Skip to main content

ಸುವರ್ಣ ಸ್ವಾತಂತ್ರ್ಯೋತ್ಸವದ ಅಂಗವಾಗಿ ಶಿವಮೊಗ್ಗ ಜಿಲ್ಲೆಗೆ ಬಂದ ನೂತನ ಪ್ರಾಥಮಿಕ ಶಾಲೆಯ ಸಿಂಹಪಾಲು ನನ್ನ ಆನಂದಪುರಂ ಕ್ಷೇತ್ರಕ್ಕೆ ಪಡೆದುಕೊಂಡ 25 ವರ್ಷದ ಹಿಂದಿನ ಸವಿ ನೆನಪು, ಕೆಲ ಶಾಲೆ ಮುಚ್ಚಿರುವ ಕಹಿ ನೆನಪು

#ಇವತ್ತಿನ_ದಿನಪತ್ರಿಕೆಯ_ವರದಿ_27ವಷ೯ದ_ಹಿಂದಿನ_ನೆನಪು_ತರಿಸಿತು.

#ಸ್ವಾತಂತ್ತ್ಯೋತ್ಸವದ_ಸುವರ್ಣಮಹೋತ್ಸವದ_ಪ್ರಾಥಮಿಕ_ಶಾಲೆ_ಬಾಗಿಲು_ಹಾಕಿದೆ.

