Skip to main content

ಸಂತೋಷ್ ಸಸಿಹಿತ್ಲು ಮೂಲ ಕುಂದಾಪುರ ಅವರು ಈಗ ರಾಜ್ಯದ ರಾಜಧಾನಿ ಬೆಂಗಳೂರಲ್ಲಿ ನೆಲೆಸಿ ಪ್ರಸಿದ್ದ ಪತ್ರಿಕೆಗಳ ರೇಖಾ ಚಿತ್ರಗಾರರಾಗಿದ್ದಾರೆ, ಅವರು ಬರೆದ ನನ್ನ ಕಥಾ ಸಂಕಲನದ ಮುಖ ಪುಟ ತುಂಬಾ ಆಕಷ೯ಕ ಆಗಿದೆ ಎಂದು ಗೆಳೆಯರು ಮತ್ತು ಓದುಗರು ಪ್ರತಿಕ್ರಿಯಿಸುತ್ತಿದ್ದಾರೆ.

#ನನ್ನ_ಕಥಾ_ಸಂಕಲನದ_ಮುಖಪುಟ_ವಿನ್ಯಾಸ_ಮಾಡಿದವರು
#ಕುಂದಾಪುರದ_ಸಂತೋಷ್_ಸಸಿಹಿತ್ಲು.

#ಉದಯೋನ್ಮುಖ_ಕಲಾವಿದರು,

#ಈಗಾಗಲೇ_ಅನೇಕ_ರೇಖಾಚಿತ್ರಕಲಾವಿದರ_ಸಮಾವೇಶ_ಮಾಡಿದ್ದಾರೆ.

#ಖ್ಯಾತ_ಚಿತ್ರಕಾರ_ಪಂಜುಗಂಗೂಲಿ_ಕೂಡ_ಭಾಗವಹಿಸಿದ್ದರು.

   ನನ್ನ ಕಥಾ ಸಂಕಲನದಲ್ಲಿ 29 ಕಥೆಗಳಿದೆ, ಕಥಾ ಸಂಕಲನಕ್ಕೆ ಹೆಸರು ಏನು ಇಡುವುದು ಎಂಬುದು ಇನ್ನೂ ತೀರ್ಮಾನ ಆಗಿರಲಿಲ್ಲ ಇದೇ ಯೋಚನೆ ನನ್ನದು ಮತ್ತು ಮುದ್ರಕರಾದ #ಶೃಂಗೇಶ್ ರದ್ದು.
   ಕಥಾ ಸಂಕಲನಕ್ಕೆ ಮುನ್ನುಡಿ ಬರೆದ ಖ್ಯಾತ ಅಂಕಣಕಾರ #ಅರವಿಂದ_ಚೊಕ್ಕಾಡಿ "ಭಟ್ಟರ ಬೊಂಡಾ ಬಾಂಡ್ಲಿಯಲ್ಲಿ ಬಿಲಾಲಿ ಬಿಲ್ಲಿ ಅಭ್ಯoಜನ" ಇಷ್ಟ ಪಟ್ಟ ಕಥೆ ಅಂತ ಗೊತ್ತಾದ ನಂತರ ಕಥಾ ಸಂಕಲನಕ್ಕೆ ಅದೇ ಹೆಸರು ನಿಕ್ಕಿ ಆಯಿತು.
  ಮುಖ ಪುಟ ವಿನ್ಯಾಸ ಹೇಗಿರಬೇಕೆಂದು ಮುದ್ರಕರಿಗೆ ನನ್ನ ಭಾವನೆ ತಿಳಿಸಿದ್ದೆ ಅವರು ಸಂತೋಷ್ ಸಸಿಹಿತ್ಲು ಎಂಬ ಉದಯೋನ್ಮುಕ ಕಲಾವಿದರಿಗೆ ಇದರ ಜವಾಬ್ದಾರಿ ನೀಡಿದ್ದಾಗಿ ತಿಳಿಸಿದ್ದರು.
  ಮೊದಲ ಪ್ರೂಪ್ ನ್ನೆ ನಾನು ಅನುಮೋದಿಸಿದೆ ಏಕೆಂದರೆ ಈ ಮುಖ ಪುಟ ನಾನು ಬಯಸಿದ ಚಿತ್ರವನ್ನೆ ಯಥಾವತ್ತಾಗಿ ಚಿತ್ರ ಕಲಾವಿದರು ಬರೆದಿದ್ದರು ಈ ಕಥೆ ನಿಜ ಕಥೆ ಆದರೂ ಅದನ್ನು ಹಾಸ್ಯ ಶೈಲಿಯಾಗಿ ಬರೆದಿದ್ದರಿಂದ ಈ ವ್ಯಂಗ್ಯ ಚಿತ್ರದಂತ ಮುಖ ಪುಟ ಸೂಕ್ತವಾಗಿತ್ತು.
  ತಡವಾಗಿ ಮುಖಪುಟದ ಕಲಾವಿದರಾದ ಸಂತೋಷ್ ಸಸಿಹಿತ್ಲು ಇವರಿಗೆ ಕೃತಜ್ಞತೆ ಅರ್ಪಿಸುತ್ತಾ ಮುಂದಿನ ದಿನದಲ್ಲಿ ನಾಡಿನ ಪ್ರಖ್ಯಾತ ಕಲಾವಿದರಾಗಿ ಎಲ್ಲಾ ರೀತಿಯ ಯಶಸ್ಸು ಪಡೆಯಲಿ ಎಂದು ಹಾರೈಸುತ್ತೇನೆ.
 ಶಿವಮೊಗ್ಗದ ಡಯಾನ ಬುಕ್ ಹೌಸ್ ನಲ್ಲಿ ಸಾಗರದಲ್ಲಿ ಶ್ರೀ ಟ್ರೇಡರ್ಸ್ ಮತ್ತು ನಗರ ಸಭೆ ಎದುರಿನ ರವೀಂದ್ರ ಪುಸ್ತಕಾಲಯದಲ್ಲಿ ಪುಸ್ತಕ ಮಾರಾಟಕ್ಕೆ ಇದೆ.
 ಬೆಂಗಳೂರಲ್ಲಿ ನನ್ನ ಪುಸ್ತಕ ಇನ್ನೂ ಮಾರಾಟಕ್ಕೆ ಇಟ್ಟಿಲ್ಲ ಆಸಕ್ತರು ತಮ್ಮ ವಿಳಾಸ 9449253788 ಗೆ ವಾಟ್ಸಪ್ ಮಾಡಿದರೆ ಅಂಚೆಯಲ್ಲಿ ಕಳಿಸಲಾಗುವುದು.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

