Skip to main content

ಗೃಹ ಮಂತ್ರಿ ಆರಗ ಜ್ಞಾನೇಂದ್ರರಿಗೆ ಅಭಿನಂದನೆ, ರಾಜ್ಯದ ಎಲ್ಲಾ ಪೋಲಿಸ್ ಠಾಣೆಗಳಲ್ಲಿ ROWDY ಲಿಸ್ಟ್ ಪುನರ್ ವಿಮಷಿ೯ಸಿ.

#ಮಲೆನಾಡಿನ_ಸಜ್ಜನ_ರಾಜಕಾರಣಿ_ಆರಗ_ಜ್ಞಾನೇಂದ್ರ.

#ರಾಜ್ಯದ_ಗೃಹ_ಮಂತ್ರಿ_ಆದದ್ದಕ್ಕೆ_ಅಭಿನಂದನೆಗಳು

   1995ರಲ್ಲಿ ನಾನು ಜಿಲ್ಲಾ ಪಂಚಾಯತ ನ ಮೊದಲ ಸಭೆಗೆ  ಆನಂದಪುರಂ ಜಿಲ್ಲಾ ಪಂಚಾಯತ್ ಸದಸ್ಯನಾಗಿ ಭಾಗವಹಿಸಿದಾಗ ಅವತ್ತಿನ ಸಭಯಲ್ಲಿ ಆಗಿನ ಉಪ ಮುಖ್ಯಮಂತ್ರಿ ಜೆ.ಹೆಚ್.ಪಟೇಲರು, ವಿರೋದ ಪಕ್ಷದ ನಾಯಕರಾಗಿದ್ದ ಯಡೂರಪ್ಪನವರು, ಮಂತ್ರಿಗಳಾಗಿದ್ದ ಬಸವಣ್ಯಪ್ಪರು, ಅಪ್ಪಾಜಿ ಗೌಡರು, ಅಯನೂರು ಮಂಜುನಾಥ,ಈಶ್ವರಪ್ಪನವರು, ಕುಮಾರ ಬಂಗಾರಪ್ಪ, ಕಾಗೋಡು ತಿಮ್ಮಪ್ಪ ಮತ್ತು ಆರಗ ಜ್ಞಾನೇಂದ್ರರಿದ್ದರು.
  ಆಗೆಲ್ಲ ಜಿಲ್ಲಾ ಪಂಚಾಯತ್ ಸಭೆ ಡಿಸಿಸಿ ಬ್ಯಾಂಕ್ ನ ಸಭಾಂಗಣದಲ್ಲಿ ನಡೆಯುತ್ತಿತ್ತು, ಜಿಲ್ಲಾ ಪಂಚಾಯತ್ ಗೆ ಸಭೆ ನಡೆಸುವಂತ ಸಭಾಂಗಣ ಇರಲಿಲ್ಲ.
   ಮೊದಲ ಸಭೆಯಲ್ಲಿ ನಾನು ಮಾತಾಡಿದ್ದಕ್ಕೆ ಪಟೇಲರು ಯಡೂರಪ್ಪನವರು ಬೆನ್ನುತಟ್ಟಿದ್ದರು ಮರುದಿನ ಪತ್ರಿಕೆಗಳಲ್ಲಿ ಜಿಲ್ಲಾ ಪಂಚಾಯತ್ ಮೊದಲ ಸಭೆಯಲ್ಲಿ ಮಿಂಚಿದವರೆಂಬ ಹೆಗ್ಗಳಿಕೆಯ ವರದಿಗಳು ನನಗೆ ರಾಜಕಾರಣದಲ್ಲಿ ಆತ್ಮವಿಶ್ವಾಸ ಹೆಚ್ಚಾಯಿಸಿತು.
  1995 ರಿಂದ 2000 ಇಸವಿವರೆಗೆ ಇವರೆಲ್ಲರ ಒಡನಾಟದಲ್ಲಿ ಹೆಚ್ಚು ಹತ್ತಿರ ಆದವರು ಆಯನೂರು ಮಂಜುನಾಥ್ ಮತ್ತು ಆರಗ ಜ್ಞಾನೆಂದ್ರ ,ಇಬ್ಬರದ್ದು ಸತತ ಹೋರಾಟದ ಜೀವನವೆ.
  ಜಿಲ್ಲಾ ಪಂಚಾಯತ್ ಸಭೆಗಳಲ್ಲಿ ಯಾವಾಗಲೂ ನನಗೆ ಇವರಿಬ್ಬರ ಆನೆ ಬಲದ ಬೆಂಬಲ ಇರುತ್ತಿತ್ತು.
  ಅನೇಕ ಜನಪರ ಹೋರಾಟದ ವಿಷಯ ಆರಗರಿಗೆ ತಿಳಿಸಿದಾಗ ಅವರು ವಿಧಾನಸಭಾದಲ್ಲಿ ಅದನ್ನು ಚರ್ಚಿಸುತ್ತಿದ್ದರು, ಆಗಿನ ಕರ್ನಾಟಕ ಪವರ್ ಕಾಪೋ೯ರೇಷನ್ ನಲ್ಲಿ ವರಾಹಿ ಮುಳುಗಡೆಯ ಕುಣುಬಿ ಜನಾಂಗದ ಕುಟುಂಬದ ಯುವಕನಿಗೆ ನನ್ನ ಒತ್ತಾಯದಿಂದ ಕೆಲಸ ಕೊಡಿಸಿದ್ದು ನಾನು ಮರೆಯಲಾರೆ.
   ಈಗ ರಾಜ್ಯದ ಗೃಹ ಸಚಿವರಾಗಿರುವ ಆರಗ ಜ್ಞಾನೇಂದ್ರರಿಗೆ ಅಭಿನಂದಿಸುತ್ತೇನೆ ಜೊತೆಗೆ ಅವರಿಂದ ಆಗ ಬಹುದಾದ ಅವರ ಇಲಾಖೆಯ ಒಂದೆರೆಡು ಕೆಲಸ ಮಾಡಿ ಎಂದು ಒತ್ತಾಯಿಸುತ್ತೇನೆ.
  ಮುಖ್ಯವಾಗಿ ಮಲೆನಾಡಿನ ಒಂಟಿ ಮನೆಗಳ ವಾಸಿಗಳ ರಕ್ಷಣೆಗಾಗಿ ಪ್ರತಿ ಗ್ರಾಮ ಪಂಚಾಯತ್ ಗಳಲ್ಲಿ ಪೋಲಿಸ್ ಸಹಯೋಗದೊಂದಿಗೆ ಜನಜಾಗೃತಿ, ಆತ್ಮ ರಕ್ಷಣೆ ಬಂದೂಕು ಲ್ಯೆಸೆನ್ಸ್ ಸರಳವಾಗಿ ಶೀಘ್ರವಾಗಿ ಸಿಗುವಂತೆ, ಸಿಸಿ ಕ್ಯಾಮೆರಾ ಅಳವಡಿಕೆ, ಪ್ರತಿ ಮನೆಗಳಲ್ಲು ನಾಯಿ ಸಾಕುವಂತೆ ಸಲಹೆಗಳನ್ನು ಪೋಲಿಸ್ ಇಲಾಖೆ ಮುಖಾಂತರ ಜಾಹೀರು ಮಾಡುವ ಕೆಲಸ ಆಗಬೇಕು.
  ಪ್ರತಿ ಗ್ರಾಮ/ಜನವಸತಿ ಕೇಂದ್ರದಿಂದ ಪೋಲಿಸರಿಗೆ ಗುಪ್ತ ಮಾಹಿತಿ ಪಡೆಯುವ ವ್ಯವಸ್ಥೆ ಆಗಬೇಕು.
  ದ್ವೇಷ ರಾಜಕಾರಣದಿಂದ 10 - 15 ವರ್ಷದಿಂದ ರವಡಿ ಲಿಸ್ಟ್ ನಲ್ಲಿ ಇರುವವರನ್ನು ಕೈ ಬಿಡಬೇಕು.
  ಈ ಮೇಲ್ಕಂಡ ವಿಚಾರ ಆರಗ ಜ್ಞಾನೇಂದ್ರರಿಗೆ ಗೊತ್ತಿಲ್ಲದದ್ದೇನಲ್ಲ ಆದರೂ ನೆನಪಿಸುತ್ತಿದ್ದೇನೆ ಪ್ರೀತಿಯಿಂದ.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

ಶರಾವತಿ ನದಿ ಉಗಮ ಸ್ಥಾನ ಅಂಬುತೀಥ೯.