  1997 ರಲ್ಲಿ ಭಾರತಕ್ಕೆ ಸ್ವಾತಂತ್ರ್ಯ ಬಂದು 50 ನೇ ಆಚರಣೆ ಆಗಿದ್ದರಿಂದ #ಸುವರ್ಣ_ಸ್ವಾತಂತ್ಯೋತ್ಸವದ ಸಡಗರವೇ ಆಗಿತ್ತು, ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ವಿಶೇಷ ಕಾಯ೯ಕ್ರಮಗಳು ಜಿಲ್ಲಾ ಆಡಳಿತ ಮತ್ತು ಜಿಲ್ಲಾ ಪಂಚಾಯತ್ ಗಳಿಗೂ ಪ್ರೇರಣೆ ನೀಡಿತ್ತು.
  ಆಗ ಉತ್ಸಾಹಿ ಜಿಲ್ಲಾ ಪಂಚಾಯತನ ಸದಸ್ಯರಾಗಿದ್ದ ನಾವೆಲ್ಲ ಸೇರಿ ಜಿಲ್ಲಾ ಪಂಚಾಯತ್ ನಲ್ಲಿ ರಾತ್ರಿ 12ಕ್ಕೆ ವಿಶೇಷ ಸಭೆ ಆಯೋಜಿಸಿದ್ದೆವು, ಈಸೂರಿನಿಂದ ಸ್ವಾತಂತ್ರ ಜ್ಯೋತಿಯನ್ನು ತಂದಿದ್ದೆವು.
  ಈ ಸಂದರ್ಭದಲ್ಲಿ ರಾಜ್ಯ ಸರ್ಕಾರದ ಶಿಕ್ಷಣ ಇಲಾಖೆ ಸುವರ್ಣ ಸ್ವಾತಂತ್ಯೋತ್ಸವದ ಸವಿ ನೆನಪಿಗಾಗಿ ಪ್ರಾಥಮಿಕ ಶಾಲಾ ಸೌಲಭ್ಯವಿಲ್ಲದ ಹಳ್ಳಿಗೆ ಹೊಸ ಶಾಲೆ ಮತ್ತು ಅದಕ್ಕೆ ಏಕ ಕೊಠಡಿ ಕಟ್ಟಡ ಮಂಜೂರು ಮಾಡಲು ಮುಂದಾಗಿತ್ತು.
  ಶಿವಮೊಗ್ಗ ಜಿಲ್ಲಾ ಪಂಚಾಯತ್ ನ ಅವತ್ತಿನ 27 ಸದಸ್ಯರ ಕ್ಷೇತ್ರಕ್ಕೆ ಒಂದರಂತೆ 27 ಹೊಸ ಶಾಲೆಗೆ ಪ್ರಸ್ತಾವನೆ ಕೇಳಿದ್ದರು.
  ಆದರೆ ಹಳ್ಳಿಗಳಲ್ಲಿ ಶಾಲೆಗೆ ಜಾಗ ಹೊಂದಿಸುವುದು, ಖಾಸಾಗಿ ಶಾಲಾ ಪೈಪೋಟಿಯಲ್ಲಿ ಸರ್ಕಾರಿ ಶಾಲೆಗೆ ಜನ ಆಸಕ್ತಿ ವಹಿಸುವುದಿಲ್ಲ ಎಂದು ಈ ಯೋಜನೆ ಟೇಕ್ ಆಫ್ ಆಗಲಿಲ್ಲ ಆದರೆ ನನ್ನ ಕ್ಷೇತ್ರದಲ್ಲಿ ಹೊಸ ಶಾಲೆ ಕಾರ್ಯಾರಂಭ ಮಾಡಿದ್ದ ಯಶಸ್ಸಿನಿಂದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಉಳಿದ ಶಾಲೆಗಳನ್ನು ನನ್ನ ಕ್ಷೇತ್ರಕ್ಕೆ ನೀಡಿದರು.
  ಇಡೀ ಜಿಲ್ಲಾ ಪಂಚಾಯತ್ ಕ್ಷೇತ್ರಗಳಲ್ಲಿ ಗ್ರಾಮಸ್ಥರ ಜೊತೆ ಪಾದಯಾತ್ರೆಗಳ ಮಾಡುತ್ತಾ ಆಯಾ ಭಾಗದ ಬೇಡಿಕೆ ತಲೆಯಲ್ಲೇ ದಾಖಲಾಗಿದ್ದರಿಂದ ನನ್ನ ಕ್ಷೇತ್ರದಲ್ಲಿನ 
 1. ಕೆಳಗಿನ ಘಂಟಿನಕೊಪ್ಪ
2. ಸೊರಗುಂದ.
3. ಮದ್ಲೇಸರ.
4. ಮೂಡಾ ಹಗಲು 
5. ಜೇಡಿಸರ.
6. ಕಲ್ಲೊಡ್ಡು (ಸಂಗಣ್ಣನ ಕೆರೆ ಹತ್ತಿರದ ಗುಡ್ಡದಲ್ಲಿನ ಊರು)
7. ಚೆನ್ನಕೊಪ್ಪ
ಇನ್ನು ಮೂರು ಕಡೆ ಊರ ಹೆಸರು ಮರೆತಿದ್ದೇನೆ ಹೊಸ ಶಾಲೆ ಪ್ರಾರಂಭ ಆಯಿತು.
  
