Skip to main content

ನನ್ನ ಬಾಲ್ಯದ ಚೆಸ್ ಮಾಸ್ಟರ್ ಪೆಲಿಸಣ್ಣನಿಗೆ ಈಗ 70 ವರ್ಷ

#ನನಗೆ_ಚೆಸ್_ಕಲಿಸಿದ_ಗುರು_ಇವತ್ತು_ಸಿಕ್ಕರು.

#ಇವರ_ಹೆಸರು_ಪೆಲಿಕ್ಸ್_ಡಿಸೋಜ 

#ನಾವೆಲ್ಲ_ಪ್ರೀತಿಯಿಂದ_ಇವರನ್ನು_ಕರೆಯುವುದು_ಪೆಲಿಸಣ್ಣ_ಊರವರ_ಬಾಯಲ್ಲಿ_ಪೆಲಿಸ.

 ಇವರ ತಂದೆ ಪೇದ್ರಣ್ಣ ಕರಾವಳಿಯ ಬೈಂದೂರಿನಿಂದ ಪತ್ನಿ ಸಂತಾನ ಬಾಯಮ್ಮರ ಜೊತೆ ಸುಮಾರು1930ರ ಆಸುಪಾಸಿನಲ್ಲಿ ಆನಂದಪುರಂನಲ್ಲಿ ಸಿಗುತ್ತಿದ್ದ ಜಂಬಿಟ್ಟಿಗೆ ಕಲ್ಲು ಕೀಳಲು ಬಂದ ಕುಟುಂಬ.
  ಆಗ ಚರ್ಚ್ ಕೂಡ ಆಗಿರಲಿಲ್ಲ, ಕೊಂಕಣಿ ಬಾಷೆಯ ಕೆಲ ಕ್ರಿಶ್ಚಿಯನ್ ಕುಟುಂಬಗಳು ಹೀಗೆ ಇಲ್ಲಿಗೆ ವಲಸೆ ಬಂದು ನಿಂತರು.
  ಪೇದ್ರಣ್ಣ ಜಂಬಿಟ್ಟಿಗೆ ಕಡಿದು ಮಾರಾಟ ಮಾಡಿ ಜೀವನಕ್ಕೆ ಸಂಪಾದನೆ ಮಾಡಿದರೆ ಇವರ ಪತ್ನಿ ಸಂತಾನ ಬಾಯಮ್ಮ ಆನಂದಪುರಂನಲ್ಲಿ ಈಗಿನ ಪ್ರಭು ಡಾಕ್ಟರ್ ಶಾಪಿನ ಎದುರಿನ ದೋಸೆ ಕಾಮತ್ ಹೋಟೆಲ್ ಪಕ್ಕ, ಸಿರಿಲಣ್ಣರ ಸೈಕಲ್ ಶಾಪ್ ಎದರು ತರಕಾರಿಗಳನ್ನು ಬುಟ್ಟಿಯಲ್ಲಿಟ್ಟು ಮಾರಾಟ ಮಾಡಿ ಕೊಂಡಿದ್ದರು ಇದು ಆನಂದಪುರಂನ ಮೊದಲ ತರಕಾರಿ ಅಂಗಡಿ ಕೂಡ ಜೊತೆಯಲ್ಲಿ ಸುತ್ತಮುತ್ತಲ ಹಳ್ಳಿಗಳ  ರೈತ ಕುಟುಂಬಕ್ಕೆ ಕುಮಟಾದಿಂದ ಬುಧವಾರ ವೀಳ್ಯದ ಎಲೆ ತರಿಸಿ ವರ್ತನೆ ಎಲೆ ಮಾರಾಟ ಮಾಡುತ್ತಿದ್ದರು ಅಂದರೆ ವರ್ಷಪೂರ್ತಿ ವಾರಕ್ಕೆ ಒಂದೋ ಎರಡೋ ಕಟ್ಟು ವೀಳ್ಯದ ಎಲೆ ನಿರಂತರ ಪೂರೈಸಿ ಸುಗ್ಗಿಯಲ್ಲಿ ಈ ವೀಳ್ಯದ ಎಲೆಯ ಮೌಲ್ಯದ ಭತ್ತ ಪಡೆಯುವುದು ಆ ಕಾಲದ ಕ್ರಮ.
  ಪೇದ್ರಣ್ಣ ಮತ್ತು ಸಂತಾನ ಬಾಯಮ್ಮರಿಗೆ ನಾಲ್ಕು ಗಂಡು ಮಕ್ಕಳು. ಸವೇರ (ಸಲಾದರ್ ಡಿಸೋಜ) ಪಾರೇಸ್ಟ್ ರ್ ಆಗಿ ನಿವೃತ್ತರಾಗಿದ್ದಾರೆ, ಎರಡನೆಯವರೆ ಪೆಲಿಸ, ಮೂರನೆ ಡೆನ್ನಿಸಾ (ಡೇನಿಯಲ್ ಡಿಸೋಜ) ಪೋಲಿಸ್ ಇಲಾಖೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದಾರೆ,ನಾಲ್ಕನೆ ವಿಲ್ಲಾ (ವಿಲ್ಪ್ರೆಡ್) ಖಾಸಾಗಿ ಕೆಲಸ ಮಾಡಿಕೊಂಡಿದ್ದಾರೆ.