ಇಡೀ ರಾಜ್ಯಕ್ಕೆ ವಿದ್ಯುತ್ ನೀಡುವ ಶರಾವತಿ ನದಿಯ ಉಗಮ ಸ್ಥಾನ ಅಂಬುತೀಥ೯, ಆರಗ ಸಮೀಪದ ತೀಥ೯ಳ್ಳಿ ತಾಲ್ಲೂಕಿನಲ್ಲಿದೆ( ಶಿವಮೊಗ್ಗ ಜಿಲ್ಲೆ)    ಅಂಬು ತೀಥ೯ದಲ್ಲಿ ಶ್ರೀ ರಾಮ ವನವಾಸದಲ್ಲಿದ್ದಾಗ ಸೀತಾ ಮಾತೆಗೆ ಪೂಜೆಗೆ ನೀರು ಸಿಗದಿದ್ದಾಗ ರಾಮ ತನ್ನ ಅಂಬಿನಿಂದ (ಬಿಲ್ಲಿನ ಬಾಣದಿಂದ) ನೆಲ ಸೀಳಿ ನೀರು ತಂದರೆ೦ದು ರಾಮಾಯಣದಲ್ಲಿ ಉಲ್ಲೇಖವಿದೆ, ಹಾಗಾಗಿ ಈ ಸ್ಥಳಕ್ಕೆ ಅಂಬುತೀಥ೯ ಎಂಬ ಹೆಸರು ಬ೦ತು ಎಂಬುದು ಸ್ಥಳ ಪುರಾಣ.    ಇಲ್ಲಿ ಸಣ್ಣ ತೊರೆಯಾಗಿ ಹುಟ್ಟುವ ನದಿ ಬಾಣದಿಂದ ಹುಟ್ಟಿದ್ದರಿಂದ ಶರಾವತಿ ಎ೦ಬ ಹೆಸರು ಪಡೆದು ಪೂವ೯ಕ್ಕೆ ಹರಿದು ನಂತರ ಪಶ್ಚಿಮ ಮುಖವಾಗಿ ತಿರುಗಿ ಹೊಸನಗರ ತಾಲ್ಲೂಕನ್ನ ದಾಟಿ ಸಾಗರ ತಾಲ್ಲೂಕಿನ ಜೋಗದಲ್ಲಿ ಜಲಪಾತವಾಗಿ ದಟ್ಟ ಕಾನನದ ಕಣಿವೆ ಮುಖಾಂತರ ಹರಿದು ಹೊನ್ನಾವರದಲ್ಲಿ ಅರಬ್ಬಿ ಸಮುದ್ರ ಸೇರುತ್ತದೆ.   ಈ ನದಿಗೆ ಮೊದಲಿಗೆ ಹೀರೇ ಬಾಸ್ಕರ ಎಂಬಲ್ಲಿ ನಂತರ ಲಿಂಗನಮಕ್ಕಿಯಲ್ಲಿ ಆಣೆಕಟ್ಟು ಕಟ್ಟಿ ರಾಜ್ಯಕ್ಕೆ ಜಲ ವಿದ್ಯುತ್ ನೀಡುತ್ತಿರುವುದರಿಂದ ಲಕ್ಷಾಂತರ ಎಕರೆ ಕಾಡು, ಜಮೀನು ಅನೇಕ ಊರು ಮುಳುಗಡೆ ಆಯಿತು ಸಾವಿರಾರು ಕುಟುಂಬಗಳು ಸಂತ್ರಸ್ಥರಾದದ್ದು ಇತಿಹಾಸ.    ಈ ನದಿ ಜೋಗದಲ್ಲಿ ದುಮುಕುವ ಜಲಪಾತ ವಿಶ್ವದ ಸುಂದರ ಜಲಪಾತದಲ್ಲಿ ಒಂದಾಗಿದೆ.    ಹಾಗಾಗಿ ಶರಾವತಿ ನದಿಯ ಉಗಮ ಸ್ಥಾನಕ್ಕೆ ಮಹತ್ವವಿದೆ, ಒಮ್ಮೆಯಾದರೂ ಈ ನದಿ ಮೂಲ ಸಂದಶಿ೯ಸಬೇಕು ಆದರೆ ಇಲ್ಲಿ ಶರಾವತಿ ವ...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...