  ನೂತನ ಶಾಲಾ ಕಟ್ಟಡ ಮಂಜೂರಾಗುವುದಕ್ಕೂ ಮತ್ತು ನೂತನ ಶಾಲೆ ಮಂಜೂರಾಗಲು ವ್ಯತ್ಯಾಸ ಇದೆ ಅದೇನೆಂದರೆ ಯಾವುದೇ ಅನುದಾನದಲ್ಲಿ ಶಾಲಾ ಕಟ್ಟಡ ನಿಮಿ೯ಸಬಹುದು ಆದರೆ ಹೊಸ ಶಾಲೆಗೆ ಶಿಕ್ಷಕರು, ಶಿಕ್ಷಕರ ವೇತನ, ಶಿಕ್ಷಣ ಪರಿಕರಣ ಇತ್ಯಾದಿಗಳು ಬಡ್ಜೆಟ್ ನಲ್ಲಿ ಮಂಜೂರಾಗಬೇಕು ಹಾಗೆ ಮಂಜೂರಾದರೇ ನಿರಂತರ ಶಾಲೆ ನಡೆಯುತ್ತದೆ ಆದ್ದರಿಂದ ನೂತನ ಶಾಲೆ ಪ್ರಾರಂಭ ಆಗಲು ತುಂಬಾ ಅಡೆತಡೆಗಳು ಆಡಳಿತದಲ್ಲಿ ಇರುತ್ತದೆ.
  23 ವರ್ಷದ ಹಿಂದಿನ ಹಳ್ಳಿಯ ಪೋಷಕರ ಶಾಲಾ ಬೇಡಿಕೆ ಈಗ ಶಾಲೆ ಬಾಗಿಲು ಹಾಕಲು ಕಾರಣ ನೋಡಿದರೆ ಖಾಸಾಗಿ ಶಾಲಾಗಳು ಇಂಗ್ಲೀಷ್ ಮೀಡಿಯಂ ವಿದ್ಯಾಬ್ಯಾಸ ಮಕ್ಕಳನ್ನು ಅವರ ಮನೆಯಿಂದಲೇ ಕರೆದೊಯ್ದು ವಾಪಾಸ್ ತಂದು ಬಿಡುವ ಶಾಲಾ ವಾಹನ ವ್ಯವಸ್ಥೆ, ಹಳ್ಳಿಗಳ ತಲಾ ಆದಾಯ ವಾಣಿಜ್ಯ ಕೃಷಿಗಳಿಂದ ಹೆಚ್ಚು ಆಗಿರುವುದು ಮತ್ತು ಸರ್ಕಾರಿ ಶಾಲೆ ಎಂಬ ಅಸಡ್ಡೆಯೂ ಸೇರಿದೆ.
  ಆನಂದಪುರಂ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಆಚಾಪುರ ಗ್ರಾಮಪಂಚಾಯತ್ ನ ಮೂಡಾಹಗಲು ಎ೦ಬ ಸಣ್ಣ ಗ್ರಾಮ ಹೊಸನಗರ ತಾಲ್ಲೂಕಿನ ಬಾರ್ಡರ್ ನಲ್ಲಿದೆ ಈ ಊರಿನ ದೊಡ್ಡ ಕೆರೆ ಈ ಹಳ್ಳಿಯನ್ನು ಎರೆಡು ಭಾಗ ಮಾಡಿದೆ ಬೇಸಿಗೆಯಲ್ಲಿ ಕೆರೆ ಬತ್ತಿದಾಗಲೇ ಇವರಿಗೆ ಸರಕು ಸಾಗಾಣಿಕೆಗೆ ಅವಕಾಶ ಆಗಿತ್ತು ಆದ್ದರಿಂದ ಕೆರೆ ದಂಡೆ ಅಗಲ ಮಾಡಿ ಕೆರೆ ಕೊಡಿಗೆ ಪೈಪ್ ಅಳವಡಿಸಿ ಎರೆಡೂ ಭಾಗಕ್ಕೆ ಸಂಪಕ೯ ಮಾಡಿಸಿದ್ದೆ ಕೆರೆ ಕೆಳಗಿನ ಭೂ ಮಾಲಿಕಕಾರ ಮೂಡಾ ಹಗಲು ನಾಗಪ್ಪ (ಸಂಗಣ್ಣನ ಕೆರೆ) ತಮ್ಮ ಖಾತೆ ಜಮೀನು ನಮ್ಮ ಮನವಿಗಾಗಿ ಬಿಟ್ಟುಕೊಟ್ಟಿದ್ದರು.
  ಈ ಹಳ್ಳಿಗೆ ಕುಡಿಯುವ ನೀರಿನ ಬಾವಿ, ವಿದ್ಯುತ್ ಸಂಪರ್ಕ, ರಸ್ತೆ ಜಲ್ಲಿ ಬಿಚಾವಣೆ ಮತ್ತು ಪ್ರಾಥಮಿಕ ಶಾಲೆ ಜಿಲ್ಲಾ ಪಂಚಾಯತ್ ನಿಂದ ಮಾಡುವಾಗ ಸ್ಥಳಿಯ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಸಜ್ಜನ ಸಣ್ಣ ವೀರಪ್ಪ, ಸದಸ್ಯರಾಗಿ ಶ್ರೀ ಮತಿ ಚೌಡಮ್ಮ ಕೃಷ್ಣಪ್ಪ, ಇಕ್ಬಾಲ್ ಬೇಗ್ ಮತ್ತಿತರು ಸದಾ ಬೆಂಬಲಿಕ್ಕಿದ್ದರು.
  ಇವತ್ತಿನ ಪತ್ರಿಕೆಯಲ್ಲಿ 15 ವರ್ಷದಿಂದ ಶಾಲೆ ಬಂದಾಗಿದೆ, ಕೆರೆ ದಂಡೆ ಕುಸಿದಿದೆ, ರಸ್ತೆ ಇತ್ಯಾದಿ ಇಲ್ಲದ ವರದಿ ನೋಡಿ ಬೇಸರ ಆಯಿತು ಮತ್ತು ಅವತ್ತಿನ ದಿನಗಳ ನೆನಪಾಯಿತು.