  ನಮ್ಮ ಬಾಲ್ಯದಲ್ಲಿ ಈ ಪೆಲಿಸ ಎಲ್ಲರನ್ನು ರಂಜಿಸುವ ಅತ್ಯಾಪ್ತ ಮತ್ತು ಇಡೀ ಊರಿಗೆ ಸಮಸ್ಯೆ ತರುತ್ತಿದ್ದ ಕಿಲಾಡಿ ಆ ಕಾಲದಲ್ಲಿ ಬಾಡಿಗೆ ಸೈಕಲ್ ನಲ್ಲಿ ಪಕ್ಕದ ತಾಲ್ಲೂಕಿನ ಬಟ್ಟೆಮಲ್ಲಪ್ಪ ಎಂಬ ಊರಲ್ಲಿ ಇಸ್ಪೀಟ್ ಆಡಲು ಹೋಗಿ ಹಣ ಕಳೆದು ಕೊಂಡು ಬಾಡಿಗೆ ಸೈಕಲ್ ಅಡಮಾನ ಮಾಡಿ ಕೆಲ ತಿಂಗಳು ನಾಪತ್ತೆ ಆದಾಗ ಈ ಸೈಕಲ್ ಪತ್ತೆ ಮಾಡಿ ತರುವಲ್ಲಿ ಎರೆಡೂ ಊರಿಗೇ ಜಗಳ ಹೊಡೆದಾಟ ಆಗಿತ್ತು.
 ದೂರದ ಎನ್.ಆರ್.ಪುರದ ಸುರೇಂದ್ರ ರೇ೦ಜರ್ ಇವರಿಗೆಲ್ಲ ಉದ್ಯೋಗ ಕೊಟ್ಟಿದ್ದರು ಅವರ ಆಪ್ತನಾಗಿ ಅವರಿಗೆ ಅಡಿಗೆ ಇತ್ಯಾದಿ ಮಾಡುತ್ತ ಪೆಲಿಸ ಆಪ್ತನಾಗಿದ್ದ.
  ಅವರಿಗೆ ಚೆಸ್ ಆಟದಲ್ಲಿ ಪೆಲಿಸನೇ ಒಳ್ಳೇ ಕಂಪನಿ ಏಕೆಂದರೆ ಚೆಸ್ ನಲ್ಲಿ ಪೆಲಿಸನಿಗೆ ಸೋಲಿಸಿದವರಿಲ್ಲ.
  1975-76 ರಲ್ಲಿ ನಮಗೆಲ್ಲ ಚೆಸ್ ಕಲಿಯುವ ಹುಮ್ಮಸ್ಸು ನಮ್ಮ ತಂದೆ ಶಿವಮೊಗ್ಗದಿಂದ ಚೆಸ್ ಬೋರ್ಡ್ ಮತ್ತು ಪಾನ್ ನಮಗಾಗಿ ಖರೀದಿಸಿ ಈ ಪೆಲಿಸನಿಗೆ ಚೆಸ್ ಕಲಿಸುವ ಗುರುವಾಗಿ ನೇಮಿಸಿದರು ಜೊತೆಗೆ ಅವರೂ ಕಲಿತರು ನಂತರ ಕೆಲ ವರ್ಷ ನಾವೆಲ್ಲ ಚೆಸ್ ಆಟಗಾರರಾಗಿ ಅನೇಕ ಹೊಸ ಚೆಸ್ ಬೋರ್ಡ್ ಖರೀದಿಸಿದರೂ ಈ ಚೆಸ್ ಗುರು ಪೆಲಿಸನನ್ನ ಸೋಲಿಸಲು ಪ್ರಯಾಸ ಪಡುತ್ತಿದ್ದೆವು.
  ರೇಂಜರ್ ಸುರೇಂದ್ರರರ ಜೊತೆ ಇದ್ದಿದ್ದರೆ ಅರಣ್ಯ ಇಲಾಖೆಯಲ್ಲಿ ಖಾಯಂ ಉದ್ಯೋಗಿ ಆಗುವ ಅವಕಾಶ ಬಿಟ್ಟು ಪೆಲಿಸ ಪಕ್ಕದ ಸಿದ್ಧಾಪುರದಲ್ಲಿ ಪ್ರೇಮ ಪ್ರಕರಣದಲ್ಲಿ ಸಿಲುಕಿ ವಿವಾಹ ಆಗಿ ಜೀವನಕ್ಕೆ ಗಾರೆ ಮೇಸ್ತ್ರಿ ಆದದ್ದು, ಕುಡಿತ ಜಾಸ್ತಿ ಮಾಡಿಕೊಂಡಿದ್ದು ನಮಗೆಲ್ಲ ಬೇಸರ ಆದರೂ ಪೆಲಿಸನ ಒಡನಾಟದಲ್ಲಿ ಹಾಸ್ಯಮಯವಾಗಿ ಪರಿವರ್ತನೆ ಆಗುತ್ತಿದ್ದ ಸನ್ನಿವೇಶದಿಂದ ನಮಗೆಲ್ಲ ಪೆಲಿಸ ಅತ್ಯಾಪ್ತ.
  ಅತ್ಯಂತ ರುಚಿಕಟ್ಟಾದ ಅಡುಗೆ ಪ್ರವೀಣ ಕೂಡ ಹೌದು, ನಮ್ಮ ತಾಯಿ ಬಾಲ್ಯದಲ್ಲೇ ತೀರಿಕೊಂಡಿದ್ದರಿಂದ ನಾವೇ ಅಡುಗೆ ಮಾಡಿಕೊಳ್ಳಬೇಕಾದ್ದರಿಂದ ಅನೇಕ ಅಡುಗೆ ಕಲೆ ಕೂಡ ಪೆಲಿಸನಿಂದ ಕಲಿತಿದ್ದೆ.
 ಏನೇ ಮಾಡಿದರೂ ಪೋಟೋ ತೆಗೆಯಲು ಸಿಗುತ್ತಿರಲಿಲ್ಲ ಇವತ್ತು ನಮ್ಮ ಚೆಸ್ ಮಾಸ್ಟರ್ ಸಿಕ್ಕಿದ್ದಾರೆ ನೋಡಿ.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...