ಶರಾವತಿ ನದಿ ಉಗಮ ಸ್ಥಾನ ಅಂಬುತೀಥ೯.

ಇಡೀ ರಾಜ್ಯಕ್ಕೆ ವಿದ್ಯುತ್ ನೀಡುವ ಶರಾವತಿ ನದಿಯ ಉಗಮ ಸ್ಥಾನ ಅಂಬುತೀಥ೯, ಆರಗ ಸಮೀಪದ ತೀಥ೯ಳ್ಳಿ ತಾಲ್ಲೂಕಿನಲ್ಲಿದೆ( ಶಿವಮೊಗ್ಗ ಜಿಲ್ಲೆ)    ಅಂಬು ತೀಥ೯ದಲ್ಲಿ ಶ್ರೀ ರಾಮ ವನವಾಸದಲ್ಲಿದ್ದಾಗ ಸೀತಾ ಮಾತೆಗೆ ಪೂಜೆಗೆ ನೀರು ಸಿಗದಿದ್ದಾಗ ರಾಮ ತನ್ನ ಅಂಬಿನಿಂದ (ಬಿಲ್ಲಿನ ಬಾಣದಿಂದ) ನೆಲ ಸೀಳಿ ನೀರು ತಂದರೆ೦ದು ರಾಮಾಯಣದಲ್ಲಿ ಉಲ್ಲೇಖವಿದೆ, ಹಾಗಾಗಿ ಈ ಸ್ಥಳಕ್ಕೆ ಅಂಬುತೀಥ೯ ಎಂಬ ಹೆಸರು ಬ೦ತು ಎಂಬುದು ಸ್ಥಳ ಪುರಾಣ.    ಇಲ್ಲಿ ಸಣ್ಣ ತೊರೆಯಾಗಿ ಹುಟ್ಟುವ ನದಿ ಬಾಣದಿಂದ ಹುಟ್ಟಿದ್ದರಿಂದ ಶರಾವತಿ ಎ೦ಬ ಹೆಸರು ಪಡೆದು ಪೂವ೯ಕ್ಕೆ ಹರಿದು ನಂತರ ಪಶ್ಚಿಮ ಮುಖವಾಗಿ ತಿರುಗಿ ಹೊಸನಗರ ತಾಲ್ಲೂಕನ್ನ ದಾಟಿ ಸಾಗರ ತಾಲ್ಲೂಕಿನ ಜೋಗದಲ್ಲಿ ಜಲಪಾತವಾಗಿ ದಟ್ಟ ಕಾನನದ ಕಣಿವೆ ಮುಖಾಂತರ ಹರಿದು ಹೊನ್ನಾವರದಲ್ಲಿ ಅರಬ್ಬಿ ಸಮುದ್ರ ಸೇರುತ್ತದೆ.   ಈ ನದಿಗೆ ಮೊದಲಿಗೆ ಹೀರೇ ಬಾಸ್ಕರ ಎಂಬಲ್ಲಿ ನಂತರ ಲಿಂಗನಮಕ್ಕಿಯಲ್ಲಿ ಆಣೆಕಟ್ಟು ಕಟ್ಟಿ ರಾಜ್ಯಕ್ಕೆ ಜಲ ವಿದ್ಯುತ್ ನೀಡುತ್ತಿರುವುದರಿಂದ ಲಕ್ಷಾಂತರ ಎಕರೆ ಕಾಡು, ಜಮೀನು ಅನೇಕ ಊರು ಮುಳುಗಡೆ ಆಯಿತು ಸಾವಿರಾರು ಕುಟುಂಬಗಳು ಸಂತ್ರಸ್ಥರಾದದ್ದು ಇತಿಹಾಸ.    ಈ ನದಿ ಜೋಗದಲ್ಲಿ ದುಮುಕುವ ಜಲಪಾತ ವಿಶ್ವದ ಸುಂದರ ಜಲಪಾತದಲ್ಲಿ ಒಂದಾಗಿದೆ.    ಹಾಗಾಗಿ ಶರಾವತಿ ನದಿಯ ಉಗಮ ಸ್ಥಾನಕ್ಕೆ ಮಹತ್ವವಿದೆ, ಒಮ್ಮೆಯಾದರೂ ಈ ನದಿ ಮೂಲ ಸಂದಶಿ೯ಸಬೇಕು ಆದರೆ ಇಲ್ಲಿ ಶರಾವತಿ ವ...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...