Comments

Popular posts from this blog

Blog number 1782. ಅರಳಸುರಳಿಯ ರಾಘವೇಂದ್ರ ಕೇಕೋಡರ ಕುಟುಂಬದ ತಪ್ಪು ನಿರ್ದಾರದ ದುರಂತ.

#ತೀರ್ಥಹಳ್ಳಿಯ_ಅರಳಸುರಳಿಯ_ಒಂದೇ_ಕುಟುಂಬದ_ನಾಲ್ವರು_ಮೃತರಾದ_ರಹಸ್ಯವೇನು? #ಈ_ಬಗ್ಗೆ_ಆ_ಊರಿನ_ಸಮೀಪದ_ಈ_ಕುಟುಂಬದ_ಪರಿಚಯ_ಇರುವವರಿಗೆ_ವಿಚಾರಿಸಿದ್ದೆ. #ಅವರು_ಈ_ಘಟನೆ_ಬಗ್ಗೆ_ಸವಿಸ್ತಾರವಾಗಿ_ಲಿಖಿತ_ಲೇಖನ_ಬರೆದಿದ್ದಾರೆ. #ಅವರ_ವಿನಂತಿ_ಅವರ_ಹೆಸರು_ಬಹಿರಂಗಗೊಳಿಸ_ಬಾರದು. #ಆದ್ದರಿಂದ_ಈ_ಲೇಖನ_ಪೋಸ್ಟ್_ಮಾಡಬಾರದೆಂದಿದ್ದೆ_ಆದರೆ_ಇದು_ಮಲೆನಾಡಿಗರ_ಮನೆ_ಮನೆಯ_ಕಥೆ #ಆದ್ದರಿಂದ_ಇಲ್ಲಿ_ಪೋಸ್ಟ್_ಮಾಡಿದೆ.    ಇಲ್ಲಿ ತಪ್ಪು ಯಾರದ್ದೂ ಇಲ್ಲ... ಪಶ್ಚಾತ್ತಾಪದ ಪ್ರಾಯಶ್ಚಿತ ಕೇಳಲು ಅವರಾರು ಇಲ್ಲ .....ಆದರೆ ಈ ರೀತಿ ಜೀವ ತ್ಯಾಗ ಮಾಡುವ ಆತುರದ ಕೆಟ್ಟ ನಿರ್ದಾರ ಮಾತ್ರ ಸರಿ ಅಲ್ಲ.     ಇವರ ಅಣ್ಣ ಆರ್.ಎಸ್.ಎಸ್. ಪ್ರಚಾರಕರಾಗಿ ದೆಹಲಿಯಲ್ಲಿ ಏಳು ವಷ೯ ಮೋದಿ ಜೊತೆ ಒಂದೇ ಕೋಣೆ ಹಂಚಿಕೊಂಡವರು, ಇನ್ನೊಬ್ಬ ಸಹೋದರ ಮೂಳೆ ತಜ್ಞರಾಗಿ ಶಿವಮೊಗ್ಗದಲ್ಲಿ ಆಸ್ಪತ್ರೆ ಮಾಡಿಕೊಂಡಿದ್ದಾರೆ.   #ದೀರ್ಘವಾದರೂ_ಪೂರ್ಣ_ಲೇಖನ_ಓದಿ   #ಹೀಗೊಂದು_ಸುಕುಟುಂಬ_ಆತ್ಮಾಘಾತ_ಮತ್ತು_ತದನಂತರದ_ಸಹಾಗಮನ.... ಮೂಡಣದಲ್ಲಿ ರವಿ ಮೂಡಲು ಅಣಿ ಯಾಗುತ್ತಿಧ್ದ .. ಹಾದಿಗಣಪತಿ ದೇವರು ಗರ್ಭಗುಡಿಯ ನಂದಾದೀಪದ ಮಂದ ಬೆಳಕಿನಲ್ಲಿ ತನ್ನ ಗುಡಿಯ ಎದುರಿನ ತಗ್ಗಿನಲ್ಲಿದ್ದ  ರಾಘವೇಂದ್ರ ಕೇಕೋಡರ ಮನೆಯನ್ನು ಎವೆಯಕ್ಕದೇ ನೋಡುತ್ತಲಿದ್ದ... ಊರ ಎಲ್ಲಾ ಮನೆಯಂತೆ ಆ ಮನೆಯಲ್ಲೂ ಆ ಬೆಳಗಿನಲ್ಲಿ ಮನೆಯೊಡತಿ ನಾಗರತ್ನಕ್ಕ ಆ ಸಮಯದಲ್ಲಿ ದೇವರಿಗೆ ದೀಪ ಹಚ್ಚಿ ಹೊಸ್ತಿಲು ಪೂಜೆ ಮಾಡ

