Skip to main content

ಶೃಂಗೇಶರ ಹೋರಾಟ ಪ್ರಿಂಟರ್ಸ್ ಮತ್ತು ಜನಹೋರಾಟ ದಿನ ಪತ್ರಿಕೆಯ ನೂತನ ಕಛೇರಿ ಸ್ವಂತ ಕಟ್ಟಡದಲ್ಲಿ ನಾಳೆ (21- ಮಾರ್ಚ್ -2022) ಪ್ರಾರಂಭ ಆಗುವ ಶುಭ ಸಂದರ್ಭದಲ್ಲಿ ಶುಭ ಹಾರೈಸುತ್ತಿದ್ದೇನೆ.

#ಶೃಂಗೇಶರ_ಹೊಸ_ಕಛೇರಿ_ನಾಳೆ_ಪ್ರಾರಂಭ.

#20ವರ್ಷದ_ನಂತರ_ಸ್ವಂತ_ಕಟ್ಟಡದಲ್ಲಿ_ಪ್ರಿಂಟಿಂಗ್_ಮತ್ತು_ಜನಹೋರಾಟ_ದಿನಪತ್ರಿಕೆ

#ಹೊಸ_ಕಟ್ಟಡದ_ಪ್ರಾರೊಂಬೋತ್ಸವಕ್ಕೆ_ಶುಭಹಾರೈಕೆಗಳು

  ನಮ್ಮ ಸಂಸ್ಥೆಯ ಎಲ್ಲಾ ಪ್ರಿಂಟಿಂಗ್, ಬಿಲ್ ಬುಕ್, ರಶೀದಿ ಪುಸ್ತಕ, ವೋಚರ್ ಬುಕ್, ವಿಸಿಟಿಂಗ್ ಕಾರ್ಡು, ಲೆಟರ್ ಪ್ಯಾಡ್, ಟಾರೀಪ್ ಕಾರ್ಡ್, ಮೆನು ಕಾರ್ಡ್ ಹೀಗೆ ಉದ್ಯಮಕ್ಕೆ ಬೇಕಾಗುವ ಎಲ್ಲಾ ಪ್ರಿಂಟಿಂಗ್ ಅವಶ್ಯಕತೆಗಳನ್ನು ಪೂರೈಸುವವರು ಶಿವಮೊಗ್ಗದ #ಹೋರಾಟ_ಪ್ರಿಂಟರ್ಸ್ ಇದು ಶೃಂಗೇಶರದ್ದು ಈ ಸಂಸ್ಥೆ ಪ್ರಾರಂಬಿಸಿ ಎರೆಡು ದಶಕ ಆಗಿದೆ, ಇವರ ಗ್ರಾಹಕರಲ್ಲಿ ದೊಡ್ಡ ದೊಡ್ಡ ಉದ್ದಿಮೆದಾರರಿದ್ದಾರೆ ಕಾರಣ ಪ್ರಿಂಟಿಂಗ್ ಗುಣಮಟ್ಟದಲ್ಲಿ ಇವರು ಯಾವ ಕಾರಣಕ್ಕೂ ರಾಜಿ ಆಗದೆ ಗ್ರಾಹಕರ ಪರ ಇರುತ್ತಾರೆ.
  ಗ್ರಾಹಕರ ಬೇಡಿಕೆ ಮತ್ತು ಸಮಯ ಪಾಲನೆಗೆ ಒತ್ತು ನೀಡಿ ಸಮಯಕ್ಕೆ ಸರಿಯಾಗಿ ಸರಬರಾಜು ಮಾಡುವುದು, ಎರೆಡೆರುಡು ಸಾರಿ ಕರೆಕ್ಷನ್ ಮಾಡುವುದು ಮತ್ತು ಸರಿಯಾದ ಕ್ರಮ ಸಂಖ್ಯೆ ನಮೂದಿಸಿ ಅತ್ಯುತ್ತಮ ಪ್ಯಾಕಿಂಗ್ ನಲ್ಲಿ ನಮ್ಮ ಸ್ಥಳಕ್ಕೆ ಡೆಲೆವರಿ ನೀಡುವ ಇವರ ವ್ಯವಹಾರಿಕ ಶಿಸ್ತು ನನಗೆ ಮತ್ತು ನನ್ನಂತಹ ಉದ್ದಿಮೆದಾರರಿಗೆ ವ್ಯವಹಾರದಲ್ಲಿ ತುಂಬಾ ಅನುಕೂಲ.
  2012ರಿಂದ ನಮ್ಮ ಪ್ರಿಂಟಿಂಗ್ ಬೇಡಿಕೆ ವಾರ್ಷಿಕ ಸಾವಿರದಲ್ಲಿ ಪ್ರಾರಂಭವಾಗಿ ಈಗ ಲಕ್ಷಗಳಿಗೆ ಮುಟ್ಟಿದೆ, ನನ್ನ ಒಂದು ಕಾದಂಬರಿ #ಬೆಸ್ತರರಾಣಿ_ಚಂಪಕ ಮತ್ತು ಸಣ್ಣ ಕಥಾ ಸಂಕಲನ #ಬಿಲಾಲಿಬಿಲ್ಲಿ_ಅಭ್ಯಂಜನ ಇವರ ಸಂಸ್ಥೆಯಲ್ಲೇ ಮುದ್ರಣ ಆಗಿದೆ.
  ಇವರ ಸಂಪಾದಕತ್ವದ #ಜನಹೋರಾಟ ದಿನ ಪತ್ರಿಕೆ ನಿತ್ಯ ಬರುತ್ತಿದೆ.
  20 ವರ್ಷದ ಸ್ವಯಂ ಪರಿಶ್ರಮದಿಂದ ಈಗ ಸ್ವಂತ ಕಟ್ಟಡದಲ್ಲಿ ಮುದ್ರಣದ ಪತ್ರಿಕೆಯ ಕಾಯಾ೯ಲಯ ನಾಳೆ  ಉದ್ಘಾಟನೆ ಆಗಲಿದೆ, ಆಹ್ವಾನ ಪತ್ರಿಕೆ ಬಂದಿದೆ ನೂತನ ಕಾರ್ಯಾಲಯ ಉದ್ಘಾಟನಾ ಸಮಾರಂಭ ಯಶಸ್ವಿ ಆಗಲಿ ದೇವರು ಅವರಿಗೆ ಸರ್ವ ರೀತಿಯ ಯಶಸ್ಸು ನೀಡಲಿ ಎಂದು ಪ್ರಾರ್ಥಿಸುತ್ತೇನೆ.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

