ -2020) ಶಿವಮೊಗ್ಗ ಜಿಲ್ಲೆಯ ಪ್ರಮುಖ ಬಿಜೆಪಿ ಮುಖಂಡ ಹೊಸನಗರದ ಮಾಜಿ ಶಾಸಕರಾದ ಸ್ವಾಮಿ ರಾಯರು ಸಂಸದ ರಾಘವೇ೦ದ್ರರಿಗೆ ಲಿಖಿತ ಮನವಿ ನೀಡಿ ಆಶ್ಚಯ೯ ಉoಟು ಮಾಡಿದ್ದಾರೆ.
  ಕಾಗೋಡು ರೈತ ಹೋರಾಟ ಬೆಂಬಲಿಸಿ ಬಂದ ಖ್ಯಾತ ಸಮಾಜವಾದಿ ನಾಯಕ ಅವತ್ತಿನ ಸಂಸತ್ ನಲ್ಲಿ ಪ್ರದಾನಿ ನೆಹರೂರನ್ನು ಸೈದ್ದಾ೦ತಿಕವಾಗಿ ವಿರೋದಿಸುತ್ತಿದ್ದ ಡಾ.ರಾಮಮನೋಹರ ಲೋಹಿಯರನ್ನ ಸಾಗರದಲ್ಲಿನ ರೈಲು ನಿಲ್ದಾಣದಲ್ಲಿ ಬಂದಿಸಿದ್ದು ಜಾಗತಿಕ ಮಟ್ಟದ ಸುದ್ದಿ ಆಗಿತ್ತು ಅದರ ಪರಿಣಾಮವೇ ಮೊದಲ ಸಾವ೯ಜನಿಕ ವಿಧಾನ ಸಭಾ ಚುನಾವಣೆಯಲ್ಲಿ ಗೆದ್ದು ಬಂದವರು ಸಮಾಜವಾದಿ ಪಕ್ಷದ ಶಾಂತವೇರಿ ಗೋಪಾಲಗೌಡರು ಮುಂದೆ ಅವರ ಶಿಷ್ಯರಾದ ಸ್ವಾಮಿ ರಾವ್, ಕಾಗೋಡು, ಬಂಗಾರಪ್ಪ, ಪಟೇಲರು ರಾಜಕಾರಣದಲ್ಲಿ ಯಶಸ್ವಿಯಾಗಿದ್ದು ಇತಿಹಾಸ ಹಾಗಾಗಿ ಸಾಗರ ಜOಬಗಾರು ಎಂಬ ಸಾಗರ ರೈಲು ನಿಲ್ದಾಣದ ಹಳೆ ಹೆಸರು ಬದಲಿಸಿ ರಾಮ ಮನೋಹರ್ ಲೋಹಿಯ ರೈಲು ನಿಲ್ದಾಣ ಎಂದು ಮರುನಾಮಕರಣಕ್ಕೆ ಒತ್ತಾಯ.
  ಆಗಿನ ಉಪ ಪ್ರದಾನಿ ಅಡ್ವಾನಿ, ರಕ್ಷಣಾ ಮಂತ್ರಿ ಜಾಜ್೯ ಪನಾ೯೦ಡೀಸ್, ರೈಲ್ವೆ ಮಂತ್ರಿ ನಿತೀಶ್ ಕುಮಾರ್, ಆಹಾರ ಸಚಿವ ಶ್ರೀನಿವಾಸ್ ಪ್ರಸಾದ್, ರಾಜ್ಯಸಭಾ ಸದಸ್ಯ ಜವರೇ ಗೌಡ, ಮಾಜಿ ಪ್ರಧಾನಿ ದೇವೇಗೌಡ ಹೀಗೆ ಅನೇಕರು ಬೆಂಬಲಿಸಿದ್ದರು.