Blog number 1037. ರಾಜಕುಮಾರಿ ಶಾಂತವ್ವ ಮತ್ತು ದಲಿತ ಯುವಕ ಸಿದ್ದೇಶ್ವರರ ಅಮರ ಪ್ರೇಮದ ಸ್ಮಾರಕ, ಅನ್ಯ ಜಾತಿ ವಿವಾಹವಾದ್ದರಿಂದ ರಾಜಕುಮಾರಿಗೆ ಸೂಳೆ ಪಟ್ಟ ನೀಡಿದ ಸಮಾಜ. ಸಮಾಜದ ಒಳಿತಿಗಾಗಿ ಶಾಂತವ್ವ ಕಟ್ಟಿಸಿದ ಬೃಹತ್ ಕೆರೆಗೆ ಜನ ಕರೆದದ್ದು ಸೂಳೆ ಕಟ್ಟಿಸಿದ ಕೆರೆ ಅದೇ ಸೂಳೆಕೆರೆ / ಶಾಂತಿ ಸಾಗರ

# ಸೂಳೆಕೆರೆ (ಶಾಂತಿ ಸಾಗರ) ಅಂತರ್ ಜಾತಿ ಪ್ರೇಮ ವಿವಾಹದ ದುರOತ ಕಥೆ. #ಅಕ್ಟೋಬರ್ 2019 ರಲ್ಲಿ ತುಂಬಿ ತುಳುಕಿತ್ತು.  ಚಿತ್ರದುಗ೯, ದಾವಣಗೆರೆ ಬಳ್ಳಾರಿ ಮುಂತಾದ ಮಳೆ ಕಡಿಮೆ ಆಗುತ್ತಿದ್ದ ಜಿಲ್ಲೆಗಳಲ್ಲಿ ಅದೂ ಅಕ್ಟೋಬರ್ ತಿಂಗಳ 2019 ರಲ್ಲಿ  ಬಂದಿದ್ದ ಬಾರಿ ಮಳೆ ಎಲ್ಲಾ ಕೆರೆ, ಹೊಂಡಗಳು ತುಂಬಿ ತುಳುಕಿದೆ, ಸಾಮಾಜಿಕ ಜಾಲ ತಾಣದಲ್ಲಿ 40 ವಷ೯ದಲ್ಲಿ ಇಂತ ಮಳೆ ಬಂದಿಲ್ಲ ಅಂತ ಸುದ್ದಿ ಹರಿದಾಡುತ್ತಿತ್ತು ಮತ್ತು  ಸೂಳೆಕೆರೆ ತುಂಬಿ ಕೋಡಿ ಬಿದ್ದಿದೆ ಅಂತೆಲ್ಲ Post ನೋಡಿ ಬೆಂಗಳೂರಿಂದ ಬರುವಾಗ ಚಿತ್ರದುಗ೯ ಮಾಗ೯ವಾಗಿ ಚನ್ನಗಿರಿ ತಲುಪಿ ಸೂಳೆಕೆರೆ ನೋಡಲು ಹೋಗಿದ್ದೆ.  11ನೇ ಶತಮಾನದಲ್ಲಿ (1128ರಲ್ಲಿ)ಕೇವಲ 3 ವಷ೯ದಲ್ಲಿ ಈ ಕೆರೆ ನಿಮಾ೯ಣ ಮಾಡಿಸಿದ್ದು ಶಾಂತವ್ವ ಎಂಬ ರಾಜ ಕುಮಾರಿ ಅವಳು ಸ್ವಣ೯ವತಿ ಪಟ್ಟಣದ ದೊರೆ ವಿಕ್ರಮ ರಾಜನ ಮಗಳು, ಸಿದ್ದೇಶ್ವರ ಎಂಬ ಅನ್ಯ ಜಾತಿಯ ಯುವಕನೊ೦ದಿಗೆ ಗಾಂದವ೯ ವಿವಾಹ ಆಗುತ್ತಾಳೆ ಇದನ್ನ ಸಹಿಸದ ಮತ್ತು ಒಪ್ಪದ ಜನತೆ ಸೂಳೆ ಎಂದು ಮೂದಲಿಸುತ್ತಾರOತೆ ಈ ರೀತಿ ತನಗೆ ಬಂದ ಕಳಂಕ ಕಳೆಯಲು ಈ ಬೃಹತ್ ಕೆರೆ ತನ್ನ ಪತಿ ಸಿದ್ದೇಶ್ವರನ ಜೊತೆ ಸೇರಿ ನಿಮಿ೯ಸಿ ಕೆರೆಗೆ ಹಾರವಾದಳೆoಬ ಇತಿಹಾಸ ಇದೆ ಇದರಿಂದ ನೊಂದ ಪತಿ ಸಿದ್ಧೇಶ್ವರ ಕೂಡ ಎದುರಿನ ಗುಡ್ಡದಲ್ಲಿ ಜೀವ ತ್ಯಾಗ ಮಾಡುತ್ತಾನೆ ಈಗ ಅಲ್ಲಿ ಸಿದ್ದೇಶ್ವರ ದೇವಸ್ಥಾನವಿದೆ.   ಈ ಕೆರೆ ಈಗಲೂ ಸೂಳೆಕೆರೆ ಎಂದೆ ಹೆಸರಾಗಿದೆ ಈ

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್ಪಿಸಿಕೊಳ್ಳಬೇಕು ಅಂತ ಬಿದನೂರು ನಗರ ಸಮೀಪದ ದೇವಗಂಗೆ ಎಂಬ ಕೆಳದಿ