ಶರಾವತಿ ನದಿ ಉಗಮ ಸ್ಥಾನ ಅಂಬುತೀಥ೯.

ಇಡೀ ರಾಜ್ಯಕ್ಕೆ ವಿದ್ಯುತ್ ನೀಡುವ ಶರಾವತಿ ನದಿಯ ಉಗಮ ಸ್ಥಾನ ಅಂಬುತೀಥ೯, ಆರಗ ಸಮೀಪದ ತೀಥ೯ಳ್ಳಿ ತಾಲ್ಲೂಕಿನಲ್ಲಿದೆ( ಶಿವಮೊಗ್ಗ ಜಿಲ್ಲೆ)    ಅಂಬು ತೀಥ೯ದಲ್ಲಿ ಶ್ರೀ ರಾಮ ವನವಾಸದಲ್ಲಿದ್ದಾಗ ಸೀತಾ ಮಾತೆಗೆ ಪೂಜೆಗೆ ನೀರು ಸಿಗದಿದ್ದಾಗ ರಾಮ ತನ್ನ ಅಂಬಿನಿಂದ (ಬಿಲ್ಲಿನ ಬಾಣದಿಂದ) ನೆಲ ಸೀಳಿ ನೀರು ತಂದರೆ೦ದು ರಾಮಾಯಣದಲ್ಲಿ ಉಲ್ಲೇಖವಿದೆ, ಹಾಗಾಗಿ ಈ ಸ್ಥಳಕ್ಕೆ ಅಂಬುತೀಥ೯ ಎಂಬ ಹೆಸರು ಬ೦ತು ಎಂಬುದು ಸ್ಥಳ ಪುರಾಣ.    ಇಲ್ಲಿ ಸಣ್ಣ ತೊರೆಯಾಗಿ ಹುಟ್ಟುವ ನದಿ ಬಾಣದಿಂದ ಹುಟ್ಟಿದ್ದರಿಂದ ಶರಾವತಿ ಎ೦ಬ ಹೆಸರು ಪಡೆದು ಪೂವ೯ಕ್ಕೆ ಹರಿದು ನಂತರ ಪಶ್ಚಿಮ ಮುಖವಾಗಿ ತಿರುಗಿ ಹೊಸನಗರ ತಾಲ್ಲೂಕನ್ನ ದಾಟಿ ಸಾಗರ ತಾಲ್ಲೂಕಿನ ಜೋಗದಲ್ಲಿ ಜಲಪಾತವಾಗಿ ದಟ್ಟ ಕಾನನದ ಕಣಿವೆ ಮುಖಾಂತರ ಹರಿದು ಹೊನ್ನಾವರದಲ್ಲಿ ಅರಬ್ಬಿ ಸಮುದ್ರ ಸೇರುತ್ತದೆ.   ಈ ನದಿಗೆ ಮೊದಲಿಗೆ ಹೀರೇ ಬಾಸ್ಕರ ಎಂಬಲ್ಲಿ ನಂತರ ಲಿಂಗನಮಕ್ಕಿಯಲ್ಲಿ ಆಣೆಕಟ್ಟು ಕಟ್ಟಿ ರಾಜ್ಯಕ್ಕೆ ಜಲ ವಿದ್ಯುತ್ ನೀಡುತ್ತಿರುವುದರಿಂದ ಲಕ್ಷಾಂತರ ಎಕರೆ ಕಾಡು, ಜಮೀನು ಅನೇಕ ಊರು ಮುಳುಗಡೆ ಆಯಿತು ಸಾವಿರಾರು ಕುಟುಂಬಗಳು ಸಂತ್ರಸ್ಥರಾದದ್ದು ಇತಿಹಾಸ.    ಈ ನದಿ ಜೋಗದಲ್ಲಿ ದುಮುಕುವ ಜಲಪಾತ ವಿಶ್ವದ ಸುಂದರ ಜಲಪಾತದಲ್ಲಿ ಒಂದಾಗಿದೆ.    ಹಾಗಾಗಿ ಶರಾವತಿ ನದಿಯ ಉಗಮ ಸ್ಥಾನಕ್ಕೆ ಮಹತ್ವವಿದೆ, ಒಮ್ಮೆಯಾದರೂ ಈ ನದಿ ಮೂಲ ಸಂದಶಿ೯ಸಬೇಕು ಆದರೆ ಇಲ್ಲಿ ಶರಾವತಿ ವ...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...