 ಈ ಬಗ್ಗೆ ಶಿವಮೊಗ್ಗದಿಂದ ಕಾಗೋಡು ಹೋರಾಟದ ನೇತಾರ ಗಣಪತಿಯಪ್ಪರ ನೇತೃತ್ವದಲ್ಲಿ ಸಾಹಿತಿ ಕೊಣ0ದೂರು ವೆಂಕಪ್ಪ ಗೌಡರು, ಮಾಜಿ ವಿದಾನ ಪರಿಷತ್ ಸದಸ್ಯರಾದ ಮಾದಪ್ಪರ ನಾಯಕತ್ವದಲ್ಲಿ ಅನೇಕ ಉತ್ಸಾಹಿ ಜನಪರ ಹೋರಾಟಗಾರರು ಅನೇಕ ಬಾರಿ ದೆಹಲಿ ಚಲೋ ಮಾಡಿದ್ದರು ಆದರೆ ಅಂತಿಮ ಹಂತದಲ್ಲಿ ರೈಲ್ವೆ ಇಲಾಖೆ ಘೋಷಣೆ ಮಾಡುವುದು ವಿಳOಬಗೊಳಿಸಿದೆ ಕಾರಣ ಸಮಾಜವಾದಿ ಲೋಹಿಯ ಹೆಸರು ಬೇಡ ಕೆಳದಿ ರಾಣಿ ಚೆನ್ನಮ್ಮ ಹೆಸರಿಡಿ ಎಂದು ಅಧಿಕಾರ ರೂಡ ಜನಪ್ರತಿನಿಧಿಗಳ ಹೊಸವರಸೆ ಪ್ರಾರ೦ಬಿಸಿದ್ದಾರೆ.
  ಇದರಿಂದ ಬೇಸತ್ತ ಹಳೆಯ ಸಮಾಜವಾದಿ, ಲೋಹಿಯರ ಶಿಷ್ಯ ನಿನ್ನೆ ಸಂಸದರಿಗೆ ಅಜಿ೯ ನೀಡಬೇಕಾಯಿತು.
  ಜಿಲ್ಲೆಯಲ್ಲಿ ಬಿಜೆಪಿಗೆ ಸೊರಬ / ಸಾಗರ / ತೀಥ೯ಹಳ್ಳಿಯಲ್ಲಿ ಸಂಪ್ರದಾಯಿಕ ಕಾಂಗ್ರೇಸ್ ಬೆಂಬಲಿತ ಈಡಿಗ ಸಮಾಜದ ಮತ ಸಿಗುವಂತೆ ಮಾಡಿರುವುದು ಸ್ವಾಮಿ ರಾವ್ ಶ್ರಮ ಆದರೆ ಅವರ ಶ್ರಮಕ್ಕೆ ಅವರಿಗೆ ಪಕ್ಷ ಸೂಕ್ತ ಸ್ಥಾನಮಾನ ಈವರೆಗೆ ನೀಡಿಲ್ಲ, ಅವರನ್ನ ವಿಧಾನ ಪರಿಷತ್ ಗೆ ಅಥವ ಯಾವುದಾದರೂ ನಿಗಮಕ್ಕೆ ಅಧ್ಯಕ್ಷರನ್ನಾಗಿಸ ಬಹುದಿತ್ತು.
  ಹಾಗಾಗಿ ಜಿಲ್ಲೆಯ ಕಾಂಗ್ರೇಸ್ ಮತ್ತು ಜೆಡಿಎಸ್ ಮುಖಂಡರು ಸ್ವಾಮಿರಾವ್ ಗೆ ಬಿಜೆಪಿ ಮೂಲೆಗುಂಪು ಮಾಡಿದೆ ಅಂತ ಹೇಳುತ್ತಿದೆ.
 ಏನೇ ಇರಲಿ ಸಂಸದರು ಇವರ ಮನವಿ ಪುರಸ್ಕರಿಸುತ್ತಾರಾ? ನಿರಾಕರಿಸುತ್ತಾರ? ಕಾದು ನೋಡೋಣ.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...